Homeಅಂಕಣಗಳುಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

ಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

- Advertisement -
- Advertisement -

ಸರೋವರ್ ಬೆಂಕಿಕೆರೆ |

2014ರ ನಂತರದಿಂದ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎನ್ನುವುದು ಹಳೆಯ ವಿಚಾರ. ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರುಗಳೇ ‘ಪ್ರಜಾತಂತ್ರ ಅಪಾಯದಲ್ಲಿದೆ’ ಎಂದು ಪತ್ರಿಕಾಗೋಷ್ಠಿ ನಡೆಸಿದ ಉದಾಹರಣೆ ದೇಶದಲ್ಲಿ ಇರಲೇ ಇಲ್ಲ. ಇದೀಗ ಭಾರತೀಯ ಚುನಾವಣೆ ಆಯೋಗವು ತನ್ನ ಸ್ವಾಯತ್ತತೆ ಕಳೆದುಕೊಂಡಿತೇ ಎನ್ನುವ ಅನುಮಾನ ಹುಟ್ಟುತ್ತದೆ. ಅಲ್ಲದೆ ಚುನಾವಣಾ ಆಯೋಗ ನಿಜಕ್ಕು ಪಕ್ಷಾತೀತವಾಗಿದೆಯೇ ಎನ್ನುವ ಪ್ರಶ್ನೆಗಳು ಏಳುತ್ತಿದೆ.
ಮಾರ್ಚ್ 10ರ ಭಾನುವಾರದಂದು ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ನಿಗದಿ ಮಾಡಿದ್ದು ಅಂದಿನಿಂದಲೇ ನೀತಿಸಂಹಿತೆಯನ್ನೂ ಜಾರಿ ಮಾಡಿದೆ. ಚುನಾವಣೆ ದಿನಾಂಕ ಘೋಷಣೆ ವಿಳಂಬವಾಗುತ್ತಿದೆ ಎನ್ನುವ ಮಾತುಗಳು ಬಂದನಂತರ ಆಯೋಗವು ಘೋಷಣೆ ಮಾಡಿದೆ. ಅಲ್ಲದೆ ಮಾರ್ಚ್ 10ರ ಮುಂಚೆಯ ಮೋದಿಯವರು ಕೇವಲ 30 ದಿನಗಳಲ್ಲಿ 157 ಯೋಜನೆಗಳು ಮಿಂಚಿನ ವೇಗದಂತೆ ಉದ್ಘಾಟನೆ ಮಾಡಿದ್ದಾರೆ! ಒಂದು ತಿಂಗಳಿನ ಕಾಲಾವಧಿಯಲ್ಲಿ ದೇಶದಾದ್ಯಂತ 28 ಕಡೆ ಪ್ರವಾಸ ಕೈಗೊಂಡಿದ್ದು ಯೋಜನೆಗಳು, ಶಂಕುಸ್ಥಾಪನೆ, ಉದ್ಘಾಟನೆಗಳ ಭರಾಟೆಯನ್ನು ಮುಗಿಸಿದ್ದಾರೆ. ಫೆಬ್ರವರಿ 8ರಿಂದ ಮಾರ್ಚ್ 9ರ ಮಧ್ಯೆ ಪ್ರಧಾನಿ ಮೋದಿಯವರು ಕೆಲವೇ ಕೆಲವು ಕಿಮಿ ಉದ್ದದ ರಸ್ತೆಗಳನ್ನು ಒಳಗೊಂಡ ಅನೇಕ ವಿಭಾಗಗಳ ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಶಾಲೆಗಳು, ಗ್ಯಾಸ್ ಪೈಪ್‍ಲೈನ್‍ಗಳು, ವಿಮಾನ ನಿಲ್ದಾಣಗಳು, ನೀರಿನ ಸಂಪರ್ಕಗಳು, ನೀರು ಸಂಸ್ಕರಣಾ ಸಂಪರ್ಕಗಳು, ವಿದ್ಯುತ್ ಘಟಕಗಳು, ಮೊಬೈಲ್ ಆಪ್‍ಗಳು ಹೀಗೆ ಉದ್ಘಾಟನೆಗಳ ಮೇಲೆ ಉದ್ಘಾಟನೆಗಳನ್ನು ಕೈಗೊಂಡಿದ್ದಾರೆ. ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರದಲ್ಲಿಯೂ ಸಹ ಯಾವ ಕಾರ್ಯಕ್ರಮವನ್ನು ರದ್ಧು ಮಾಡದೆ ಉದ್ಘಾಟನೆ ಮತ್ತು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಪ್ರಧಾನಿ ಮೋದಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜನವರಿ 8ರಿಂದ ಫೆಬ್ರವರಿ 7ರ ತನಕ ಸುಮಾರು 57 ಯೋಜನೆಗಳ ಉದ್ಘಾಟನೆ ನಡೆಸಿದರೆ, ನಂತರದ ನಾಲ್ಕು ವಾರಗಳಲ್ಲಿ ಕೈಗೊಂಡ ಉದ್ಘಾಟನೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಿದೆ.
