Homeಅಂಕಣಗಳುಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

ಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

- Advertisement -
- Advertisement -

ಸರೋವರ್ ಬೆಂಕಿಕೆರೆ |

2014ರ ನಂತರದಿಂದ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎನ್ನುವುದು ಹಳೆಯ ವಿಚಾರ. ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರುಗಳೇ ‘ಪ್ರಜಾತಂತ್ರ ಅಪಾಯದಲ್ಲಿದೆ’ ಎಂದು ಪತ್ರಿಕಾಗೋಷ್ಠಿ ನಡೆಸಿದ ಉದಾಹರಣೆ ದೇಶದಲ್ಲಿ ಇರಲೇ ಇಲ್ಲ. ಇದೀಗ ಭಾರತೀಯ ಚುನಾವಣೆ ಆಯೋಗವು ತನ್ನ ಸ್ವಾಯತ್ತತೆ ಕಳೆದುಕೊಂಡಿತೇ ಎನ್ನುವ ಅನುಮಾನ ಹುಟ್ಟುತ್ತದೆ. ಅಲ್ಲದೆ ಚುನಾವಣಾ ಆಯೋಗ ನಿಜಕ್ಕು ಪಕ್ಷಾತೀತವಾಗಿದೆಯೇ ಎನ್ನುವ ಪ್ರಶ್ನೆಗಳು ಏಳುತ್ತಿದೆ.
ಮಾರ್ಚ್ 10ರ ಭಾನುವಾರದಂದು ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ನಿಗದಿ ಮಾಡಿದ್ದು ಅಂದಿನಿಂದಲೇ ನೀತಿಸಂಹಿತೆಯನ್ನೂ ಜಾರಿ ಮಾಡಿದೆ. ಚುನಾವಣೆ ದಿನಾಂಕ ಘೋಷಣೆ ವಿಳಂಬವಾಗುತ್ತಿದೆ ಎನ್ನುವ ಮಾತುಗಳು ಬಂದನಂತರ ಆಯೋಗವು ಘೋಷಣೆ ಮಾಡಿದೆ. ಅಲ್ಲದೆ ಮಾರ್ಚ್ 10ರ ಮುಂಚೆಯ ಮೋದಿಯವರು ಕೇವಲ 30 ದಿನಗಳಲ್ಲಿ 157 ಯೋಜನೆಗಳು ಮಿಂಚಿನ ವೇಗದಂತೆ ಉದ್ಘಾಟನೆ ಮಾಡಿದ್ದಾರೆ! ಒಂದು ತಿಂಗಳಿನ ಕಾಲಾವಧಿಯಲ್ಲಿ ದೇಶದಾದ್ಯಂತ 28 ಕಡೆ ಪ್ರವಾಸ ಕೈಗೊಂಡಿದ್ದು ಯೋಜನೆಗಳು, ಶಂಕುಸ್ಥಾಪನೆ, ಉದ್ಘಾಟನೆಗಳ ಭರಾಟೆಯನ್ನು ಮುಗಿಸಿದ್ದಾರೆ. ಫೆಬ್ರವರಿ 8ರಿಂದ ಮಾರ್ಚ್ 9ರ ಮಧ್ಯೆ ಪ್ರಧಾನಿ ಮೋದಿಯವರು ಕೆಲವೇ ಕೆಲವು ಕಿಮಿ ಉದ್ದದ ರಸ್ತೆಗಳನ್ನು ಒಳಗೊಂಡ ಅನೇಕ ವಿಭಾಗಗಳ ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಶಾಲೆಗಳು, ಗ್ಯಾಸ್ ಪೈಪ್‍ಲೈನ್‍ಗಳು, ವಿಮಾನ ನಿಲ್ದಾಣಗಳು, ನೀರಿನ ಸಂಪರ್ಕಗಳು, ನೀರು ಸಂಸ್ಕರಣಾ ಸಂಪರ್ಕಗಳು, ವಿದ್ಯುತ್ ಘಟಕಗಳು, ಮೊಬೈಲ್ ಆಪ್‍ಗಳು ಹೀಗೆ ಉದ್ಘಾಟನೆಗಳ ಮೇಲೆ ಉದ್ಘಾಟನೆಗಳನ್ನು ಕೈಗೊಂಡಿದ್ದಾರೆ. ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರದಲ್ಲಿಯೂ ಸಹ ಯಾವ ಕಾರ್ಯಕ್ರಮವನ್ನು ರದ್ಧು ಮಾಡದೆ ಉದ್ಘಾಟನೆ ಮತ್ತು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಪ್ರಧಾನಿ ಮೋದಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜನವರಿ 8ರಿಂದ ಫೆಬ್ರವರಿ 7ರ ತನಕ ಸುಮಾರು 57 ಯೋಜನೆಗಳ ಉದ್ಘಾಟನೆ ನಡೆಸಿದರೆ, ನಂತರದ ನಾಲ್ಕು ವಾರಗಳಲ್ಲಿ ಕೈಗೊಂಡ ಉದ್ಘಾಟನೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಿದೆ.
