Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...