Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...