HomeಅಂಕಣಗಳುKarnataka against SIR‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ ಪಟ್ಟಿಯಲ್ಲಿ ಬರೋಬ್ಬರಿ 1.07 ಕೋಟಿಗೂ ಅಧಿಕ (ಸುಮಾರು 1.08 ಕೋಟಿ) ಮತದಾರರ ಹೆಸರುಗಳನ್ನು ಕೈಬಿಡಲಾಗಿರುವುದು ನಾಗರಿಕ ಸಮಾಜದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಸಂಖ್ಯೆಯು ಪ್ರಸ್ತುತ 4.46 ಕೋಟಿಗೆ ಕುಸಿದಿದ್ದು, ರಾಜ್ಯದ ಒಟ್ಟು ಮತದಾರರ ಪೈಕಿ ಶೇಕಡಾ 19.5 ರಷ್ಟು ನಾಗರಿಕರು ಕರಡು ಪಟ್ಟಿಯಿಂದ ಹೊರಗುಳಿದಿದ್ದಾರೆ.

ಇಷ್ಟೇ ಅಲ್ಲದೆ, ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಂತೂ ಅಚ್ಚರಿಯ ಅಂಕಿಅಂಶಗಳು ಹೊರಬಿದ್ದಿವೆ. ಜಿಬಿಎ ವ್ಯಾಪ್ತಿಯಲ್ಲಿ ಬರೋಬ್ಬರಿ 32,74,535 ಮತದಾರರನ್ನು ‘ಶಾಶ್ವತ ಸ್ಥಳಾಂತರಗೊಂಡಿದ್ದಾರೆ’ ಎಂದು ವರ್ಗೀಕರಿಸಲಾಗಿದೆ. ಇದರೊಂದಿಗೆ 7,27,258 ಗೈರುಹಾಜರಿ, 3,19,113 ಮೃತ ಮತದಾರರು, 63,548 ನಕಲಿ ಅಥವಾ ಬೇರೆಡೆ ದಾಖಲಾದವರು ಹಾಗೂ 3,04,249 ಇತರೆ ಪ್ರಕರಣಗಳು ಸೇರಿದಂತೆ, ಕೇವಲ ಜಿಬಿಎ ವ್ಯಾಪ್ತಿಯೊಂದರಲ್ಲೇ ಮೃತಪಟ್ಟವರು ಮತ್ತು ಸ್ಥಳಾಂತರಗೊಂಡವರೆಂದು ವರ್ಗೀಕರಿಸಲಾದವರ ಒಟ್ಟು ಸಂಖ್ಯೆ 35,93,648 ತಲುಪಿದೆ.

ನೆಲದ ವಾಸ್ತವ ಅರಿಯದ ಚುನಾವಣಾ ಆಯೋಗ: ನೂರ್ ಶ್ರೀಧರ್ ತೀವ್ರ ಆಕ್ಷೇಪ

ಈ ಗಂಭೀರ ಪರಿಸ್ಥಿತಿಯ ವಿರುದ್ಧ ಬೀದಿಗಿಳಿದಿರುವ ಹೋರಾಟಗಾರರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಸಂಘರ್ಷಕ್ಕೆ ಧುಮುಕಿದ್ದಾರೆ. ಪ್ರಮುಖ ಹೋರಾಟಗಾರ ನೂರ್ ಶ್ರೀಧರ್ ಅವರು ಜಂಟಿ ಹೋರಾಟ ಸಮಿತಿಯ ಪರವಾಗಿ ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದ್ದಾರೆ. 

ಚುನಾವಣಾ ಆಯೋಗದ ಧೋರಣೆಯನ್ನು ತೀವ್ರವಾಗಿ ವಿರೋಧಿಸಿದ ನೂರ್ ಶ್ರೀಧರ್, “ಅಧಿಕಾರಿಗಳು ವಾಸ್ತವ ನೆಲೆಗಟ್ಟನ್ನು (ಗ್ರೌಂಡ್ ರಿಯಾಲಿಟಿ) ಅರಿಯದೆ ಕೇವಲ ಲ್ಯಾಪ್‌ಟಾಪ್ ಮತ್ತು ಸಾಫ್ಟ್‌ವೇರ್‌ಗಳನ್ನು ನೆಚ್ಚಿಕೊಂಡು ಕುಳಿತಿದ್ದಾರೆ. ಇಂದು ನಾವು ಜನರನ್ನು ಸುಮ್ಮಸುಮ್ಮನೆ ಇಲ್ಲಿಗೆ ಸೇರಿಸಿಲ್ಲ. ರಾಜ್ಯದ 20 ಜಿಲ್ಲೆಗಳಿಂದ ಬಂದಿರುವ ಪ್ರತಿನಿಧಿಗಳು ಇಲ್ಲಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಜನರ ಮಾತುಗಳನ್ನು ನೇರವಾಗಿ ಆಲಿಸಬೇಕು” ಎಂದು ಆಗ್ರಹಿಸಿದರು.

