Homeಅಂಕಣಗಳುಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

- Advertisement -
- Advertisement -

 ಎಚ್.ಎಸ್ ದೊರೆಸ್ವಾಮಿ |
ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ನ್ಯಾ.ರಂಜನ್‍ಗೊಗಾಯ್ ಅವರು ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದು “ನೀವು ಚುನಾವಣಾ ಆಯೋಗ ಹಲ್ಲಿಲ್ಲದ ಅಧಿಕಾರವಿಲ್ಲದ ಸಂಸ್ಥೆ ಎಂದು ಒಪ್ಪಿಕೊಂಡಂತೆ ಆಯಿತು. ದ್ವೇಷದ ಭಾಷಣಗಳ ವಿರುದ್ಧ ಮೌನ ತಾಳಿದ್ದೀರಿ. ನೀವು ಕೊನೆಯ ಪಕ್ಷ ಆ ರೀತಿ ಮಾತನಾಡುವವರಿಗೆ ಒಂದು ನೋಟಿಸ್ ಕಳುಹಿಸಬಹುದಾಗಿತ್ತು. ಈ ನೋಟಿಸಿಗೆ ಉತ್ತರ ಬಂದರೆ ನೀವು ಅವರಿಗೆ ಸರಿಯಾಗಿ ನಡೆದುಕೊಳ್ಳುವಂತೆ ಸಲಹೆ ನೀಡಬಹುದಾಗಿತ್ತು. ಈ ರೀತಿ ತಿಳಿವಳಿಕೆ ನೀಡಿದ ಮೇಲೂ ಅವರು ಮಾಡಲ್ ಕೋಡ್ ಆಫ್ ಕಂಡಕ್ಟ್ ಮೀರಿ ನಡೆಯುವುದಾದರೆ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕಬಹುದಾಗಿತ್ತು. ಇದು ನಿಮಗಿರುವ ಅಧಿಕಾರ. ನೀವು ಈ ಅಧಿಕಾರವನ್ನು ಚಲಾಯಿಸಬೇಕಾದದ್ದು ನಿಮ್ಮ ಕರ್ತವ್ಯ. ಚುನಾವಣೆ ದಿನ ಹತ್ತಿರವಾಗುತ್ತಿದೆ. ಕೂಡಲೇ ನೀವು ಕಾರ್ಯೋನ್ಮುಖರಾಗಬೇಕು. ಈ ನಿಮ್ಮ ನಿಲುವು ಫಲಪ್ರದವೋ ಅಲ್ಲವೋ ಅದು ಬೇರೆ ಮಾತು. ನೀವು ಕೂಡಲೇ ಕಾರ್ಯತತ್ಪರರಾಗಬೇಕು.
ಚುನಾವಣಾ ಆಯೋಗಕ್ಕಿರುವ ಅಧಿಕಾರ ಮಾಡೆಲ್ ಕೋಡ್ ಆಫ್ ಕಂಡಕ್ಟ್ ಪ್ರಕಟಿಸುವುದು. ಅಭ್ಯರ್ಥಿಗಳು ಕೆಲವು ಮಾರ್ಗದರ್ಶಿ ಸೂಚನೆಗಳನ್ನು ಧಿಕ್ಕರಿಸಿ ನಡೆದುಕೊಂಡಿದ್ದಾರೆಂದು ಚುನಾವಣಾ ಆಯೋಗಕ್ಕೆ ಮನವರಿಕೆಯಾದರೆ ಚುನಾವಣೆ ಪ್ರಕ್ರಿಯೆ ಮುಗಿದ ಮೇಲೆ ಅಂತಹವರನ್ನು ಸದಸ್ಯರಾಗಿರುವುದಕ್ಕೆ ಅನರ್ಹರನ್ನಾಗಿ ಪರಿಗಣಿಸಿ ಎಂದು ಶಿಫಾರಸು ಮಾಡಬಹುದು.
ಶೇಷನ್ ಮಾಡಿದ್ದೇನು?
