HomeUncategorizedಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಚುನಾವಣಾ ಆಯೋಗದ ಆಂತರಿಕ ಕದನ ಬೀದಿಗೆ ಬಿದ್ದಿದೆ. ಚುನಾವಣಾ ಆಯುಕ್ತ ಅಶೋಕ್ ಲಾವಸಾ ಅವರು ಮೇ 4ರಿಂದೀಚೆಗೆ ಆಯೋಗ ನಡೆಸುವ ‘ಮಾದರಿ ನೀತಿ ಸಂಹಿತೆ’ ಸಭೆಗಳಿಂದ ದೂರ ಉಳಿಯುತ್ತಾ ಬರುವ ಮೂಲಕ ತಮ್ಮ ಪ್ರತಿರೋಧ ಹೊರಹಾಕಿದ ಘಟನೆ ಬೆಳಕಿಗೆ ಬಂದಿದೆ. ಚುನಾವಣಾ ಆಯೋಗ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕೇಳಿಬಂದ ಸಂಹಿತೆ ಉಲ್ಲಂಘನೆಯ ಹಲವು ಆರೋಪಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದಕ್ಕೆ ಅವರ ವಿರೋಧ ಇತ್ತು ಎನ್ನಲಾಗಿದೆ.

ಅಶೋಕ್ ಲಾವಸಾ

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಪತ್ರ ಬರೆದಿರುವ ಲಾವಾಸಾ “ತನ್ನ `ಅಲ್ಪಮತ’ ಅಭಿಪ್ರಾಯವನ್ನು ಆಯೋಗದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗುತ್ತಿಲ್ಲವಾದ್ದರಿಂದ, ನಾನು ಅನಿವಾರ್ಯವಾಗಿ ಪೂರ್ಣ ಆಯೋಗದ ಸಭೆಗಳಿಂದ ದೂರ ಉಳಿಯಬೇಕಾಗಿದೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನೀತಿ ಸಂಹಿತೆ ದೂರುಗಳ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾಧಿಕಾರಿಯೂ ಸೇರಿದಂತೆ ಇನ್ನಿಬ್ಬರು ಚುನಾವಣಾ ಆಯುಕ್ತರನ್ನು ಒಳಗೊಂಡ ಮೂವರು ಅಧಿಕಾರಿಗಳ ಒಂದು ಸಮಿತಿಯಿರುತ್ತದೆ. ಯಾವುದೇ ದೂರಿನ ಬಗ್ಗೆ ಇಲ್ಲಿ ಚರ್ಚೆ ನಡೆದು ಒಮ್ಮತದ ಆದೇಶವನ್ನು ಸಾರ್ವಜನಿಕವಾಗಿ ಹೊರಹಾಕಲಾಗುವುದು. ಹಾಗೊಮ್ಮೆ ಒಮ್ಮತದ ತೀರ್ಮಾನಕ್ಕೆ ಬರಲಾಗದಿದ್ದರೆ, 2:1 ಅನುಪಾತದಲ್ಲಿ ಬಹುಮತದ ತೀರ್ಪನ್ನು ಅಂತಿಮ ಆದೇಶವಾಗಿ ಪರಿಗಣಿಸಲಾಗುತ್ತದೆ.