ಚುನಾವಣಾ ಆಯೋಗವು ‘ಮೂವರಷ್ಟೇ ಬಂದು ಮಾತನಾಡಿ’ ಎಂದು ಹೇಳುವ ನಿಯಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, “ಈ ಮುಚ್ಚಿದ ಬಾಗಿಲಿನ ಮಾತುಕತೆ, ಮೂರು ಜನರನ್ನು ಒಳಗೆ ಕರೆಸಿ ಮುಗಿಸುವ ಪ್ರಕ್ರಿಯೆಯಿಂದ ಜನರು ರೋಸಿಹೋಗಿದ್ದಾರೆ. ಈಗ ಎಲ್ಲವೂ ಪಾರದರ್ಶಕವಾಗಿ, ಸಾರ್ವಜನಿಕವಾಗಿ ಮತ್ತು ಮಾಧ್ಯಮ ಕ್ಯಾಮೆರಾಗಳ ಮುಂಭಾಗದಲ್ಲೇ ನಡೆಯಬೇಕು. ಆಯೋಗವು ತಾನು ಮಾಡುತ್ತಿರುವುದು ಸರಿ ಎಂದು ತರ್ಕಬದ್ಧವಾಗಿ ವಿವರಿಸಬೇಕು. ನಾವು ಹೇಳುತ್ತಿರುವುದು ತಪ್ಪು ಎಂದರೆ ಅದನ್ನು ಸಾರ್ವಜನಿಕವಾಗಿ ಸಾಬೀತುಪಡಿಸಬೇಕು. ಚುನಾವಣಾ ಆಯೋಗವೇ ಹೊರಗೆ ಬಂದು ಜನರ ಮಾತು ಕೇಳಲಿ, ಇಲ್ಲವೇ ನಾವು ಶಾಂತಿಯುತವಾಗಿ ಅವರ ಕಚೇರಿಯ ಮುಂದೆ ಬಂದು ಕುಳಿತುಕೊಳ್ಳುತ್ತೇವೆ. ಇದು ನಮ್ಮ ಮೊದಲ ಷರತ್ತು. ಇದಾಗದೇ ನಾವು ಇಲ್ಲಿಂದ ವಾಪಸ್ ಹೋಗುವುದಿಲ್ಲ” ಎಂದು ಕಠಿಣ ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರಕ್ಕೂ ತರಾಟೆ: ‘ಸಮಗ್ರ ಯೋಜನೆ ರೂಪಿಸಲು ಒತ್ತಾಯ’

ಮತದಾರರ ಹಕ್ಕುಗಳ ರಕ್ಷಣೆಯಲ್ಲಿ ರಾಜ್ಯ ಸರ್ಕಾರದ ನಿಷ್ಕ್ರಿಯತೆಯನ್ನು ತರಾಟೆಗೆ ತೆಗೆದುಕೊಂಡ ನೂರ್ ಶ್ರೀಧರ್, “ಆರಂಭದಿಂದಲೂ ನಾವು ರಾಜ್ಯ ಸರ್ಕಾರದ ಗಮನ ಸೆಳೆಯುತ್ತಲೇ ಬಂದಿದ್ದೇವೆ. ಆದರೆ ಸರ್ಕಾರವು ಅತ್ಯಲ್ಪ ಪ್ರಮಾಣದಲ್ಲಿ ಪ್ರತಿಕ್ರಿಯಿಸುತ್ತಿದೆಯೇ ವಿನಃ ಮತದಾರರ ಹಕ್ಕು ರಕ್ಷಣೆಗೆ ಅವರ ಬಳಿ ಯಾವುದೇ ಸಮಗ್ರ ಯೋಜನೆಯಿಲ್ಲ. ರಾಜ್ಯದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ಕರ್ತವ್ಯ ಸರ್ಕಾರದ ಮೇಲಿದೆ. ಚುನಾವಣಾ ಆಯೋಗ ಕೇಳುತ್ತಿಲ್ಲ ಎಂದು ಸರ್ಕಾರ ಕೈಚೆಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ತನ್ನ ಸ್ಪಷ್ಟ ಯೋಜನೆಯನ್ನು ತಿಳಿಸಬೇಕು, ಇಲ್ಲವೇ ಸಿವಿಲ್ ಸೊಸೈಟಿ ನೀಡುವ ಸಲಹೆಗಳನ್ನಾದರೂ ಒಪ್ಪಿಕೊಂಡು ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು.

