Homeಅಂಕಣಗಳುಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

- Advertisement -
- Advertisement -

 ಎಚ್.ಎಸ್ ದೊರೆಸ್ವಾಮಿ |
ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ನ್ಯಾ.ರಂಜನ್‍ಗೊಗಾಯ್ ಅವರು ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದು “ನೀವು ಚುನಾವಣಾ ಆಯೋಗ ಹಲ್ಲಿಲ್ಲದ ಅಧಿಕಾರವಿಲ್ಲದ ಸಂಸ್ಥೆ ಎಂದು ಒಪ್ಪಿಕೊಂಡಂತೆ ಆಯಿತು. ದ್ವೇಷದ ಭಾಷಣಗಳ ವಿರುದ್ಧ ಮೌನ ತಾಳಿದ್ದೀರಿ. ನೀವು ಕೊನೆಯ ಪಕ್ಷ ಆ ರೀತಿ ಮಾತನಾಡುವವರಿಗೆ ಒಂದು ನೋಟಿಸ್ ಕಳುಹಿಸಬಹುದಾಗಿತ್ತು. ಈ ನೋಟಿಸಿಗೆ ಉತ್ತರ ಬಂದರೆ ನೀವು ಅವರಿಗೆ ಸರಿಯಾಗಿ ನಡೆದುಕೊಳ್ಳುವಂತೆ ಸಲಹೆ ನೀಡಬಹುದಾಗಿತ್ತು. ಈ ರೀತಿ ತಿಳಿವಳಿಕೆ ನೀಡಿದ ಮೇಲೂ ಅವರು ಮಾಡಲ್ ಕೋಡ್ ಆಫ್ ಕಂಡಕ್ಟ್ ಮೀರಿ ನಡೆಯುವುದಾದರೆ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕಬಹುದಾಗಿತ್ತು. ಇದು ನಿಮಗಿರುವ ಅಧಿಕಾರ. ನೀವು ಈ ಅಧಿಕಾರವನ್ನು ಚಲಾಯಿಸಬೇಕಾದದ್ದು ನಿಮ್ಮ ಕರ್ತವ್ಯ. ಚುನಾವಣೆ ದಿನ ಹತ್ತಿರವಾಗುತ್ತಿದೆ. ಕೂಡಲೇ ನೀವು ಕಾರ್ಯೋನ್ಮುಖರಾಗಬೇಕು. ಈ ನಿಮ್ಮ ನಿಲುವು ಫಲಪ್ರದವೋ ಅಲ್ಲವೋ ಅದು ಬೇರೆ ಮಾತು. ನೀವು ಕೂಡಲೇ ಕಾರ್ಯತತ್ಪರರಾಗಬೇಕು.
ಚುನಾವಣಾ ಆಯೋಗಕ್ಕಿರುವ ಅಧಿಕಾರ ಮಾಡೆಲ್ ಕೋಡ್ ಆಫ್ ಕಂಡಕ್ಟ್ ಪ್ರಕಟಿಸುವುದು. ಅಭ್ಯರ್ಥಿಗಳು ಕೆಲವು ಮಾರ್ಗದರ್ಶಿ ಸೂಚನೆಗಳನ್ನು ಧಿಕ್ಕರಿಸಿ ನಡೆದುಕೊಂಡಿದ್ದಾರೆಂದು ಚುನಾವಣಾ ಆಯೋಗಕ್ಕೆ ಮನವರಿಕೆಯಾದರೆ ಚುನಾವಣೆ ಪ್ರಕ್ರಿಯೆ ಮುಗಿದ ಮೇಲೆ ಅಂತಹವರನ್ನು ಸದಸ್ಯರಾಗಿರುವುದಕ್ಕೆ ಅನರ್ಹರನ್ನಾಗಿ ಪರಿಗಣಿಸಿ ಎಂದು ಶಿಫಾರಸು ಮಾಡಬಹುದು.
ಶೇಷನ್ ಮಾಡಿದ್ದೇನು?
