Homeಮುಖಪುಟಲೋಕಸಭಾ ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲೇ ನಿಯಮ ಮೀರಿ ವಿವಿ ಪ್ಯಾಟ್‌ ಸ್ಲಿಪ್‌ಗಳ ನಾಶ: ಉತ್ತರ...

ಲೋಕಸಭಾ ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲೇ ನಿಯಮ ಮೀರಿ ವಿವಿ ಪ್ಯಾಟ್‌ ಸ್ಲಿಪ್‌ಗಳ ನಾಶ: ಉತ್ತರ ಕೊಡದ ಚುನಾವಣಾ ಆಯೋಗ..!

ಚುನಾವಣಾ ಆಯೋಗವು ನಿಯಮಗಳನ್ನು ಏಕೆ ಪಾಲಿಸಲಿಲ್ಲ. ಕೇವಲ ನಾಲ್ಕು ತಿಂಗಳಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ನಾಶಪಡಿಸಿತು? ಮತಯಂತ್ರ ಟ್ಯಾಂಪರ್‌ ಆಗಿರುವ ಪುರಾವೆಗಳನ್ನು ನಾಶ ಮಾಡಲು ಹೀಗೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಯಾವುದೇ ಚುನಾವಣೆಯಲ್ಲಿ ಬಳಸಿದ ಮುದ್ರಿತ ವಿವಿಪಿಎಟಿ ಸ್ಲಿಪ್‌ಗಳನ್ನು ಒಂದು ವರ್ಷದವರೆಗೆ ಉಳಿಸಿಕೊಂಡು ನಂತರ ನಾಶ ಮಾಡಬೇಕೆಂದು 1961ರ ಚುನಾವಣಾ ನಿಯಮಗಳ ನಿಯಮ 94 (ಬಿ) ಹೇಳುತ್ತದೆ. ಆದರೆ ಚುನಾವಣಾ ಆಯೋಗವು 2019ರ ಲೋಕಸಭಾ ಚುನಾವಣೆಯಲ್ಲಿ ಬಳಸಿದ ಮುದ್ರಿತ ವಿವಿಪಿಎಟಿ ಸ್ಲಿಪ್‌ಗಳನ್ನು ಈಗಾಗಲೇ ನಾಶಪಡಿಸಿದೆ. ಅದೂ ಸಹ 2019ರ ಮೇನಲ್ಲಿ ಫಲಿತಾಂಶಗಳನ್ನು ಘೋಷಿಸಿದ ನಾಲ್ಕು ತಿಂಗಳ ನಂತರ… ಯಾಕಿಷ್ಟು ಅವಸರ, ತರಾತುರಿ ಎಂಬ ಪ್ರಶ್ನೆ ಭುಗಿಲೆದ್ದಿದೆ.

ಇಂಗ್ಲಿಷ್‌ನ ಖ್ಯಾತ ವೆಬ್‌ ಪೋರ್ಟಲ್‌ ’ದಿ ಕ್ವಿಂಟ್‌’ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ನೀಡಿದ ಉತ್ತರದಲ್ಲಿ ದೆಹಲಿ ಚುನಾವಣಾ ಆಯೋಗದ ಸಾರ್ವಜನಿಕ ಮಾಹಿತಿ ಅಧಿಕಾರಿ “ವಿವಿಪಿಎಟಿ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಆರ್‌ಟಿಐ ಉತ್ತರದೊಂದಿಗೆ ಲಗತ್ತಿಸಲಾದ ಮಾಹಿತಿಯಲ್ಲಿ ಚುನಾವಣಾ ಆಯೋಗವು 24 ಸೆಪ್ಟೆಂಬರ್ 2019ರಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ “ವಿವಿಪಿಎಟಿ ಮುದ್ರಿತ ಕಾಗದದ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲು” ಆದೇಶಿಸಿದೆ.

ಚುನಾವಣೆ ಮುಗಿದ ನಾಲ್ಕು ತಿಂಗಳಲ್ಲಿಯೇ ವಿವಿಪಿಎಟಿ ಸ್ಲಿಪ್‌ಗಳನ್ನು ನಾಶಮಾಡುವ ಅವಸರ ಮತ್ತು ತುರ್ತು ಏಕೆ? ನೀವು ಮತ್ತು ನಾನು ಹೇಗೆ ಮತ ಚಲಾಯಿಸಿದ್ದೇವೆ ಎಂಬುದಕ್ಕೆ ನಿರ್ಣಾಯಕ ಸಾಕ್ಷಿಯಾಗಿರುವ ವಿವಿಪಿಎಟಿ ಸ್ಲಿಪ್‌ಗಳನ್ನು ಚುನಾವಣಾ ಆಯೋಗವು ಒಂದು ವರ್ಷದ ಅವಧಿಗೆ ಏಕೆ ಸಂಗ್ರಹಿಸಲು ಸಾಧ್ಯವಾಗಲಿಲ್ಲ?

