Homeಅಂಕಣಗಳುಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

ಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

- Advertisement -
- Advertisement -

ಸರೋವರ್ ಬೆಂಕಿಕೆರೆ |

2014ರ ನಂತರದಿಂದ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎನ್ನುವುದು ಹಳೆಯ ವಿಚಾರ. ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರುಗಳೇ ‘ಪ್ರಜಾತಂತ್ರ ಅಪಾಯದಲ್ಲಿದೆ’ ಎಂದು ಪತ್ರಿಕಾಗೋಷ್ಠಿ ನಡೆಸಿದ ಉದಾಹರಣೆ ದೇಶದಲ್ಲಿ ಇರಲೇ ಇಲ್ಲ. ಇದೀಗ ಭಾರತೀಯ ಚುನಾವಣೆ ಆಯೋಗವು ತನ್ನ ಸ್ವಾಯತ್ತತೆ ಕಳೆದುಕೊಂಡಿತೇ ಎನ್ನುವ ಅನುಮಾನ ಹುಟ್ಟುತ್ತದೆ. ಅಲ್ಲದೆ ಚುನಾವಣಾ ಆಯೋಗ ನಿಜಕ್ಕು ಪಕ್ಷಾತೀತವಾಗಿದೆಯೇ ಎನ್ನುವ ಪ್ರಶ್ನೆಗಳು ಏಳುತ್ತಿದೆ.
ಮಾರ್ಚ್ 10ರ ಭಾನುವಾರದಂದು ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ನಿಗದಿ ಮಾಡಿದ್ದು ಅಂದಿನಿಂದಲೇ ನೀತಿಸಂಹಿತೆಯನ್ನೂ ಜಾರಿ ಮಾಡಿದೆ. ಚುನಾವಣೆ ದಿನಾಂಕ ಘೋಷಣೆ ವಿಳಂಬವಾಗುತ್ತಿದೆ ಎನ್ನುವ ಮಾತುಗಳು ಬಂದನಂತರ ಆಯೋಗವು ಘೋಷಣೆ ಮಾಡಿದೆ. ಅಲ್ಲದೆ ಮಾರ್ಚ್ 10ರ ಮುಂಚೆಯ ಮೋದಿಯವರು ಕೇವಲ 30 ದಿನಗಳಲ್ಲಿ 157 ಯೋಜನೆಗಳು ಮಿಂಚಿನ ವೇಗದಂತೆ ಉದ್ಘಾಟನೆ ಮಾಡಿದ್ದಾರೆ! ಒಂದು ತಿಂಗಳಿನ ಕಾಲಾವಧಿಯಲ್ಲಿ ದೇಶದಾದ್ಯಂತ 28 ಕಡೆ ಪ್ರವಾಸ ಕೈಗೊಂಡಿದ್ದು ಯೋಜನೆಗಳು, ಶಂಕುಸ್ಥಾಪನೆ, ಉದ್ಘಾಟನೆಗಳ ಭರಾಟೆಯನ್ನು ಮುಗಿಸಿದ್ದಾರೆ. ಫೆಬ್ರವರಿ 8ರಿಂದ ಮಾರ್ಚ್ 9ರ ಮಧ್ಯೆ ಪ್ರಧಾನಿ ಮೋದಿಯವರು ಕೆಲವೇ ಕೆಲವು ಕಿಮಿ ಉದ್ದದ ರಸ್ತೆಗಳನ್ನು ಒಳಗೊಂಡ ಅನೇಕ ವಿಭಾಗಗಳ ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಶಾಲೆಗಳು, ಗ್ಯಾಸ್ ಪೈಪ್‍ಲೈನ್‍ಗಳು, ವಿಮಾನ ನಿಲ್ದಾಣಗಳು, ನೀರಿನ ಸಂಪರ್ಕಗಳು, ನೀರು ಸಂಸ್ಕರಣಾ ಸಂಪರ್ಕಗಳು, ವಿದ್ಯುತ್ ಘಟಕಗಳು, ಮೊಬೈಲ್ ಆಪ್‍ಗಳು ಹೀಗೆ ಉದ್ಘಾಟನೆಗಳ ಮೇಲೆ ಉದ್ಘಾಟನೆಗಳನ್ನು ಕೈಗೊಂಡಿದ್ದಾರೆ. ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರದಲ್ಲಿಯೂ ಸಹ ಯಾವ ಕಾರ್ಯಕ್ರಮವನ್ನು ರದ್ಧು ಮಾಡದೆ ಉದ್ಘಾಟನೆ ಮತ್ತು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಪ್ರಧಾನಿ ಮೋದಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜನವರಿ 8ರಿಂದ ಫೆಬ್ರವರಿ 7ರ ತನಕ ಸುಮಾರು 57 ಯೋಜನೆಗಳ ಉದ್ಘಾಟನೆ ನಡೆಸಿದರೆ, ನಂತರದ ನಾಲ್ಕು ವಾರಗಳಲ್ಲಿ ಕೈಗೊಂಡ ಉದ್ಘಾಟನೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಿದೆ.
