Homeಮುಖಪುಟಲೋಕಸಭಾ ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲೇ ನಿಯಮ ಮೀರಿ ವಿವಿ ಪ್ಯಾಟ್‌ ಸ್ಲಿಪ್‌ಗಳ ನಾಶ: ಉತ್ತರ...

ಲೋಕಸಭಾ ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲೇ ನಿಯಮ ಮೀರಿ ವಿವಿ ಪ್ಯಾಟ್‌ ಸ್ಲಿಪ್‌ಗಳ ನಾಶ: ಉತ್ತರ ಕೊಡದ ಚುನಾವಣಾ ಆಯೋಗ..!

ಚುನಾವಣಾ ಆಯೋಗವು ನಿಯಮಗಳನ್ನು ಏಕೆ ಪಾಲಿಸಲಿಲ್ಲ. ಕೇವಲ ನಾಲ್ಕು ತಿಂಗಳಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ನಾಶಪಡಿಸಿತು? ಮತಯಂತ್ರ ಟ್ಯಾಂಪರ್‌ ಆಗಿರುವ ಪುರಾವೆಗಳನ್ನು ನಾಶ ಮಾಡಲು ಹೀಗೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಯಾವುದೇ ಚುನಾವಣೆಯಲ್ಲಿ ಬಳಸಿದ ಮುದ್ರಿತ ವಿವಿಪಿಎಟಿ ಸ್ಲಿಪ್‌ಗಳನ್ನು ಒಂದು ವರ್ಷದವರೆಗೆ ಉಳಿಸಿಕೊಂಡು ನಂತರ ನಾಶ ಮಾಡಬೇಕೆಂದು 1961ರ ಚುನಾವಣಾ ನಿಯಮಗಳ ನಿಯಮ 94 (ಬಿ) ಹೇಳುತ್ತದೆ. ಆದರೆ ಚುನಾವಣಾ ಆಯೋಗವು 2019ರ ಲೋಕಸಭಾ ಚುನಾವಣೆಯಲ್ಲಿ ಬಳಸಿದ ಮುದ್ರಿತ ವಿವಿಪಿಎಟಿ ಸ್ಲಿಪ್‌ಗಳನ್ನು ಈಗಾಗಲೇ ನಾಶಪಡಿಸಿದೆ. ಅದೂ ಸಹ 2019ರ ಮೇನಲ್ಲಿ ಫಲಿತಾಂಶಗಳನ್ನು ಘೋಷಿಸಿದ ನಾಲ್ಕು ತಿಂಗಳ ನಂತರ… ಯಾಕಿಷ್ಟು ಅವಸರ, ತರಾತುರಿ ಎಂಬ ಪ್ರಶ್ನೆ ಭುಗಿಲೆದ್ದಿದೆ.

ಇಂಗ್ಲಿಷ್‌ನ ಖ್ಯಾತ ವೆಬ್‌ ಪೋರ್ಟಲ್‌ ’ದಿ ಕ್ವಿಂಟ್‌’ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ನೀಡಿದ ಉತ್ತರದಲ್ಲಿ ದೆಹಲಿ ಚುನಾವಣಾ ಆಯೋಗದ ಸಾರ್ವಜನಿಕ ಮಾಹಿತಿ ಅಧಿಕಾರಿ “ವಿವಿಪಿಎಟಿ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಆರ್‌ಟಿಐ ಉತ್ತರದೊಂದಿಗೆ ಲಗತ್ತಿಸಲಾದ ಮಾಹಿತಿಯಲ್ಲಿ ಚುನಾವಣಾ ಆಯೋಗವು 24 ಸೆಪ್ಟೆಂಬರ್ 2019ರಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ “ವಿವಿಪಿಎಟಿ ಮುದ್ರಿತ ಕಾಗದದ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲು” ಆದೇಶಿಸಿದೆ.

ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲಿಯೇ ವಿವಿಪಿಎಟಿ ಸ್ಲಿಪ್‌ಗಳನ್ನು ನಾಶಮಾಡುವ ಅವಸರ ಮತ್ತು ತುರ್ತು ಏಕೆ? ನೀವು ಮತ್ತು ನಾನು ಹೇಗೆ ಮತ ಚಲಾಯಿಸಿದ್ದೇವೆ ಎಂಬುದಕ್ಕೆ ನಿರ್ಣಾಯಕ ಸಾಕ್ಷಿಯಾಗಿರುವ ವಿವಿಪಿಎಟಿ ಸ್ಲಿಪ್‌ಗಳನ್ನು ಚುನಾವಣಾ ಆಯೋಗವು ಒಂದು ವರ್ಷದ ಅವಧಿಗೆ ಏಕೆ ಸಂಗ್ರಹಿಸಲು ಸಾಧ್ಯವಾಗಲಿಲ್ಲ?

