Homeಅಂಕಣಗಳುಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

ಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

- Advertisement -
- Advertisement -

ಸರೋವರ್ ಬೆಂಕಿಕೆರೆ |

2014ರ ನಂತರದಿಂದ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎನ್ನುವುದು ಹಳೆಯ ವಿಚಾರ. ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರುಗಳೇ ‘ಪ್ರಜಾತಂತ್ರ ಅಪಾಯದಲ್ಲಿದೆ’ ಎಂದು ಪತ್ರಿಕಾಗೋಷ್ಠಿ ನಡೆಸಿದ ಉದಾಹರಣೆ ದೇಶದಲ್ಲಿ ಇರಲೇ ಇಲ್ಲ. ಇದೀಗ ಭಾರತೀಯ ಚುನಾವಣೆ ಆಯೋಗವು ತನ್ನ ಸ್ವಾಯತ್ತತೆ ಕಳೆದುಕೊಂಡಿತೇ ಎನ್ನುವ ಅನುಮಾನ ಹುಟ್ಟುತ್ತದೆ. ಅಲ್ಲದೆ ಚುನಾವಣಾ ಆಯೋಗ ನಿಜಕ್ಕು ಪಕ್ಷಾತೀತವಾಗಿದೆಯೇ ಎನ್ನುವ ಪ್ರಶ್ನೆಗಳು ಏಳುತ್ತಿದೆ.
ಮಾರ್ಚ್ 10ರ ಭಾನುವಾರದಂದು ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ನಿಗದಿ ಮಾಡಿದ್ದು ಅಂದಿನಿಂದಲೇ ನೀತಿಸಂಹಿತೆಯನ್ನೂ ಜಾರಿ ಮಾಡಿದೆ. ಚುನಾವಣೆ ದಿನಾಂಕ ಘೋಷಣೆ ವಿಳಂಬವಾಗುತ್ತಿದೆ ಎನ್ನುವ ಮಾತುಗಳು ಬಂದನಂತರ ಆಯೋಗವು ಘೋಷಣೆ ಮಾಡಿದೆ. ಅಲ್ಲದೆ ಮಾರ್ಚ್ 10ರ ಮುಂಚೆಯ ಮೋದಿಯವರು ಕೇವಲ 30 ದಿನಗಳಲ್ಲಿ 157 ಯೋಜನೆಗಳು ಮಿಂಚಿನ ವೇಗದಂತೆ ಉದ್ಘಾಟನೆ ಮಾಡಿದ್ದಾರೆ! ಒಂದು ತಿಂಗಳಿನ ಕಾಲಾವಧಿಯಲ್ಲಿ ದೇಶದಾದ್ಯಂತ 28 ಕಡೆ ಪ್ರವಾಸ ಕೈಗೊಂಡಿದ್ದು ಯೋಜನೆಗಳು, ಶಂಕುಸ್ಥಾಪನೆ, ಉದ್ಘಾಟನೆಗಳ ಭರಾಟೆಯನ್ನು ಮುಗಿಸಿದ್ದಾರೆ. ಫೆಬ್ರವರಿ 8ರಿಂದ ಮಾರ್ಚ್ 9ರ ಮಧ್ಯೆ ಪ್ರಧಾನಿ ಮೋದಿಯವರು ಕೆಲವೇ ಕೆಲವು ಕಿಮಿ ಉದ್ದದ ರಸ್ತೆಗಳನ್ನು ಒಳಗೊಂಡ ಅನೇಕ ವಿಭಾಗಗಳ ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಶಾಲೆಗಳು, ಗ್ಯಾಸ್ ಪೈಪ್‍ಲೈನ್‍ಗಳು, ವಿಮಾನ ನಿಲ್ದಾಣಗಳು, ನೀರಿನ ಸಂಪರ್ಕಗಳು, ನೀರು ಸಂಸ್ಕರಣಾ ಸಂಪರ್ಕಗಳು, ವಿದ್ಯುತ್ ಘಟಕಗಳು, ಮೊಬೈಲ್ ಆಪ್‍ಗಳು ಹೀಗೆ ಉದ್ಘಾಟನೆಗಳ ಮೇಲೆ ಉದ್ಘಾಟನೆಗಳನ್ನು ಕೈಗೊಂಡಿದ್ದಾರೆ. ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರದಲ್ಲಿಯೂ ಸಹ ಯಾವ ಕಾರ್ಯಕ್ರಮವನ್ನು ರದ್ಧು ಮಾಡದೆ ಉದ್ಘಾಟನೆ ಮತ್ತು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಪ್ರಧಾನಿ ಮೋದಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜನವರಿ 8ರಿಂದ ಫೆಬ್ರವರಿ 7ರ ತನಕ ಸುಮಾರು 57 ಯೋಜನೆಗಳ ಉದ್ಘಾಟನೆ ನಡೆಸಿದರೆ, ನಂತರದ ನಾಲ್ಕು ವಾರಗಳಲ್ಲಿ ಕೈಗೊಂಡ ಉದ್ಘಾಟನೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಿದೆ.
