Homeಅಂಕಣಗಳುಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

ಈ ಸಲ ಚುನಾವಣಾ ಆಯೋಗದ ಪ್ರಾಮಾಣಿಕತೆ ಎಷ್ಟಿರಬಹುದು?

- Advertisement -
- Advertisement -

ಸರೋವರ್ ಬೆಂಕಿಕೆರೆ |

2014ರ ನಂತರದಿಂದ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎನ್ನುವುದು ಹಳೆಯ ವಿಚಾರ. ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರುಗಳೇ ‘ಪ್ರಜಾತಂತ್ರ ಅಪಾಯದಲ್ಲಿದೆ’ ಎಂದು ಪತ್ರಿಕಾಗೋಷ್ಠಿ ನಡೆಸಿದ ಉದಾಹರಣೆ ದೇಶದಲ್ಲಿ ಇರಲೇ ಇಲ್ಲ. ಇದೀಗ ಭಾರತೀಯ ಚುನಾವಣೆ ಆಯೋಗವು ತನ್ನ ಸ್ವಾಯತ್ತತೆ ಕಳೆದುಕೊಂಡಿತೇ ಎನ್ನುವ ಅನುಮಾನ ಹುಟ್ಟುತ್ತದೆ. ಅಲ್ಲದೆ ಚುನಾವಣಾ ಆಯೋಗ ನಿಜಕ್ಕು ಪಕ್ಷಾತೀತವಾಗಿದೆಯೇ ಎನ್ನುವ ಪ್ರಶ್ನೆಗಳು ಏಳುತ್ತಿದೆ.
ಮಾರ್ಚ್ 10ರ ಭಾನುವಾರದಂದು ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ನಿಗದಿ ಮಾಡಿದ್ದು ಅಂದಿನಿಂದಲೇ ನೀತಿಸಂಹಿತೆಯನ್ನೂ ಜಾರಿ ಮಾಡಿದೆ. ಚುನಾವಣೆ ದಿನಾಂಕ ಘೋಷಣೆ ವಿಳಂಬವಾಗುತ್ತಿದೆ ಎನ್ನುವ ಮಾತುಗಳು ಬಂದನಂತರ ಆಯೋಗವು ಘೋಷಣೆ ಮಾಡಿದೆ. ಅಲ್ಲದೆ ಮಾರ್ಚ್ 10ರ ಮುಂಚೆಯ ಮೋದಿಯವರು ಕೇವಲ 30 ದಿನಗಳಲ್ಲಿ 157 ಯೋಜನೆಗಳು ಮಿಂಚಿನ ವೇಗದಂತೆ ಉದ್ಘಾಟನೆ ಮಾಡಿದ್ದಾರೆ! ಒಂದು ತಿಂಗಳಿನ ಕಾಲಾವಧಿಯಲ್ಲಿ ದೇಶದಾದ್ಯಂತ 28 ಕಡೆ ಪ್ರವಾಸ ಕೈಗೊಂಡಿದ್ದು ಯೋಜನೆಗಳು, ಶಂಕುಸ್ಥಾಪನೆ, ಉದ್ಘಾಟನೆಗಳ ಭರಾಟೆಯನ್ನು ಮುಗಿಸಿದ್ದಾರೆ. ಫೆಬ್ರವರಿ 8ರಿಂದ ಮಾರ್ಚ್ 9ರ ಮಧ್ಯೆ ಪ್ರಧಾನಿ ಮೋದಿಯವರು ಕೆಲವೇ ಕೆಲವು ಕಿಮಿ ಉದ್ದದ ರಸ್ತೆಗಳನ್ನು ಒಳಗೊಂಡ ಅನೇಕ ವಿಭಾಗಗಳ ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಶಾಲೆಗಳು, ಗ್ಯಾಸ್ ಪೈಪ್‍ಲೈನ್‍ಗಳು, ವಿಮಾನ ನಿಲ್ದಾಣಗಳು, ನೀರಿನ ಸಂಪರ್ಕಗಳು, ನೀರು ಸಂಸ್ಕರಣಾ ಸಂಪರ್ಕಗಳು, ವಿದ್ಯುತ್ ಘಟಕಗಳು, ಮೊಬೈಲ್ ಆಪ್‍ಗಳು ಹೀಗೆ ಉದ್ಘಾಟನೆಗಳ ಮೇಲೆ ಉದ್ಘಾಟನೆಗಳನ್ನು ಕೈಗೊಂಡಿದ್ದಾರೆ. ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರದಲ್ಲಿಯೂ ಸಹ ಯಾವ ಕಾರ್ಯಕ್ರಮವನ್ನು ರದ್ಧು ಮಾಡದೆ ಉದ್ಘಾಟನೆ ಮತ್ತು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಪ್ರಧಾನಿ ಮೋದಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಜನವರಿ 8ರಿಂದ ಫೆಬ್ರವರಿ 7ರ ತನಕ ಸುಮಾರು 57 ಯೋಜನೆಗಳ ಉದ್ಘಾಟನೆ ನಡೆಸಿದರೆ, ನಂತರದ ನಾಲ್ಕು ವಾರಗಳಲ್ಲಿ ಕೈಗೊಂಡ ಉದ್ಘಾಟನೆಗಳ ಸಂಖ್ಯೆ ಮೂರು ಪಟ್ಟು ಹೆಚ್ಚಿದೆ.