ಟಿ.ಎನ್.ಶೇಷನ್ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿ 1990ರಲ್ಲಿ ಆಯ್ಕೆಯಾಗಿ ಅವರು 6 ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಭಾರತದ ರಾಜಕಾರಣಿಗಳು ಆಗ ಹೆದರುತ್ತಿದ್ದುದ್ದು ದೇವರು ಮತ್ತು ಶೇಷನ್‍ರವರಿಗೆ ಮಾತ್ರ. ಅವರು ಮುಲಾಜಿಲ್ಲದೇ ತಪ್ಪು ಮಾಡಿದ ಎಲ್ಲರನ್ನು ದಂಡಿಸುತ್ತಿದ್ದರು. ಆ ದಿನಗಳಲ್ಲಿ ಎಲ್ಲ ಪಕ್ಷಗಳವರೂ ಶೇಷನ್ ವಿರುದ್ಧ ದಾಳಿ ಮಾಡಿದರು. ಮಾಡಲ್ ಕೋಡ್ ಆಫ್ ಕಂಡಕ್ಟ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಏಕೈಕ ವ್ಯಕ್ತಿ ಟಿ.ಎನ್.ಶೇಷನ್ ಅವರು ನೀತಿಸಂಹಿತೆಯನ್ನು ಮೀರಿದ ಎಲ್ಲಾ ಅಭ್ಯರ್ಥಿಗಳ ಮೇಲೂ ಕೇಸುಗಳನ್ನು ಹಾಕಿದರು, ಬಂಧಿಸಲು ಸೂಚನೆ ನೀಡಿದರು. ಹಣಬಲ ಮತ್ತು ತೋಳ್ಬಲ ತೋರಿದವರಿಗೆ ಸಿಂಹಸ್ವಪ್ನವಾಗಿದ್ದರು. ಉಮೇದುವಾರರ ಪರ ವಹಿಸಿದ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟರು. ಶೇಷನ್ ಅಧಿಕಾರ ವಹಿಸಿಕೊಳ್ಳುವವರೆಗೂ ಚುನಾವಣಾ ಆಯೋಗದಲ್ಲಿ ಆಯೋಗದ ಮುಖ್ಯಸ್ಥರು ಮಾತ್ರ ಇದ್ದರು. ಶೇಷನ್‍ರವರು ಕಟ್ಟುನಿಟ್ಟಾಗಿ ನೀತಿಸಂಹಿತೆಯನ್ನು ಎತ್ತಿ ಹಿಡಿಯಲು ಹೋದರಾಗಿ ಅವರನ್ನು ಕಟ್ಟಿ ಹಾಕಲು ಇನ್ನಿಬ್ಬರನ್ನು ಆಯೋಗದ ಸದಸ್ಯರನ್ನಾಗಿ ಕೇಂದ್ರ ಸರ್ಕಾರ ನೇಮಿಸಿತು. ಶೇಷನ್ ನಿವೃತ್ತರಾಗಿ ದಶಕಗಳು ಕಳೆದವು. ಅವರ ನಂತರ ಬಂದ ಚುನಾವಣಾ ಕಮಿಷನರುಗಳು ಚುನಾವಣಾ ಆಯೋಗವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಾ ಹೋಗಿದ್ದಾರೆ. ಆಡಳಿತ ನಡೆಸುವವರ ಆಜ್ಞಾಪಾಲಕರಂತೆ ವರ್ತಿಸುತ್ತಾರೆ. ಚುನಾವಣಾ ಆಯೋಗದ ಬಗೆಗೆ ಜನತೆಗೆ ನಂಬಿಕೆ ಕಳೆದುಹೋಗುತ್ತಿದೆ. ಈ ಕಾರಣಕ್ಕಾಗಿಯೇ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು, ಇಂದಿನ ಚುನಾವಣಾ ಆಯೋಗಕ್ಕೆ ಅವರ ನಿಷ್ಕ್ರಿಯತೆ ಬಗೆಗೆ ಪತ್ರ ಬರೆದು ಎಚ್ಚರಿಸಿರುವುದು. ಪಾರ್ಲಿಮೆಂಟನ್ನು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಗೊಳಿಸಲು ರಚಿಸಿದ್ದರೆ, ಭಾರತದ ಚುನಾವಣಾ ಆಯೋಗವನ್ನು ರಾಜಕೀಯ ನೈತಿಕತೆಯನ್ನು ಎತ್ತಿ ಹಿಡಿಯಲು ರಚಿಸಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ನೆನಪು ಮಾಡಿಕೊಟ್ಟಿದ್ದಾರೆ.
