Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...