Homeಅಂಕಣಗಳುಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

- Advertisement -
- Advertisement -

 ಎಚ್.ಎಸ್ ದೊರೆಸ್ವಾಮಿ |
ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ನ್ಯಾ.ರಂಜನ್‍ಗೊಗಾಯ್ ಅವರು ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದು “ನೀವು ಚುನಾವಣಾ ಆಯೋಗ ಹಲ್ಲಿಲ್ಲದ ಅಧಿಕಾರವಿಲ್ಲದ ಸಂಸ್ಥೆ ಎಂದು ಒಪ್ಪಿಕೊಂಡಂತೆ ಆಯಿತು. ದ್ವೇಷದ ಭಾಷಣಗಳ ವಿರುದ್ಧ ಮೌನ ತಾಳಿದ್ದೀರಿ. ನೀವು ಕೊನೆಯ ಪಕ್ಷ ಆ ರೀತಿ ಮಾತನಾಡುವವರಿಗೆ ಒಂದು ನೋಟಿಸ್ ಕಳುಹಿಸಬಹುದಾಗಿತ್ತು. ಈ ನೋಟಿಸಿಗೆ ಉತ್ತರ ಬಂದರೆ ನೀವು ಅವರಿಗೆ ಸರಿಯಾಗಿ ನಡೆದುಕೊಳ್ಳುವಂತೆ ಸಲಹೆ ನೀಡಬಹುದಾಗಿತ್ತು. ಈ ರೀತಿ ತಿಳಿವಳಿಕೆ ನೀಡಿದ ಮೇಲೂ ಅವರು ಮಾಡಲ್ ಕೋಡ್ ಆಫ್ ಕಂಡಕ್ಟ್ ಮೀರಿ ನಡೆಯುವುದಾದರೆ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕಬಹುದಾಗಿತ್ತು. ಇದು ನಿಮಗಿರುವ ಅಧಿಕಾರ. ನೀವು ಈ ಅಧಿಕಾರವನ್ನು ಚಲಾಯಿಸಬೇಕಾದದ್ದು ನಿಮ್ಮ ಕರ್ತವ್ಯ. ಚುನಾವಣೆ ದಿನ ಹತ್ತಿರವಾಗುತ್ತಿದೆ. ಕೂಡಲೇ ನೀವು ಕಾರ್ಯೋನ್ಮುಖರಾಗಬೇಕು. ಈ ನಿಮ್ಮ ನಿಲುವು ಫಲಪ್ರದವೋ ಅಲ್ಲವೋ ಅದು ಬೇರೆ ಮಾತು. ನೀವು ಕೂಡಲೇ ಕಾರ್ಯತತ್ಪರರಾಗಬೇಕು.
ಚುನಾವಣಾ ಆಯೋಗಕ್ಕಿರುವ ಅಧಿಕಾರ ಮಾಡೆಲ್ ಕೋಡ್ ಆಫ್ ಕಂಡಕ್ಟ್ ಪ್ರಕಟಿಸುವುದು. ಅಭ್ಯರ್ಥಿಗಳು ಕೆಲವು ಮಾರ್ಗದರ್ಶಿ ಸೂಚನೆಗಳನ್ನು ಧಿಕ್ಕರಿಸಿ ನಡೆದುಕೊಂಡಿದ್ದಾರೆಂದು ಚುನಾವಣಾ ಆಯೋಗಕ್ಕೆ ಮನವರಿಕೆಯಾದರೆ ಚುನಾವಣೆ ಪ್ರಕ್ರಿಯೆ ಮುಗಿದ ಮೇಲೆ ಅಂತಹವರನ್ನು ಸದಸ್ಯರಾಗಿರುವುದಕ್ಕೆ ಅನರ್ಹರನ್ನಾಗಿ ಪರಿಗಣಿಸಿ ಎಂದು ಶಿಫಾರಸು ಮಾಡಬಹುದು.
ಶೇಷನ್ ಮಾಡಿದ್ದೇನು?