ಪ್ರಧಾನಿ ಸಚಿವಾಲಯದ ಹಾಗೂ ಸರ್ಕಾರದ ಅಧಿಕೃತ ಘೋಷಣೆಗಳ ಆಧರಿತವಾಗಿರುವ ಈ ಅಂಕಿಅಂಶವನ್ನು ಗಮನಿಸಿದರೆ ಕೆಲವು ತಮಾಷೆ ಮತ್ತು ವಿಚಿತ್ರ ರೀತಿಯಲ್ಲಿವೆ. ಪ್ರಧಾನಿ ಮೋದಿಯವರು ಕೆಲವು ಹಳೆಯ ಯೋಜನೆಗಳನ್ನು ಹೊಸದಾಗಿ ಮರುಚಾಲನೆಗೊಳಿಸಿದ್ದಾರೆ. ಅವುಗಳಲ್ಲಿ ಈ ತಿಂಗಳ ಆರಂಭದಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ರಷ್ಯಾದ ಸಹಭಾಗಿತ್ವದಲ್ಲಿ ಎಕೆ ರೈಫಲ್‍ಗಳ ಉತ್ಪಾದನಾ ಘಟಕವನ್ನು ಅನಾವರಣಗೊಳಿಸಿದ್ದರು. ಆದರೆ 2007ರಲ್ಲಿ ಉದ್ಘಾಟನೆಗೊಂಡಿದ್ದ ಆ ಘಟಕ 2010ರಲ್ಲಿ ಕಾರ್ಬಿನ್ಸ್, ರೈಫಲ್ಸ್, ಐಎನ್‍ಎಸ್‍ಎಎಸ್ ಮೆಶಿನ್ ಗನ್‍ಗಳ ಉತ್ಪಾದನೆ ನಡೆಸುತ್ತಿತ್ತು ಎಂದು ಸರ್ಕಾರದ ಪ್ರಕಟಣೆಯೇ ಹೇಳಿದೆ.
ಇನ್ನೊಂದು ಉದಾಹರಣೆಯಾಗಿ, ಬಿಹಾರದ ಕರ್ಮಾಲಿಚಕ್‍ನಲ್ಲಿ ನೀರು ಸಂಸ್ಕರಣಾ ಜಾಲಕ್ಕೆ ಫೆ.17ರಂದು ಮೋದಿ ಅಡಿಗಲ್ಲು ಹಾಕಿದರು. ಆದರೆ ಅದೇ ಯೋಜನೆಗೆ ಸ್ವತಃ ಮೋದಿ ಅವರೇ 2017ರ ಅಕ್ಟೋಬರ್‍ನಲ್ಲಿ ಅಡಿಗಲ್ಲು ಹಾಕಿದ್ದರು!! ಪ್ರಧಾನಿಯವರು ಉದ್ಘಾಟಿಸಿದ ಕೆಲವು ಯೋಜನೆಗಳು ಮುನ್ಸಿಪಾಲಿಟಿ ಮಟ್ಟದವೂ ಆಗಿದ್ದವು. ಗಾಜಿಯಾಬಾದ್ ಮುನ್ಸಿಪಾಲಿಟಿಯ ಅಡಿಯಲ್ಲಿನ ಗೋಶಾಲೆಗೆ ಅಡಿಗಲ್ಲನ್ನೂ ಹಾಕಿದ್ದಾರೆ. ಹಲವು ಕಡೆಗೆ ಹೋಗಲು ಸಮಯ ಸಿಗದೆ, ವಿದ್ಯುತ್ ಘಟಕದಂತಹ ಯೋಜನೆಗಳನ್ನು ರಿಮೋಟ್ ಮೂಲಕ 17 ಯೋಜನೆಗಳನ್ನೂ ಮೋದಿ ಉದ್ಘಾಟಿಸಿದ್ದಾರೆ.
