Homeಮುಖಪುಟತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

9 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದಿನಿಂದ ಮನೆ ಮನೆ ಗಣತಿ

- Advertisement -
- Advertisement -

ತಮಿಳುನಾಡಿನ ಆಡಳಿತರೂಢ ಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ನಡುವೆಯೇ ಮಂಗಳವಾರದಿಂದ (ನ.4, 2025) ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಮುಂದಾಗಿದೆ.

ವರದಿಗಳ ಪ್ರಕಾರ, 9 ರಾಜ್ಯಗಳಾದ ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್-ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ಪುದುಚ್ಚೇರಿಗಳಲ್ಲಿ ಇಂದಿನಿಂದ ಮನೆ ಮನೆ ಗಣತಿ ಪ್ರಾರಂಭಗೊಳ್ಳಲಿದೆ.

ಸುಮಾರು 51 ಕೋಟಿ ಮತದಾರರು ಈ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಳಗೊಳ್ಳಲಿದ್ದಾರೆ. ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಕರಡು ಪಟ್ಟಿಯನ್ನು ಡಿಸೆಂಬರ್ 9, 2025ರಂದು ಮತ್ತು ಅಂತಿಮ ಪಟ್ಟಿಯನ್ನು ಫೆಬ್ರವರಿ 7, 2026 ರಂದು ಪ್ರಕಟಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದ ಆಡಳಿತ ಪಕ್ಷಗಳು ಮತ್ತು ಅದರ ಮಿತ್ರ ಪಕ್ಷಗಳು ಎಸ್‌ಐಆರ್‌ ಅನ್ನು ತೀವ್ರವಾಗಿ ವಿರೋಧಿಸಿವೆ. ತಮಿಳುನಾಡಿನ ಆಡಳಿತರೂಢ ಡಿಎಂಕೆ ಸಿಎಂ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ನವೆಂಬರ್ 2,2025ರಂದು ಎಸ್‌ಐಆರ್ ವಿರುದ್ದ ಸರ್ವಪಕ್ಷ ಸಭೆ ನಡೆಸಿದೆ. ಈ ಸಭೆಯಲ್ಲಿ 49 ಪಕ್ಷಗಳು ಭಾಗವಹಿಸಿತ್ತು.

ಡಿಎಂಕೆ ಈಗಾಗಲೇ ಎಸ್‌ಐಆರ್ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇರಳ ಮತ್ತು ಪಶ್ಚಿಮ ಬಂಗಾಳದ ಆಡಳಿತ ಪಕ್ಷಗಳು ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.

ಗಮನಾರ್ಹವಾಗಿ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಮುಂದಿನ ವರ್ಷ ಅಸ್ಸಾಂನಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲಿ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪೌರತ್ವ ಪರಿಶೀಲನಾ ಕಾರ್ಯವು ಈಗಾಗಲೇ ನಡೆಯುತ್ತಿರುವುದರಿಂದ, ಪ್ರತ್ಯೇಕವಾಗಿ  ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಅಸ್ಸಾಂ ರಾಜ್ಯವು ಪೌರತ್ವ ಕಾಯ್ದೆಯ ಒಂದು ವಿಶಿಷ್ಟ ನಿಬಂಧನೆಯ ಅಡಿಯಲ್ಲಿ ಬರುತ್ತದೆ.

“ಪೌರತ್ವ ಕಾಯ್ದೆಯಡಿಯಲ್ಲಿ, ಅಸ್ಸಾಂನಲ್ಲಿ ಪೌರತ್ವಕ್ಕಾಗಿ ಪ್ರತ್ಯೇಕ ನಿಬಂಧನೆಗಳಿವೆ. ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪೌರತ್ವವನ್ನು ಪರಿಶೀಲಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಜೂನ್ 24ರ ಎಸ್‌ಐಆರ್ ಆದೇಶವು ಇಡೀ ದೇಶಕ್ಕೆ ಅನ್ವಯಿಸುತ್ತದೆ. ಆದರೂ, ಅದು ಅಸ್ಸಾಂಗೆ ಅನ್ವಯಿಸುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಕ್ಟೋಬರ್ 27ರಂದು ಎಸ್‌ಐಆರ್‌ನ ಎರಡನೇ ಹಂತವನ್ನು ಘೋಷಿಸುವಾಗ ಹೇಳಿದ್ದಾರೆ.

ಈಗ ನಡೆಯುತ್ತಿರುವುದು ಸ್ವಾತಂತ್ರ್ಯ ನಂತರದ 9ನೇ ಎಸ್‌ಐಆರ್ ಪ್ರಕ್ರಿಯೆಯಾಗಿದೆ. ಕೊನೆಯದಾಗಿ 2002-04 ರಲ್ಲಿ ಎಸ್‌ಐಆರ್ ನಡೆಸಲಾಗಿತ್ತು. ಈಗ ಎಸ್‌ಐಆರ್ ಘೋಷಣೆಯಾಗಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2002-04ರ ಮತದಾರರ ಪಟ್ಟಿಯನ್ನು ಮಾನದಂಡವಾಗಿ (ಕಟ್‌ ಆಫ್‌ ಆಗಿ) ಪರಿಗಣಿಸುವ ಸಾಧ್ಯತೆ ಇದೆ. ಏಕೆಂದರೆ, ಈ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆ ವರ್ಷದಲ್ಲಿ ಕೊನೆಯ ಎಸ್‌ಐಆರ್ ನಡೆದಿತ್ತು. ಬಿಹಾರದ ಎಸ್‌ಐಆರ್ ವೇಳೆ 2003ರ ಪಟ್ಟಿಯನ್ನು ಪರಿಗಣಿಸಲಾಗಿತ್ತು.

ಬಿಹಾರದಲ್ಲಿ ಎಸ್‌ಐಆರ್ ವೇಳೆ ಮತದಾರರು ದಾಖಲೆಗಳನ್ನು ಸಲ್ಲಿಸಿ ತಮ್ಮ ಗುರುತನ್ನು ಸಾಬೀತುಪಡಿಸಬೇಕಿತ್ತು. ಆದರೆ, ಎರಡನೇ ಹಂತದ ಎಸ್‌ಐಆರ್‌ನಲ್ಲಿ ಗಣತಿ ಸಮಯದಲ್ಲಿ ದಾಖಲೆ ಸಲ್ಲಿಸುವ ಅಗತ್ಯ ಇಲ್ಲ. ಮತದಾರರ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಕಳುಹಿಸಿದರೆ ಮಾತ್ರ ದಾಖಲೆಗಳನ್ನು ಸಲ್ಲಿಸಬೇಕು ಎಂದು ವರದಿಗಳು ಹೇಳಿವೆ.

ಬಿಹಾರದ ಎಸ್‌ಐಆರ್‌ನಲ್ಲಿ ಮರಣ ಹೊಂದಿದವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಮತ್ತು ಎರಡೆರಡು ಬಾರಿ ನೋಂದಣಿಯಾದವರು ಎಂಬ ಕಾರಣಗಳನ್ನು ನೀಡಿ ಸುಮಾರು 68 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಪರೋಕ್ಷವಾಗಿ ಎನ್‌ಆರ್‌ಸಿ ಮಾಡುತ್ತಿದೆ ಎಂದು ಆರೋಪಿಸಿವೆ.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...