ನೆನಪಿಡಿ, ನಾವು ಮತ ​​ಚಲಾಯಿಸಿದಾಗ, ನಮ್ಮ ಮತವು ನಮ್ಮ ಆಯ್ಕೆಯ ಅಭ್ಯರ್ಥಿಗೆ ಹೋಗಿದೆಯೇ ಎಂದು ವಿವಿಪಿಎಟಿ ಸ್ಲಿಪ್ ಪರಿಶೀಲಿಸುತ್ತದೆ. ವಿವಿಪಿಎಟಿ ಸ್ಲಿಪ್ ನಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರನ್ನು ತೋರಿಸದಿದ್ದರೆ, ವಿವಿಪಿಎಟಿ ಯಂತ್ರದ ಅಸಮರ್ಪಕ ಕಾರ್ಯದ ಬಗ್ಗೆ ನಾವು ತಕ್ಷಣ ಮತದಾನ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗೆ ತಿಳಿಸಿ ದೂರು ದಾಖಲಿಸಬಹುದು.

ಇಡೀ ಮತದಾನ ಪ್ರಕ್ರಿಯೆಯಲ್ಲಿ ಸಂಭವನೀಯ ರಿಗ್ಗಿಂಗ್‌, ಅಕ್ರಮ ಮತದಾನ, ದುರ್ಬಳಕೆ ನಡೆದಿದ್ದರೆ ಪತ್ತೆಹಚ್ಚಲು ವಿವಿಪಿಎಟಿ ಸ್ಲಿಪ್‌ಗಳು ಎಷ್ಟು ನಿರ್ಣಾಯಕವಾಗಿವೆ ಎಂಬುದರ ಬಗ್ಗೆ ಕ್ವಿಂಟ್ ಈ ಹಿಂದೆ ವರದಿ ಮಾಡಿತ್ತು.

ಪ್ರತಿ ಮತದಾನ ಕೇಂದ್ರದಲ್ಲಿ, ವಿವಿಪಿಎಟಿ ಯಂತ್ರವನ್ನು ಬ್ಯಾಲೆಟ್ ಘಟಕಕ್ಕೆ ಸಂಪರ್ಕಿಸಲಾಗಿರುತ್ತದೆ. ನಾವು ಮತ ​​ಚಲಾಯಿಸಿದಾಗ, ಅದನ್ನು ಮೊದಲು ವಿವಿಪಿಎಟಿ ಯಂತ್ರದಲ್ಲಿ ದಾಖಲಿಸಲಾಗುತ್ತದೆ, ಮತ್ತು ಅದರ ನಂತರವೇ ಅದು ಇವಿಎಂ ನಿಯಂತ್ರಣ ಘಟಕಕ್ಕೆ ಹೋಗುತ್ತದೆ.

ಪ್ರತಿ ಕ್ಷೇತ್ರಕ್ಕೂ ವಿವಿಪಿಎಟಿ ಯಂತ್ರಗಳನ್ನು ಗುರುತಿಸಿದ ನಂತರ, ಅವುಗಳನ್ನು ಎರಡು ವಾರಗಳವರೆಗೆ ಸರ್ಕಾರವು ತೊಡಗಿಸಿಕೊಂಡ ಖಾಸಗಿ ಎಂಜಿನಿಯರ್‌ಗಳು ಹೇಗೆ ಪರಿಶೀಲಿಸಿದರು, ನಿರ್ವಹಿಸುತ್ತಿದ್ದರು ಮತ್ತು ಪ್ರೋಗ್ರಾಮ್ ಮಾಡಿದರು, ಈ ಸಮಯದಲ್ಲಿ ವಿವಿಪಿಎಟಿ ಯಂತ್ರಗಳು ಟ್ಯಾಂಪರಿಂಗ್‌ಗೆ ಸ್ಪಷ್ಟವಾಗಿ ಗುರಿಯಾಗುತ್ತವೆ.

ಆದ್ದರಿಂದ, 2019 ರಲ್ಲಿ ಎಲ್ಲಾ ಇವಿಎಂ-ವಿವಿಪಿಎಟಿ ಯಂತ್ರಗಳನ್ನು ಹಾಳುಗೆಡವಿದ್ದರೆ, ಮತದಾರರು ಆಯ್ಕೆ ಮಾಡಿದ ಅಭ್ಯರ್ಥಿಯ ಹೆಸರನ್ನು ತೋರಿಸುವ ವಿವಿಪಿಎಟಿ ಸ್ಲಿಪ್ ಅಂತಹ ಯಾವುದೇ ಆರೋಪದ ಬಗ್ಗೆ ತನಿಖೆ ನಡೆಸುವಾಗ ನಿರ್ಣಾಯಕ ಸಾಕ್ಷಿಯಾಗಬಹುದು.