ನೆನಪಿಡಿ, ನಾವು ಮತ ​​ಚಲಾಯಿಸಿದಾಗ, ನಮ್ಮ ಮತವು ನಮ್ಮ ಆಯ್ಕೆಯ ಅಭ್ಯರ್ಥಿಗೆ ಹೋಗಿದೆಯೇ ಎಂದು ವಿವಿಪಿಎಟಿ ಸ್ಲಿಪ್ ಪರಿಶೀಲಿಸುತ್ತದೆ. ವಿವಿಪಿಎಟಿ ಸ್ಲಿಪ್ ನಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರನ್ನು ತೋರಿಸದಿದ್ದರೆ, ವಿವಿಪಿಎಟಿ ಯಂತ್ರದ ಅಸಮರ್ಪಕ ಕಾರ್ಯದ ಬಗ್ಗೆ ನಾವು ತಕ್ಷಣ ಮತದಾನ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗೆ ತಿಳಿಸಿ ದೂರು ದಾಖಲಿಸಬಹುದು.

ಇಡೀ ಮತದಾನ ಪ್ರಕ್ರಿಯೆಯಲ್ಲಿ ಸಂಭವನೀಯ ರಿಗ್ಗಿಂಗ್‌, ಅಕ್ರಮ ಮತದಾನ, ದುರ್ಬಳಕೆ ನಡೆದಿದ್ದರೆ ಪತ್ತೆಹಚ್ಚಲು ವಿವಿಪಿಎಟಿ ಸ್ಲಿಪ್‌ಗಳು ಎಷ್ಟು ನಿರ್ಣಾಯಕವಾಗಿವೆ ಎಂಬುದರ ಬಗ್ಗೆ ಕ್ವಿಂಟ್ ಈ ಹಿಂದೆ ವರದಿ ಮಾಡಿತ್ತು.

ಪ್ರತಿ ಮತದಾನ ಕೇಂದ್ರದಲ್ಲಿ, ವಿವಿಪಿಎಟಿ ಯಂತ್ರವನ್ನು ಬ್ಯಾಲೆಟ್ ಘಟಕಕ್ಕೆ ಸಂಪರ್ಕಿಸಲಾಗಿರುತ್ತದೆ. ನಾವು ಮತ ​​ಚಲಾಯಿಸಿದಾಗ, ಅದನ್ನು ಮೊದಲು ವಿವಿಪಿಎಟಿ ಯಂತ್ರದಲ್ಲಿ ದಾಖಲಿಸಲಾಗುತ್ತದೆ, ಮತ್ತು ಅದರ ನಂತರವೇ ಅದು ಇವಿಎಂ ನಿಯಂತ್ರಣ ಘಟಕಕ್ಕೆ ಹೋಗುತ್ತದೆ.

ಪ್ರತಿ ಕ್ಷೇತ್ರಕ್ಕೂ ವಿವಿಪಿಎಟಿ ಯಂತ್ರಗಳನ್ನು ಗುರುತಿಸಿದ ನಂತರ, ಅವುಗಳನ್ನು ಎರಡು ವಾರಗಳವರೆಗೆ ಸರ್ಕಾರವು ತೊಡಗಿಸಿಕೊಂಡ ಖಾಸಗಿ ಎಂಜಿನಿಯರ್‌ಗಳು ಹೇಗೆ ಪರಿಶೀಲಿಸಿದರು, ನಿರ್ವಹಿಸುತ್ತಿದ್ದರು ಮತ್ತು ಪ್ರೋಗ್ರಾಮ್ ಮಾಡಿದರು, ಈ ಸಮಯದಲ್ಲಿ ವಿವಿಪಿಎಟಿ ಯಂತ್ರಗಳು ಟ್ಯಾಂಪರಿಂಗ್‌ಗೆ ಸ್ಪಷ್ಟವಾಗಿ ಗುರಿಯಾಗುತ್ತವೆ.

ಆದ್ದರಿಂದ, 2019 ರಲ್ಲಿ ಎಲ್ಲಾ ಇವಿಎಂ-ವಿವಿಪಿಎಟಿ ಯಂತ್ರಗಳನ್ನು ಹಾಳುಗೆಡವಿದ್ದರೆ, ಮತದಾರರು ಆಯ್ಕೆ ಮಾಡಿದ ಅಭ್ಯರ್ಥಿಯ ಹೆಸರನ್ನು ತೋರಿಸುವ ವಿವಿಪಿಎಟಿ ಸ್ಲಿಪ್ ಅಂತಹ ಯಾವುದೇ ಆರೋಪದ ಬಗ್ಗೆ ತನಿಖೆ ನಡೆಸುವಾಗ ನಿರ್ಣಾಯಕ ಸಾಕ್ಷಿಯಾಗಬಹುದು.