ಟಿ.ಎನ್.ಶೇಷನ್ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿ 1990ರಲ್ಲಿ ಆಯ್ಕೆಯಾಗಿ ಅವರು 6 ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಭಾರತದ ರಾಜಕಾರಣಿಗಳು ಆಗ ಹೆದರುತ್ತಿದ್ದುದ್ದು ದೇವರು ಮತ್ತು ಶೇಷನ್‍ರವರಿಗೆ ಮಾತ್ರ. ಅವರು ಮುಲಾಜಿಲ್ಲದೇ ತಪ್ಪು ಮಾಡಿದ ಎಲ್ಲರನ್ನು ದಂಡಿಸುತ್ತಿದ್ದರು. ಆ ದಿನಗಳಲ್ಲಿ ಎಲ್ಲ ಪಕ್ಷಗಳವರೂ ಶೇಷನ್ ವಿರುದ್ಧ ದಾಳಿ ಮಾಡಿದರು. ಮಾಡಲ್ ಕೋಡ್ ಆಫ್ ಕಂಡಕ್ಟ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಏಕೈಕ ವ್ಯಕ್ತಿ ಟಿ.ಎನ್.ಶೇಷನ್ ಅವರು ನೀತಿಸಂಹಿತೆಯನ್ನು ಮೀರಿದ ಎಲ್ಲಾ ಅಭ್ಯರ್ಥಿಗಳ ಮೇಲೂ ಕೇಸುಗಳನ್ನು ಹಾಕಿದರು, ಬಂಧಿಸಲು ಸೂಚನೆ ನೀಡಿದರು. ಹಣಬಲ ಮತ್ತು ತೋಳ್ಬಲ ತೋರಿದವರಿಗೆ ಸಿಂಹಸ್ವಪ್ನವಾಗಿದ್ದರು. ಉಮೇದುವಾರರ ಪರ ವಹಿಸಿದ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟರು. ಶೇಷನ್ ಅಧಿಕಾರ ವಹಿಸಿಕೊಳ್ಳುವವರೆಗೂ ಚುನಾವಣಾ ಆಯೋಗದಲ್ಲಿ ಆಯೋಗದ ಮುಖ್ಯಸ್ಥರು ಮಾತ್ರ ಇದ್ದರು. ಶೇಷನ್‍ರವರು ಕಟ್ಟುನಿಟ್ಟಾಗಿ ನೀತಿಸಂಹಿತೆಯನ್ನು ಎತ್ತಿ ಹಿಡಿಯಲು ಹೋದರಾಗಿ ಅವರನ್ನು ಕಟ್ಟಿ ಹಾಕಲು ಇನ್ನಿಬ್ಬರನ್ನು ಆಯೋಗದ ಸದಸ್ಯರನ್ನಾಗಿ ಕೇಂದ್ರ ಸರ್ಕಾರ ನೇಮಿಸಿತು. ಶೇಷನ್ ನಿವೃತ್ತರಾಗಿ ದಶಕಗಳು ಕಳೆದವು. ಅವರ ನಂತರ ಬಂದ ಚುನಾವಣಾ ಕಮಿಷನರುಗಳು ಚುನಾವಣಾ ಆಯೋಗವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಾ ಹೋಗಿದ್ದಾರೆ. ಆಡಳಿತ ನಡೆಸುವವರ ಆಜ್ಞಾಪಾಲಕರಂತೆ ವರ್ತಿಸುತ್ತಾರೆ. ಚುನಾವಣಾ ಆಯೋಗದ ಬಗೆಗೆ ಜನತೆಗೆ ನಂಬಿಕೆ ಕಳೆದುಹೋಗುತ್ತಿದೆ. ಈ ಕಾರಣಕ್ಕಾಗಿಯೇ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು, ಇಂದಿನ ಚುನಾವಣಾ ಆಯೋಗಕ್ಕೆ ಅವರ ನಿಷ್ಕ್ರಿಯತೆ ಬಗೆಗೆ ಪತ್ರ ಬರೆದು ಎಚ್ಚರಿಸಿರುವುದು. ಪಾರ್ಲಿಮೆಂಟನ್ನು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಗೊಳಿಸಲು ರಚಿಸಿದ್ದರೆ, ಭಾರತದ ಚುನಾವಣಾ ಆಯೋಗವನ್ನು ರಾಜಕೀಯ ನೈತಿಕತೆಯನ್ನು ಎತ್ತಿ ಹಿಡಿಯಲು ರಚಿಸಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ನೆನಪು ಮಾಡಿಕೊಟ್ಟಿದ್ದಾರೆ.