ಆದರೆ ಈಗ, ಈ ಆರ್‌ಟಿಐ ಉತ್ತರವು ಬಹಿರಂಗಪಡಿಸಿದಂತೆ, ಎಲ್ಲಾ ವಿವಿಪಿಎಟಿ ಸ್ಲಿಪ್‌ಗಳು ನಾಶವಾಗಿವೆ ಮತ್ತು ವಿವಿಪಿಎಟಿ ಸ್ಲಿಪ್‌ಗಳ ಬಗ್ಗೆ ಇರಬಹುದಾದ ಯಾವುದೇ ಸಂಭಾವ್ಯ ಅನುಮಾನಕ್ಕೂ ಪುರಾವೆಗಳು ಸಹ ನಾಶವಾಗಿವೆ.

ಮತ್ತು ನಾವು ಮೊದಲೇ ಸೂಚಿಸಿದಂತೆ ಅದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ.

ಯಾವುದೇ ಪ್ರಯೋಜನವಿಲ್ಲದಿದ್ದರೂ ಸಹ, ದಶಕಗಳಿಂದ ‘ಬಾಬುಡೊಮ್’ ದಾಖಲೆಗಳು ಮತ್ತು ಫೈಲ್‌ಗಳನ್ನು ಹಿಡಿದಿಟ್ಟುಕೊಂಡಿರುವ ದೇಶದಲ್ಲಿ, ವಿವಿಪಿಎಟಿ ಸ್ಲಿಪ್‌ಗಳನ್ನು ಇಷ್ಟು ತುರ್ತಾಗಿ ಏಕೆ ವಿಲೇವಾರಿ ಮಾಡಲಾಗಿದೆ ಎಂದರೆ ಆಶ್ಚರ್ಯವಾಗುವುದಿಲ್ಲವೇ?

ಕಾನೂನು ತಜ್ಞರು ಹೇಳುವಂತೆ, ಈ ವಿವಿಪಿಎಟಿ ಸ್ಲಿಪ್‌ಗಳನ್ನು ನಾಲ್ಕು ತಿಂಗಳಲ್ಲಿ ನಾಶಪಡಿಸಿರುವುದು ಚಿಂತೆಗೀಡುಮಾಡುವು ವಿಷಯವಾಗಿದೆ. ಇದು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಚುನಾವಣಾ ಆಯೋಗದ ಇಷ್ಟು ಅವಸರಕ್ಕೆ ಕಾರಣವೇನೆಂದು ವಿವರಿಸಬೇಕು. ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ, ಹಾಗೆ ಮಾಡಲು ಸರಿಯಾದ ಕಾರಣವಿದ್ದಲ್ಲಿ ಮಾತ್ರ ಚುನಾವಣಾ ಆಯೋಗ ವಿವಿಪಿಎಟಿ ಸ್ಲಿಪ್‌ಗಳನ್ನು ನಾಶಪಡಿಸುವ ಅಧಿಕಾರ ಹೊಂದಿದೆ. ಅಂತಹ ಸಕಾರಣವೇನೆಂದು ಅದು ವಿವರಿಸಬೇಕಿದೆ.

ಚುನಾವಣಾ ಆಯೋಗದ ಆರ್‌ಟಿಐ ಉತ್ತರವನ್ನು ನೋಡಿದ್ದೇವೆ. ಆದರೆ ಅದರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ವಿಲೇವಾರಿ ಮಾಡಲಾಗಿದೆ ಎಂಬುದನ್ನು ವಿವರಿಸಲು ಯಾವುದೇ ಸ್ಪಷ್ಟ ಕಾರಣ ಕಂಡುಬಂದಿಲ್ಲ.

ರಾಜಸ್ಥಾನ, ಹಿಮಾಚಲ ಪ್ರದೇಶ, ಮಣಿಪುರ, ಮೇಘಾಲಯ ಮತ್ತು ಆಂಧ್ರಪ್ರದೇಶದಲ್ಲಿ ಇವಿಎಂ ಮತ್ತು ವಿವಿಪಿಎಟಿ ಮತ ಎಣಿಕೆಗಳ ನಡುವೆ ಕನಿಷ್ಠ ಎಂಟು ‘ಹೊಂದಿಕೆಯಾಗದ’ ಪ್ರಕರಣಗಳು ವರದಿಯಾಗಿವೆ ಎಂದು ಈ ಹಿಂದೆ ಕ್ವಿಂಟ್ ವರದಿ ಮಾಡಿತ್ತು.