ಜೈಲು ಭೇಟಿಗೂ ಸಿದ್ಧ: ಹೋರಾಟಗಾರರ ಗಟ್ಟಿ ತೀರ್ಮಾನ

ಪ್ರಸ್ತುತ ನಡೆಯುತ್ತಿರುವ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಹೋರಾಟಗಾರರು ನಿರ್ಧರಿಸಿದ್ದಾರೆ. ದೇವನಹಳ್ಳಿ ರೈತ ಹೋರಾಟದ ಮಾದರಿಯನ್ನೇ ಉದಾಹರಿಸಿದ ಶ್ರೀಧರ್, “ತೀರ್ಮಾನವಾಗುವವರೆಗೆ ನಾವು ಈ ಸ್ಥಳದಿಂದ ಜಾಗ ಖಾಲಿ ಮಾಡುವುದಿಲ್ಲ. ಸರ್ಕಾರ ಅಥವಾ ಪೊಲೀಸರು ನಮ್ಮನ್ನು ಬಂಧಿಸುವುದಾದರೆ ಬಂಧಿಸಲಿ. ವಿಜಯಮೋಹನ್ ಸರ್ ಅವರಂತಹ ಹಿರಿಯರು, ಚಿಂತಕರು ಸೇರಿದಂತೆ ನಾವೆಲ್ಲರೂ ಒಂದಾಗಿ ಗಟ್ಟಿ ತೀರ್ಮಾನ ತಳೆದಿದ್ದೇವೆ. ರಾಜ್ಯದ ಮತ್ತು ಪ್ರಜಾಪ್ರಭುತ್ವದ ಹಿತಕ್ಕಾಗಿ ಅಗತ್ಯಬಿದ್ದರೆ ನಾವು ಜಾಮೀನು ಪಡೆಯದೆ, ಪರಪ್ಪನ ಅಗ್ರಹಾರ ಜೈಲಿನಲ್ಲಾದರೂ ಕಾಲ ಕಳೆಯಲು ಸಿದ್ಧರಿದ್ದೇವೆ. ತೀರ್ಮಾನವಾಗದೇ ಈ ಹೋರಾಟ ಮುಗಿಯುವುದಿಲ್ಲ. ಈ ವಿಷಯವನ್ನು ನಾವು ಪೊಲೀಸರ ಹಾಗೂ ಸರ್ಕಾರದ ಗಮನಕ್ಕೂ ತಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ಹೋರಾಟ ಸಮಿತಿಯ ಪ್ರಮುಖ ಹಕ್ಕೊತ್ತಾಯಗಳು:

ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸಲು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಮತದಾನದ ಹಕ್ಕನ್ನು ಖಾತರಿಪಡಿಸಲು ಹೋರಾಟ ಸಮಿತಿಯು ಸರ್ಕಾರ ಮತ್ತು ಚುನಾವಣಾ ಆಯೋಗದ ಮುಂದೆ ಪ್ರಮುಖ ಹಕ್ಕೊತ್ತಾಯಗಳನ್ನು ಮಂಡಿಸಿದೆ:

ಸಮರ್ಥ ಕಾರಣವಿಲ್ಲದೆ ಹೆಸರು ರದ್ದುಪಡಿಸದಿರುವುದು: ಯಾವೊಬ್ಬ ಅರ್ಹ ಮತದಾರನ ಹೆಸರನ್ನೂ ಸೂಕ್ತ ಮತ್ತು ಸಮರ್ಥ ಕಾರಣವಿಲ್ಲದೆ ಪಟ್ಟಿಯಿಂದ ಹೊರಹಾಕಬಾರದು. ಈಗಾಗಲೇ ಹೆಸರು ಡಿಲೀಟ್ ಆಗಿರುವ ಮತದಾರರಿಗೂ ಮೇಲ್ಮನವಿ (ಅಪೀಲ್) ಸಲ್ಲಿಸಲು ಮತ್ತು ಪಟ್ಟಿಗೆ ಮರುಸೇರ್ಪಡೆಗೊಳ್ಳಲು ಅವಕಾಶ ನೀಡಬೇಕು. ಅರ್ಹರನ್ನು ಸೇರಿಸಲು ಪ್ರತಿ ಬೂತ್‌ನ ಪ್ರತಿಯೊಂದು ಮನೆಗೂ ತೆರಳುವ ವಿಶೇಷ ಅಭಿಯಾನ (ಡ್ರೈವ್) ಹಮ್ಮಿಕೊಳ್ಳಬೇಕು.

