Homeಮುಖಪುಟಲೋಕಸಭಾ ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲೇ ನಿಯಮ ಮೀರಿ ವಿವಿ ಪ್ಯಾಟ್‌ ಸ್ಲಿಪ್‌ಗಳ ನಾಶ: ಉತ್ತರ...

ಲೋಕಸಭಾ ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲೇ ನಿಯಮ ಮೀರಿ ವಿವಿ ಪ್ಯಾಟ್‌ ಸ್ಲಿಪ್‌ಗಳ ನಾಶ: ಉತ್ತರ ಕೊಡದ ಚುನಾವಣಾ ಆಯೋಗ..!

ಚುನಾವಣಾ ಆಯೋಗವು ನಿಯಮಗಳನ್ನು ಏಕೆ ಪಾಲಿಸಲಿಲ್ಲ. ಕೇವಲ ನಾಲ್ಕು ತಿಂಗಳಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ನಾಶಪಡಿಸಿತು? ಮತಯಂತ್ರ ಟ್ಯಾಂಪರ್‌ ಆಗಿರುವ ಪುರಾವೆಗಳನ್ನು ನಾಶ ಮಾಡಲು ಹೀಗೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಯಾವುದೇ ಚುನಾವಣೆಯಲ್ಲಿ ಬಳಸಿದ ಮುದ್ರಿತ ವಿವಿಪಿಎಟಿ ಸ್ಲಿಪ್‌ಗಳನ್ನು ಒಂದು ವರ್ಷದವರೆಗೆ ಉಳಿಸಿಕೊಂಡು ನಂತರ ನಾಶ ಮಾಡಬೇಕೆಂದು 1961ರ ಚುನಾವಣಾ ನಿಯಮಗಳ ನಿಯಮ 94 (ಬಿ) ಹೇಳುತ್ತದೆ. ಆದರೆ ಚುನಾವಣಾ ಆಯೋಗವು 2019ರ ಲೋಕಸಭಾ ಚುನಾವಣೆಯಲ್ಲಿ ಬಳಸಿದ ಮುದ್ರಿತ ವಿವಿಪಿಎಟಿ ಸ್ಲಿಪ್‌ಗಳನ್ನು ಈಗಾಗಲೇ ನಾಶಪಡಿಸಿದೆ. ಅದೂ ಸಹ 2019ರ ಮೇನಲ್ಲಿ ಫಲಿತಾಂಶಗಳನ್ನು ಘೋಷಿಸಿದ ನಾಲ್ಕು ತಿಂಗಳ ನಂತರ… ಯಾಕಿಷ್ಟು ಅವಸರ, ತರಾತುರಿ ಎಂಬ ಪ್ರಶ್ನೆ ಭುಗಿಲೆದ್ದಿದೆ.

ಇಂಗ್ಲಿಷ್‌ನ ಖ್ಯಾತ ವೆಬ್‌ ಪೋರ್ಟಲ್‌ ’ದಿ ಕ್ವಿಂಟ್‌’ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ನೀಡಿದ ಉತ್ತರದಲ್ಲಿ ದೆಹಲಿ ಚುನಾವಣಾ ಆಯೋಗದ ಸಾರ್ವಜನಿಕ ಮಾಹಿತಿ ಅಧಿಕಾರಿ “ವಿವಿಪಿಎಟಿ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಆರ್‌ಟಿಐ ಉತ್ತರದೊಂದಿಗೆ ಲಗತ್ತಿಸಲಾದ ಮಾಹಿತಿಯಲ್ಲಿ ಚುನಾವಣಾ ಆಯೋಗವು 24 ಸೆಪ್ಟೆಂಬರ್ 2019ರಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ “ವಿವಿಪಿಎಟಿ ಮುದ್ರಿತ ಕಾಗದದ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲು” ಆದೇಶಿಸಿದೆ.

ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲಿಯೇ ವಿವಿಪಿಎಟಿ ಸ್ಲಿಪ್‌ಗಳನ್ನು ನಾಶಮಾಡುವ ಅವಸರ ಮತ್ತು ತುರ್ತು ಏಕೆ? ನೀವು ಮತ್ತು ನಾನು ಹೇಗೆ ಮತ ಚಲಾಯಿಸಿದ್ದೇವೆ ಎಂಬುದಕ್ಕೆ ನಿರ್ಣಾಯಕ ಸಾಕ್ಷಿಯಾಗಿರುವ ವಿವಿಪಿಎಟಿ ಸ್ಲಿಪ್‌ಗಳನ್ನು ಚುನಾವಣಾ ಆಯೋಗವು ಒಂದು ವರ್ಷದ ಅವಧಿಗೆ ಏಕೆ ಸಂಗ್ರಹಿಸಲು ಸಾಧ್ಯವಾಗಲಿಲ್ಲ?