ಪ್ರಧಾನಿ ಸಚಿವಾಲಯದ ಹಾಗೂ ಸರ್ಕಾರದ ಅಧಿಕೃತ ಘೋಷಣೆಗಳ ಆಧರಿತವಾಗಿರುವ ಈ ಅಂಕಿಅಂಶವನ್ನು ಗಮನಿಸಿದರೆ ಕೆಲವು ತಮಾಷೆ ಮತ್ತು ವಿಚಿತ್ರ ರೀತಿಯಲ್ಲಿವೆ. ಪ್ರಧಾನಿ ಮೋದಿಯವರು ಕೆಲವು ಹಳೆಯ ಯೋಜನೆಗಳನ್ನು ಹೊಸದಾಗಿ ಮರುಚಾಲನೆಗೊಳಿಸಿದ್ದಾರೆ. ಅವುಗಳಲ್ಲಿ ಈ ತಿಂಗಳ ಆರಂಭದಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ರಷ್ಯಾದ ಸಹಭಾಗಿತ್ವದಲ್ಲಿ ಎಕೆ ರೈಫಲ್‍ಗಳ ಉತ್ಪಾದನಾ ಘಟಕವನ್ನು ಅನಾವರಣಗೊಳಿಸಿದ್ದರು. ಆದರೆ 2007ರಲ್ಲಿ ಉದ್ಘಾಟನೆಗೊಂಡಿದ್ದ ಆ ಘಟಕ 2010ರಲ್ಲಿ ಕಾರ್ಬಿನ್ಸ್, ರೈಫಲ್ಸ್, ಐಎನ್‍ಎಸ್‍ಎಎಸ್ ಮೆಶಿನ್ ಗನ್‍ಗಳ ಉತ್ಪಾದನೆ ನಡೆಸುತ್ತಿತ್ತು ಎಂದು ಸರ್ಕಾರದ ಪ್ರಕಟಣೆಯೇ ಹೇಳಿದೆ.
ಇನ್ನೊಂದು ಉದಾಹರಣೆಯಾಗಿ, ಬಿಹಾರದ ಕರ್ಮಾಲಿಚಕ್‍ನಲ್ಲಿ ನೀರು ಸಂಸ್ಕರಣಾ ಜಾಲಕ್ಕೆ ಫೆ.17ರಂದು ಮೋದಿ ಅಡಿಗಲ್ಲು ಹಾಕಿದರು. ಆದರೆ ಅದೇ ಯೋಜನೆಗೆ ಸ್ವತಃ ಮೋದಿ ಅವರೇ 2017ರ ಅಕ್ಟೋಬರ್‍ನಲ್ಲಿ ಅಡಿಗಲ್ಲು ಹಾಕಿದ್ದರು!! ಪ್ರಧಾನಿಯವರು ಉದ್ಘಾಟಿಸಿದ ಕೆಲವು ಯೋಜನೆಗಳು ಮುನ್ಸಿಪಾಲಿಟಿ ಮಟ್ಟದವೂ ಆಗಿದ್ದವು. ಗಾಜಿಯಾಬಾದ್ ಮುನ್ಸಿಪಾಲಿಟಿಯ ಅಡಿಯಲ್ಲಿನ ಗೋಶಾಲೆಗೆ ಅಡಿಗಲ್ಲನ್ನೂ ಹಾಕಿದ್ದಾರೆ. ಹಲವು ಕಡೆಗೆ ಹೋಗಲು ಸಮಯ ಸಿಗದೆ, ವಿದ್ಯುತ್ ಘಟಕದಂತಹ ಯೋಜನೆಗಳನ್ನು ರಿಮೋಟ್ ಮೂಲಕ 17 ಯೋಜನೆಗಳನ್ನೂ ಮೋದಿ ಉದ್ಘಾಟಿಸಿದ್ದಾರೆ.