ಪ್ರಧಾನಿ ಸಚಿವಾಲಯದ ಹಾಗೂ ಸರ್ಕಾರದ ಅಧಿಕೃತ ಘೋಷಣೆಗಳ ಆಧರಿತವಾಗಿರುವ ಈ ಅಂಕಿಅಂಶವನ್ನು ಗಮನಿಸಿದರೆ ಕೆಲವು ತಮಾಷೆ ಮತ್ತು ವಿಚಿತ್ರ ರೀತಿಯಲ್ಲಿವೆ. ಪ್ರಧಾನಿ ಮೋದಿಯವರು ಕೆಲವು ಹಳೆಯ ಯೋಜನೆಗಳನ್ನು ಹೊಸದಾಗಿ ಮರುಚಾಲನೆಗೊಳಿಸಿದ್ದಾರೆ. ಅವುಗಳಲ್ಲಿ ಈ ತಿಂಗಳ ಆರಂಭದಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ರಷ್ಯಾದ ಸಹಭಾಗಿತ್ವದಲ್ಲಿ ಎಕೆ ರೈಫಲ್‍ಗಳ ಉತ್ಪಾದನಾ ಘಟಕವನ್ನು ಅನಾವರಣಗೊಳಿಸಿದ್ದರು. ಆದರೆ 2007ರಲ್ಲಿ ಉದ್ಘಾಟನೆಗೊಂಡಿದ್ದ ಆ ಘಟಕ 2010ರಲ್ಲಿ ಕಾರ್ಬಿನ್ಸ್, ರೈಫಲ್ಸ್, ಐಎನ್‍ಎಸ್‍ಎಎಸ್ ಮೆಶಿನ್ ಗನ್‍ಗಳ ಉತ್ಪಾದನೆ ನಡೆಸುತ್ತಿತ್ತು ಎಂದು ಸರ್ಕಾರದ ಪ್ರಕಟಣೆಯೇ ಹೇಳಿದೆ.
ಇನ್ನೊಂದು ಉದಾಹರಣೆಯಾಗಿ, ಬಿಹಾರದ ಕರ್ಮಾಲಿಚಕ್‍ನಲ್ಲಿ ನೀರು ಸಂಸ್ಕರಣಾ ಜಾಲಕ್ಕೆ ಫೆ.17ರಂದು ಮೋದಿ ಅಡಿಗಲ್ಲು ಹಾಕಿದರು. ಆದರೆ ಅದೇ ಯೋಜನೆಗೆ ಸ್ವತಃ ಮೋದಿ ಅವರೇ 2017ರ ಅಕ್ಟೋಬರ್‍ನಲ್ಲಿ ಅಡಿಗಲ್ಲು ಹಾಕಿದ್ದರು!! ಪ್ರಧಾನಿಯವರು ಉದ್ಘಾಟಿಸಿದ ಕೆಲವು ಯೋಜನೆಗಳು ಮುನ್ಸಿಪಾಲಿಟಿ ಮಟ್ಟದವೂ ಆಗಿದ್ದವು. ಗಾಜಿಯಾಬಾದ್ ಮುನ್ಸಿಪಾಲಿಟಿಯ ಅಡಿಯಲ್ಲಿನ ಗೋಶಾಲೆಗೆ ಅಡಿಗಲ್ಲನ್ನೂ ಹಾಕಿದ್ದಾರೆ. ಹಲವು ಕಡೆಗೆ ಹೋಗಲು ಸಮಯ ಸಿಗದೆ, ವಿದ್ಯುತ್ ಘಟಕದಂತಹ ಯೋಜನೆಗಳನ್ನು ರಿಮೋಟ್ ಮೂಲಕ 17 ಯೋಜನೆಗಳನ್ನೂ ಮೋದಿ ಉದ್ಘಾಟಿಸಿದ್ದಾರೆ.