ಇಷ್ಟು ಆತುರಾತುರವಾಗಿ 157 ಯೋಜನೆಗಳಿಗೆ ಉದ್ಘಾಟನೆ ಮಾಡಿರುವುದು, ಅಧಿಕೃತ ಪ್ರವಾಸ ರ್ಯಾಲಿಗಳು ಮುಗಿದಿದ್ದು, ಇನ್ನೇನು ಯಾವುದೇ ಯೋಜನೆಗಳು ಉದ್ಘಾಟನೆ ಮಾಡಲು ಬಾಕಿ ಉಳಿದಿಲ್ಲ ಎನ್ನುವ ಹೊತ್ತಿಗೆ ‘ಮೋದಿಯ ಎಲ್ಲಾ ಕಾರ್ಯಗಳು ಮುಗಿಯಲಿ ಎಂದು ಕಾಯುತ್ತಿದ್ದೇವೆ’ ಎನ್ನುವಂತೆ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಹಾಗೂ ನೀತಿ ಸಂಹಿತೆಯನ್ನು ಜಾರಿ ಮಾಡಿರುವುದು ನೋಡಿದರೆ ಆಯೋಗ ನಿಜಕ್ಕೂ ತನ್ನ ಸ್ವಾಯತ್ತತೆಯನ್ನು ಕಾಪಾಡಿಕೊಂಡಿದೆಂiÀi, ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದೆಯಾ ಎನ್ನುವ ಅನುಮಾನ ಕಾಡುತ್ತದೆ. ಅಲ್ಲದೆ ರಕ್ಷಣಾ ಕೊರತೆ ಹಾಗೂ ಸೂಕ್ಷ್ಮ ಪ್ರದೇಶಗಳಂತ ರಾಜ್ಯಗಳಲ್ಲಿ 3-4 ಸುತ್ತಿನಲ್ಲಿ ಚುನಾವಣೆ ನಡೆಯುತ್ತದೆ ಆದರೆ 39 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಒಂದೇ ಸುತ್ತಿನಲ್ಲಿ ಚುನಾವಣೆ ನಡೆಯುತ್ತಿದ್ದು 28 ಕ್ಷೇತ್ರವಿರುವ ಕರ್ನಾಟದಂತ ರಾಜ್ಯದಲ್ಲಿ 2 ಸುತ್ತಿನಲ್ಲಿ ನಡೆಯುತ್ತಿರುವುದು ಹಲವು ಗೊಂದಲ ಮತ್ತು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿದೆ.
ಚುನಾವಣೆ ಆಯೋಗದ ನಿಷ್ಪಕ್ಷಪಾತವನ್ನು ಪ್ರಶ್ನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಿಮಾಚಲ ಪ್ರದೇಶ ಮತ್ತು ಗುಜರಾತ್‍ನಲ್ಲಿ ಒಂದೇ ಸುತ್ತಿನಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಬೇರ್ಪಡಿಸಿದಾಗ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯ ಸ್ಪರ್ಧೆಯನ್ನು ಅನರ್ಹಗೊಳಿಸಿದಾಗಲೂ ಭಾರತೀಯ ಚುನಾವಣಾ ಆಯೋಗದ ಪಕ್ಷಪಾತದ ಧೋರಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಒಟ್ಟಾರೆ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆ ಕಳೆದುಕೊಳ್ಳುತ್ತಿರುವುದರ ಮತ್ತೊಂದು ಗುಣಲಕ್ಷಣವಿದು ಎನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...