ನೆನಪಿಡಿ, ನಾವು ಮತ ​​ಚಲಾಯಿಸಿದಾಗ, ನಮ್ಮ ಮತವು ನಮ್ಮ ಆಯ್ಕೆಯ ಅಭ್ಯರ್ಥಿಗೆ ಹೋಗಿದೆಯೇ ಎಂದು ವಿವಿಪಿಎಟಿ ಸ್ಲಿಪ್ ಪರಿಶೀಲಿಸುತ್ತದೆ. ವಿವಿಪಿಎಟಿ ಸ್ಲಿಪ್ ನಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರನ್ನು ತೋರಿಸದಿದ್ದರೆ, ವಿವಿಪಿಎಟಿ ಯಂತ್ರದ ಅಸಮರ್ಪಕ ಕಾರ್ಯದ ಬಗ್ಗೆ ನಾವು ತಕ್ಷಣ ಮತದಾನ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗೆ ತಿಳಿಸಿ ದೂರು ದಾಖಲಿಸಬಹುದು.

ಇಡೀ ಮತದಾನ ಪ್ರಕ್ರಿಯೆಯಲ್ಲಿ ಸಂಭವನೀಯ ರಿಗ್ಗಿಂಗ್‌, ಅಕ್ರಮ ಮತದಾನ, ದುರ್ಬಳಕೆ ನಡೆದಿದ್ದರೆ ಪತ್ತೆಹಚ್ಚಲು ವಿವಿಪಿಎಟಿ ಸ್ಲಿಪ್‌ಗಳು ಎಷ್ಟು ನಿರ್ಣಾಯಕವಾಗಿವೆ ಎಂಬುದರ ಬಗ್ಗೆ ಕ್ವಿಂಟ್ ಈ ಹಿಂದೆ ವರದಿ ಮಾಡಿತ್ತು.

ಪ್ರತಿ ಮತದಾನ ಕೇಂದ್ರದಲ್ಲಿ, ವಿವಿಪಿಎಟಿ ಯಂತ್ರವನ್ನು ಬ್ಯಾಲೆಟ್ ಘಟಕಕ್ಕೆ ಸಂಪರ್ಕಿಸಲಾಗಿರುತ್ತದೆ. ನಾವು ಮತ ​​ಚಲಾಯಿಸಿದಾಗ, ಅದನ್ನು ಮೊದಲು ವಿವಿಪಿಎಟಿ ಯಂತ್ರದಲ್ಲಿ ದಾಖಲಿಸಲಾಗುತ್ತದೆ, ಮತ್ತು ಅದರ ನಂತರವೇ ಅದು ಇವಿಎಂ ನಿಯಂತ್ರಣ ಘಟಕಕ್ಕೆ ಹೋಗುತ್ತದೆ.

ಪ್ರತಿ ಕ್ಷೇತ್ರಕ್ಕೂ ವಿವಿಪಿಎಟಿ ಯಂತ್ರಗಳನ್ನು ಗುರುತಿಸಿದ ನಂತರ, ಅವುಗಳನ್ನು ಎರಡು ವಾರಗಳವರೆಗೆ ಸರ್ಕಾರವು ತೊಡಗಿಸಿಕೊಂಡ ಖಾಸಗಿ ಎಂಜಿನಿಯರ್‌ಗಳು ಹೇಗೆ ಪರಿಶೀಲಿಸಿದರು, ನಿರ್ವಹಿಸುತ್ತಿದ್ದರು ಮತ್ತು ಪ್ರೋಗ್ರಾಮ್ ಮಾಡಿದರು, ಈ ಸಮಯದಲ್ಲಿ ವಿವಿಪಿಎಟಿ ಯಂತ್ರಗಳು ಟ್ಯಾಂಪರಿಂಗ್‌ಗೆ ಸ್ಪಷ್ಟವಾಗಿ ಗುರಿಯಾಗುತ್ತವೆ.

ಆದ್ದರಿಂದ, 2019 ರಲ್ಲಿ ಎಲ್ಲಾ ಇವಿಎಂ-ವಿವಿಪಿಎಟಿ ಯಂತ್ರಗಳನ್ನು ಹಾಳುಗೆಡವಿದ್ದರೆ, ಮತದಾರರು ಆಯ್ಕೆ ಮಾಡಿದ ಅಭ್ಯರ್ಥಿಯ ಹೆಸರನ್ನು ತೋರಿಸುವ ವಿವಿಪಿಎಟಿ ಸ್ಲಿಪ್ ಅಂತಹ ಯಾವುದೇ ಆರೋಪದ ಬಗ್ಗೆ ತನಿಖೆ ನಡೆಸುವಾಗ ನಿರ್ಣಾಯಕ ಸಾಕ್ಷಿಯಾಗಬಹುದು.

