HomeUncategorizedಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಚುನಾವಣಾ ಆಯೋಗದ ಆಂತರಿಕ ಕದನ ಬೀದಿಗೆ ಬಿದ್ದಿದೆ. ಚುನಾವಣಾ ಆಯುಕ್ತ ಅಶೋಕ್ ಲಾವಸಾ ಅವರು ಮೇ 4ರಿಂದೀಚೆಗೆ ಆಯೋಗ ನಡೆಸುವ ‘ಮಾದರಿ ನೀತಿ ಸಂಹಿತೆ’ ಸಭೆಗಳಿಂದ ದೂರ ಉಳಿಯುತ್ತಾ ಬರುವ ಮೂಲಕ ತಮ್ಮ ಪ್ರತಿರೋಧ ಹೊರಹಾಕಿದ ಘಟನೆ ಬೆಳಕಿಗೆ ಬಂದಿದೆ. ಚುನಾವಣಾ ಆಯೋಗ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕೇಳಿಬಂದ ಸಂಹಿತೆ ಉಲ್ಲಂಘನೆಯ ಹಲವು ಆರೋಪಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದಕ್ಕೆ ಅವರ ವಿರೋಧ ಇತ್ತು ಎನ್ನಲಾಗಿದೆ.

ಅಶೋಕ್ ಲಾವಸಾ

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಪತ್ರ ಬರೆದಿರುವ ಲಾವಾಸಾ “ತನ್ನ `ಅಲ್ಪಮತ’ ಅಭಿಪ್ರಾಯವನ್ನು ಆಯೋಗದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗುತ್ತಿಲ್ಲವಾದ್ದರಿಂದ, ನಾನು ಅನಿವಾರ್ಯವಾಗಿ ಪೂರ್ಣ ಆಯೋಗದ ಸಭೆಗಳಿಂದ ದೂರ ಉಳಿಯಬೇಕಾಗಿದೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನೀತಿ ಸಂಹಿತೆ ದೂರುಗಳ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾಧಿಕಾರಿಯೂ ಸೇರಿದಂತೆ ಇನ್ನಿಬ್ಬರು ಚುನಾವಣಾ ಆಯುಕ್ತರನ್ನು ಒಳಗೊಂಡ ಮೂವರು ಅಧಿಕಾರಿಗಳ ಒಂದು ಸಮಿತಿಯಿರುತ್ತದೆ. ಯಾವುದೇ ದೂರಿನ ಬಗ್ಗೆ ಇಲ್ಲಿ ಚರ್ಚೆ ನಡೆದು ಒಮ್ಮತದ ಆದೇಶವನ್ನು ಸಾರ್ವಜನಿಕವಾಗಿ ಹೊರಹಾಕಲಾಗುವುದು. ಹಾಗೊಮ್ಮೆ ಒಮ್ಮತದ ತೀರ್ಮಾನಕ್ಕೆ ಬರಲಾಗದಿದ್ದರೆ, 2:1 ಅನುಪಾತದಲ್ಲಿ ಬಹುಮತದ ತೀರ್ಪನ್ನು ಅಂತಿಮ ಆದೇಶವಾಗಿ ಪರಿಗಣಿಸಲಾಗುತ್ತದೆ.