ಮೋದಿಯವರನ್ನು ಕುರಿತ ಒಂದು ಚಲನಚಿತ್ರವನ್ನು ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಪ್ರದರ್ಶಿಸುವ ಹುನ್ನಾರ ನಡೆಯಿತು. ನ್ಯಾ.ಗೊಗಾಯಿರವರ ಪತ್ರ ತಲುಪಿದ ಕಾರಣದಿಂದ ಚುನಾವಣಾ ಆಯೋಗ ಈ ಚಿತ್ರವನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಪ್ರದರ್ಶಿಸುವಂತಿಲ್ಲ ಎಂದು ಘೋಷಿಸಿತು. ಈ ಸಾರಿ ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಗೆ ಮಿತಿಯೂ ಇಲ್ಲ. ಈ ಪರಿಸ್ಥಿತಿ ಮುಂದುವರೆಯುವುದಾದರೆ ಇದನ್ನು ತಡೆಗಟ್ಟಲು ಇಚ್ಛಾಶಕ್ತಿ ಇಲ್ಲದ ಚುನಾವಣಾ ಆಯೋಗ ಏಕೆ ಬೇಕು ಎಂದು ಕೇಳಬೇಕಾದೀತು. ಮೋದಿ ಸರ್ಕಾರ ಕಪ್ಪು ಹಣದ ಹಾವಳಿಯನ್ನು ತಡೆಗಟ್ಟುವುದಾಗಿ ಘೋಷಣೆ ಮಾಡಿದೆ. ಚುನಾವಣೆ ಸಮಯದಲ್ಲಿ ಕಪ್ಪುಹಣ ಹೇಗೆ ಬಳಸಲಾಗುತ್ತಿದೆ ಎಂಬುದು ಸರ್ವರಿಗೂ ತಿಳಿದಿರುವ ವಿಚಾರ. ಭಾರತದಲ್ಲಿ ಚುನಾವಣೆ ನಡೆಯುತ್ತಿರುವ ಈ ವೇಳೆಯಲ್ಲಿ ಒಂದು ಬಿಲಿಯನ್‍ಗೂ ಮೀರಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. 2014ರ ಪಾರ್ಲಿಮೆಂಟ್ ಚುನಾವಣೆಯ ವೇಳೆಯಲ್ಲಿ ವಶಪಡಿಸಿಕೊಳ್ಳಲಾದ ಹಣಕ್ಕೆ ಎರಡರಷ್ಟು 2019ರ ಈ ಚುನಾವಣೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ.
ದೊಡ್ಡದಾಗಿ ವ್ಯಾಪಾರ ದಂಧೆ ಮಾಡುವವರು ಎಲ್ಲ ರಾಜಕೀಯ ಪಕ್ಷಗಳನ್ನೂ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹಾತೊರೆಯುತ್ತಾರೆ. ಆದರೆ ಆಡಳಿತ ಪಕ್ಷಕ್ಕೆ ಮಿಕ್ಕೆಲ್ಲದ್ದಕ್ಕಿಂತ ಹೆಚ್ಚಿಗೆ ವಂತಿಗೆ ನೀಡುವುದು ಗೋಪ್ಯವಾದ ವಿಷಯವೇನಲ್ಲ. ಆದರೆ ಮೋದಿ ಸರ್ಕಾರ ಜಾರಿಗೆ ತಂದ ಎಲೆಕ್ಷನ್ ಬಾಂಡ್ ಒಂದು ರಹಸ್ಯವನ್ನು ಒಳಗೊಂಡಿದೆ. ಅದರ ಗುಟ್ಟು ಸರ್ಕಾರ ನಡೆಸುವವರಿಗೆ ಮಾತ್ರ ಗೊತ್ತು. ಈ ಬಾಂಡ್ ಕೊಂಡವರು ಯಾವ ಪಾರ್ಟಿಗೆ ಕೊಟ್ಟಿದ್ದಾರೆ ಎಂಬುದು ಬ್ಯಾಂಕ್‍ಗಳಿಗೆ ಮಾತ್ರ ಗೊತ್ತು. ಯಾವ ದೊಡ್ಡ ಉದ್ಯಮಿಯೂ ಅದನ್ನು ಬೇರೆ ಪಕ್ಷಗಳಿಗೆ ಕೊಡುವಷ್ಟು ದಡ್ಡನಲ್ಲ.