ಆದರೆ ಈಗ, ಈ ಆರ್‌ಟಿಐ ಉತ್ತರವು ಬಹಿರಂಗಪಡಿಸಿದಂತೆ, ಎಲ್ಲಾ ವಿವಿಪಿಎಟಿ ಸ್ಲಿಪ್‌ಗಳು ನಾಶವಾಗಿವೆ ಮತ್ತು ವಿವಿಪಿಎಟಿ ಸ್ಲಿಪ್‌ಗಳ ಬಗ್ಗೆ ಇರಬಹುದಾದ ಯಾವುದೇ ಸಂಭಾವ್ಯ ಅನುಮಾನಕ್ಕೂ ಪುರಾವೆಗಳು ಸಹ ನಾಶವಾಗಿವೆ.

ಮತ್ತು ನಾವು ಮೊದಲೇ ಸೂಚಿಸಿದಂತೆ ಅದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ.

ಯಾವುದೇ ಪ್ರಯೋಜನವಿಲ್ಲದಿದ್ದರೂ ಸಹ, ದಶಕಗಳಿಂದ ‘ಬಾಬುಡೊಮ್’ ದಾಖಲೆಗಳು ಮತ್ತು ಫೈಲ್‌ಗಳನ್ನು ಹಿಡಿದಿಟ್ಟುಕೊಂಡಿರುವ ದೇಶದಲ್ಲಿ, ವಿವಿಪಿಎಟಿ ಸ್ಲಿಪ್‌ಗಳನ್ನು ಇಷ್ಟು ತುರ್ತಾಗಿ ಏಕೆ ವಿಲೇವಾರಿ ಮಾಡಲಾಗಿದೆ ಎಂದರೆ ಆಶ್ಚರ್ಯವಾಗುವುದಿಲ್ಲವೇ?

ಕಾನೂನು ತಜ್ಞರು ಹೇಳುವಂತೆ, ಈ ವಿವಿಪಿಎಟಿ ಸ್ಲಿಪ್‌ಗಳನ್ನು ನಾಲ್ಕು ತಿಂಗಳಲ್ಲಿ ನಾಶಪಡಿಸಿರುವುದು ಚಿಂತೆಗೀಡುಮಾಡುವು ವಿಷಯವಾಗಿದೆ. ಇದು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಚುನಾವಣಾ ಆಯೋಗದ ಇಷ್ಟು ಅವಸರಕ್ಕೆ ಕಾರಣವೇನೆಂದು ವಿವರಿಸಬೇಕು. ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ, ಹಾಗೆ ಮಾಡಲು ಸರಿಯಾದ ಕಾರಣವಿದ್ದಲ್ಲಿ ಮಾತ್ರ ಚುನಾವಣಾ ಆಯೋಗ ವಿವಿಪಿಎಟಿ ಸ್ಲಿಪ್‌ಗಳನ್ನು ನಾಶಪಡಿಸುವ ಅಧಿಕಾರ ಹೊಂದಿದೆ. ಅಂತಹ ಸಕಾರಣವೇನೆಂದು ಅದು ವಿವರಿಸಬೇಕಿದೆ.

ಚುನಾವಣಾ ಆಯೋಗದ ಆರ್‌ಟಿಐ ಉತ್ತರವನ್ನು ನೋಡಿದ್ದೇವೆ. ಆದರೆ ಅದರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ವಿಲೇವಾರಿ ಮಾಡಲಾಗಿದೆ ಎಂಬುದನ್ನು ವಿವರಿಸಲು ಯಾವುದೇ ಸ್ಪಷ್ಟ ಕಾರಣ ಕಂಡುಬಂದಿಲ್ಲ.

ರಾಜಸ್ಥಾನ, ಹಿಮಾಚಲ ಪ್ರದೇಶ, ಮಣಿಪುರ, ಮೇಘಾಲಯ ಮತ್ತು ಆಂಧ್ರಪ್ರದೇಶದಲ್ಲಿ ಇವಿಎಂ ಮತ್ತು ವಿವಿಪಿಎಟಿ ಮತ ಎಣಿಕೆಗಳ ನಡುವೆ ಕನಿಷ್ಠ ಎಂಟು ‘ಹೊಂದಿಕೆಯಾಗದ’ ಪ್ರಕರಣಗಳು ವರದಿಯಾಗಿವೆ ಎಂದು ಈ ಹಿಂದೆ ಕ್ವಿಂಟ್ ವರದಿ ಮಾಡಿತ್ತು.