ಟಿ.ಎನ್.ಶೇಷನ್ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿ 1990ರಲ್ಲಿ ಆಯ್ಕೆಯಾಗಿ ಅವರು 6 ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಭಾರತದ ರಾಜಕಾರಣಿಗಳು ಆಗ ಹೆದರುತ್ತಿದ್ದುದ್ದು ದೇವರು ಮತ್ತು ಶೇಷನ್‍ರವರಿಗೆ ಮಾತ್ರ. ಅವರು ಮುಲಾಜಿಲ್ಲದೇ ತಪ್ಪು ಮಾಡಿದ ಎಲ್ಲರನ್ನು ದಂಡಿಸುತ್ತಿದ್ದರು. ಆ ದಿನಗಳಲ್ಲಿ ಎಲ್ಲ ಪಕ್ಷಗಳವರೂ ಶೇಷನ್ ವಿರುದ್ಧ ದಾಳಿ ಮಾಡಿದರು. ಮಾಡಲ್ ಕೋಡ್ ಆಫ್ ಕಂಡಕ್ಟ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಏಕೈಕ ವ್ಯಕ್ತಿ ಟಿ.ಎನ್.ಶೇಷನ್ ಅವರು ನೀತಿಸಂಹಿತೆಯನ್ನು ಮೀರಿದ ಎಲ್ಲಾ ಅಭ್ಯರ್ಥಿಗಳ ಮೇಲೂ ಕೇಸುಗಳನ್ನು ಹಾಕಿದರು, ಬಂಧಿಸಲು ಸೂಚನೆ ನೀಡಿದರು. ಹಣಬಲ ಮತ್ತು ತೋಳ್ಬಲ ತೋರಿದವರಿಗೆ ಸಿಂಹಸ್ವಪ್ನವಾಗಿದ್ದರು. ಉಮೇದುವಾರರ ಪರ ವಹಿಸಿದ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟರು. ಶೇಷನ್ ಅಧಿಕಾರ ವಹಿಸಿಕೊಳ್ಳುವವರೆಗೂ ಚುನಾವಣಾ ಆಯೋಗದಲ್ಲಿ ಆಯೋಗದ ಮುಖ್ಯಸ್ಥರು ಮಾತ್ರ ಇದ್ದರು. ಶೇಷನ್‍ರವರು ಕಟ್ಟುನಿಟ್ಟಾಗಿ ನೀತಿಸಂಹಿತೆಯನ್ನು ಎತ್ತಿ ಹಿಡಿಯಲು ಹೋದರಾಗಿ ಅವರನ್ನು ಕಟ್ಟಿ ಹಾಕಲು ಇನ್ನಿಬ್ಬರನ್ನು ಆಯೋಗದ ಸದಸ್ಯರನ್ನಾಗಿ ಕೇಂದ್ರ ಸರ್ಕಾರ ನೇಮಿಸಿತು. ಶೇಷನ್ ನಿವೃತ್ತರಾಗಿ ದಶಕಗಳು ಕಳೆದವು. ಅವರ ನಂತರ ಬಂದ ಚುನಾವಣಾ ಕಮಿಷನರುಗಳು ಚುನಾವಣಾ ಆಯೋಗವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಾ ಹೋಗಿದ್ದಾರೆ. ಆಡಳಿತ ನಡೆಸುವವರ ಆಜ್ಞಾಪಾಲಕರಂತೆ ವರ್ತಿಸುತ್ತಾರೆ. ಚುನಾವಣಾ ಆಯೋಗದ ಬಗೆಗೆ ಜನತೆಗೆ ನಂಬಿಕೆ ಕಳೆದುಹೋಗುತ್ತಿದೆ. ಈ ಕಾರಣಕ್ಕಾಗಿಯೇ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು, ಇಂದಿನ ಚುನಾವಣಾ ಆಯೋಗಕ್ಕೆ ಅವರ ನಿಷ್ಕ್ರಿಯತೆ ಬಗೆಗೆ ಪತ್ರ ಬರೆದು ಎಚ್ಚರಿಸಿರುವುದು. ಪಾರ್ಲಿಮೆಂಟನ್ನು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಗೊಳಿಸಲು ರಚಿಸಿದ್ದರೆ, ಭಾರತದ ಚುನಾವಣಾ ಆಯೋಗವನ್ನು ರಾಜಕೀಯ ನೈತಿಕತೆಯನ್ನು ಎತ್ತಿ ಹಿಡಿಯಲು ರಚಿಸಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ನೆನಪು ಮಾಡಿಕೊಟ್ಟಿದ್ದಾರೆ.