ಪ್ರಧಾನಿ ಸಚಿವಾಲಯದ ಹಾಗೂ ಸರ್ಕಾರದ ಅಧಿಕೃತ ಘೋಷಣೆಗಳ ಆಧರಿತವಾಗಿರುವ ಈ ಅಂಕಿಅಂಶವನ್ನು ಗಮನಿಸಿದರೆ ಕೆಲವು ತಮಾಷೆ ಮತ್ತು ವಿಚಿತ್ರ ರೀತಿಯಲ್ಲಿವೆ. ಪ್ರಧಾನಿ ಮೋದಿಯವರು ಕೆಲವು ಹಳೆಯ ಯೋಜನೆಗಳನ್ನು ಹೊಸದಾಗಿ ಮರುಚಾಲನೆಗೊಳಿಸಿದ್ದಾರೆ. ಅವುಗಳಲ್ಲಿ ಈ ತಿಂಗಳ ಆರಂಭದಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ರಷ್ಯಾದ ಸಹಭಾಗಿತ್ವದಲ್ಲಿ ಎಕೆ ರೈಫಲ್‍ಗಳ ಉತ್ಪಾದನಾ ಘಟಕವನ್ನು ಅನಾವರಣಗೊಳಿಸಿದ್ದರು. ಆದರೆ 2007ರಲ್ಲಿ ಉದ್ಘಾಟನೆಗೊಂಡಿದ್ದ ಆ ಘಟಕ 2010ರಲ್ಲಿ ಕಾರ್ಬಿನ್ಸ್, ರೈಫಲ್ಸ್, ಐಎನ್‍ಎಸ್‍ಎಎಸ್ ಮೆಶಿನ್ ಗನ್‍ಗಳ ಉತ್ಪಾದನೆ ನಡೆಸುತ್ತಿತ್ತು ಎಂದು ಸರ್ಕಾರದ ಪ್ರಕಟಣೆಯೇ ಹೇಳಿದೆ.
ಇನ್ನೊಂದು ಉದಾಹರಣೆಯಾಗಿ, ಬಿಹಾರದ ಕರ್ಮಾಲಿಚಕ್‍ನಲ್ಲಿ ನೀರು ಸಂಸ್ಕರಣಾ ಜಾಲಕ್ಕೆ ಫೆ.17ರಂದು ಮೋದಿ ಅಡಿಗಲ್ಲು ಹಾಕಿದರು. ಆದರೆ ಅದೇ ಯೋಜನೆಗೆ ಸ್ವತಃ ಮೋದಿ ಅವರೇ 2017ರ ಅಕ್ಟೋಬರ್‍ನಲ್ಲಿ ಅಡಿಗಲ್ಲು ಹಾಕಿದ್ದರು!! ಪ್ರಧಾನಿಯವರು ಉದ್ಘಾಟಿಸಿದ ಕೆಲವು ಯೋಜನೆಗಳು ಮುನ್ಸಿಪಾಲಿಟಿ ಮಟ್ಟದವೂ ಆಗಿದ್ದವು. ಗಾಜಿಯಾಬಾದ್ ಮುನ್ಸಿಪಾಲಿಟಿಯ ಅಡಿಯಲ್ಲಿನ ಗೋಶಾಲೆಗೆ ಅಡಿಗಲ್ಲನ್ನೂ ಹಾಕಿದ್ದಾರೆ. ಹಲವು ಕಡೆಗೆ ಹೋಗಲು ಸಮಯ ಸಿಗದೆ, ವಿದ್ಯುತ್ ಘಟಕದಂತಹ ಯೋಜನೆಗಳನ್ನು ರಿಮೋಟ್ ಮೂಲಕ 17 ಯೋಜನೆಗಳನ್ನೂ ಮೋದಿ ಉದ್ಘಾಟಿಸಿದ್ದಾರೆ.
