Homeಮುಖಪುಟಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಮಾದರಿ ನೀತಿ ಸಂಹಿತೆಯನ್ನು "ಮೋದಿ ನೀತಿ ಸಂಹಿತೆ" ಎಂದು ಮಮತಾ ಬ್ಯಾನರ್ಜಿ ಕರೆದಿದ್ದಕ್ಕಾಗಿ ಆಯೋಗ ಅವರ ಮೇಲೆ ಅಸಮಾಧಾನಗೊಂಡಿದೆ.- ಶಿವಸೇನೆ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 24 ಗಂಟೆಗಳ ಕಾಲ ಪ್ರಚಾರಕ್ಕೆ ನಿರ್ಬಂಧ ಹೇರಿದ್ದ ಚುನಾವಣಾ ಆಯೋಗವು ಮಮತಾ ಬ್ಯಾನರ್ಜಿ ವಿಚಾರದಲ್ಲಿ ಪಕ್ಷಪಾತ ತೋರುತ್ತಿದೆ ಎಂದು ಶಿವಸೇನೆ ಬುಧವಾರ ಆರೋಪಿಸಿದೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರಿಗೆ ಬೆಂಬಲ ನೀಡಿರುವ ಶಿವಸೇನೆ, ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯು ರಾಜಕೀಯ ಲಾಭಕ್ಕಾಗಿ ಕೀಳಾಗಿ ವರ್ತಿಸಬಾರದು ಎಂದು ಶಿವಸೇನಾ ತನ್ನ ಮುಖವಾಣಿ ‘ಸಾಮನಾ’ದ ಸಂಪಾದಕೀಯದಲ್ಲಿ ತಿಳಿಸಿದೆ.

“ಚುನಾವಣಾ ಆಯೋಗವು ಮಮತಾ ಬ್ಯಾನರ್ಜಿ ವಿರುದ್ಧ ಪಕ್ಷಪಾತ ಮಾಡುತ್ತಿದೆ. ಬಿಜೆಪಿಯವರ ಮಾತನ್ನು ಮಾತ್ರ ಕೇಳುತ್ತಿದೆ. ನಾವು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ ನೀವು ಎಲ್ಲಾ ಪಕ್ಷದ ಅಭಿಪ್ರಾಯವನ್ನೂ ಆಲಿಸಬೇಕು. ಈ ವಿಷಯದಲ್ಲಿ ಪಕ್ಷಪಾತ ಮಾಡಬಾರದು” ಎಂದು ಮರಾಠಿ ದಿನಪತ್ರಿಕೆ ತನ್ನ ಸಂಪಾದಕಿಯದಲ್ಲಿ ಹೇಳಿದೆ.

ಇದನ್ನೂ ಓದಿ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಚಣೆಯ ಪ್ರಚಾರದ ಸಮಯದಲ್ಲಿ ಎಲ್ಲಾ ಪಕ್ಷಗಳು ಶಿಷ್ಟಾಚಾರವನ್ನು ಕಳೆದುಕೊಂಡಿದ್ದಾರೆ. ಆದರೆ ಬ್ಯಾನರ್ಜಿಗೆ ಮಾತ್ರ ಚುನಾವಣಾ ಆಯೋಗ ಶಿಕ್ಷೆ ನೀಡಿದೆ ಎಂದು ಸಂಪಾದಕೀಯದಲ್ಲಿ ಶಿವಸೇನೆ ಆರೋಪಿಸಿದೆ.

“ಕಾನೂನಿನ ಮುಂದೆ ಪ್ರತಿಯೊಬ್ಬರನ್ನು ಸಮಾನವಾಗಿ ಪರಿಗಣಿಸಲಾಗುವುದು ಎಂಬುದನ್ನು ಸುಳ್ಳು ಎಂದು ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ಮಾಡಿ ತೋರಿಸಿದೆ. ಈ ಚುನಾವಣೆಯ ಫಲಿತಾಂಶವನ್ನು ಲೆಕ್ಕಿಸದೆ ಮಮತಾ ಬ್ಯಾನರ್ಜಿ ಅವರ ಹೋರಾಟವನ್ನು ಇತಿಹಾಸದಲ್ಲಿ ನೆನಪಿಸಿಕೊಳ್ಳಲಾಗುವುದು” ಎಂದು ತಿಳಿಸಲಾಗಿದೆ.

ಮಾದರಿ ನೀತಿ ಸಂಹಿತೆಯನ್ನು “ಮೋದಿ ನೀತಿ ಸಂಹಿತೆ” ಎಂದು ಮಮತಾ ಬ್ಯಾನರ್ಜಿ ಕರೆದಿದ್ದಕ್ಕಾಗಿ ಆಯೋಗ ಅವರ ಮೇಲೆ ಅಸಮಾಧಾನಗೊಂಡಿದೆ. ಆದರೆ,  ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ಹಿಂಸಾಚಾರದ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು ಎಂದು  ಆಗ್ರಹಿಸಿದೆ.

ಮೋದಿಯವರ ಬಾಂಗ್ಲಾದೇಶ ಭೇಟಿಯ ನಂತರ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಚುನಾವಣಾ ಆಯೋಗ ಏಕೆ ಗಮನಿಸುತ್ತಿಲ್ಲ?” ಎಂದು ಮರಾಠಿ ಪತ್ರಿಕೆ ಪ್ರಶ್ನಿಸಿದೆ. ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಕೇಂದ್ರ ಮತ್ತು ಬಿಜೆಪಿ ನಾಯಕರ ಮೇಲೆ ಬ್ಯಾನರ್ಜಿ ಮಾಡಿರುವ ತೀವ್ರ ಟೀಕೆಗೆ ಸಂಪಾದಕೀಯ ಬೆಂಬಲ ನೀಡಿದೆ.


ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...