ವರ್ಗಾವಣೆಗೆ ಫಾರಂ 8 ಅವಕಾಶ ನೀಡಿಕೆ: ಬೇರೆ ಸ್ಥಳಗಳಿಂದ ಶಿಫ್ಟ್ ಆಗಿ ಬಂದು ಪ್ರಸ್ತುತ ನೆಲೆಸಿರುವ ಮತದಾರರಿಗೆ ಪ್ರತಿ ಬೂತ್‌ನಲ್ಲೂ ‘ಫಾರಂ 8’ ನೀಡಿ, ತಮ್ಮ ಪ್ರಸ್ತುತ ವಾಸಸ್ಥಳದ ವಿಳಾಸಕ್ಕೆ ಮತವನ್ನು ಸುಲಭವಾಗಿ ವರ್ಗಾಯಿಸಿಕೊಳ್ಳಲು ಅನುಕೂಲ ಮಾಡಿಕೊಡಬೇಕು.

43 ಲಕ್ಷ ಮತದಾರರ ವಿವರ ಸಾರ್ವಜನಿಕಗೊಳಿಸುವುದು: ನೋಟೀಸ್ ನೀಡಲಾಗುತ್ತಿರುವ 43 ಲಕ್ಷ ಮತದಾರರ ಹೆಸರುಗಳನ್ನು ಸೂಕ್ತ ಕಾರಣಗಳ ಸಮೇತ ಸಾರ್ವಜನಿಕವಾಗಿ ಪ್ರಕಟಿಸಬೇಕು. ಆ ಮತದಾರರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬಾರದು ಹಾಗೂ ಅವರಿಂದ ಎರಡಕ್ಕಿಂತ ಹೆಚ್ಚು ದಾಖಲೆಗಳನ್ನು ಕೇಳಿ ಕಿರುಕುಳ ನೀಡಬಾರದು.

ಗ್ರಾಮ ಮತ್ತು ವಾರ್ಡ್ ಸಭೆಗಳ ಆಯೋಜನೆ: ಮತದಾರರ ಪಟ್ಟಿ ಪರಿಶೀಲನೆಗೆ ಸಂಬಂಧಿಸಿದಂತೆ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳನ್ನು ಕ್ರಮಬದ್ಧವಾಗಿ, ವ್ಯಾಪಕ ಪ್ರಚಾರ ನೀಡುವ ಮೂಲಕ ಅರ್ಥಪೂರ್ಣವಾಗಿ ನಡೆಸಬೇಕು.

ಅವಕಾಶವನ್ನು ಆರು ತಿಂಗಳಿಗೆ ವಿಸ್ತರಿಸುವುದು: ಕರ್ನಾಟಕದ ಮುಂದಿನ ಚುನಾವಣೆಗಳಿಗೆ ಇನ್ನು ಸಾಕಷ್ಟು ಸಮಯಾವಕಾಶ ಇರುವುದರಿಂದ, ಯಾವುದೇ ಗಡಿಬಿಡಿ ಮಾಡದೆ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಮತ್ತು ಮೇಲ್ಮನವಿ (ಅಪೀಲ್) ಹಾಕಲು ನೀಡಲಾಗಿರುವ ಕಾಲಾವಕಾಶವನ್ನು ಕನಿಷ್ಠ ಆರು ತಿಂಗಳ ಕಾಲ ವಿಸ್ತರಿಸಬೇಕು.

ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು, ತಾಂತ್ರಿಕ ನೆಪಗಳನ್ನು ಪಕ್ಕಕ್ಕಿಟ್ಟು ನೆಲದ ವಾಸ್ತವಕ್ಕೆ ಅನುಗುಣವಾಗಿ ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾದ ‘ಮತದಾನದ ಹಕ್ಕನ್ನು’ ರಕ್ಷಿಸಬೇಕಿದೆ. ಇಂದಿನ ಹೋರಾಟದ ಮುಂದಿನ ನಡೆಗಳು ರಾಜ್ಯದ ಪ್ರಜಾಸತ್ತಾತ್ಮಕ ಹೋರಾಟದಲ್ಲಿ ಪ್ರಮುಖ ತಿರುವು ನೀಡುವ ಮುನ್ಸೂಚನೆ ನೀಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...