Homeಮುಖಪುಟ'ಚುನಾವಣಾ ಆಯೋಗ ರಾಜಿಯಾಗಿದೆ' ಎಂದ ರಾಹುಲ್ ಗಾಂಧಿ; 'ದೇಶದ್ರೋಹಿ' ಎಂದ ಬಿಜೆಪಿ

‘ಚುನಾವಣಾ ಆಯೋಗ ರಾಜಿಯಾಗಿದೆ’ ಎಂದ ರಾಹುಲ್ ಗಾಂಧಿ; ‘ದೇಶದ್ರೋಹಿ’ ಎಂದ ಬಿಜೆಪಿ

- Advertisement -
- Advertisement -

ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೆರಿಕ ಭೇಟಿಯ ಸಂದರ್ಭದಲ್ಲಿ ಚುನಾವಣಾ ಅಕ್ರಮಗಳ ಆರೋಪ ಮಾಡುವ ಮೂಲಕ ಭಾರತೀಯ ಪ್ರಜಾಪ್ರಭುತ್ವವನ್ನು ಅವಮಾನಿಸುತ್ತಿದ್ದಾರೆ ಎಂದು ಬಿಜೆಪಿ ಸೋಮವಾರ ಹೇಳಿದ್ದು, ಅವರನ್ನು “ದೇಶದ್ರೋಹಿ” ಎಂದು ಕರೆದಿದೆ. ಚುನಾವಣಾ ಆಯೋಗ ರಾಜಿಯಾಗಿದೆ

ರಾಹುಲ್ ಅವರು ಭಾರತದ ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವವನ್ನು ವಿದೇಶಗಳಲ್ಲಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರಾ ಅವರು ಹೇಳಿದ್ದು, ಜೊತೆಗೆ ನ್ಯಾಷನಲ್ ಹೆರಾಲ್ಡ್ ಮೂಲಕ ರಾಷ್ಟ್ರೀಯ ಸಂಪತ್ತನ್ನು ಅವರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಬಗ್ಗೆ ಉಲ್ಲೇಖಿಸುವಾಗ ಅವರು ಈ ಹೇಳಿಕೆ ನೀಡಿದ್ದಾರೆ.

ಭಾನುವಾರ ಅಮೆರಿಕದ ಬೋಸ್ಟನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಹುಲ್ ಅವರು, ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು “ರಾಜಿ ಮಾಡಿಕೊಂಡಿದೆ” ಮತ್ತು “ವ್ಯವಸ್ಥೆಯಲ್ಲಿ ಏನೋ ದೋಷವಿದೆ” ಎಂದು ಆರೋಪಿಸಿದ್ದರು ಎಂದು ANI ವರದಿ ಮಾಡಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದ ಮತದಾರರಿಗಿಂತ ಹೆಚ್ಚಿನ ಜನರು ಮತ ಚಲಾಯಿಸಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ರಾಹುಲ್ ಪುನರುಚ್ಚರಿಸಿದ್ದಾರೆ. “ಚುನಾವಣಾ ಆಯೋಗವು ಸಂಜೆ 5.30 ಕ್ಕೆ ನಮಗೆ ಮತದಾನದ ಸಂಖ್ಯೆಯನ್ನು ನೀಡಿತ್ತು. ಆದರೆ ಸಂಜೆ 5.30 ರಿಂದ ಸಂಜೆ 7.30 ರ ನಡುವೆ 65 ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

“ಇದು ಭೌತಿಕವಾಗಿ ಸಂಭವಿಸುವುದು ಅಸಾಧ್ಯ. ಒಬ್ಬ ಮತದಾರ ಮತ ಚಲಾಯಿಸಲು ಸುಮಾರು ಮೂರು ನಿಮಿಷಗಳನ್ನು ತೆಗೆದುಕೊಳ್ಳುತ್ತಾನೆ. ಇದನ್ನು ನೀವು ಲೆಕ್ಕಾಚಾರ ಮಾಡಿದರೆ, ಬೆಳಗಿನ ಜಾವ 2 ಗಂಟೆಯವರೆಗೆ ಮತದಾರರ ಸಾಲುಗಳು ಇದ್ದವು ಎಂದರ್ಥ, ಆದರೆ ಇದು ಸಂಭವಿಸಲಿಲ್ಲ.” ಎಂದು ಅವರು ಹೇಳಿದ್ದಾರೆ.

ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಗುಂಪು ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಬಣವನ್ನು ಒಳಗೊಂಡ ರಾಜ್ಯದ ಆಡಳಿತರೂಢ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದಿತು. ಕಾಂಗ್ರೆಸ್ ಪಕ್ಷ ಇರುವ ಮಹಾ ವಿಕಾಸ್ ಅಘಾಡಿ 46 ಸ್ಥಾನಗಳನ್ನು ಗೆದ್ದಿತು.

“ತಮ್ಮ ಪಕ್ಷವು ಚುನಾವಣಾ ಪ್ರಕ್ರಿಯೆಯ ವೀಡಿಯೊಗಳನ್ನು ಕೇಳಿದಾಗ, ಅವರು ನಿರಾಕರಿಸಿದ್ದಲ್ಲದೆ, ಕಾನೂನನ್ನು ಸಹ ಬದಲಾಯಿಸಿದರು. ಆದ್ದರಿಂದ ಈಗ ನಮಗೆ ವೀಡಿಯೊಗ್ರಫಿ ಕೇಳಲು ಅವಕಾಶವಿಲ್ಲ” ಎಂದು ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದೆ ಎಂಬುದು ನಮಗೆ ಸ್ಪಷ್ಟವಾಗಿದೆ ಮತ್ತು ವ್ಯವಸ್ಥೆಯಲ್ಲಿ ಏನೋ ತಪ್ಪಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣಾ ನೀತಿ ನಿಯಮಗಳ ನಿಯಮ 93(2)(ಎ) ಅನ್ನು ತಿದ್ದುಪಡಿ ಮಾಡಿತು. ಈ ನಿಯಮವು, “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ಪತ್ರಿಕೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು” ಎಂದು ಹೇಳುತ್ತದೆ. ಆದರೆ, ಇದನ್ನು ಸರ್ಕಾರ ತಿದ್ದುಪಡಿ ಮಾಡಿ, “ಚುನಾವಣೆಗೆ ಸಂಬಂಧಿಸಿದ ನಿರ್ದಿಷ್ಟಪಡಿಸಿದ ಈ ನಿಯಮಗಳಲ್ಲಿ ಎಲ್ಲಾ ಇತರ ಪತ್ರಿಕೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು.” ಬದಲಾಯಿಸಿತ್ತು.

ಈ ಬದಲಾವಣೆಯೊಂದಿಗೆ ಎಲ್ಲಾ ಮತದಾನ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರು ಪರಿಶೀಲಿಸಲು ಸಾಧ್ಯವಿಲ್ಲ. 1961 ರ ಚುನಾವಣಾ ನೀತಿ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದಾಗಿದೆ. ಈ ನಿಯಮದ ಅಡಿಯಲ್ಲಿ, ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಸಾರ್ವಜನಿಕ ಪರಿಶೀಲನೆಗಾಗಿ ಒದಗಿಸುವಂತೆ ನ್ಯಾಯಾಲಯಗಳು ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸಾಧ್ಯವಾಗುವುದಿಲ್ಲ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡಿಸೆಂಬರ್ 9 ರಂದು ಚುನಾವಣಾ ಆಯೋಗಕ್ಕೆ ವೀಡಿಯೊಗ್ರಫಿ, ಭದ್ರತಾ ಕ್ಯಾಮೆರಾ ದೃಶ್ಯಾವಳಿಗಳು ಮತ್ತು ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ಒದಗಿಸುವಂತೆ ನಿರ್ದೇಶಿಸಿದ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ಈ ನಿಯಮಗಳಿಗೆ ತಿದ್ದುಪಡಿ ಮಾಡಿ ನಿಯಮಗಳನ್ನು ಬದಲಾಯಿಸಿತ್ತು. ಕಾಂಗ್ರೆಸ್ ಚುನಾವಣಾ ನಿಯಮಗಳ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಚುನಾವಣಾ ಆಯೋಗ ರಾಜಿಯಾಗಿದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ | ಶಾಲೆಗಳಲ್ಲಿ ಹಿಂದಿ ಕಡ್ಡಾಯಕ್ಕೆ ಸರ್ಕಾರಿ ಭಾಷಾ ಸಮಾಲೋಚನಾ ಸಮಿತಿ ವಿರೋಧ

ಮಹಾರಾಷ್ಟ್ರ | ಶಾಲೆಗಳಲ್ಲಿ ಹಿಂದಿ ಕಡ್ಡಾಯಕ್ಕೆ ಸರ್ಕಾರಿ ಭಾಷಾ ಸಮಾಲೋಚನಾ ಸಮಿತಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...