ಆದರೆ ಈಗ, ಈ ಆರ್‌ಟಿಐ ಉತ್ತರವು ಬಹಿರಂಗಪಡಿಸಿದಂತೆ, ಎಲ್ಲಾ ವಿವಿಪಿಎಟಿ ಸ್ಲಿಪ್‌ಗಳು ನಾಶವಾಗಿವೆ ಮತ್ತು ವಿವಿಪಿಎಟಿ ಸ್ಲಿಪ್‌ಗಳ ಬಗ್ಗೆ ಇರಬಹುದಾದ ಯಾವುದೇ ಸಂಭಾವ್ಯ ಅನುಮಾನಕ್ಕೂ ಪುರಾವೆಗಳು ಸಹ ನಾಶವಾಗಿವೆ.

ಮತ್ತು ನಾವು ಮೊದಲೇ ಸೂಚಿಸಿದಂತೆ ಅದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ.

ಯಾವುದೇ ಪ್ರಯೋಜನವಿಲ್ಲದಿದ್ದರೂ ಸಹ, ದಶಕಗಳಿಂದ ‘ಬಾಬುಡೊಮ್’ ದಾಖಲೆಗಳು ಮತ್ತು ಫೈಲ್‌ಗಳನ್ನು ಹಿಡಿದಿಟ್ಟುಕೊಂಡಿರುವ ದೇಶದಲ್ಲಿ, ವಿವಿಪಿಎಟಿ ಸ್ಲಿಪ್‌ಗಳನ್ನು ಇಷ್ಟು ತುರ್ತಾಗಿ ಏಕೆ ವಿಲೇವಾರಿ ಮಾಡಲಾಗಿದೆ ಎಂದರೆ ಆಶ್ಚರ್ಯವಾಗುವುದಿಲ್ಲವೇ?

ಕಾನೂನು ತಜ್ಞರು ಹೇಳುವಂತೆ, ಈ ವಿವಿಪಿಎಟಿ ಸ್ಲಿಪ್‌ಗಳನ್ನು ನಾಲ್ಕು ತಿಂಗಳಲ್ಲಿ ನಾಶಪಡಿಸಿರುವುದು ಚಿಂತೆಗೀಡುಮಾಡುವು ವಿಷಯವಾಗಿದೆ. ಇದು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಚುನಾವಣಾ ಆಯೋಗದ ಇಷ್ಟು ಅವಸರಕ್ಕೆ ಕಾರಣವೇನೆಂದು ವಿವರಿಸಬೇಕು. ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ, ಹಾಗೆ ಮಾಡಲು ಸರಿಯಾದ ಕಾರಣವಿದ್ದಲ್ಲಿ ಮಾತ್ರ ಚುನಾವಣಾ ಆಯೋಗ ವಿವಿಪಿಎಟಿ ಸ್ಲಿಪ್‌ಗಳನ್ನು ನಾಶಪಡಿಸುವ ಅಧಿಕಾರ ಹೊಂದಿದೆ. ಅಂತಹ ಸಕಾರಣವೇನೆಂದು ಅದು ವಿವರಿಸಬೇಕಿದೆ.

ಚುನಾವಣಾ ಆಯೋಗದ ಆರ್‌ಟಿಐ ಉತ್ತರವನ್ನು ನೋಡಿದ್ದೇವೆ. ಆದರೆ ಅದರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ವಿಲೇವಾರಿ ಮಾಡಲಾಗಿದೆ ಎಂಬುದನ್ನು ವಿವರಿಸಲು ಯಾವುದೇ ಸ್ಪಷ್ಟ ಕಾರಣ ಕಂಡುಬಂದಿಲ್ಲ.

ರಾಜಸ್ಥಾನ, ಹಿಮಾಚಲ ಪ್ರದೇಶ, ಮಣಿಪುರ, ಮೇಘಾಲಯ ಮತ್ತು ಆಂಧ್ರಪ್ರದೇಶದಲ್ಲಿ ಇವಿಎಂ ಮತ್ತು ವಿವಿಪಿಎಟಿ ಮತ ಎಣಿಕೆಗಳ ನಡುವೆ ಕನಿಷ್ಠ ಎಂಟು ‘ಹೊಂದಿಕೆಯಾಗದ’ ಪ್ರಕರಣಗಳು ವರದಿಯಾಗಿವೆ ಎಂದು ಈ ಹಿಂದೆ ಕ್ವಿಂಟ್ ವರದಿ ಮಾಡಿತ್ತು.

