HomeUncategorizedಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಚುನಾವಣಾ ಆಯೋಗದ ಆಂತರಿಕ ಕದನ ಬೀದಿಗೆ ಬಿದ್ದಿದೆ. ಚುನಾವಣಾ ಆಯುಕ್ತ ಅಶೋಕ್ ಲಾವಸಾ ಅವರು ಮೇ 4ರಿಂದೀಚೆಗೆ ಆಯೋಗ ನಡೆಸುವ ‘ಮಾದರಿ ನೀತಿ ಸಂಹಿತೆ’ ಸಭೆಗಳಿಂದ ದೂರ ಉಳಿಯುತ್ತಾ ಬರುವ ಮೂಲಕ ತಮ್ಮ ಪ್ರತಿರೋಧ ಹೊರಹಾಕಿದ ಘಟನೆ ಬೆಳಕಿಗೆ ಬಂದಿದೆ. ಚುನಾವಣಾ ಆಯೋಗ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕೇಳಿಬಂದ ಸಂಹಿತೆ ಉಲ್ಲಂಘನೆಯ ಹಲವು ಆರೋಪಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದಕ್ಕೆ ಅವರ ವಿರೋಧ ಇತ್ತು ಎನ್ನಲಾಗಿದೆ.

ಅಶೋಕ್ ಲಾವಸಾ

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಪತ್ರ ಬರೆದಿರುವ ಲಾವಾಸಾ “ತನ್ನ `ಅಲ್ಪಮತ’ ಅಭಿಪ್ರಾಯವನ್ನು ಆಯೋಗದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗುತ್ತಿಲ್ಲವಾದ್ದರಿಂದ, ನಾನು ಅನಿವಾರ್ಯವಾಗಿ ಪೂರ್ಣ ಆಯೋಗದ ಸಭೆಗಳಿಂದ ದೂರ ಉಳಿಯಬೇಕಾಗಿದೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನೀತಿ ಸಂಹಿತೆ ದೂರುಗಳ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾಧಿಕಾರಿಯೂ ಸೇರಿದಂತೆ ಇನ್ನಿಬ್ಬರು ಚುನಾವಣಾ ಆಯುಕ್ತರನ್ನು ಒಳಗೊಂಡ ಮೂವರು ಅಧಿಕಾರಿಗಳ ಒಂದು ಸಮಿತಿಯಿರುತ್ತದೆ. ಯಾವುದೇ ದೂರಿನ ಬಗ್ಗೆ ಇಲ್ಲಿ ಚರ್ಚೆ ನಡೆದು ಒಮ್ಮತದ ಆದೇಶವನ್ನು ಸಾರ್ವಜನಿಕವಾಗಿ ಹೊರಹಾಕಲಾಗುವುದು. ಹಾಗೊಮ್ಮೆ ಒಮ್ಮತದ ತೀರ್ಮಾನಕ್ಕೆ ಬರಲಾಗದಿದ್ದರೆ, 2:1 ಅನುಪಾತದಲ್ಲಿ ಬಹುಮತದ ತೀರ್ಪನ್ನು ಅಂತಿಮ ಆದೇಶವಾಗಿ ಪರಿಗಣಿಸಲಾಗುತ್ತದೆ.