ಹೀಗೆ ಬಹುಮತದ ಆದೇಶಕ್ಕೆ ವ್ಯತಿರಿಕ್ತವಾಗಿ ಅಭಿಪ್ರಾಯ ಹೊರಹಾಕಿದ ಇನ್ನೊಬ್ಬ ಸದಸ್ಯರ ವಾದವನ್ನು `ಅಲ್ಪಮತ’ ಅಭಿಪ್ರಾಯ ಎಂದು ಪರಿಗಣಿಸಲಾಗುವುದು. ಇದು ಚುನಾವಣಾ ಆಯೋಗದ ನೀತಿ ಸಂಹಿತೆ ದೂರುಗಳನ್ನು ವಿಚಾರಣೆ ನಡೆಸುವ ವೈಖರಿ. ಅಶೋಕ್ ಲಾವಾಸಾ ಅವರಿಗೆ ಈ ವೈಖರಿಗೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ, ಬದಲಿಗೆ ಅಯೋಗದ ಬಹುಮತ ತೀರ್ಪಿನ ಆದೇಶವನ್ನು ನೀಡುವಾಗ ಅದರಲ್ಲಿ ತನ್ನ `ಅಲ್ಪಮತ’ ವಾದವನ್ನೂ ಉಲ್ಲೇಖಿಸಬೇಕಿತ್ತು ಎಂಬುದು ಅವರ ಬೇಡಿಕೆ. ಸಾಮಾನ್ಯವಾಗಿ ಬಹುಸದಸ್ಯ ನ್ಯಾಯಪೀಠಗಳು ತಮ್ಮ ತೀರ್ಪು ಹೇಳುವಾಗ ಹೀಗೆ ಬಹುಮತದ ತೀರ್ಪನ್ನೇ ಅಂತಿಮ ತೀರ್ಪಾಗಿ ಪ್ರಕಟಿಸುವಾಗಲೂ ಅದಕ್ಕೆ ವ್ಯತಿರಿಕ್ತ ವಾದ ಮುಂದಿಟ್ಟ ಪೀಠದ ಅಲ್ಪಮತ ವಾದವನ್ನೂ ಉಲ್ಲೇಖಿಸುತ್ತೇವೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಕೇಳಿ ಬಂದ ನೀತಿ ಸಂಹಿತೆ ಉಲ್ಲಂಘನೆಯ ಎಲ್ಲಾ ದೂರುಗಳ ವಿಚಾರದಲ್ಲಿ ಮೂವರು ಆಯಕ್ತರು ತ್ರಿಸದಸ್ಯ ನ್ಯಾಯಮಂಡಳಿ ಕ್ಲೀನ್ ಚಿಟ್ ನೀಡಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.

ಏಪ್ರಿಲ್ 21ರಂದು ಗುಜರಾತ್‍ನ ಪಟಣ್‍ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ ಮೋದಿಯವರು “ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರಿಂದಲೇ ಅದು ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು” ಎಂದು ಹೇಳುವ ಮೂಲಕ ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೇ 4ರಂದು ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

ಅದು, ಹೀಗೆ ಮೋದಿಯವರಿಗೆ ಕೊಟ್ಟ ಆರನೇ ಕ್ಲಿನ್‍ಚಿಟ್ ಆಗಿತ್ತು. ಇದಕ್ಕೂ ಮೊದಲು ಅವರು ನಾಂದೇಡ್‍ನಲ್ಲಿ ಮಾಡಿದ್ದ ಭಾಷಣದಲ್ಲಿ “ಕಾಂಗ್ರೆಸ್ ಒಂದು ಮುಳುಗುತ್ತಿರುವ ಟೈಟಾನಿಕ್” ಎಂದು ಉಲ್ಲೇಖಿಸಿದ್ದು ಸಹಾ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಆಯೋಗ ಅಭಿಪ್ರಾಯ ಪಟ್ಟಿತ್ತು. ಏಪ್ರಿಲ್ 1ನೇ ತಾರೀಕು ವಾದ್ರಾದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಅಲ್ಪಸಂಖ್ಯಾತರು (ಮುಸ್ಲಿಂ) ಹೆಚ್ಚಾಗಿರುವ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದನ್ನು ಮೋದಿ ಧಾರ್ಮಿಕ ತುಲನೆಯಲ್ಲಿ ಮತಾಡಿದ್ದಕ್ಕೂ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ, `ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ತಮ್ಮ ಮೊದಲ ಮತವನ್ನು ಪುಲ್ವಾಮಾದಲ್ಲಿ ಹುತಾತ್ಮರಾದವರಿಗೆ ಸಲ್ಲಿಸಲಾರರೆ?’ ಎಂದು ಮಾಡಿದ್ದ ಮೋದಿ ಭಾಷಣಕ್ಕೂ ಕ್ಲೀನ್‍ಚಿಟ್ ಪ್ರಾಪ್ತವಾಗಿತ್ತು.

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಸನೀಲ್ ಅರೋರಾ ಅವರನ್ನು ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ “ಇದು ಚುನಾವಣೆ ನಡೆಯುತ್ತಿರುವ ಸಂದರ್ಭವಾಗಿರುವುದರಿಂದ ಇಂಥಾ ಚರ್ಚೆಯನ್ನು ಮುಂದುವರೆಸುವುದು ನನಗೆ ಇಷ್ಟವಿಲ್ಲ. ಈ ಹಂತದಲ್ಲಿ, ಮೌನವಾಗಿರುವುದು ನಿಜಕ್ಕೂ ತ್ರಾಸದಾಯಕ. ಆದರೂ ಚುನಾವಣೆಗಳು ಸುಸೂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ನಾನು ಮೌನವಾಗಿರುತ್ತೇನೆ” ಎಂದಿದ್ದಾರೆ.

