Homeಮುಖಪುಟ'ಚುನಾವಣಾ ಆಯೋಗ ರಾಜಿಯಾಗಿದೆ' ಎಂದ ರಾಹುಲ್ ಗಾಂಧಿ; 'ದೇಶದ್ರೋಹಿ' ಎಂದ ಬಿಜೆಪಿ

‘ಚುನಾವಣಾ ಆಯೋಗ ರಾಜಿಯಾಗಿದೆ’ ಎಂದ ರಾಹುಲ್ ಗಾಂಧಿ; ‘ದೇಶದ್ರೋಹಿ’ ಎಂದ ಬಿಜೆಪಿ

- Advertisement -
- Advertisement -

ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೆರಿಕ ಭೇಟಿಯ ಸಂದರ್ಭದಲ್ಲಿ ಚುನಾವಣಾ ಅಕ್ರಮಗಳ ಆರೋಪ ಮಾಡುವ ಮೂಲಕ ಭಾರತೀಯ ಪ್ರಜಾಪ್ರಭುತ್ವವನ್ನು ಅವಮಾನಿಸುತ್ತಿದ್ದಾರೆ ಎಂದು ಬಿಜೆಪಿ ಸೋಮವಾರ ಹೇಳಿದ್ದು, ಅವರನ್ನು “ದೇಶದ್ರೋಹಿ” ಎಂದು ಕರೆದಿದೆ. ಚುನಾವಣಾ ಆಯೋಗ ರಾಜಿಯಾಗಿದೆ

ರಾಹುಲ್ ಅವರು ಭಾರತದ ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವವನ್ನು ವಿದೇಶಗಳಲ್ಲಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರಾ ಅವರು ಹೇಳಿದ್ದು, ಜೊತೆಗೆ ನ್ಯಾಷನಲ್ ಹೆರಾಲ್ಡ್ ಮೂಲಕ ರಾಷ್ಟ್ರೀಯ ಸಂಪತ್ತನ್ನು ಅವರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಬಗ್ಗೆ ಉಲ್ಲೇಖಿಸುವಾಗ ಅವರು ಈ ಹೇಳಿಕೆ ನೀಡಿದ್ದಾರೆ.

ಭಾನುವಾರ ಅಮೆರಿಕದ ಬೋಸ್ಟನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಹುಲ್ ಅವರು, ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು “ರಾಜಿ ಮಾಡಿಕೊಂಡಿದೆ” ಮತ್ತು “ವ್ಯವಸ್ಥೆಯಲ್ಲಿ ಏನೋ ದೋಷವಿದೆ” ಎಂದು ಆರೋಪಿಸಿದ್ದರು ಎಂದು ANI ವರದಿ ಮಾಡಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದ ಮತದಾರರಿಗಿಂತ ಹೆಚ್ಚಿನ ಜನರು ಮತ ಚಲಾಯಿಸಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ರಾಹುಲ್ ಪುನರುಚ್ಚರಿಸಿದ್ದಾರೆ. “ಚುನಾವಣಾ ಆಯೋಗವು ಸಂಜೆ 5.30 ಕ್ಕೆ ನಮಗೆ ಮತದಾನದ ಸಂಖ್ಯೆಯನ್ನು ನೀಡಿತ್ತು. ಆದರೆ ಸಂಜೆ 5.30 ರಿಂದ ಸಂಜೆ 7.30 ರ ನಡುವೆ 65 ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

“ಇದು ಭೌತಿಕವಾಗಿ ಸಂಭವಿಸುವುದು ಅಸಾಧ್ಯ. ಒಬ್ಬ ಮತದಾರ ಮತ ಚಲಾಯಿಸಲು ಸುಮಾರು ಮೂರು ನಿಮಿಷಗಳನ್ನು ತೆಗೆದುಕೊಳ್ಳುತ್ತಾನೆ. ಇದನ್ನು ನೀವು ಲೆಕ್ಕಾಚಾರ ಮಾಡಿದರೆ, ಬೆಳಗಿನ ಜಾವ 2 ಗಂಟೆಯವರೆಗೆ ಮತದಾರರ ಸಾಲುಗಳು ಇದ್ದವು ಎಂದರ್ಥ, ಆದರೆ ಇದು ಸಂಭವಿಸಲಿಲ್ಲ.” ಎಂದು ಅವರು ಹೇಳಿದ್ದಾರೆ.

ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಗುಂಪು ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಬಣವನ್ನು ಒಳಗೊಂಡ ರಾಜ್ಯದ ಆಡಳಿತರೂಢ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದಿತು. ಕಾಂಗ್ರೆಸ್ ಪಕ್ಷ ಇರುವ ಮಹಾ ವಿಕಾಸ್ ಅಘಾಡಿ 46 ಸ್ಥಾನಗಳನ್ನು ಗೆದ್ದಿತು.

“ತಮ್ಮ ಪಕ್ಷವು ಚುನಾವಣಾ ಪ್ರಕ್ರಿಯೆಯ ವೀಡಿಯೊಗಳನ್ನು ಕೇಳಿದಾಗ, ಅವರು ನಿರಾಕರಿಸಿದ್ದಲ್ಲದೆ, ಕಾನೂನನ್ನು ಸಹ ಬದಲಾಯಿಸಿದರು. ಆದ್ದರಿಂದ ಈಗ ನಮಗೆ ವೀಡಿಯೊಗ್ರಫಿ ಕೇಳಲು ಅವಕಾಶವಿಲ್ಲ” ಎಂದು ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದೆ ಎಂಬುದು ನಮಗೆ ಸ್ಪಷ್ಟವಾಗಿದೆ ಮತ್ತು ವ್ಯವಸ್ಥೆಯಲ್ಲಿ ಏನೋ ತಪ್ಪಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣಾ ನೀತಿ ನಿಯಮಗಳ ನಿಯಮ 93(2)(ಎ) ಅನ್ನು ತಿದ್ದುಪಡಿ ಮಾಡಿತು. ಈ ನಿಯಮವು, “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ಪತ್ರಿಕೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು” ಎಂದು ಹೇಳುತ್ತದೆ. ಆದರೆ, ಇದನ್ನು ಸರ್ಕಾರ ತಿದ್ದುಪಡಿ ಮಾಡಿ, “ಚುನಾವಣೆಗೆ ಸಂಬಂಧಿಸಿದ ನಿರ್ದಿಷ್ಟಪಡಿಸಿದ ಈ ನಿಯಮಗಳಲ್ಲಿ ಎಲ್ಲಾ ಇತರ ಪತ್ರಿಕೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು.” ಬದಲಾಯಿಸಿತ್ತು.

ಈ ಬದಲಾವಣೆಯೊಂದಿಗೆ ಎಲ್ಲಾ ಮತದಾನ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರು ಪರಿಶೀಲಿಸಲು ಸಾಧ್ಯವಿಲ್ಲ. 1961 ರ ಚುನಾವಣಾ ನೀತಿ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದಾಗಿದೆ. ಈ ನಿಯಮದ ಅಡಿಯಲ್ಲಿ, ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಸಾರ್ವಜನಿಕ ಪರಿಶೀಲನೆಗಾಗಿ ಒದಗಿಸುವಂತೆ ನ್ಯಾಯಾಲಯಗಳು ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸಾಧ್ಯವಾಗುವುದಿಲ್ಲ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡಿಸೆಂಬರ್ 9 ರಂದು ಚುನಾವಣಾ ಆಯೋಗಕ್ಕೆ ವೀಡಿಯೊಗ್ರಫಿ, ಭದ್ರತಾ ಕ್ಯಾಮೆರಾ ದೃಶ್ಯಾವಳಿಗಳು ಮತ್ತು ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ಒದಗಿಸುವಂತೆ ನಿರ್ದೇಶಿಸಿದ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ಈ ನಿಯಮಗಳಿಗೆ ತಿದ್ದುಪಡಿ ಮಾಡಿ ನಿಯಮಗಳನ್ನು ಬದಲಾಯಿಸಿತ್ತು. ಕಾಂಗ್ರೆಸ್ ಚುನಾವಣಾ ನಿಯಮಗಳ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಚುನಾವಣಾ ಆಯೋಗ ರಾಜಿಯಾಗಿದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ | ಶಾಲೆಗಳಲ್ಲಿ ಹಿಂದಿ ಕಡ್ಡಾಯಕ್ಕೆ ಸರ್ಕಾರಿ ಭಾಷಾ ಸಮಾಲೋಚನಾ ಸಮಿತಿ ವಿರೋಧ

ಮಹಾರಾಷ್ಟ್ರ | ಶಾಲೆಗಳಲ್ಲಿ ಹಿಂದಿ ಕಡ್ಡಾಯಕ್ಕೆ ಸರ್ಕಾರಿ ಭಾಷಾ ಸಮಾಲೋಚನಾ ಸಮಿತಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...