ಹೀಗೆ ಬಹುಮತದ ಆದೇಶಕ್ಕೆ ವ್ಯತಿರಿಕ್ತವಾಗಿ ಅಭಿಪ್ರಾಯ ಹೊರಹಾಕಿದ ಇನ್ನೊಬ್ಬ ಸದಸ್ಯರ ವಾದವನ್ನು `ಅಲ್ಪಮತ’ ಅಭಿಪ್ರಾಯ ಎಂದು ಪರಿಗಣಿಸಲಾಗುವುದು. ಇದು ಚುನಾವಣಾ ಆಯೋಗದ ನೀತಿ ಸಂಹಿತೆ ದೂರುಗಳನ್ನು ವಿಚಾರಣೆ ನಡೆಸುವ ವೈಖರಿ. ಅಶೋಕ್ ಲಾವಾಸಾ ಅವರಿಗೆ ಈ ವೈಖರಿಗೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ, ಬದಲಿಗೆ ಅಯೋಗದ ಬಹುಮತ ತೀರ್ಪಿನ ಆದೇಶವನ್ನು ನೀಡುವಾಗ ಅದರಲ್ಲಿ ತನ್ನ `ಅಲ್ಪಮತ’ ವಾದವನ್ನೂ ಉಲ್ಲೇಖಿಸಬೇಕಿತ್ತು ಎಂಬುದು ಅವರ ಬೇಡಿಕೆ. ಸಾಮಾನ್ಯವಾಗಿ ಬಹುಸದಸ್ಯ ನ್ಯಾಯಪೀಠಗಳು ತಮ್ಮ ತೀರ್ಪು ಹೇಳುವಾಗ ಹೀಗೆ ಬಹುಮತದ ತೀರ್ಪನ್ನೇ ಅಂತಿಮ ತೀರ್ಪಾಗಿ ಪ್ರಕಟಿಸುವಾಗಲೂ ಅದಕ್ಕೆ ವ್ಯತಿರಿಕ್ತ ವಾದ ಮುಂದಿಟ್ಟ ಪೀಠದ ಅಲ್ಪಮತ ವಾದವನ್ನೂ ಉಲ್ಲೇಖಿಸುತ್ತೇವೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಕೇಳಿ ಬಂದ ನೀತಿ ಸಂಹಿತೆ ಉಲ್ಲಂಘನೆಯ ಎಲ್ಲಾ ದೂರುಗಳ ವಿಚಾರದಲ್ಲಿ ಮೂವರು ಆಯಕ್ತರು ತ್ರಿಸದಸ್ಯ ನ್ಯಾಯಮಂಡಳಿ ಕ್ಲೀನ್ ಚಿಟ್ ನೀಡಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.

ಏಪ್ರಿಲ್ 21ರಂದು ಗುಜರಾತ್‍ನ ಪಟಣ್‍ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ ಮೋದಿಯವರು “ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರಿಂದಲೇ ಅದು ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು” ಎಂದು ಹೇಳುವ ಮೂಲಕ ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೇ 4ರಂದು ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

ಅದು, ಹೀಗೆ ಮೋದಿಯವರಿಗೆ ಕೊಟ್ಟ ಆರನೇ ಕ್ಲಿನ್‍ಚಿಟ್ ಆಗಿತ್ತು. ಇದಕ್ಕೂ ಮೊದಲು ಅವರು ನಾಂದೇಡ್‍ನಲ್ಲಿ ಮಾಡಿದ್ದ ಭಾಷಣದಲ್ಲಿ “ಕಾಂಗ್ರೆಸ್ ಒಂದು ಮುಳುಗುತ್ತಿರುವ ಟೈಟಾನಿಕ್” ಎಂದು ಉಲ್ಲೇಖಿಸಿದ್ದು ಸಹಾ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಆಯೋಗ ಅಭಿಪ್ರಾಯ ಪಟ್ಟಿತ್ತು. ಏಪ್ರಿಲ್ 1ನೇ ತಾರೀಕು ವಾದ್ರಾದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಅಲ್ಪಸಂಖ್ಯಾತರು (ಮುಸ್ಲಿಂ) ಹೆಚ್ಚಾಗಿರುವ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದನ್ನು ಮೋದಿ ಧಾರ್ಮಿಕ ತುಲನೆಯಲ್ಲಿ ಮತಾಡಿದ್ದಕ್ಕೂ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ, `ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ತಮ್ಮ ಮೊದಲ ಮತವನ್ನು ಪುಲ್ವಾಮಾದಲ್ಲಿ ಹುತಾತ್ಮರಾದವರಿಗೆ ಸಲ್ಲಿಸಲಾರರೆ?’ ಎಂದು ಮಾಡಿದ್ದ ಮೋದಿ ಭಾಷಣಕ್ಕೂ ಕ್ಲೀನ್‍ಚಿಟ್ ಪ್ರಾಪ್ತವಾಗಿತ್ತು.

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಸನೀಲ್ ಅರೋರಾ ಅವರನ್ನು ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ “ಇದು ಚುನಾವಣೆ ನಡೆಯುತ್ತಿರುವ ಸಂದರ್ಭವಾಗಿರುವುದರಿಂದ ಇಂಥಾ ಚರ್ಚೆಯನ್ನು ಮುಂದುವರೆಸುವುದು ನನಗೆ ಇಷ್ಟವಿಲ್ಲ. ಈ ಹಂತದಲ್ಲಿ, ಮೌನವಾಗಿರುವುದು ನಿಜಕ್ಕೂ ತ್ರಾಸದಾಯಕ. ಆದರೂ ಚುನಾವಣೆಗಳು ಸುಸೂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ನಾನು ಮೌನವಾಗಿರುತ್ತೇನೆ” ಎಂದಿದ್ದಾರೆ.