ಈ ಪ್ರಕರಣಗಳ ವಿಚಾರಣೆಗೆ ಚುನಾವಣಾ ಆಯೋಗವು ಜುಲೈ 2019ರಲ್ಲಿ ಆದೇಶ ನೀಡಿತು. ನಡೆಸಿದ ವಿಚಾರಣೆಯ ಮಾಹಿತಿ ಕೋರಿ ಕ್ವಿಂಟ್ ಆರ್‌ಟಿಐ ಸಲ್ಲಿಸಿದರು. ಇಸಿ 2019 ರ ನವೆಂಬರ್‌ನಲ್ಲಿ ಉತ್ತರಿಸುತ್ತಾ, ಈ ವಿಷಯವು ಇಸಿಯ ತಾಂತ್ರಿಕ ತಜ್ಞರ ಸಮಿತಿಯ ಪರಿಗಣನೆಯಲ್ಲಿ ಇರುವುದರಿಂದ ಮಾಹಿತಿ ಲಭ್ಯವಿಲ್ಲ ಎಂದು ಹೇಳಿದೆ.

ಈಗ, ಈ ಎಂಟು ಪ್ರಕರಣಗಳಿಗೆ ಸಂಬಂಧಿಸಿದ ವಿವಿಪಿಎಟಿ ಸ್ಲಿಪ್‌ಗಳನ್ನು ಇಸಿ ವಿಲೇವಾರಿ ಮಾಡಿದೆಯೇ ಅಥವಾ ನಾಶಪಡಿಸಿದೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಸೆಪ್ಟೆಂಬರ್ 2019ರಿಂದ ಈ ಚುನಾವಣಾ ಆಯೋಗ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ವಿವಿಪಿಎಟಿ ಸ್ಲಿಪ್‌ಗಳನ್ನು ವಿಲೇವಾರಿ ಮಾಡಲು ಆದೇಶಿಸಿದೆ…

ಇದು ಮತ್ತೊಂದು ಪ್ರಮುಖ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಈ ಎಂಟು ಪ್ರಕರಣಗಳಿಗೆ ಸಂಬಂಧಿಸಿದ ವಿವಿಪಿಎಟಿ ಸ್ಲಿಪ್‌ಗಳು ಸಹ ನಾಶವಾಗಿದ್ದರೆ, ಇವಿಎಂ ಮತ್ತು ವಿವಿಪಿಎಟಿ ಮತ ಎಣಿಕೆಗಳ ‘ಹೊಂದಾಣಿಕೆಯಾಗದ’ ಕುರಿತು ವಿಚಾರಣೆಯನ್ನು ಹೇಗೆ ನಡೆಸಬಹುದು?

ಹಾಗಾಗಿ, ನಾವು ಮತ್ತೆ ಕೇಳುತ್ತೇವೆ – ಚುನಾವಣಾ ಆಯೋಗವು ನಿಯಮಗಳನ್ನು ಏಕೆ ಪಾಲಿಸಲಿಲ್ಲ, ಮತ್ತು ಕೇವಲ ನಾಲ್ಕು ತಿಂಗಳಲ್ಲಿ ವಿವಿಪಿಎಟಿ ಸ್ಲಿಪ್‌ಗಳನ್ನು ಏಕೆ ನಾಶಪಡಿಸಿತು? ಮತಯಂತ್ರ ಟ್ಯಾಂಪರ್‌ ಆಗಿರುವ ಪುರಾವೆಗಳನ್ನು ನಾಶ ಮಾಡಲು ಹೀಗೆ ಮಾಡಲಾಗಿದೆ ಎಂದು ನಾವು ಹೇಳುವ ಧೈರ್ಯವಿದೆಯೇ?

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಧಾನ ಮಂತ್ರಿಯನ್ನು ನಿರ್ಧರಿಸುವ, ಭಾರತದ ಅತ್ಯಂತ ನಿರ್ಣಾಯಕ ಚುನಾವಣೆಗಳ ವಿವಿಪಿಎಟಿ ಸ್ಲಿಪ್‌ಗಳನ್ನು ಇಸಿ ಏಕೆ ಉಳಿಸಿಕೊಳ್ಳಲಿಲ್ಲ?

ಕ್ವಿಂಟ್ ತನ್ನ ಈ ಪ್ರಶ್ನೆಗಳೊಂದಿಗೆ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ನಾವೀಗ ಚುನಾವಣಾ ಆಯೋಗದ ಸಮರ್ಪಕ ಉತ್ತರದ ನಿರೀಕ್ಷೆಯಲ್ಲಿದ್ದೇವೆ…

ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತೀಯ ಚುನಾವಣಾ ಆಯೋಗ, ಬಿಜೆಪಿಯ ಚುನಾವಣಾ ಏಜೆಂಟನಂತೆ ವರ್ತಿಸುತ್ತಿರುವುದಕ್ಕೆ ಈ ಪ್ರಕರಣ ಪ್ರಮುಖ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...