Homeಅಂಕಣಗಳುಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

ಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

- Advertisement -
- Advertisement -

ಸರೋವರ್ ಬೆಂಕಿಕೆರೆ |

2014ರ ನಂತರದಿಂದ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎನ್ನುವುದು ಹಳೆಯ ವಿಚಾರ. ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರುಗಳೇ ‘ಪ್ರಜಾತಂತ್ರ ಅಪಾಯದಲ್ಲಿದೆ’ ಎಂದು ಪತ್ರಿಕಾಗೋಷ್ಠಿ ನಡೆಸಿದ ಉದಾಹರಣೆ ದೇಶದಲ್ಲಿ ಇರಲೇ ಇಲ್ಲ. ಇದೀಗ ಭಾರತೀಯ ಚುನಾವಣೆ ಆಯೋಗವು ತನ್ನ ಸ್ವಾಯತ್ತತೆ ಕಳೆದುಕೊಂಡಿತೇ ಎನ್ನುವ ಅನುಮಾನ ಹುಟ್ಟುತ್ತದೆ. ಅಲ್ಲದೆ ಚುನಾವಣಾ ಆಯೋಗ ನಿಜಕ್ಕು ಪಕ್ಷಾತೀತವಾಗಿದೆಯೇ ಎನ್ನುವ ಪ್ರಶ್ನೆಗಳು ಏಳುತ್ತಿದೆ.
ಮಾರ್ಚ್ 10ರ ಭಾನುವಾರದಂದು ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ನಿಗದಿ ಮಾಡಿದ್ದು ಅಂದಿನಿಂದಲೇ ನೀತಿಸಂಹಿತೆಯನ್ನೂ ಜಾರಿ ಮಾಡಿದೆ. ಚುನಾವಣೆ ದಿನಾಂಕ ಘೋಷಣೆ ವಿಳಂಬವಾಗುತ್ತಿದೆ ಎನ್ನುವ ಮಾತುಗಳು ಬಂದನಂತರ ಆಯೋಗವು ಘೋಷಣೆ ಮಾಡಿದೆ. ಅಲ್ಲದೆ ಮಾರ್ಚ್ 10ರ ಮುಂಚೆಯ ಮೋದಿಯವರು ಕೇವಲ 30 ದಿನಗಳಲ್ಲಿ 157 ಯೋಜನೆಗಳು ಮಿಂಚಿನ ವೇಗದಂತೆ ಉದ್ಘಾಟನೆ ಮಾಡಿದ್ದಾರೆ! ಒಂದು ತಿಂಗಳಿನ ಕಾಲಾವಧಿಯಲ್ಲಿ ದೇಶದಾದ್ಯಂತ 28 ಕಡೆ ಪ್ರವಾಸ ಕೈಗೊಂಡಿದ್ದು ಯೋಜನೆಗಳು, ಶಂಕುಸ್ಥಾಪನೆ, ಉದ್ಘಾಟನೆಗಳ ಭರಾಟೆಯನ್ನು ಮುಗಿಸಿದ್ದಾರೆ. ಫೆಬ್ರವರಿ 8ರಿಂದ ಮಾರ್ಚ್ 9ರ ಮಧ್ಯೆ ಪ್ರಧಾನಿ ಮೋದಿಯವರು ಕೆಲವೇ ಕೆಲವು ಕಿಮಿ ಉದ್ದದ ರಸ್ತೆಗಳನ್ನು ಒಳಗೊಂಡ ಅನೇಕ ವಿಭಾಗಗಳ ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಶಾಲೆಗಳು, ಗ್ಯಾಸ್ ಪೈಪ್‍ಲೈನ್‍ಗಳು, ವಿಮಾನ ನಿಲ್ದಾಣಗಳು, ನೀರಿನ ಸಂಪರ್ಕಗಳು, ನೀರು ಸಂಸ್ಕರಣಾ ಸಂಪರ್ಕಗಳು, ವಿದ್ಯುತ್ ಘಟಕಗಳು, ಮೊಬೈಲ್ ಆಪ್‍ಗಳು ಹೀಗೆ ಉದ್ಘಾಟನೆಗಳ ಮೇಲೆ ಉದ್ಘಾಟನೆಗಳನ್ನು ಕೈಗೊಂಡಿದ್ದಾರೆ. ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರದಲ್ಲಿಯೂ ಸಹ ಯಾವ ಕಾರ್ಯಕ್ರಮವನ್ನು ರದ್ಧು ಮಾಡದೆ ಉದ್ಘಾಟನೆ ಮತ್ತು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಪ್ರಧಾನಿ ಮೋದಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜನವರಿ 8ರಿಂದ ಫೆಬ್ರವರಿ 7ರ ತನಕ ಸುಮಾರು 57 ಯೋಜನೆಗಳ ಉದ್ಘಾಟನೆ ನಡೆಸಿದರೆ, ನಂತರದ ನಾಲ್ಕು ವಾರಗಳಲ್ಲಿ ಕೈಗೊಂಡ ಉದ್ಘಾಟನೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಿದೆ.