ಇಷ್ಟು ಆತುರಾತುರವಾಗಿ 157 ಯೋಜನೆಗಳಿಗೆ ಉದ್ಘಾಟನೆ ಮಾಡಿರುವುದು, ಅಧಿಕೃತ ಪ್ರವಾಸ ರ್ಯಾಲಿಗಳು ಮುಗಿದಿದ್ದು, ಇನ್ನೇನು ಯಾವುದೇ ಯೋಜನೆಗಳು ಉದ್ಘಾಟನೆ ಮಾಡಲು ಬಾಕಿ ಉಳಿದಿಲ್ಲ ಎನ್ನುವ ಹೊತ್ತಿಗೆ ‘ಮೋದಿಯ ಎಲ್ಲಾ ಕಾರ್ಯಗಳು ಮುಗಿಯಲಿ ಎಂದು ಕಾಯುತ್ತಿದ್ದೇವೆ’ ಎನ್ನುವಂತೆ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಹಾಗೂ ನೀತಿ ಸಂಹಿತೆಯನ್ನು ಜಾರಿ ಮಾಡಿರುವುದು ನೋಡಿದರೆ ಆಯೋಗ ನಿಜಕ್ಕೂ ತನ್ನ ಸ್ವಾಯತ್ತತೆಯನ್ನು ಕಾಪಾಡಿಕೊಂಡಿದೆಂiÀi, ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದೆಯಾ ಎನ್ನುವ ಅನುಮಾನ ಕಾಡುತ್ತದೆ. ಅಲ್ಲದೆ ರಕ್ಷಣಾ ಕೊರತೆ ಹಾಗೂ ಸೂಕ್ಷ್ಮ ಪ್ರದೇಶಗಳಂತ ರಾಜ್ಯಗಳಲ್ಲಿ 3-4 ಸುತ್ತಿನಲ್ಲಿ ಚುನಾವಣೆ ನಡೆಯುತ್ತದೆ ಆದರೆ 39 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಒಂದೇ ಸುತ್ತಿನಲ್ಲಿ ಚುನಾವಣೆ ನಡೆಯುತ್ತಿದ್ದು 28 ಕ್ಷೇತ್ರವಿರುವ ಕರ್ನಾಟದಂತ ರಾಜ್ಯದಲ್ಲಿ 2 ಸುತ್ತಿನಲ್ಲಿ ನಡೆಯುತ್ತಿರುವುದು ಹಲವು ಗೊಂದಲ ಮತ್ತು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿದೆ.
ಚುನಾವಣೆ ಆಯೋಗದ ನಿಷ್ಪಕ್ಷಪಾತವನ್ನು ಪ್ರಶ್ನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಿಮಾಚಲ ಪ್ರದೇಶ ಮತ್ತು ಗುಜರಾತ್‍ನಲ್ಲಿ ಒಂದೇ ಸುತ್ತಿನಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಬೇರ್ಪಡಿಸಿದಾಗ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯ ಸ್ಪರ್ಧೆಯನ್ನು ಅನರ್ಹಗೊಳಿಸಿದಾಗಲೂ ಭಾರತೀಯ ಚುನಾವಣಾ ಆಯೋಗದ ಪಕ್ಷಪಾತದ ಧೋರಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಒಟ್ಟಾರೆ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆ ಕಳೆದುಕೊಳ್ಳುತ್ತಿರುವುದರ ಮತ್ತೊಂದು ಗುಣಲಕ್ಷಣವಿದು ಎನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...