HomeಅಂಕಣಗಳುKarnataka against SIR‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್...

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

- Advertisement -
- Advertisement -

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರು ಚುನಾವಣಾ ಆಯೋಗ ಮತ್ತು ಸರ್ಕಾರದ ವಿರುದ್ಧ ಕಟು ಶಬ್ದಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಇದು ಲೂಟಿಕೋರರ ಆಯೋಗ’: ಯೂಸುಫ್ ಕನ್ನಿ ಆರೋಪ

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಜಮಾತ್ ಎ ಇಸ್ಲಾಮಿ ಹಿಂದ್ (ಕರ್ನಾಟಕ) ರಾಜ್ಯ ಕಾರ್ಯದರ್ಶಿ ಯೂಸುಫ್ ಕನ್ನಿ ಅವರು ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಇದು ಚುನಾವಣಾ ಆಯೋಗ ಅಲ್ಲ, ಇದು ಲೂಟಿಕೋರರ ಆಯೋಗ” ಎಂದು ತೀವ್ರ ಆಕ್ರೋಶ ವ್ಯಕ್ತ ಪಡಿಸಿದರು. 

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಮಾತನಾಡಿದ ಅವರು, “ಕಳೆದ ಹಲವಾರು ತಿಂಗಳುಗಳಿಂದ ನಾವು ಎಸ್‌ಐಆರ್ ಕುರಿತು ರಾಜ್ಯಾದ್ಯಂತ ಜಾಗೃತಿ ಮೂಡಿಸುತ್ತಿದ್ದೇವೆ. ಪಟ್ಟಿಯಲ್ಲಿರುವ ಗಂಭೀರ ಲೋಪದೋಷಗಳ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿ, ನೂರಾರು ಅರ್ಜಿಗಳನ್ನು ಸಲ್ಲಿಸಿದ್ದರೂ ಈವರೆಗೆ ನಮಗೆ ಒಂದೇ ಒಂದು ಅಧಿಕೃತ ಉತ್ತರವೂ ಬಂದಿಲ್ಲ,” ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಆಯೋಗದ ಅಂಕಿ-ಅಂಶಗಳನ್ನು ಪ್ರಶ್ನಿಸಿದ ಅವರು, “ಕರ್ನಾಟಕದಲ್ಲಿ 5.56 ಲಕ್ಷ ಮತದಾರರಿದ್ದಾರೆ ಎಂದು ಹೇಳಿರುವ ಆಯೋಗ, ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ 1.8 ಲಕ್ಷ ಜನರ ಹೆಸರುಗಳನ್ನು ತೆಗೆದುಹಾಕುತ್ತಿದ್ದೇವೆ ಎನ್ನುತ್ತಿದೆ. ಎಎಸ್‌ಡಿಒ (ಅಬ್ಸೆಂಟ್, ಶಿಫ್ಟೆಡ್, ಡೆಡ್, ಅದರ್ಸ್) ನೆಪದಲ್ಲಿ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ನಾಗರಿಕರು ಸ್ಥಳಾಂತರಗೊಳ್ಳಬಾರದೇ? ಗೈರಾಗಬಾರದೇ? ಈ ‘ಅದರ್ಸ್’ ಎನ್ನುವ ವರ್ಗದಲ್ಲಿ ಇರುವವರು ಯಾರು? ಎಂಬ ನೂರಾರು ಪ್ರಶ್ನೆಗಳನ್ನು ಕೇಳಿದರೂ ಆಯೋಗ ಮೌನಕ್ಕೆ ಶರಣಾಗಿದೆ. ಬಾಂಗ್ಲಾದೇಶದಿಂದ ನುಸುಳುಕೋರರು ಬರುತ್ತಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಅವರ ಬಳಿ ಈವರೆಗೆ ಯಾವುದೇ ನಿರ್ದಿಷ್ಟ ಮಾಹಿತಿಯಿಲ್ಲ. ಬದಲಿಗೆ ದೇಶಾದ್ಯಂತ ಸುಮಾರು 8 ಕೋಟಿ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಹಾಕಲಾಗುತ್ತಿದೆ,” ಎಂದು ಆತಂಕ ವ್ಯಕ್ತಪಡಿಸಿದರು.

“ಪಟ್ಟಿಯಿಂದ ಹೆಸರನ್ನು ಡಿಲೀಟ್ ಮಾಡಿ, ಮತ್ತೆ ಸೇರ್ಪಡೆಗೊಳ್ಳಲು ಫಾರಂ 6 ನೀಡಿ ಎಂದು ಹೇಳುತ್ತಿದ್ದಾರೆ. ನಾವು ಹೊಸ ಮತದಾರರಲ್ಲ, ಈಗಾಗಲೇ ಮತ ಚಲಾಯಿಸಿದ ಮೂಲ ನಾಗರಿಕರು. ನಾವೇಕೆ ಫಾರಂ 6 ನೀಡಬೇಕು? ನಮಗೆ ಫಾರಂ 8 ಸಲ್ಲಿಸುವ ಹಕ್ಕಿದೆ. ಈ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ. ನಮ್ಮನ್ನು ಬಂಧಿಸಿದರೂ ಅಥವಾ ಹೊಡೆದರೂ ನಾವು ಎದೆಗುಂದುವುದಿಲ್ಲ,” ಎಂದು ಯೂಸುಫ್ ಕನ್ನಿ ಎಚ್ಚರಿಕೆ ನೀಡಿದರು.

