Homeಕರ್ನಾಟಕಅಕ್ಟೋಬರ್ 21ರಂದು ಮಹಾರಾಷ್ಟ್ರ, ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ: 24ಕ್ಕೆ ಫಲಿತಾಂಶ

ಅಕ್ಟೋಬರ್ 21ರಂದು ಮಹಾರಾಷ್ಟ್ರ, ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ: 24ಕ್ಕೆ ಫಲಿತಾಂಶ

ಕರ್ನಾಟಕದ 15 ಸ್ಥಾನಗಳಿಗೆ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದ್ದು 24 ಕ್ಕೆ ಫಲಿತಾಂಶ ಪ್ರಕಟವಾಗಲಿದೆ

- Advertisement -
- Advertisement -

ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ, ಹರಿಯಾಣ ವಿಧಾನಸಭಾ ಚುನಾವಣೆಗಳಿಗೆ ಇಂದು ಕೇಂದ್ರ ‌ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ಚುನಾವಣಾ ಆಯುಕ್ತರಾದ ಸುನೀಲ್ ಅರೋರರವರು ಇಂದು ಪತ್ರಿಕಾಗೋಷ್ಟಿಯಲ್ಲಿ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು ಅಕ್ಟೋಬರ್ 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ನಾಮಪತ್ರ ಸಲ್ಲಿಕೆ ಆರಂಭ:  ಸೆಪ್ಟಂಬರ್ 27 ರಿಂದ

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 04

ನಾಮಪತ್ರ ಪರಿಶೀಲನೆ: ಅಕ್ಟೋಬರ್ 05

ನಾಮಪತ್ರ ವಾಪಸ್ ಪಡೆಯಲು ಅವಕಾಶ: ಅಕ್ಟೋಬರ್ 07ರವರೆಗೆ

ಚುನಾವಣೆ: ಅಕ್ಟೋಬರ್ 21

ಫಲಿತಾಂಶ: ಅಕ್ಟೋಬರ್ 24

ಹರಿಯಾಣ 90 ಸ್ಥಾನಗಳಿಗೆ ಮತ್ತು ಮಹಾರಾಷ್ಟ್ರದ 288 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 8.9 ಕೋಟಿ ಮತದಾರರು ಮಹಾರಾಷ್ಟ್ರದಲ್ಲಿದ್ದಾರೆ. ಹರಿಯಾಣ 1.82 ಕೋಟಿ ಮತದಾರರಿದ್ದಾರೆ.

ಉಪಚುನಾವಣೆಗಳು

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡಯಲಿರುವ ಉಪಚುನಾವಣೆಯ ದಿನಾಂಕವನ್ನು ಸಹ ಪ್ರಕಟಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಆರಂಭ:  ಸೆಪ್ಟಂಬರ್ 23 ರಿಂದ

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟಂಬರ್ 30

ನಾಮಪತ್ರ ಪರಿಶೀಲನೆ: ಅಕ್ಟೋಬರ್ 01

ನಾಮಪತ್ರ ವಾಪಸ್ ಪಡೆಯಲು ಅವಕಾಶ: ಅಕ್ಟೋಬರ್ 03ರವರೆಗೆ

ಚುನಾವಣೆ: ಅಕ್ಟೋಬರ್ 21

ಫಲಿತಾಂಶ: ಅಕ್ಟೋಬರ್ 24

ಕರ್ನಾಟಕದ 15 ಸ್ಥಾನಗಳಿಗೆ ಸೇರಿದಂತೆ ಅರುಣಚಲ ಪ್ರದೇಶದ 02, ಅಸ್ಸಾಂನ 04, ಬಿಹಾರ್ 05, ಚತ್ತೀಸ್ ಘಡದ 04, ಗುಜರಾತ್ ನ 04, ಹಿಮಾಚಲ ಪ್ರದೇಶದ 02 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ನ 17 ಶಾಸಕರು ರಾಜಿನಾಮೆ ನೀಡಿದ ಕಾರಣಕ್ಕಾಗಿ ಸ್ಪೀಕರ್ ರವರು ಅವರನ್ನು ಅನರ್ಹರನ್ನಾಗಿ ಘೋಷಿಸಿದ್ದರು. ಅದರಲ್ಲಿ ಈಗ 15 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ಚುನಾವಣೆಯಲ್ಲಿ ಪ್ರತಿ ಅಭ್ಯರ್ಥಿಗಳು 28 ಲಕ್ಷ ಖರ್ಚು ಮಾಡಬಹುದೆಂಬ ಮಿತಿ ವಿಧಿಸಲಾಗಿದೆ.

ಪರಿಸರ ಸ್ನೇಹಿ ವಸ್ತುಗಳನ್ನು ಚುನಾವಣೆಯಲ್ಲಿ ಬಳಸಲು ಅಭ್ಯರ್ಥಿಗಳಲ್ಲಿ ಆಯೋಗ ಮನವಿ ಮಾಡಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...