ಇಷ್ಟು ಆತುರಾತುರವಾಗಿ 157 ಯೋಜನೆಗಳಿಗೆ ಉದ್ಘಾಟನೆ ಮಾಡಿರುವುದು, ಅಧಿಕೃತ ಪ್ರವಾಸ ರ್ಯಾಲಿಗಳು ಮುಗಿದಿದ್ದು, ಇನ್ನೇನು ಯಾವುದೇ ಯೋಜನೆಗಳು ಉದ್ಘಾಟನೆ ಮಾಡಲು ಬಾಕಿ ಉಳಿದಿಲ್ಲ ಎನ್ನುವ ಹೊತ್ತಿಗೆ ‘ಮೋದಿಯ ಎಲ್ಲಾ ಕಾರ್ಯಗಳು ಮುಗಿಯಲಿ ಎಂದು ಕಾಯುತ್ತಿದ್ದೇವೆ’ ಎನ್ನುವಂತೆ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಹಾಗೂ ನೀತಿ ಸಂಹಿತೆಯನ್ನು ಜಾರಿ ಮಾಡಿರುವುದು ನೋಡಿದರೆ ಆಯೋಗ ನಿಜಕ್ಕೂ ತನ್ನ ಸ್ವಾಯತ್ತತೆಯನ್ನು ಕಾಪಾಡಿಕೊಂಡಿದೆಂiÀi, ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದೆಯಾ ಎನ್ನುವ ಅನುಮಾನ ಕಾಡುತ್ತದೆ. ಅಲ್ಲದೆ ರಕ್ಷಣಾ ಕೊರತೆ ಹಾಗೂ ಸೂಕ್ಷ್ಮ ಪ್ರದೇಶಗಳಂತ ರಾಜ್ಯಗಳಲ್ಲಿ 3-4 ಸುತ್ತಿನಲ್ಲಿ ಚುನಾವಣೆ ನಡೆಯುತ್ತದೆ ಆದರೆ 39 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಒಂದೇ ಸುತ್ತಿನಲ್ಲಿ ಚುನಾವಣೆ ನಡೆಯುತ್ತಿದ್ದು 28 ಕ್ಷೇತ್ರವಿರುವ ಕರ್ನಾಟದಂತ ರಾಜ್ಯದಲ್ಲಿ 2 ಸುತ್ತಿನಲ್ಲಿ ನಡೆಯುತ್ತಿರುವುದು ಹಲವು ಗೊಂದಲ ಮತ್ತು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿದೆ.
ಚುನಾವಣೆ ಆಯೋಗದ ನಿಷ್ಪಕ್ಷಪಾತವನ್ನು ಪ್ರಶ್ನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಿಮಾಚಲ ಪ್ರದೇಶ ಮತ್ತು ಗುಜರಾತ್‍ನಲ್ಲಿ ಒಂದೇ ಸುತ್ತಿನಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಬೇರ್ಪಡಿಸಿದಾಗ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯ ಸ್ಪರ್ಧೆಯನ್ನು ಅನರ್ಹಗೊಳಿಸಿದಾಗಲೂ ಭಾರತೀಯ ಚುನಾವಣಾ ಆಯೋಗದ ಪಕ್ಷಪಾತದ ಧೋರಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಒಟ್ಟಾರೆ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆ ಕಳೆದುಕೊಳ್ಳುತ್ತಿರುವುದರ ಮತ್ತೊಂದು ಗುಣಲಕ್ಷಣವಿದು ಎನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...