ಸುನೀಲ್ ಅರೋರ

ಜೊತೆಗೆ, “ಲಾವಸಾ ಅವರ ವಾದ ನನ್ನ ಗಮನಕ್ಕೆ ಬಂದಿದೆ. ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ದೂರುಗಳ ತೀರ್ಪು `ಎಕ್ಸಿಕ್ಯೂಟಿವ್ ತೀರ್ಮಾನ’ಗಳಾಗಿರುತ್ತವೆಯೇ `ಕ್ವಾಸಿಜ್ಯುಡಿಸಿಯಲ್’ ತೀರ್ಮಾನಗಳಲ್ಲ. ಅವರು ಹೇಳುವಂತೆ ಅಲ್ಪಮತ ವಾದವನ್ನು ಉಲ್ಲೇಖಿಸುವ ಅವಕಾಶ ಕ್ವಾಸಿ ಜ್ಯುಡಿಸಿಯಲ್ ತೀರ್ಮಾನಗಳಲ್ಲಿ ಸಾಧ್ಯವಿದೆ, ಆದರೆ ಎಕ್ಸಿಕ್ಯೂಟಿವ್ ತೀರ್ಮಾನಗಳಲ್ಲಿ ಅಲ್ಲ” ಎಂದು ಸ್ಪಷ್ಟಣೆ ನೀಡಿದ್ದಾರೆ.

ಚುನಾವಣಾ ಆಯೋಗದ ಆಂತರಿಕ ಕಾನೂನುಗಳ ದೃಷ್ಟಿಯಲ್ಲಿ, ಯಾವುದೇ ಪ್ರಕರಣದ ವಿಚಾರಣೆಯ ನಂತರ ಬಾಧಿತ ಪಕ್ಷಗಳಿಗೆ ತಮ್ಮ ದೂರುಗಳಿಗೆ ಪೂರಕವಾದ ಸಾಕ್ಷ್ಯಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟು ಒಂದು ಸಂಪೂರ್ಣ ತನಿಖೆಗೆ ಆದೇಶಿಸುವ ಸಾಧ್ಯತೆಯಿರುವ ಪ್ರಕರಣಗಳನ್ನು ಕ್ವಾಸಿಜ್ಯುಡಿಸಿಯಲ್ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಆದರೆ ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಂತಹ ತನಿಖೆಯ ಅವಶ್ಯಕತೆ ಇರುವುದಿಲ್ಲ, ಬದಲಿಗೆ ಪ್ರಾಥಮಿಕ ಸಾಕ್ಷ್ಯಗಳನ್ನು ಆಧರಿಸಿ, ಚುನಾವಣೆ ಮುಗಿಯುವುದರೊಳಗೇ ಬಾಧಿತವಾಗುವಂತೆ ಸಂಬಂಧಪಟ್ಟ ವ್ಯಕ್ತಿ ಅಥವಾ ಪ್ರಕರಣಕ್ಕೆ ಸೂಕ್ತ ಶಿಕ್ಷೆ, ನಿರ್ಬಂಧ ಹೇರಲಾಗುವುದು. ಹಾಗಾಗಿ ಅವು `ಎಕ್ಸಿಕ್ಯೂಟಿವ್ ತೀರ್ಪು’ಗಳು ಎನಿಸಿಕೊಳ್ಳುತ್ತವೆ. ಹಾಗಾಗಿ ಇಂಥಾ ಎಕ್ಸಿಕ್ಯೂಟಿವ್ ತೀರ್ಪುಗಳಲ್ಲಿ `ಅಲ್ಪಮತ’ದ ವಾದವನ್ನೂ ಉಲ್ಲೇಖಿಸಬೇಕೆಂಬ ನಿಯಮವಿಲ್ಲ ಎಂಬುದು ಚುನಾವಣಾ ಆಯೋಗದ ವಾದ.