ಸುನೀಲ್ ಅರೋರ

ಜೊತೆಗೆ, “ಲಾವಸಾ ಅವರ ವಾದ ನನ್ನ ಗಮನಕ್ಕೆ ಬಂದಿದೆ. ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ದೂರುಗಳ ತೀರ್ಪು `ಎಕ್ಸಿಕ್ಯೂಟಿವ್ ತೀರ್ಮಾನ’ಗಳಾಗಿರುತ್ತವೆಯೇ `ಕ್ವಾಸಿಜ್ಯುಡಿಸಿಯಲ್’ ತೀರ್ಮಾನಗಳಲ್ಲ. ಅವರು ಹೇಳುವಂತೆ ಅಲ್ಪಮತ ವಾದವನ್ನು ಉಲ್ಲೇಖಿಸುವ ಅವಕಾಶ ಕ್ವಾಸಿ ಜ್ಯುಡಿಸಿಯಲ್ ತೀರ್ಮಾನಗಳಲ್ಲಿ ಸಾಧ್ಯವಿದೆ, ಆದರೆ ಎಕ್ಸಿಕ್ಯೂಟಿವ್ ತೀರ್ಮಾನಗಳಲ್ಲಿ ಅಲ್ಲ” ಎಂದು ಸ್ಪಷ್ಟಣೆ ನೀಡಿದ್ದಾರೆ.

ಚುನಾವಣಾ ಆಯೋಗದ ಆಂತರಿಕ ಕಾನೂನುಗಳ ದೃಷ್ಟಿಯಲ್ಲಿ, ಯಾವುದೇ ಪ್ರಕರಣದ ವಿಚಾರಣೆಯ ನಂತರ ಬಾಧಿತ ಪಕ್ಷಗಳಿಗೆ ತಮ್ಮ ದೂರುಗಳಿಗೆ ಪೂರಕವಾದ ಸಾಕ್ಷ್ಯಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟು ಒಂದು ಸಂಪೂರ್ಣ ತನಿಖೆಗೆ ಆದೇಶಿಸುವ ಸಾಧ್ಯತೆಯಿರುವ ಪ್ರಕರಣಗಳನ್ನು ಕ್ವಾಸಿಜ್ಯುಡಿಸಿಯಲ್ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಆದರೆ ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಂತಹ ತನಿಖೆಯ ಅವಶ್ಯಕತೆ ಇರುವುದಿಲ್ಲ, ಬದಲಿಗೆ ಪ್ರಾಥಮಿಕ ಸಾಕ್ಷ್ಯಗಳನ್ನು ಆಧರಿಸಿ, ಚುನಾವಣೆ ಮುಗಿಯುವುದರೊಳಗೇ ಬಾಧಿತವಾಗುವಂತೆ ಸಂಬಂಧಪಟ್ಟ ವ್ಯಕ್ತಿ ಅಥವಾ ಪ್ರಕರಣಕ್ಕೆ ಸೂಕ್ತ ಶಿಕ್ಷೆ, ನಿರ್ಬಂಧ ಹೇರಲಾಗುವುದು. ಹಾಗಾಗಿ ಅವು `ಎಕ್ಸಿಕ್ಯೂಟಿವ್ ತೀರ್ಪು’ಗಳು ಎನಿಸಿಕೊಳ್ಳುತ್ತವೆ. ಹಾಗಾಗಿ ಇಂಥಾ ಎಕ್ಸಿಕ್ಯೂಟಿವ್ ತೀರ್ಪುಗಳಲ್ಲಿ `ಅಲ್ಪಮತ’ದ ವಾದವನ್ನೂ ಉಲ್ಲೇಖಿಸಬೇಕೆಂಬ ನಿಯಮವಿಲ್ಲ ಎಂಬುದು ಚುನಾವಣಾ ಆಯೋಗದ ವಾದ.

