Homeಮುಖಪುಟತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

9 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದಿನಿಂದ ಮನೆ ಮನೆ ಗಣತಿ

- Advertisement -
- Advertisement -

ತಮಿಳುನಾಡಿನ ಆಡಳಿತರೂಢ ಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ನಡುವೆಯೇ ಮಂಗಳವಾರದಿಂದ (ನ.4, 2025) ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಮುಂದಾಗಿದೆ.

ವರದಿಗಳ ಪ್ರಕಾರ, 9 ರಾಜ್ಯಗಳಾದ ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್-ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ಪುದುಚ್ಚೇರಿಗಳಲ್ಲಿ ಇಂದಿನಿಂದ ಮನೆ ಮನೆ ಗಣತಿ ಪ್ರಾರಂಭಗೊಳ್ಳಲಿದೆ.

ಸುಮಾರು 51 ಕೋಟಿ ಮತದಾರರು ಈ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಳಗೊಳ್ಳಲಿದ್ದಾರೆ. ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಕರಡು ಪಟ್ಟಿಯನ್ನು ಡಿಸೆಂಬರ್ 9, 2025ರಂದು ಮತ್ತು ಅಂತಿಮ ಪಟ್ಟಿಯನ್ನು ಫೆಬ್ರವರಿ 7, 2026 ರಂದು ಪ್ರಕಟಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದ ಆಡಳಿತ ಪಕ್ಷಗಳು ಮತ್ತು ಅದರ ಮಿತ್ರ ಪಕ್ಷಗಳು ಎಸ್‌ಐಆರ್‌ ಅನ್ನು ತೀವ್ರವಾಗಿ ವಿರೋಧಿಸಿವೆ. ತಮಿಳುನಾಡಿನ ಆಡಳಿತರೂಢ ಡಿಎಂಕೆ ಸಿಎಂ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ನವೆಂಬರ್ 2,2025ರಂದು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ನಡೆಸಿದೆ. ಈ ಸಭೆಯಲ್ಲಿ 49 ಪಕ್ಷಗಳು ಭಾಗವಹಿಸಿತ್ತು.

ಡಿಎಂಕೆ ಈಗಾಗಲೇ ಎಸ್‌ಐಆರ್ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇರಳ ಮತ್ತು ಪಶ್ಚಿಮ ಬಂಗಾಳದ ಆಡಳಿತ ಪಕ್ಷಗಳು ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.

ಗಮನಾರ್ಹವಾಗಿ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಮುಂದಿನ ವರ್ಷ ಅಸ್ಸಾಂನಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲಿ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪೌರತ್ವ ಪರಿಶೀಲನಾ ಕಾರ್ಯವು ಈಗಾಗಲೇ ನಡೆಯುತ್ತಿರುವುದರಿಂದ, ಪ್ರತ್ಯೇಕವಾಗಿ  ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಅಸ್ಸಾಂ ರಾಜ್ಯವು ಪೌರತ್ವ ಕಾಯ್ದೆಯ ಒಂದು ವಿಶಿಷ್ಟ ನಿಬಂಧನೆಯ ಅಡಿಯಲ್ಲಿ ಬರುತ್ತದೆ.

“ಪೌರತ್ವ ಕಾಯ್ದೆಯಡಿಯಲ್ಲಿ, ಅಸ್ಸಾಂನಲ್ಲಿ ಪೌರತ್ವಕ್ಕಾಗಿ ಪ್ರತ್ಯೇಕ ನಿಬಂಧನೆಗಳಿವೆ. ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪೌರತ್ವವನ್ನು ಪರಿಶೀಲಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಜೂನ್ 24ರ ಎಸ್‌ಐಆರ್ ಆದೇಶವು ಇಡೀ ದೇಶಕ್ಕೆ ಅನ್ವಯಿಸುತ್ತದೆ. ಆದರೂ, ಅದು ಅಸ್ಸಾಂಗೆ ಅನ್ವಯಿಸುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಕ್ಟೋಬರ್ 27ರಂದು ಎಸ್‌ಐಆರ್‌ನ ಎರಡನೇ ಹಂತವನ್ನು ಘೋಷಿಸುವಾಗ ಹೇಳಿದ್ದಾರೆ.

ಈಗ ನಡೆಯುತ್ತಿರುವುದು ಸ್ವಾತಂತ್ರ್ಯ ನಂತರದ 9ನೇ ಎಸ್‌ಐಆರ್ ಪ್ರಕ್ರಿಯೆಯಾಗಿದೆ. ಕೊನೆಯದಾಗಿ 2002-04 ರಲ್ಲಿ ಎಸ್‌ಐಆರ್ ನಡೆಸಲಾಗಿತ್ತು. ಈಗ ಎಸ್‌ಐಆರ್ ಘೋಷಣೆಯಾಗಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2002-04ರ ಮತದಾರರ ಪಟ್ಟಿಯನ್ನು ಮಾನದಂಡವಾಗಿ (ಕಟ್‌ ಆಫ್‌ ಆಗಿ) ಪರಿಗಣಿಸುವ ಸಾಧ್ಯತೆ ಇದೆ. ಏಕೆಂದರೆ, ಈ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆ ವರ್ಷದಲ್ಲಿ ಕೊನೆಯ ಎಸ್‌ಐಆರ್ ನಡೆದಿತ್ತು. ಬಿಹಾರದ ಎಸ್‌ಐಆರ್ ವೇಳೆ 2003ರ ಪಟ್ಟಿಯನ್ನು ಪರಿಗಣಿಸಲಾಗಿತ್ತು.

ಬಿಹಾರದಲ್ಲಿ ಎಸ್‌ಐಆರ್ ವೇಳೆ ಮತದಾರರು ದಾಖಲೆಗಳನ್ನು ಸಲ್ಲಿಸಿ ತಮ್ಮ ಗುರುತನ್ನು ಸಾಬೀತುಪಡಿಸಬೇಕಿತ್ತು. ಆದರೆ, ಎರಡನೇ ಹಂತದ ಎಸ್‌ಐಆರ್‌ನಲ್ಲಿ ಗಣತಿ ಸಮಯದಲ್ಲಿ ದಾಖಲೆ ಸಲ್ಲಿಸುವ ಅಗತ್ಯ ಇಲ್ಲ. ಮತದಾರರ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಕಳುಹಿಸಿದರೆ ಮಾತ್ರ ದಾಖಲೆಗಳನ್ನು ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಬಿಹಾರದ ಎಸ್‌ಐಆರ್‌ನಲ್ಲಿ ಮರಣ ಹೊಂದಿದವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಮತ್ತು ಎರಡೆರಡು ಬಾರಿ ನೋಂದಣಿಯಾದವರು ಎಂಬ ಕಾರಣಗಳನ್ನು ನೀಡಿ ಸುಮಾರು 68 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಪರೋಕ್ಷವಾಗಿ ಎನ್‌ಆರ್‌ಸಿ ಮಾಡುತ್ತಿದೆ ಎಂದು ಆರೋಪಿಸಿವೆ.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...