ಪ್ರಧಾನಿ ಸಚಿವಾಲಯದ ಹಾಗೂ ಸರ್ಕಾರದ ಅಧಿಕೃತ ಘೋಷಣೆಗಳ ಆಧರಿತವಾಗಿರುವ ಈ ಅಂಕಿಅಂಶವನ್ನು ಗಮನಿಸಿದರೆ ಕೆಲವು ತಮಾಷೆ ಮತ್ತು ವಿಚಿತ್ರ ರೀತಿಯಲ್ಲಿವೆ. ಪ್ರಧಾನಿ ಮೋದಿಯವರು ಕೆಲವು ಹಳೆಯ ಯೋಜನೆಗಳನ್ನು ಹೊಸದಾಗಿ ಮರುಚಾಲನೆಗೊಳಿಸಿದ್ದಾರೆ. ಅವುಗಳಲ್ಲಿ ಈ ತಿಂಗಳ ಆರಂಭದಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ರಷ್ಯಾದ ಸಹಭಾಗಿತ್ವದಲ್ಲಿ ಎಕೆ ರೈಫಲ್‍ಗಳ ಉತ್ಪಾದನಾ ಘಟಕವನ್ನು ಅನಾವರಣಗೊಳಿಸಿದ್ದರು. ಆದರೆ 2007ರಲ್ಲಿ ಉದ್ಘಾಟನೆಗೊಂಡಿದ್ದ ಆ ಘಟಕ 2010ರಲ್ಲಿ ಕಾರ್ಬಿನ್ಸ್, ರೈಫಲ್ಸ್, ಐಎನ್‍ಎಸ್‍ಎಎಸ್ ಮೆಶಿನ್ ಗನ್‍ಗಳ ಉತ್ಪಾದನೆ ನಡೆಸುತ್ತಿತ್ತು ಎಂದು ಸರ್ಕಾರದ ಪ್ರಕಟಣೆಯೇ ಹೇಳಿದೆ.
ಇನ್ನೊಂದು ಉದಾಹರಣೆಯಾಗಿ, ಬಿಹಾರದ ಕರ್ಮಾಲಿಚಕ್‍ನಲ್ಲಿ ನೀರು ಸಂಸ್ಕರಣಾ ಜಾಲಕ್ಕೆ ಫೆ.17ರಂದು ಮೋದಿ ಅಡಿಗಲ್ಲು ಹಾಕಿದರು. ಆದರೆ ಅದೇ ಯೋಜನೆಗೆ ಸ್ವತಃ ಮೋದಿ ಅವರೇ 2017ರ ಅಕ್ಟೋಬರ್‍ನಲ್ಲಿ ಅಡಿಗಲ್ಲು ಹಾಕಿದ್ದರು!! ಪ್ರಧಾನಿಯವರು ಉದ್ಘಾಟಿಸಿದ ಕೆಲವು ಯೋಜನೆಗಳು ಮುನ್ಸಿಪಾಲಿಟಿ ಮಟ್ಟದವೂ ಆಗಿದ್ದವು. ಗಾಜಿಯಾಬಾದ್ ಮುನ್ಸಿಪಾಲಿಟಿಯ ಅಡಿಯಲ್ಲಿನ ಗೋಶಾಲೆಗೆ ಅಡಿಗಲ್ಲನ್ನೂ ಹಾಕಿದ್ದಾರೆ. ಹಲವು ಕಡೆಗೆ ಹೋಗಲು ಸಮಯ ಸಿಗದೆ, ವಿದ್ಯುತ್ ಘಟಕದಂತಹ ಯೋಜನೆಗಳನ್ನು ರಿಮೋಟ್ ಮೂಲಕ 17 ಯೋಜನೆಗಳನ್ನೂ ಮೋದಿ ಉದ್ಘಾಟಿಸಿದ್ದಾರೆ.