ಇದನ್ನು ಓದಿ: ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಅದೇನೆ ಇರಲಿ, ಚುನಾವಣಾ ಆಯೋಗ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂಬ ಸಾರ್ವಜನಿಕ ಅಭಿಪ್ರಾಯ ದಟ್ಟವಾಗುತ್ತಿರುವ ಸಮಯದಲ್ಲೇ ಈ ಪ್ರಕರಣ ಹೊರಬಂದಿರುವುದು ಇಡೀ ಆಯೋಗದ ಪಾರದರ್ಶಕ, ಪ್ರಾಮಾಣಿಕತೆಗಳನ್ನೆ ಪ್ರಶ್ನಿಸುವಂತೆ ಮಾಡಿದೆ. ಕಳೆದ ವರ್ಷದ ಡಿಸೆಂಬರ್ 2ರಂದು ಮೋದಿಯವರ ಸರ್ಕಾರ ಸುನೀಲ್ ಅರೋರಾ ಅವರನ್ನು ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕ ಮಾಡಿದಾಗಲೇ ಹಲವು ಚರ್ಚೆಗಳು ಹುಟ್ಟಿಕೊಂಡಿದ್ದವು. 1980ರ ರಾಜಸ್ಥಾನ್ ಕ್ಯಾಡರ್‍ನ ಐಎಎಸ್ ಅಧಿಕಾರಿಯಾದ ಸನೀಲ್ ಅರೋರಾ ಆಡಳಿತಾತ್ಮಕ ಮೇಲ್ದರ್ಜೆಯ ಹುದ್ದೆಗೇರಿಸಲ್ಪಟ್ಟದ್ದು ಎನ್‍ಡಿಎ ಅಧಿಕಾರದ ಅವಧಿಗಳಲ್ಲೇ. ರಾಜಸ್ಥಾನದ ರಾಜ್ಯ ಸರ್ಕಾರದ ಹುದ್ದೆಗಳಲ್ಲಿದ್ದ ಅರೋರಾ ಅವರನ್ನು 1999ರಲ್ಲಿ ವಾಜಪೇಯಿಯವರ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ನಾಗರಿಕ ವಿಮಾನಯಾನ ಖಾತೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವ ಮೂಲಕ ಕೇಂದ್ರ ಸೇವೆಯ ಮೇಲ್ದರ್ಜೆಗೇರಿಸಲಾಗಿತ್ತು. ಅಲ್ಲದೇ ಇಂಡಿಯನ್ ಏರ್‍ಲೈನ್ಸ್‍ನ ಛೀಫ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಯೂ ನೇಮಕಗೊಂಡಿದ್ದರು. ಎನ್‍ಡಿಎ ಸರ್ಕಾರ ಅಧಿಕಾರ ಕಳೆದುಕೊಂಡು ಯುಪಿಎ ಅಧಿಕಾರಕ್ಕೆ ಬಂದ ನಂತರ, ಅರೋರ ಅವರ ಬಿಜೆಪಿ ಸಖ್ಯವನ್ನು ಸೂಕ್ಷ್ಮವಾಗಿ ಗಮನದಲ್ಲಿರಿಸಿಕೊಂಡೇ ಅವರನ್ನು ಕೇಂದ್ರ ಸೇವೆಯಿಂದ ಬಿಡುಗಡೆಗೊಳಿಸಿ ಮರಳಿ ರಾಜಸ್ಥಾನ ರಾಜ್ಯ ಸೇವೆಗೆ ನಿಯೋಜಿಸಲಾಗಿತ್ತು. ಅದಾದ ಒಂದು ದಶಕದ ನಂತರವಷ್ಟೇ ಮೋದಿಯವರು ಅಧಿಕಾರಕ್ಕೇರಿದ ತರುವಾಯ 2017ರಲ್ಲಿ ಅವರನ್ನು ರಾಜ್ಯ ಸೇವೆಯಿಂದ ಮತ್ತೆ ಕೇಂದ್ರ ಸೇವೆಗೆ ನಿಯೋಜಿಸಿಕೊಂಡು ಚುನಾವಣಾ ಆಯೋಗದ ಆಯುಕ್ತ ಹುದ್ದೆ ನೀಡಲಾಗಿತ್ತು.

ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್, ಸಿಬಿಐ, ಆರ್‍ಬಿಐನಂತಹ ಸಾಂವಿಧಾನಿಕ ಸಂಸ್ಥೆಗಳು ತಮ್ಮ ಆಂತರಿಕ ಕಚ್ಚಾಟದಿಂದ ಬೀದಿಗೆ ಬೀಳುತ್ತಿರುವ ಸಾಲಿಗೆ ಚುನಾವಣಾ ಆಯೋಗವೂ ಸೇರ್ಪಡೆಗೊಂಡಂತಾಗಿದೆ.

ಇದನ್ನು ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...