Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...