ಮೋದಿಯವರನ್ನು ಕುರಿತ ಒಂದು ಚಲನಚಿತ್ರವನ್ನು ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಪ್ರದರ್ಶಿಸುವ ಹುನ್ನಾರ ನಡೆಯಿತು. ನ್ಯಾ.ಗೊಗಾಯಿರವರ ಪತ್ರ ತಲುಪಿದ ಕಾರಣದಿಂದ ಚುನಾವಣಾ ಆಯೋಗ ಈ ಚಿತ್ರವನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಪ್ರದರ್ಶಿಸುವಂತಿಲ್ಲ ಎಂದು ಘೋಷಿಸಿತು. ಈ ಸಾರಿ ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಗೆ ಮಿತಿಯೂ ಇಲ್ಲ. ಈ ಪರಿಸ್ಥಿತಿ ಮುಂದುವರೆಯುವುದಾದರೆ ಇದನ್ನು ತಡೆಗಟ್ಟಲು ಇಚ್ಛಾಶಕ್ತಿ ಇಲ್ಲದ ಚುನಾವಣಾ ಆಯೋಗ ಏಕೆ ಬೇಕು ಎಂದು ಕೇಳಬೇಕಾದೀತು. ಮೋದಿ ಸರ್ಕಾರ ಕಪ್ಪು ಹಣದ ಹಾವಳಿಯನ್ನು ತಡೆಗಟ್ಟುವುದಾಗಿ ಘೋಷಣೆ ಮಾಡಿದೆ. ಚುನಾವಣೆ ಸಮಯದಲ್ಲಿ ಕಪ್ಪುಹಣ ಹೇಗೆ ಬಳಸಲಾಗುತ್ತಿದೆ ಎಂಬುದು ಸರ್ವರಿಗೂ ತಿಳಿದಿರುವ ವಿಚಾರ. ಭಾರತದಲ್ಲಿ ಚುನಾವಣೆ ನಡೆಯುತ್ತಿರುವ ಈ ವೇಳೆಯಲ್ಲಿ ಒಂದು ಬಿಲಿಯನ್‍ಗೂ ಮೀರಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. 2014ರ ಪಾರ್ಲಿಮೆಂಟ್ ಚುನಾವಣೆಯ ವೇಳೆಯಲ್ಲಿ ವಶಪಡಿಸಿಕೊಳ್ಳಲಾದ ಹಣಕ್ಕೆ ಎರಡರಷ್ಟು 2019ರ ಈ ಚುನಾವಣೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ.
ದೊಡ್ಡದಾಗಿ ವ್ಯಾಪಾರ ದಂಧೆ ಮಾಡುವವರು ಎಲ್ಲ ರಾಜಕೀಯ ಪಕ್ಷಗಳನ್ನೂ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹಾತೊರೆಯುತ್ತಾರೆ. ಆದರೆ ಆಡಳಿತ ಪಕ್ಷಕ್ಕೆ ಮಿಕ್ಕೆಲ್ಲದ್ದಕ್ಕಿಂತ ಹೆಚ್ಚಿಗೆ ವಂತಿಗೆ ನೀಡುವುದು ಗೋಪ್ಯವಾದ ವಿಷಯವೇನಲ್ಲ. ಆದರೆ ಮೋದಿ ಸರ್ಕಾರ ಜಾರಿಗೆ ತಂದ ಎಲೆಕ್ಷನ್ ಬಾಂಡ್ ಒಂದು ರಹಸ್ಯವನ್ನು ಒಳಗೊಂಡಿದೆ. ಅದರ ಗುಟ್ಟು ಸರ್ಕಾರ ನಡೆಸುವವರಿಗೆ ಮಾತ್ರ ಗೊತ್ತು. ಈ ಬಾಂಡ್ ಕೊಂಡವರು ಯಾವ ಪಾರ್ಟಿಗೆ ಕೊಟ್ಟಿದ್ದಾರೆ ಎಂಬುದು ಬ್ಯಾಂಕ್‍ಗಳಿಗೆ ಮಾತ್ರ ಗೊತ್ತು. ಯಾವ ದೊಡ್ಡ ಉದ್ಯಮಿಯೂ ಅದನ್ನು ಬೇರೆ ಪಕ್ಷಗಳಿಗೆ ಕೊಡುವಷ್ಟು ದಡ್ಡನಲ್ಲ.