ಮೋದಿಯವರನ್ನು ಕುರಿತ ಒಂದು ಚಲನಚಿತ್ರವನ್ನು ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಪ್ರದರ್ಶಿಸುವ ಹುನ್ನಾರ ನಡೆಯಿತು. ನ್ಯಾ.ಗೊಗಾಯಿರವರ ಪತ್ರ ತಲುಪಿದ ಕಾರಣದಿಂದ ಚುನಾವಣಾ ಆಯೋಗ ಈ ಚಿತ್ರವನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಪ್ರದರ್ಶಿಸುವಂತಿಲ್ಲ ಎಂದು ಘೋಷಿಸಿತು. ಈ ಸಾರಿ ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಗೆ ಮಿತಿಯೂ ಇಲ್ಲ. ಈ ಪರಿಸ್ಥಿತಿ ಮುಂದುವರೆಯುವುದಾದರೆ ಇದನ್ನು ತಡೆಗಟ್ಟಲು ಇಚ್ಛಾಶಕ್ತಿ ಇಲ್ಲದ ಚುನಾವಣಾ ಆಯೋಗ ಏಕೆ ಬೇಕು ಎಂದು ಕೇಳಬೇಕಾದೀತು. ಮೋದಿ ಸರ್ಕಾರ ಕಪ್ಪು ಹಣದ ಹಾವಳಿಯನ್ನು ತಡೆಗಟ್ಟುವುದಾಗಿ ಘೋಷಣೆ ಮಾಡಿದೆ. ಚುನಾವಣೆ ಸಮಯದಲ್ಲಿ ಕಪ್ಪುಹಣ ಹೇಗೆ ಬಳಸಲಾಗುತ್ತಿದೆ ಎಂಬುದು ಸರ್ವರಿಗೂ ತಿಳಿದಿರುವ ವಿಚಾರ. ಭಾರತದಲ್ಲಿ ಚುನಾವಣೆ ನಡೆಯುತ್ತಿರುವ ಈ ವೇಳೆಯಲ್ಲಿ ಒಂದು ಬಿಲಿಯನ್‍ಗೂ ಮೀರಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. 2014ರ ಪಾರ್ಲಿಮೆಂಟ್ ಚುನಾವಣೆಯ ವೇಳೆಯಲ್ಲಿ ವಶಪಡಿಸಿಕೊಳ್ಳಲಾದ ಹಣಕ್ಕೆ ಎರಡರಷ್ಟು 2019ರ ಈ ಚುನಾವಣೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ.
ದೊಡ್ಡದಾಗಿ ವ್ಯಾಪಾರ ದಂಧೆ ಮಾಡುವವರು ಎಲ್ಲ ರಾಜಕೀಯ ಪಕ್ಷಗಳನ್ನೂ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹಾತೊರೆಯುತ್ತಾರೆ. ಆದರೆ ಆಡಳಿತ ಪಕ್ಷಕ್ಕೆ ಮಿಕ್ಕೆಲ್ಲದ್ದಕ್ಕಿಂತ ಹೆಚ್ಚಿಗೆ ವಂತಿಗೆ ನೀಡುವುದು ಗೋಪ್ಯವಾದ ವಿಷಯವೇನಲ್ಲ. ಆದರೆ ಮೋದಿ ಸರ್ಕಾರ ಜಾರಿಗೆ ತಂದ ಎಲೆಕ್ಷನ್ ಬಾಂಡ್ ಒಂದು ರಹಸ್ಯವನ್ನು ಒಳಗೊಂಡಿದೆ. ಅದರ ಗುಟ್ಟು ಸರ್ಕಾರ ನಡೆಸುವವರಿಗೆ ಮಾತ್ರ ಗೊತ್ತು. ಈ ಬಾಂಡ್ ಕೊಂಡವರು ಯಾವ ಪಾರ್ಟಿಗೆ ಕೊಟ್ಟಿದ್ದಾರೆ ಎಂಬುದು ಬ್ಯಾಂಕ್‍ಗಳಿಗೆ ಮಾತ್ರ ಗೊತ್ತು. ಯಾವ ದೊಡ್ಡ ಉದ್ಯಮಿಯೂ ಅದನ್ನು ಬೇರೆ ಪಕ್ಷಗಳಿಗೆ ಕೊಡುವಷ್ಟು ದಡ್ಡನಲ್ಲ.