ಈ ಪ್ರಕರಣಗಳ ವಿಚಾರಣೆಗೆ ಚುನಾವಣಾ ಆಯೋಗವು ಜುಲೈ 2019ರಲ್ಲಿ ಆದೇಶ ನೀಡಿತು. ನಡೆಸಿದ ವಿಚಾರಣೆಯ ಮಾಹಿತಿ ಕೋರಿ ಕ್ವಿಂಟ್ ಆರ್‌ಟಿಐ ಸಲ್ಲಿಸಿದರು. ಇಸಿ 2019 ರ ನವೆಂಬರ್‌ನಲ್ಲಿ ಉತ್ತರಿಸುತ್ತಾ, ಈ ವಿಷಯವು ಇಸಿಯ ತಾಂತ್ರಿಕ ತಜ್ಞರ ಸಮಿತಿಯ ಪರಿಗಣನೆಯಲ್ಲಿ ಇರುವುದರಿಂದ ಮಾಹಿತಿ ಲಭ್ಯವಿಲ್ಲ ಎಂದು ಹೇಳಿದೆ.

ಈಗ, ಈ ಎಂಟು ಪ್ರಕರಣಗಳಿಗೆ ಸಂಬಂಧಿಸಿದ ವಿವಿಪಿಎಟಿ ಸ್ಲಿಪ್‌ಗಳನ್ನು ಇಸಿ ವಿಲೇವಾರಿ ಮಾಡಿದೆಯೇ ಅಥವಾ ನಾಶಪಡಿಸಿದೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಸೆಪ್ಟೆಂಬರ್ 2019ರಿಂದ ಈ ಚುನಾವಣಾ ಆಯೋಗ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ವಿವಿಪಿಎಟಿ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲು ಆದೇಶಿಸಿದೆ…

ಇದು ಮತ್ತೊಂದು ಪ್ರಮುಖ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಈ ಎಂಟು ಪ್ರಕರಣಗಳಿಗೆ ಸಂಬಂಧಿಸಿದ ವಿವಿಪಿಎಟಿ ಸ್ಲಿಪ್‌ಗಳು ಸಹ ನಾಶವಾಗಿದ್ದರೆ, ಇವಿಎಂ ಮತ್ತು ವಿವಿಪಿಎಟಿ ಮತ ಎಣಿಕೆಗಳ ‘ಹೊಂದಾಣಿಕೆಯಾಗದ’ ಕುರಿತು ವಿಚಾರಣೆಯನ್ನು ಹೇಗೆ ನಡೆಸಬಹುದು?

ಹಾಗಾಗಿ, ನಾವು ಮತ್ತೆ ಕೇಳುತ್ತೇವೆ – ಚುನಾವಣಾ ಆಯೋಗವು ನಿಯಮಗಳನ್ನು ಏಕೆ ಪಾಲಿಸಲಿಲ್ಲ, ಮತ್ತು ಕೇವಲ ನಾಲ್ಕು ತಿಂಗಳಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ನಾಶಪಡಿಸಿತು? ಮತಯಂತ್ರ ಟ್ಯಾಂಪರ್‌ ಆಗಿರುವ ಪುರಾವೆಗಳನ್ನು ನಾಶ ಮಾಡಲು ಹೀಗೆ ಮಾಡಲಾಗಿದೆ ಎಂದು ನಾವು ಹೇಳುವ ಧೈರ್ಯವಿದೆಯೇ?

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಧಾನ ಮಂತ್ರಿಯನ್ನು ನಿರ್ಧರಿಸುವ, ಭಾರತದ ಅತ್ಯಂತ ನಿರ್ಣಾಯಕ ಚುನಾವಣೆಗಳ ವಿವಿಪಿಎಟಿ ಸ್ಲಿಪ್‌ಗಳನ್ನು ಇಸಿ ಏಕೆ ಉಳಿಸಿಕೊಳ್ಳಲಿಲ್ಲ?

ಕ್ವಿಂಟ್ ತನ್ನ ಈ ಪ್ರಶ್ನೆಗಳೊಂದಿಗೆ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ನಾವೀಗ ಚುನಾವಣಾ ಆಯೋಗದ ಸಮರ್ಪಕ ಉತ್ತರದ ನಿರೀಕ್ಷೆಯಲ್ಲಿದ್ದೇವೆ…

ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಚುನಾವಣಾ ಆಯೋಗ, ಬಿಜೆಪಿಯ ಚುನಾವಣಾ ಏಜೆಂಟನಂತೆ ವರ್ತಿಸುತ್ತಿರುವುದಕ್ಕೆ ಈ ಪ್ರಕರಣ ಪ್ರಮುಖ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....