ಪ್ರಧಾನಿ ಸಚಿವಾಲಯದ ಹಾಗೂ ಸರ್ಕಾರದ ಅಧಿಕೃತ ಘೋಷಣೆಗಳ ಆಧರಿತವಾಗಿರುವ ಈ ಅಂಕಿಅಂಶವನ್ನು ಗಮನಿಸಿದರೆ ಕೆಲವು ತಮಾಷೆ ಮತ್ತು ವಿಚಿತ್ರ ರೀತಿಯಲ್ಲಿವೆ. ಪ್ರಧಾನಿ ಮೋದಿಯವರು ಕೆಲವು ಹಳೆಯ ಯೋಜನೆಗಳನ್ನು ಹೊಸದಾಗಿ ಮರುಚಾಲನೆಗೊಳಿಸಿದ್ದಾರೆ. ಅವುಗಳಲ್ಲಿ ಈ ತಿಂಗಳ ಆರಂಭದಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ರಷ್ಯಾದ ಸಹಭಾಗಿತ್ವದಲ್ಲಿ ಎಕೆ ರೈಫಲ್‍ಗಳ ಉತ್ಪಾದನಾ ಘಟಕವನ್ನು ಅನಾವರಣಗೊಳಿಸಿದ್ದರು. ಆದರೆ 2007ರಲ್ಲಿ ಉದ್ಘಾಟನೆಗೊಂಡಿದ್ದ ಆ ಘಟಕ 2010ರಲ್ಲಿ ಕಾರ್ಬಿನ್ಸ್, ರೈಫಲ್ಸ್, ಐಎನ್‍ಎಸ್‍ಎಎಸ್ ಮೆಶಿನ್ ಗನ್‍ಗಳ ಉತ್ಪಾದನೆ ನಡೆಸುತ್ತಿತ್ತು ಎಂದು ಸರ್ಕಾರದ ಪ್ರಕಟಣೆಯೇ ಹೇಳಿದೆ.
ಇನ್ನೊಂದು ಉದಾಹರಣೆಯಾಗಿ, ಬಿಹಾರದ ಕರ್ಮಾಲಿಚಕ್‍ನಲ್ಲಿ ನೀರು ಸಂಸ್ಕರಣಾ ಜಾಲಕ್ಕೆ ಫೆ.17ರಂದು ಮೋದಿ ಅಡಿಗಲ್ಲು ಹಾಕಿದರು. ಆದರೆ ಅದೇ ಯೋಜನೆಗೆ ಸ್ವತಃ ಮೋದಿ ಅವರೇ 2017ರ ಅಕ್ಟೋಬರ್‍ನಲ್ಲಿ ಅಡಿಗಲ್ಲು ಹಾಕಿದ್ದರು!! ಪ್ರಧಾನಿಯವರು ಉದ್ಘಾಟಿಸಿದ ಕೆಲವು ಯೋಜನೆಗಳು ಮುನ್ಸಿಪಾಲಿಟಿ ಮಟ್ಟದವೂ ಆಗಿದ್ದವು. ಗಾಜಿಯಾಬಾದ್ ಮುನ್ಸಿಪಾಲಿಟಿಯ ಅಡಿಯಲ್ಲಿನ ಗೋಶಾಲೆಗೆ ಅಡಿಗಲ್ಲನ್ನೂ ಹಾಕಿದ್ದಾರೆ. ಹಲವು ಕಡೆಗೆ ಹೋಗಲು ಸಮಯ ಸಿಗದೆ, ವಿದ್ಯುತ್ ಘಟಕದಂತಹ ಯೋಜನೆಗಳನ್ನು ರಿಮೋಟ್ ಮೂಲಕ 17 ಯೋಜನೆಗಳನ್ನೂ ಮೋದಿ ಉದ್ಘಾಟಿಸಿದ್ದಾರೆ.