ಚುನಾವಣಾ ಆಯೋಗ ಕೇಂದ್ರದ ಅಧೀನ ಸಂಸ್ಥೆ ಅಲ್ಲ. ಅದು ರಾಜ್ಯಾಂಗದ ಆಶಯಗಳಿಗೆ ಅನುಗುಣವಾಗಿ ರಚಿತವಾದ ಸ್ವಾಯತ್ತ ಸಂಸ್ಥೆ. ಅದು ಕಲ್ಯಾಣ್‍ಸಿಂಗ್ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಗಿತ್ತು. ಈ ಕಂಪನಿಗಳಿಂದ ಹಣ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳೂ ತಮಗೆ ದೇಣಿಗೆ ನೀಡಿದವರ ಪಟ್ಟಿಯನ್ನು, ದೇಣಿಗೆ ಮೊತ್ತವನ್ನು ಒಂದು ಸೀಲಾದ ಕವರಿನಲ್ಲಿಟ್ಟು ಚುನಾವಣಾ ಆಯೋಗಕ್ಕೆ ನೀಡಬೇಕೆಂದು ಹೇಳಿದೆ. ಈ ವಿಚಾರದಲ್ಲಿ ಅನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿಯೂ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಆದರೆ ಆಗಬಾರದ ಅನಾಹುತ ಆಗಿಹೋಗಿದೆ.
ಅದರಂತೆಯೇ, ಮಾದರಿ ಚುನಾವಣಾ ನೀತಿಯನ್ನು ಎಲ್ಲ ಪಕ್ಷಗಳವರೂ ಒಂದಲ್ಲ, ಹತ್ತು ಸಾರಿ ಗಾಳಿಗೆ ತೂರಿದ್ದಾರೆ. ಕಲ್ಯಾಣಸಿಂಗ್ ಹಿಂದೆ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದವರು. ನರಸಿಂಹರಾವ್ ಸರ್ಕಾರ, ಪೊಲೀಸ್ ಮತ್ತು ಮಿಲಿಟರಿಯನ್ನು ಮುಖ್ಯಮಂತ್ರಿಗಳ ಆಜ್ಞೆ ಪಾಲಿಸಲು ಹೇಳಿ ಬಾಬ್ರಿ ಮಸೀದಿ ಒಡೆಯುವುದನ್ನು ತಡೆಗಟ್ಟಲು ಕಳಿಸಿಕೊಟ್ಟಿದ್ದರು. ಕಲ್ಯಾಣಸಿಂಗ್ ಅದನ್ನು ಬಳಸಿಕೊಳ್ಳದೇ ತಟಸ್ಥರಾಗಿದ್ದು, ಬಾಬ್ರಿ ಮಸೀದಿ ಒಡೆಯಲು ಸಹಕಾರ ನೀಡಿದರು. ಅವರೀಗ ರಾಜಸ್ತಾನ ರಾಜ್ಯಪಾಲರಾಗಿದ್ದಾರೆ. ಇತ್ತೀಚೆಗೆ ರಾಜಸ್ತಾನ ವಿಧಾನಸಭೆ ಚುನಾವಣೆ ನಡೆದಾಗ ಗೌರ್ನರ್ ಕಲ್ಯಾಣಸಿಂಗ್ ಬಿಜೆಪಿಗೆ ಮತ ನೀಡುವಂತೆ ಹೇಳಿಕೆ ನೀಡಿದ್ದರು. ಮೋದಿ ಸರ್ಕಾರವಾಗಲೀ, ಚುನಾವಣಾ ಆಯೋಗವಾಗಲೀ ಶಿಸ್ತಿನ ಕ್ರಮ ಕೈಗೊಳ್ಳಲಿಲ್ಲ. ರಾಷ್ಟ್ರಾಧ್ಯಕ್ಷರಿಗೆ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದಾಗ ರಾಷ್ಟ್ರಾಧ್ಯಕ್ಷರು ಆ ಅರ್ಜಿಯನ್ನು ಪ್ರಧಾನಿ ಮೋದಿ ಅವರಿಗೆ ರವಾನಿಸಿ ಕೈ ತೊಳೆದುಕೊಂಡರು. ನ್ಯಾಯವಾಗಿ ಚುನಾವಣಾ ಆಯೋಗವು ರಾಷ್ಟ್ರಾಧ್ಯಕ್ಷರಿಗೆ ಕಲ್ಯಾಣ್‍ಸಿಂಗ್ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಬೇಕಾಗಿತ್ತು. ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...