ಇಷ್ಟು ಆತುರಾತುರವಾಗಿ 157 ಯೋಜನೆಗಳಿಗೆ ಉದ್ಘಾಟನೆ ಮಾಡಿರುವುದು, ಅಧಿಕೃತ ಪ್ರವಾಸ ರ್ಯಾಲಿಗಳು ಮುಗಿದಿದ್ದು, ಇನ್ನೇನು ಯಾವುದೇ ಯೋಜನೆಗಳು ಉದ್ಘಾಟನೆ ಮಾಡಲು ಬಾಕಿ ಉಳಿದಿಲ್ಲ ಎನ್ನುವ ಹೊತ್ತಿಗೆ ‘ಮೋದಿಯ ಎಲ್ಲಾ ಕಾರ್ಯಗಳು ಮುಗಿಯಲಿ ಎಂದು ಕಾಯುತ್ತಿದ್ದೇವೆ’ ಎನ್ನುವಂತೆ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಹಾಗೂ ನೀತಿ ಸಂಹಿತೆಯನ್ನು ಜಾರಿ ಮಾಡಿರುವುದು ನೋಡಿದರೆ ಆಯೋಗ ನಿಜಕ್ಕೂ ತನ್ನ ಸ್ವಾಯತ್ತತೆಯನ್ನು ಕಾಪಾಡಿಕೊಂಡಿದೆಂiÀi, ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದೆಯಾ ಎನ್ನುವ ಅನುಮಾನ ಕಾಡುತ್ತದೆ. ಅಲ್ಲದೆ ರಕ್ಷಣಾ ಕೊರತೆ ಹಾಗೂ ಸೂಕ್ಷ್ಮ ಪ್ರದೇಶಗಳಂತ ರಾಜ್ಯಗಳಲ್ಲಿ 3-4 ಸುತ್ತಿನಲ್ಲಿ ಚುನಾವಣೆ ನಡೆಯುತ್ತದೆ ಆದರೆ 39 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಒಂದೇ ಸುತ್ತಿನಲ್ಲಿ ಚುನಾವಣೆ ನಡೆಯುತ್ತಿದ್ದು 28 ಕ್ಷೇತ್ರವಿರುವ ಕರ್ನಾಟದಂತ ರಾಜ್ಯದಲ್ಲಿ 2 ಸುತ್ತಿನಲ್ಲಿ ನಡೆಯುತ್ತಿರುವುದು ಹಲವು ಗೊಂದಲ ಮತ್ತು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿದೆ.
ಚುನಾವಣೆ ಆಯೋಗದ ನಿಷ್ಪಕ್ಷಪಾತವನ್ನು ಪ್ರಶ್ನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಿಮಾಚಲ ಪ್ರದೇಶ ಮತ್ತು ಗುಜರಾತ್‍ನಲ್ಲಿ ಒಂದೇ ಸುತ್ತಿನಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಬೇರ್ಪಡಿಸಿದಾಗ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯ ಸ್ಪರ್ಧೆಯನ್ನು ಅನರ್ಹಗೊಳಿಸಿದಾಗಲೂ ಭಾರತೀಯ ಚುನಾವಣಾ ಆಯೋಗದ ಪಕ್ಷಪಾತದ ಧೋರಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಒಟ್ಟಾರೆ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆ ಕಳೆದುಕೊಳ್ಳುತ್ತಿರುವುದರ ಮತ್ತೊಂದು ಗುಣಲಕ್ಷಣವಿದು ಎನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...