Homeಮುಖಪುಟಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಮಾದರಿ ನೀತಿ ಸಂಹಿತೆಯನ್ನು "ಮೋದಿ ನೀತಿ ಸಂಹಿತೆ" ಎಂದು ಮಮತಾ ಬ್ಯಾನರ್ಜಿ ಕರೆದಿದ್ದಕ್ಕಾಗಿ ಆಯೋಗ ಅವರ ಮೇಲೆ ಅಸಮಾಧಾನಗೊಂಡಿದೆ.- ಶಿವಸೇನೆ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 24 ಗಂಟೆಗಳ ಕಾಲ ಪ್ರಚಾರಕ್ಕೆ ನಿರ್ಬಂಧ ಹೇರಿದ್ದ ಚುನಾವಣಾ ಆಯೋಗವು ಮಮತಾ ಬ್ಯಾನರ್ಜಿ ವಿಚಾರದಲ್ಲಿ ಪಕ್ಷಪಾತ ತೋರುತ್ತಿದೆ ಎಂದು ಶಿವಸೇನೆ ಬುಧವಾರ ಆರೋಪಿಸಿದೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರಿಗೆ ಬೆಂಬಲ ನೀಡಿರುವ ಶಿವಸೇನೆ, ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯು ರಾಜಕೀಯ ಲಾಭಕ್ಕಾಗಿ ಕೀಳಾಗಿ ವರ್ತಿಸಬಾರದು ಎಂದು ಶಿವಸೇನಾ ತನ್ನ ಮುಖವಾಣಿ ‘ಸಾಮನಾ’ದ ಸಂಪಾದಕೀಯದಲ್ಲಿ ತಿಳಿಸಿದೆ.

“ಚುನಾವಣಾ ಆಯೋಗವು ಮಮತಾ ಬ್ಯಾನರ್ಜಿ ವಿರುದ್ಧ ಪಕ್ಷಪಾತ ಮಾಡುತ್ತಿದೆ. ಬಿಜೆಪಿಯವರ ಮಾತನ್ನು ಮಾತ್ರ ಕೇಳುತ್ತಿದೆ. ನಾವು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ ನೀವು ಎಲ್ಲಾ ಪಕ್ಷದ ಅಭಿಪ್ರಾಯವನ್ನೂ ಆಲಿಸಬೇಕು. ಈ ವಿಷಯದಲ್ಲಿ ಪಕ್ಷಪಾತ ಮಾಡಬಾರದು” ಎಂದು ಮರಾಠಿ ದಿನಪತ್ರಿಕೆ ತನ್ನ ಸಂಪಾದಕಿಯದಲ್ಲಿ ಹೇಳಿದೆ.

ಇದನ್ನೂ ಓದಿ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಚಣೆಯ ಪ್ರಚಾರದ ಸಮಯದಲ್ಲಿ ಎಲ್ಲಾ ಪಕ್ಷಗಳು ಶಿಷ್ಟಾಚಾರವನ್ನು ಕಳೆದುಕೊಂಡಿದ್ದಾರೆ. ಆದರೆ ಬ್ಯಾನರ್ಜಿಗೆ ಮಾತ್ರ ಚುನಾವಣಾ ಆಯೋಗ ಶಿಕ್ಷೆ ನೀಡಿದೆ ಎಂದು ಸಂಪಾದಕೀಯದಲ್ಲಿ ಶಿವಸೇನೆ ಆರೋಪಿಸಿದೆ.

“ಕಾನೂನಿನ ಮುಂದೆ ಪ್ರತಿಯೊಬ್ಬರನ್ನು ಸಮಾನವಾಗಿ ಪರಿಗಣಿಸಲಾಗುವುದು ಎಂಬುದನ್ನು ಸುಳ್ಳು ಎಂದು ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ಮಾಡಿ ತೋರಿಸಿದೆ. ಈ ಚುನಾವಣೆಯ ಫಲಿತಾಂಶವನ್ನು ಲೆಕ್ಕಿಸದೆ ಮಮತಾ ಬ್ಯಾನರ್ಜಿ ಅವರ ಹೋರಾಟವನ್ನು ಇತಿಹಾಸದಲ್ಲಿ ನೆನಪಿಸಿಕೊಳ್ಳಲಾಗುವುದು” ಎಂದು ತಿಳಿಸಲಾಗಿದೆ.

ಮಾದರಿ ನೀತಿ ಸಂಹಿತೆಯನ್ನು “ಮೋದಿ ನೀತಿ ಸಂಹಿತೆ” ಎಂದು ಮಮತಾ ಬ್ಯಾನರ್ಜಿ ಕರೆದಿದ್ದಕ್ಕಾಗಿ ಆಯೋಗ ಅವರ ಮೇಲೆ ಅಸಮಾಧಾನಗೊಂಡಿದೆ. ಆದರೆ,  ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ಹಿಂಸಾಚಾರದ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು ಎಂದು  ಆಗ್ರಹಿಸಿದೆ.

ಮೋದಿಯವರ ಬಾಂಗ್ಲಾದೇಶ ಭೇಟಿಯ ನಂತರ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಚುನಾವಣಾ ಆಯೋಗ ಏಕೆ ಗಮನಿಸುತ್ತಿಲ್ಲ?” ಎಂದು ಮರಾಠಿ ಪತ್ರಿಕೆ ಪ್ರಶ್ನಿಸಿದೆ. ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಕೇಂದ್ರ ಮತ್ತು ಬಿಜೆಪಿ ನಾಯಕರ ಮೇಲೆ ಬ್ಯಾನರ್ಜಿ ಮಾಡಿರುವ ತೀವ್ರ ಟೀಕೆಗೆ ಸಂಪಾದಕೀಯ ಬೆಂಬಲ ನೀಡಿದೆ.


ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...