ನರಸಿಂಹಯ್ಯ ಕಾಲೋನಿಯಲ್ಲಿ ಸಂವಾದ ನಡೆಸಿ ಸಂತ್ರಸ್ತರೊಂದಿಗೆ ಪ್ರತಿಭಟನೆಗೆ ಧುಮುಕಿದ ಪ್ರಕಾಶ್ ರಾಜ್

ಮತ್ತೊಂದೆಡೆ, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಅವರು ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿದ್ದ ‘ಚುನಾವಣಾ ಆಯೋಗ ಚಲೋ’ ಕಾರ್ಯಕ್ರಮಕ್ಕೆ ಆಗಮಿಸುವ ಮೊದಲು, ಬೆಂಗಳೂರಿನ ನರಸಿಂಹಯ್ಯ ಕಾಲೋನಿ ಹಾಗೂ ಬಾಪೂಜಿನಗರ ಭಾಗಗಳಲ್ಲಿ ‘ಶಾಶ್ವತ ಸ್ಥಳಾಂತರ’ ಮತ್ತು ಎಸ್‌ಐಆರ್ ನೆಪದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿರುವ ಸಂತ್ರಸ್ತ ಮತದಾರರೊಂದಿಗೆ ನೇರ ಸಂವಾದ ನಡೆಸಿದರು. ಸಂತ್ರಸ್ತರ ಅಳಲನ್ನು ಆಲಿಸಿದ ಅವರು, ಬಳಿಕ ಆ ಸಂತ್ರಸ್ತ ಮತದಾರರೊಂದಿಗೇ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು.

ಸಂವಾದ ಹಾಗೂ ಸಮಾವೇಶದಲ್ಲಿ ಮಾತನಾಡಿದ ಪ್ರಕಾಶ್ ರಾಜ್, “ನಾವು ಈ ದೇಶದ ಮೂಲ ನಿವಾಸಿಗಳು ಮತ್ತು ನಾಗರಿಕರು, ನಾವೇನೂ ಕಳ್ಳರಲ್ಲ. ಆಧಾರ್ ಕಾರ್ಡ್ ಸೇರಿದಂತೆ ಎಲ್ಲಾ ಅಧಿಕೃತ ದಾಖಲೆಗಳನ್ನು ಹೊಂದಿದ್ದರೂ ಜನರನ್ನು ಅನುಮಾನದಿಂದ ನೋಡುವುದು ಅವರ ಸ್ವಾಭಿಮಾನ ಮತ್ತು ಗೌರವಕ್ಕೆ ತರುವ ಧಕ್ಕೆಯಾಗಿದೆ. ಮೋಸ ಮಾಡಿ ವೋಟರ್ ಕಾರ್ಡ್ ಪಡೆದುಕೊಂಡಿದ್ದೇವೆ ಎಂಬಂತೆ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ಭಾರತ ನಮ್ಮ ಮನೆ, ನಾವು ಇಲ್ಲೇ ಹುಟ್ಟಿದವರು. ಆದರೂ ಈಗ ನಾವೇ ಈ ದೇಶದವರು ಎಂದು ಸಾಬೀತುಪಡಿಸಿಕೊಳ್ಳಬೇಕಾದ ದುಸ್ಥಿತಿ ಬಂದಿದೆ,” ಎಂದು ಬೇಸರ ವ್ಯಕ್ತಪಡಿಸಿದರು.

“ಅಕ್ರಮ ಮತದಾರರನ್ನು ತೆಗೆಯುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ದಶಕಗಳಿಂದ ಇಲ್ಲೇ ವಾಸಿಸುತ್ತಿರುವ ಅರ್ಹ ನಾಗರಿಕರನ್ನು ಯಾಕೆ ಪಟ್ಟಿಯಿಂದ ಹೊರಗಿಡಬೇಕು? ದೇಶದಲ್ಲಿ ಒಂದೂವರೆ ಕೋಟಿ ಸಂತ್ರಸ್ತರಿದ್ದು, ನಾನೂ ಅದರಲ್ಲಿ ಒಬ್ಬನಾಗಿದ್ದೇನೆ. ಈಗಾಗಲೇ ಮತದಾರರಾಗಿರುವವರನ್ನೇ ಮತ್ತೆ ತಾವು ಮತದಾರರೆಂದು ಸಾಬೀತುಪಡಿಸಲು ಒತ್ತಾಯಿಸುತ್ತಿರುವುದು ಏತಕ್ಕೆ?” ಎಂದು ಅವರು ಪ್ರಶ್ನಿಸಿದರು.

ಒಟ್ಟಿನಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ನಾಗರಿಕರ ಹಕ್ಕು ಕಸಿಯಲಾಗುತ್ತಿದೆ ಎಂಬ ಆರೋಪದೊಂದಿಗೆ ಆಯೋಗಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ನಿರ್ಧರಿಸಿದ್ದು, ಎಸ್‌ಐಆರ್ ವಿರುದ್ಧದ ಈ ಹೋರಾಟವು ರಾಜ್ಯದಲ್ಲಿ ಬಹುದೊಡ್ಡ ಮಟ್ಟದ ಜನಾಕ್ರೋಶಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...