ಇದನ್ನು ಓದಿ: ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಅದೇನೆ ಇರಲಿ, ಚುನಾವಣಾ ಆಯೋಗ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂಬ ಸಾರ್ವಜನಿಕ ಅಭಿಪ್ರಾಯ ದಟ್ಟವಾಗುತ್ತಿರುವ ಸಮಯದಲ್ಲೇ ಈ ಪ್ರಕರಣ ಹೊರಬಂದಿರುವುದು ಇಡೀ ಆಯೋಗದ ಪಾರದರ್ಶಕ, ಪ್ರಾಮಾಣಿಕತೆಗಳನ್ನೆ ಪ್ರಶ್ನಿಸುವಂತೆ ಮಾಡಿದೆ. ಕಳೆದ ವರ್ಷದ ಡಿಸೆಂಬರ್ 2ರಂದು ಮೋದಿಯವರ ಸರ್ಕಾರ ಸುನೀಲ್ ಅರೋರಾ ಅವರನ್ನು ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕ ಮಾಡಿದಾಗಲೇ ಹಲವು ಚರ್ಚೆಗಳು ಹುಟ್ಟಿಕೊಂಡಿದ್ದವು. 1980ರ ರಾಜಸ್ಥಾನ್ ಕ್ಯಾಡರ್‍ನ ಐಎಎಸ್ ಅಧಿಕಾರಿಯಾದ ಸನೀಲ್ ಅರೋರಾ ಆಡಳಿತಾತ್ಮಕ ಮೇಲ್ದರ್ಜೆಯ ಹುದ್ದೆಗೇರಿಸಲ್ಪಟ್ಟದ್ದು ಎನ್‍ಡಿಎ ಅಧಿಕಾರದ ಅವಧಿಗಳಲ್ಲೇ. ರಾಜಸ್ಥಾನದ ರಾಜ್ಯ ಸರ್ಕಾರದ ಹುದ್ದೆಗಳಲ್ಲಿದ್ದ ಅರೋರಾ ಅವರನ್ನು 1999ರಲ್ಲಿ ವಾಜಪೇಯಿಯವರ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ನಾಗರಿಕ ವಿಮಾನಯಾನ ಖಾತೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವ ಮೂಲಕ ಕೇಂದ್ರ ಸೇವೆಯ ಮೇಲ್ದರ್ಜೆಗೇರಿಸಲಾಗಿತ್ತು. ಅಲ್ಲದೇ ಇಂಡಿಯನ್ ಏರ್‍ಲೈನ್ಸ್‍ನ ಛೀಫ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಯೂ ನೇಮಕಗೊಂಡಿದ್ದರು. ಎನ್‍ಡಿಎ ಸರ್ಕಾರ ಅಧಿಕಾರ ಕಳೆದುಕೊಂಡು ಯುಪಿಎ ಅಧಿಕಾರಕ್ಕೆ ಬಂದ ನಂತರ, ಅರೋರ ಅವರ ಬಿಜೆಪಿ ಸಖ್ಯವನ್ನು ಸೂಕ್ಷ್ಮವಾಗಿ ಗಮನದಲ್ಲಿರಿಸಿಕೊಂಡೇ ಅವರನ್ನು ಕೇಂದ್ರ ಸೇವೆಯಿಂದ ಬಿಡುಗಡೆಗೊಳಿಸಿ ಮರಳಿ ರಾಜಸ್ಥಾನ ರಾಜ್ಯ ಸೇವೆಗೆ ನಿಯೋಜಿಸಲಾಗಿತ್ತು. ಅದಾದ ಒಂದು ದಶಕದ ನಂತರವಷ್ಟೇ ಮೋದಿಯವರು ಅಧಿಕಾರಕ್ಕೇರಿದ ತರುವಾಯ 2017ರಲ್ಲಿ ಅವರನ್ನು ರಾಜ್ಯ ಸೇವೆಯಿಂದ ಮತ್ತೆ ಕೇಂದ್ರ ಸೇವೆಗೆ ನಿಯೋಜಿಸಿಕೊಂಡು ಚುನಾವಣಾ ಆಯೋಗದ ಆಯುಕ್ತ ಹುದ್ದೆ ನೀಡಲಾಗಿತ್ತು.

ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್, ಸಿಬಿಐ, ಆರ್‍ಬಿಐನಂತಹ ಸಾಂವಿಧಾನಿಕ ಸಂಸ್ಥೆಗಳು ತಮ್ಮ ಆಂತರಿಕ ಕಚ್ಚಾಟದಿಂದ ಬೀದಿಗೆ ಬೀಳುತ್ತಿರುವ ಸಾಲಿಗೆ ಚುನಾವಣಾ ಆಯೋಗವೂ ಸೇರ್ಪಡೆಗೊಂಡಂತಾಗಿದೆ.

ಇದನ್ನು ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...