ಇಷ್ಟು ಆತುರಾತುರವಾಗಿ 157 ಯೋಜನೆಗಳಿಗೆ ಉದ್ಘಾಟನೆ ಮಾಡಿರುವುದು, ಅಧಿಕೃತ ಪ್ರವಾಸ ರ್ಯಾಲಿಗಳು ಮುಗಿದಿದ್ದು, ಇನ್ನೇನು ಯಾವುದೇ ಯೋಜನೆಗಳು ಉದ್ಘಾಟನೆ ಮಾಡಲು ಬಾಕಿ ಉಳಿದಿಲ್ಲ ಎನ್ನುವ ಹೊತ್ತಿಗೆ ‘ಮೋದಿಯ ಎಲ್ಲಾ ಕಾರ್ಯಗಳು ಮುಗಿಯಲಿ ಎಂದು ಕಾಯುತ್ತಿದ್ದೇವೆ’ ಎನ್ನುವಂತೆ ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಹಾಗೂ ನೀತಿ ಸಂಹಿತೆಯನ್ನು ಜಾರಿ ಮಾಡಿರುವುದು ನೋಡಿದರೆ ಆಯೋಗ ನಿಜಕ್ಕೂ ತನ್ನ ಸ್ವಾಯತ್ತತೆಯನ್ನು ಕಾಪಾಡಿಕೊಂಡಿದೆಂiÀi, ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದೆಯಾ ಎನ್ನುವ ಅನುಮಾನ ಕಾಡುತ್ತದೆ. ಅಲ್ಲದೆ ರಕ್ಷಣಾ ಕೊರತೆ ಹಾಗೂ ಸೂಕ್ಷ್ಮ ಪ್ರದೇಶಗಳಂತ ರಾಜ್ಯಗಳಲ್ಲಿ 3-4 ಸುತ್ತಿನಲ್ಲಿ ಚುನಾವಣೆ ನಡೆಯುತ್ತದೆ ಆದರೆ 39 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಒಂದೇ ಸುತ್ತಿನಲ್ಲಿ ಚುನಾವಣೆ ನಡೆಯುತ್ತಿದ್ದು 28 ಕ್ಷೇತ್ರವಿರುವ ಕರ್ನಾಟದಂತ ರಾಜ್ಯದಲ್ಲಿ 2 ಸುತ್ತಿನಲ್ಲಿ ನಡೆಯುತ್ತಿರುವುದು ಹಲವು ಗೊಂದಲ ಮತ್ತು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿದೆ.
ಚುನಾವಣೆ ಆಯೋಗದ ನಿಷ್ಪಕ್ಷಪಾತವನ್ನು ಪ್ರಶ್ನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಿಮಾಚಲ ಪ್ರದೇಶ ಮತ್ತು ಗುಜರಾತ್‍ನಲ್ಲಿ ಒಂದೇ ಸುತ್ತಿನಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಬೇರ್ಪಡಿಸಿದಾಗ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯ ಸ್ಪರ್ಧೆಯನ್ನು ಅನರ್ಹಗೊಳಿಸಿದಾಗಲೂ ಭಾರತೀಯ ಚುನಾವಣಾ ಆಯೋಗದ ಪಕ್ಷಪಾತದ ಧೋರಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಒಟ್ಟಾರೆ ಸಾಂವಿಧಾನಿಕ ಸಂಸ್ಥೆಗಳು ತನ್ನ ಸ್ವಾಯತ್ತತೆ ಕಳೆದುಕೊಳ್ಳುತ್ತಿರುವುದರ ಮತ್ತೊಂದು ಗುಣಲಕ್ಷಣವಿದು ಎನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...