ಹೀಗೆ ಬಹುಮತದ ಆದೇಶಕ್ಕೆ ವ್ಯತಿರಿಕ್ತವಾಗಿ ಅಭಿಪ್ರಾಯ ಹೊರಹಾಕಿದ ಇನ್ನೊಬ್ಬ ಸದಸ್ಯರ ವಾದವನ್ನು `ಅಲ್ಪಮತ’ ಅಭಿಪ್ರಾಯ ಎಂದು ಪರಿಗಣಿಸಲಾಗುವುದು. ಇದು ಚುನಾವಣಾ ಆಯೋಗದ ನೀತಿ ಸಂಹಿತೆ ದೂರುಗಳನ್ನು ವಿಚಾರಣೆ ನಡೆಸುವ ವೈಖರಿ. ಅಶೋಕ್ ಲಾವಾಸಾ ಅವರಿಗೆ ಈ ವೈಖರಿಗೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ, ಬದಲಿಗೆ ಅಯೋಗದ ಬಹುಮತ ತೀರ್ಪಿನ ಆದೇಶವನ್ನು ನೀಡುವಾಗ ಅದರಲ್ಲಿ ತನ್ನ `ಅಲ್ಪಮತ’ ವಾದವನ್ನೂ ಉಲ್ಲೇಖಿಸಬೇಕಿತ್ತು ಎಂಬುದು ಅವರ ಬೇಡಿಕೆ. ಸಾಮಾನ್ಯವಾಗಿ ಬಹುಸದಸ್ಯ ನ್ಯಾಯಪೀಠಗಳು ತಮ್ಮ ತೀರ್ಪು ಹೇಳುವಾಗ ಹೀಗೆ ಬಹುಮತದ ತೀರ್ಪನ್ನೇ ಅಂತಿಮ ತೀರ್ಪಾಗಿ ಪ್ರಕಟಿಸುವಾಗಲೂ ಅದಕ್ಕೆ ವ್ಯತಿರಿಕ್ತ ವಾದ ಮುಂದಿಟ್ಟ ಪೀಠದ ಅಲ್ಪಮತ ವಾದವನ್ನೂ ಉಲ್ಲೇಖಿಸುತ್ತೇವೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಕೇಳಿ ಬಂದ ನೀತಿ ಸಂಹಿತೆ ಉಲ್ಲಂಘನೆಯ ಎಲ್ಲಾ ದೂರುಗಳ ವಿಚಾರದಲ್ಲಿ ಮೂವರು ಆಯಕ್ತರು ತ್ರಿಸದಸ್ಯ ನ್ಯಾಯಮಂಡಳಿ ಕ್ಲೀನ್ ಚಿಟ್ ನೀಡಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.

ಏಪ್ರಿಲ್ 21ರಂದು ಗುಜರಾತ್‍ನ ಪಟಣ್‍ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ ಮೋದಿಯವರು “ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರಿಂದಲೇ ಅದು ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು” ಎಂದು ಹೇಳುವ ಮೂಲಕ ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೇ 4ರಂದು ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

ಅದು, ಹೀಗೆ ಮೋದಿಯವರಿಗೆ ಕೊಟ್ಟ ಆರನೇ ಕ್ಲಿನ್‍ಚಿಟ್ ಆಗಿತ್ತು. ಇದಕ್ಕೂ ಮೊದಲು ಅವರು ನಾಂದೇಡ್‍ನಲ್ಲಿ ಮಾಡಿದ್ದ ಭಾಷಣದಲ್ಲಿ “ಕಾಂಗ್ರೆಸ್ ಒಂದು ಮುಳುಗುತ್ತಿರುವ ಟೈಟಾನಿಕ್” ಎಂದು ಉಲ್ಲೇಖಿಸಿದ್ದು ಸಹಾ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಆಯೋಗ ಅಭಿಪ್ರಾಯ ಪಟ್ಟಿತ್ತು. ಏಪ್ರಿಲ್ 1ನೇ ತಾರೀಕು ವಾದ್ರಾದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಅಲ್ಪಸಂಖ್ಯಾತರು (ಮುಸ್ಲಿಂ) ಹೆಚ್ಚಾಗಿರುವ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದನ್ನು ಮೋದಿ ಧಾರ್ಮಿಕ ತುಲನೆಯಲ್ಲಿ ಮತಾಡಿದ್ದಕ್ಕೂ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ, `ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ತಮ್ಮ ಮೊದಲ ಮತವನ್ನು ಪುಲ್ವಾಮಾದಲ್ಲಿ ಹುತಾತ್ಮರಾದವರಿಗೆ ಸಲ್ಲಿಸಲಾರರೆ?’ ಎಂದು ಮಾಡಿದ್ದ ಮೋದಿ ಭಾಷಣಕ್ಕೂ ಕ್ಲೀನ್‍ಚಿಟ್ ಪ್ರಾಪ್ತವಾಗಿತ್ತು.

ಈ ಎಲ್ಲಾ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದೇ ಅವರ ಆಕ್ಷೇಪಣೆ.

ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಸನೀಲ್ ಅರೋರಾ ಅವರನ್ನು ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ “ಇದು ಚುನಾವಣೆ ನಡೆಯುತ್ತಿರುವ ಸಂದರ್ಭವಾಗಿರುವುದರಿಂದ ಇಂಥಾ ಚರ್ಚೆಯನ್ನು ಮುಂದುವರೆಸುವುದು ನನಗೆ ಇಷ್ಟವಿಲ್ಲ. ಈ ಹಂತದಲ್ಲಿ, ಮೌನವಾಗಿರುವುದು ನಿಜಕ್ಕೂ ತ್ರಾಸದಾಯಕ. ಆದರೂ ಚುನಾವಣೆಗಳು ಸುಸೂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ನಾನು ಮೌನವಾಗಿರುತ್ತೇನೆ” ಎಂದಿದ್ದಾರೆ.