ಚುನಾವಣಾ ಆಯೋಗ ಕೇಂದ್ರದ ಅಧೀನ ಸಂಸ್ಥೆ ಅಲ್ಲ. ಅದು ರಾಜ್ಯಾಂಗದ ಆಶಯಗಳಿಗೆ ಅನುಗುಣವಾಗಿ ರಚಿತವಾದ ಸ್ವಾಯತ್ತ ಸಂಸ್ಥೆ. ಅದು ಕಲ್ಯಾಣ್‍ಸಿಂಗ್ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಗಿತ್ತು. ಈ ಕಂಪನಿಗಳಿಂದ ಹಣ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳೂ ತಮಗೆ ದೇಣಿಗೆ ನೀಡಿದವರ ಪಟ್ಟಿಯನ್ನು, ದೇಣಿಗೆ ಮೊತ್ತವನ್ನು ಒಂದು ಸೀಲಾದ ಕವರಿನಲ್ಲಿಟ್ಟು ಚುನಾವಣಾ ಆಯೋಗಕ್ಕೆ ನೀಡಬೇಕೆಂದು ಹೇಳಿದೆ. ಈ ವಿಚಾರದಲ್ಲಿ ಅನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿಯೂ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಆದರೆ ಆಗಬಾರದ ಅನಾಹುತ ಆಗಿಹೋಗಿದೆ.
ಅದರಂತೆಯೇ, ಮಾದರಿ ಚುನಾವಣಾ ನೀತಿಯನ್ನು ಎಲ್ಲ ಪಕ್ಷಗಳವರೂ ಒಂದಲ್ಲ, ಹತ್ತು ಸಾರಿ ಗಾಳಿಗೆ ತೂರಿದ್ದಾರೆ. ಕಲ್ಯಾಣಸಿಂಗ್ ಹಿಂದೆ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದವರು. ನರಸಿಂಹರಾವ್ ಸರ್ಕಾರ, ಪೊಲೀಸ್ ಮತ್ತು ಮಿಲಿಟರಿಯನ್ನು ಮುಖ್ಯಮಂತ್ರಿಗಳ ಆಜ್ಞೆ ಪಾಲಿಸಲು ಹೇಳಿ ಬಾಬ್ರಿ ಮಸೀದಿ ಒಡೆಯುವುದನ್ನು ತಡೆಗಟ್ಟಲು ಕಳಿಸಿಕೊಟ್ಟಿದ್ದರು. ಕಲ್ಯಾಣಸಿಂಗ್ ಅದನ್ನು ಬಳಸಿಕೊಳ್ಳದೇ ತಟಸ್ಥರಾಗಿದ್ದು, ಬಾಬ್ರಿ ಮಸೀದಿ ಒಡೆಯಲು ಸಹಕಾರ ನೀಡಿದರು. ಅವರೀಗ ರಾಜಸ್ತಾನ ರಾಜ್ಯಪಾಲರಾಗಿದ್ದಾರೆ. ಇತ್ತೀಚೆಗೆ ರಾಜಸ್ತಾನ ವಿಧಾನಸಭೆ ಚುನಾವಣೆ ನಡೆದಾಗ ಗೌರ್ನರ್ ಕಲ್ಯಾಣಸಿಂಗ್ ಬಿಜೆಪಿಗೆ ಮತ ನೀಡುವಂತೆ ಹೇಳಿಕೆ ನೀಡಿದ್ದರು. ಮೋದಿ ಸರ್ಕಾರವಾಗಲೀ, ಚುನಾವಣಾ ಆಯೋಗವಾಗಲೀ ಶಿಸ್ತಿನ ಕ್ರಮ ಕೈಗೊಳ್ಳಲಿಲ್ಲ. ರಾಷ್ಟ್ರಾಧ್ಯಕ್ಷರಿಗೆ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದಾಗ ರಾಷ್ಟ್ರಾಧ್ಯಕ್ಷರು ಆ ಅರ್ಜಿಯನ್ನು ಪ್ರಧಾನಿ ಮೋದಿ ಅವರಿಗೆ ರವಾನಿಸಿ ಕೈ ತೊಳೆದುಕೊಂಡರು. ನ್ಯಾಯವಾಗಿ ಚುನಾವಣಾ ಆಯೋಗವು ರಾಷ್ಟ್ರಾಧ್ಯಕ್ಷರಿಗೆ ಕಲ್ಯಾಣ್‍ಸಿಂಗ್ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಬೇಕಾಗಿತ್ತು. ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...