ಈ ಪ್ರಕರಣಗಳ ವಿಚಾರಣೆಗೆ ಚುನಾವಣಾ ಆಯೋಗವು ಜುಲೈ 2019ರಲ್ಲಿ ಆದೇಶ ನೀಡಿತು. ನಡೆಸಿದ ವಿಚಾರಣೆಯ ಮಾಹಿತಿ ಕೋರಿ ಕ್ವಿಂಟ್ ಆರ್‌ಟಿಐ ಸಲ್ಲಿಸಿದರು. ಇಸಿ 2019 ರ ನವೆಂಬರ್‌ನಲ್ಲಿ ಉತ್ತರಿಸುತ್ತಾ, ಈ ವಿಷಯವು ಇಸಿಯ ತಾಂತ್ರಿಕ ತಜ್ಞರ ಸಮಿತಿಯ ಪರಿಗಣನೆಯಲ್ಲಿ ಇರುವುದರಿಂದ ಮಾಹಿತಿ ಲಭ್ಯವಿಲ್ಲ ಎಂದು ಹೇಳಿದೆ.

ಈಗ, ಈ ಎಂಟು ಪ್ರಕರಣಗಳಿಗೆ ಸಂಬಂಧಿಸಿದ ವಿವಿಪಿಎಟಿ ಸ್ಲಿಪ್‌ಗಳನ್ನು ಇಸಿ ವಿಲೇವಾರಿ ಮಾಡಿದೆಯೇ ಅಥವಾ ನಾಶಪಡಿಸಿದೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಸೆಪ್ಟೆಂಬರ್ 2019ರಿಂದ ಈ ಚುನಾವಣಾ ಆಯೋಗ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ವಿವಿಪಿಎಟಿ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲು ಆದೇಶಿಸಿದೆ…

ಇದು ಮತ್ತೊಂದು ಪ್ರಮುಖ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಈ ಎಂಟು ಪ್ರಕರಣಗಳಿಗೆ ಸಂಬಂಧಿಸಿದ ವಿವಿಪಿಎಟಿ ಸ್ಲಿಪ್‌ಗಳು ಸಹ ನಾಶವಾಗಿದ್ದರೆ, ಇವಿಎಂ ಮತ್ತು ವಿವಿಪಿಎಟಿ ಮತ ಎಣಿಕೆಗಳ ‘ಹೊಂದಾಣಿಕೆಯಾಗದ’ ಕುರಿತು ವಿಚಾರಣೆಯನ್ನು ಹೇಗೆ ನಡೆಸಬಹುದು?

ಹಾಗಾಗಿ, ನಾವು ಮತ್ತೆ ಕೇಳುತ್ತೇವೆ – ಚುನಾವಣಾ ಆಯೋಗವು ನಿಯಮಗಳನ್ನು ಏಕೆ ಪಾಲಿಸಲಿಲ್ಲ, ಮತ್ತು ಕೇವಲ ನಾಲ್ಕು ತಿಂಗಳಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ನಾಶಪಡಿಸಿತು? ಮತಯಂತ್ರ ಟ್ಯಾಂಪರ್‌ ಆಗಿರುವ ಪುರಾವೆಗಳನ್ನು ನಾಶ ಮಾಡಲು ಹೀಗೆ ಮಾಡಲಾಗಿದೆ ಎಂದು ನಾವು ಹೇಳುವ ಧೈರ್ಯವಿದೆಯೇ?

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಧಾನ ಮಂತ್ರಿಯನ್ನು ನಿರ್ಧರಿಸುವ, ಭಾರತದ ಅತ್ಯಂತ ನಿರ್ಣಾಯಕ ಚುನಾವಣೆಗಳ ವಿವಿಪಿಎಟಿ ಸ್ಲಿಪ್‌ಗಳನ್ನು ಇಸಿ ಏಕೆ ಉಳಿಸಿಕೊಳ್ಳಲಿಲ್ಲ?

ಕ್ವಿಂಟ್ ತನ್ನ ಈ ಪ್ರಶ್ನೆಗಳೊಂದಿಗೆ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ನಾವೀಗ ಚುನಾವಣಾ ಆಯೋಗದ ಸಮರ್ಪಕ ಉತ್ತರದ ನಿರೀಕ್ಷೆಯಲ್ಲಿದ್ದೇವೆ…

ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಚುನಾವಣಾ ಆಯೋಗ, ಬಿಜೆಪಿಯ ಚುನಾವಣಾ ಏಜೆಂಟನಂತೆ ವರ್ತಿಸುತ್ತಿರುವುದಕ್ಕೆ ಈ ಪ್ರಕರಣ ಪ್ರಮುಖ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...