ಸುನೀಲ್ ಅರೋರ

ಜೊತೆಗೆ, “ಲಾವಸಾ ಅವರ ವಾದ ನನ್ನ ಗಮನಕ್ಕೆ ಬಂದಿದೆ. ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ದೂರುಗಳ ತೀರ್ಪು `ಎಕ್ಸಿಕ್ಯೂಟಿವ್ ತೀರ್ಮಾನ’ಗಳಾಗಿರುತ್ತವೆಯೇ `ಕ್ವಾಸಿಜ್ಯುಡಿಸಿಯಲ್’ ತೀರ್ಮಾನಗಳಲ್ಲ. ಅವರು ಹೇಳುವಂತೆ ಅಲ್ಪಮತ ವಾದವನ್ನು ಉಲ್ಲೇಖಿಸುವ ಅವಕಾಶ ಕ್ವಾಸಿ ಜ್ಯುಡಿಸಿಯಲ್ ತೀರ್ಮಾನಗಳಲ್ಲಿ ಸಾಧ್ಯವಿದೆ, ಆದರೆ ಎಕ್ಸಿಕ್ಯೂಟಿವ್ ತೀರ್ಮಾನಗಳಲ್ಲಿ ಅಲ್ಲ” ಎಂದು ಸ್ಪಷ್ಟಣೆ ನೀಡಿದ್ದಾರೆ.

ಚುನಾವಣಾ ಆಯೋಗದ ಆಂತರಿಕ ಕಾನೂನುಗಳ ದೃಷ್ಟಿಯಲ್ಲಿ, ಯಾವುದೇ ಪ್ರಕರಣದ ವಿಚಾರಣೆಯ ನಂತರ ಬಾಧಿತ ಪಕ್ಷಗಳಿಗೆ ತಮ್ಮ ದೂರುಗಳಿಗೆ ಪೂರಕವಾದ ಸಾಕ್ಷ್ಯಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟು ಒಂದು ಸಂಪೂರ್ಣ ತನಿಖೆಗೆ ಆದೇಶಿಸುವ ಸಾಧ್ಯತೆಯಿರುವ ಪ್ರಕರಣಗಳನ್ನು ಕ್ವಾಸಿಜ್ಯುಡಿಸಿಯಲ್ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಆದರೆ ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಂತಹ ತನಿಖೆಯ ಅವಶ್ಯಕತೆ ಇರುವುದಿಲ್ಲ, ಬದಲಿಗೆ ಪ್ರಾಥಮಿಕ ಸಾಕ್ಷ್ಯಗಳನ್ನು ಆಧರಿಸಿ, ಚುನಾವಣೆ ಮುಗಿಯುವುದರೊಳಗೇ ಬಾಧಿತವಾಗುವಂತೆ ಸಂಬಂಧಪಟ್ಟ ವ್ಯಕ್ತಿ ಅಥವಾ ಪ್ರಕರಣಕ್ಕೆ ಸೂಕ್ತ ಶಿಕ್ಷೆ, ನಿರ್ಬಂಧ ಹೇರಲಾಗುವುದು. ಹಾಗಾಗಿ ಅವು `ಎಕ್ಸಿಕ್ಯೂಟಿವ್ ತೀರ್ಪು’ಗಳು ಎನಿಸಿಕೊಳ್ಳುತ್ತವೆ. ಹಾಗಾಗಿ ಇಂಥಾ ಎಕ್ಸಿಕ್ಯೂಟಿವ್ ತೀರ್ಪುಗಳಲ್ಲಿ `ಅಲ್ಪಮತ’ದ ವಾದವನ್ನೂ ಉಲ್ಲೇಖಿಸಬೇಕೆಂಬ ನಿಯಮವಿಲ್ಲ ಎಂಬುದು ಚುನಾವಣಾ ಆಯೋಗದ ವಾದ.