ಇಷ್ಟು ಆತುರಾತುರವಾಗಿ 157 ಯೋಜನೆಗಳಿಗೆ ಉದ್ಘಾಟನೆ ಮಾಡಿರುವುದು, ಅಧಿಕೃತ ಪ್ರವಾಸ ರ್ಯಾಲಿಗಳು ಮುಗಿದಿದ್ದು, ಇನ್ನೇನು ಯಾವುದೇ ಯೋಜನೆಗಳು ಉದ್ಘಾಟನೆ ಮಾಡಲು ಬಾಕಿ ಉಳಿದಿಲ್ಲ ಎನ್ನುವ ಹೊತ್ತಿಗೆ ‘ಮೋದಿಯ ಎಲ್ಲಾ ಕಾರ್ಯಗಳು ಮುಗಿಯಲಿ ಎಂದು ಕಾಯುತ್ತಿದ್ದೇವೆ’ ಎನ್ನುವಂತೆ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಹಾಗೂ ನೀತಿ ಸಂಹಿತೆಯನ್ನು ಜಾರಿ ಮಾಡಿರುವುದು ನೋಡಿದರೆ ಆಯೋಗ ನಿಜಕ್ಕೂ ತನ್ನ ಸ್ವಾಯತ್ತತೆಯನ್ನು ಕಾಪಾಡಿಕೊಂಡಿದೆಂiÀi, ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದೆಯಾ ಎನ್ನುವ ಅನುಮಾನ ಕಾಡುತ್ತದೆ. ಅಲ್ಲದೆ ರಕ್ಷಣಾ ಕೊರತೆ ಹಾಗೂ ಸೂಕ್ಷ್ಮ ಪ್ರದೇಶಗಳಂತ ರಾಜ್ಯಗಳಲ್ಲಿ 3-4 ಸುತ್ತಿನಲ್ಲಿ ಚುನಾವಣೆ ನಡೆಯುತ್ತದೆ ಆದರೆ 39 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಒಂದೇ ಸುತ್ತಿನಲ್ಲಿ ಚುನಾವಣೆ ನಡೆಯುತ್ತಿದ್ದು 28 ಕ್ಷೇತ್ರವಿರುವ ಕರ್ನಾಟದಂತ ರಾಜ್ಯದಲ್ಲಿ 2 ಸುತ್ತಿನಲ್ಲಿ ನಡೆಯುತ್ತಿರುವುದು ಹಲವು ಗೊಂದಲ ಮತ್ತು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿದೆ.
ಚುನಾವಣೆ ಆಯೋಗದ ನಿಷ್ಪಕ್ಷಪಾತವನ್ನು ಪ್ರಶ್ನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಿಮಾಚಲ ಪ್ರದೇಶ ಮತ್ತು ಗುಜರಾತ್‍ನಲ್ಲಿ ಒಂದೇ ಸುತ್ತಿನಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಬೇರ್ಪಡಿಸಿದಾಗ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯ ಸ್ಪರ್ಧೆಯನ್ನು ಅನರ್ಹಗೊಳಿಸಿದಾಗಲೂ ಭಾರತೀಯ ಚುನಾವಣಾ ಆಯೋಗದ ಪಕ್ಷಪಾತದ ಧೋರಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಒಟ್ಟಾರೆ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆ ಕಳೆದುಕೊಳ್ಳುತ್ತಿರುವುದರ ಮತ್ತೊಂದು ಗುಣಲಕ್ಷಣವಿದು ಎನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...