ಇದನ್ನು ಓದಿ: ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಅದೇನೆ ಇರಲಿ, ಚುನಾವಣಾ ಆಯೋಗ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂಬ ಸಾರ್ವಜನಿಕ ಅಭಿಪ್ರಾಯ ದಟ್ಟವಾಗುತ್ತಿರುವ ಸಮಯದಲ್ಲೇ ಈ ಪ್ರಕರಣ ಹೊರಬಂದಿರುವುದು ಇಡೀ ಆಯೋಗದ ಪಾರದರ್ಶಕ, ಪ್ರಾಮಾಣಿಕತೆಗಳನ್ನೆ ಪ್ರಶ್ನಿಸುವಂತೆ ಮಾಡಿದೆ. ಕಳೆದ ವರ್ಷದ ಡಿಸೆಂಬರ್ 2ರಂದು ಮೋದಿಯವರ ಸರ್ಕಾರ ಸುನೀಲ್ ಅರೋರಾ ಅವರನ್ನು ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕ ಮಾಡಿದಾಗಲೇ ಹಲವು ಚರ್ಚೆಗಳು ಹುಟ್ಟಿಕೊಂಡಿದ್ದವು. 1980ರ ರಾಜಸ್ಥಾನ್ ಕ್ಯಾಡರ್‍ನ ಐಎಎಸ್ ಅಧಿಕಾರಿಯಾದ ಸನೀಲ್ ಅರೋರಾ ಆಡಳಿತಾತ್ಮಕ ಮೇಲ್ದರ್ಜೆಯ ಹುದ್ದೆಗೇರಿಸಲ್ಪಟ್ಟದ್ದು ಎನ್‍ಡಿಎ ಅಧಿಕಾರದ ಅವಧಿಗಳಲ್ಲೇ. ರಾಜಸ್ಥಾನದ ರಾಜ್ಯ ಸರ್ಕಾರದ ಹುದ್ದೆಗಳಲ್ಲಿದ್ದ ಅರೋರಾ ಅವರನ್ನು 1999ರಲ್ಲಿ ವಾಜಪೇಯಿಯವರ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ನಾಗರಿಕ ವಿಮಾನಯಾನ ಖಾತೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವ ಮೂಲಕ ಕೇಂದ್ರ ಸೇವೆಯ ಮೇಲ್ದರ್ಜೆಗೇರಿಸಲಾಗಿತ್ತು. ಅಲ್ಲದೇ ಇಂಡಿಯನ್ ಏರ್‍ಲೈನ್ಸ್‍ನ ಛೀಫ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಯೂ ನೇಮಕಗೊಂಡಿದ್ದರು. ಎನ್‍ಡಿಎ ಸರ್ಕಾರ ಅಧಿಕಾರ ಕಳೆದುಕೊಂಡು ಯುಪಿಎ ಅಧಿಕಾರಕ್ಕೆ ಬಂದ ನಂತರ, ಅರೋರ ಅವರ ಬಿಜೆಪಿ ಸಖ್ಯವನ್ನು ಸೂಕ್ಷ್ಮವಾಗಿ ಗಮನದಲ್ಲಿರಿಸಿಕೊಂಡೇ ಅವರನ್ನು ಕೇಂದ್ರ ಸೇವೆಯಿಂದ ಬಿಡುಗಡೆಗೊಳಿಸಿ ಮರಳಿ ರಾಜಸ್ಥಾನ ರಾಜ್ಯ ಸೇವೆಗೆ ನಿಯೋಜಿಸಲಾಗಿತ್ತು. ಅದಾದ ಒಂದು ದಶಕದ ನಂತರವಷ್ಟೇ ಮೋದಿಯವರು ಅಧಿಕಾರಕ್ಕೇರಿದ ತರುವಾಯ 2017ರಲ್ಲಿ ಅವರನ್ನು ರಾಜ್ಯ ಸೇವೆಯಿಂದ ಮತ್ತೆ ಕೇಂದ್ರ ಸೇವೆಗೆ ನಿಯೋಜಿಸಿಕೊಂಡು ಚುನಾವಣಾ ಆಯೋಗದ ಆಯುಕ್ತ ಹುದ್ದೆ ನೀಡಲಾಗಿತ್ತು.

ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್, ಸಿಬಿಐ, ಆರ್‍ಬಿಐನಂತಹ ಸಾಂವಿಧಾನಿಕ ಸಂಸ್ಥೆಗಳು ತಮ್ಮ ಆಂತರಿಕ ಕಚ್ಚಾಟದಿಂದ ಬೀದಿಗೆ ಬೀಳುತ್ತಿರುವ ಸಾಲಿಗೆ ಚುನಾವಣಾ ಆಯೋಗವೂ ಸೇರ್ಪಡೆಗೊಂಡಂತಾಗಿದೆ.

ಇದನ್ನು ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...