ಚುನಾವಣಾ ಆಯೋಗ ಕೇಂದ್ರದ ಅಧೀನ ಸಂಸ್ಥೆ ಅಲ್ಲ. ಅದು ರಾಜ್ಯಾಂಗದ ಆಶಯಗಳಿಗೆ ಅನುಗುಣವಾಗಿ ರಚಿತವಾದ ಸ್ವಾಯತ್ತ ಸಂಸ್ಥೆ. ಅದು ಕಲ್ಯಾಣ್‍ಸಿಂಗ್ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಗಿತ್ತು. ಈ ಕಂಪನಿಗಳಿಂದ ಹಣ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳೂ ತಮಗೆ ದೇಣಿಗೆ ನೀಡಿದವರ ಪಟ್ಟಿಯನ್ನು, ದೇಣಿಗೆ ಮೊತ್ತವನ್ನು ಒಂದು ಸೀಲಾದ ಕವರಿನಲ್ಲಿಟ್ಟು ಚುನಾವಣಾ ಆಯೋಗಕ್ಕೆ ನೀಡಬೇಕೆಂದು ಹೇಳಿದೆ. ಈ ವಿಚಾರದಲ್ಲಿ ಅನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿಯೂ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಆದರೆ ಆಗಬಾರದ ಅನಾಹುತ ಆಗಿಹೋಗಿದೆ.
ಅದರಂತೆಯೇ, ಮಾದರಿ ಚುನಾವಣಾ ನೀತಿಯನ್ನು ಎಲ್ಲ ಪಕ್ಷಗಳವರೂ ಒಂದಲ್ಲ, ಹತ್ತು ಸಾರಿ ಗಾಳಿಗೆ ತೂರಿದ್ದಾರೆ. ಕಲ್ಯಾಣಸಿಂಗ್ ಹಿಂದೆ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದವರು. ನರಸಿಂಹರಾವ್ ಸರ್ಕಾರ, ಪೊಲೀಸ್ ಮತ್ತು ಮಿಲಿಟರಿಯನ್ನು ಮುಖ್ಯಮಂತ್ರಿಗಳ ಆಜ್ಞೆ ಪಾಲಿಸಲು ಹೇಳಿ ಬಾಬ್ರಿ ಮಸೀದಿ ಒಡೆಯುವುದನ್ನು ತಡೆಗಟ್ಟಲು ಕಳಿಸಿಕೊಟ್ಟಿದ್ದರು. ಕಲ್ಯಾಣಸಿಂಗ್ ಅದನ್ನು ಬಳಸಿಕೊಳ್ಳದೇ ತಟಸ್ಥರಾಗಿದ್ದು, ಬಾಬ್ರಿ ಮಸೀದಿ ಒಡೆಯಲು ಸಹಕಾರ ನೀಡಿದರು. ಅವರೀಗ ರಾಜಸ್ತಾನ ರಾಜ್ಯಪಾಲರಾಗಿದ್ದಾರೆ. ಇತ್ತೀಚೆಗೆ ರಾಜಸ್ತಾನ ವಿಧಾನಸಭೆ ಚುನಾವಣೆ ನಡೆದಾಗ ಗೌರ್ನರ್ ಕಲ್ಯಾಣಸಿಂಗ್ ಬಿಜೆಪಿಗೆ ಮತ ನೀಡುವಂತೆ ಹೇಳಿಕೆ ನೀಡಿದ್ದರು. ಮೋದಿ ಸರ್ಕಾರವಾಗಲೀ, ಚುನಾವಣಾ ಆಯೋಗವಾಗಲೀ ಶಿಸ್ತಿನ ಕ್ರಮ ಕೈಗೊಳ್ಳಲಿಲ್ಲ. ರಾಷ್ಟ್ರಾಧ್ಯಕ್ಷರಿಗೆ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದಾಗ ರಾಷ್ಟ್ರಾಧ್ಯಕ್ಷರು ಆ ಅರ್ಜಿಯನ್ನು ಪ್ರಧಾನಿ ಮೋದಿ ಅವರಿಗೆ ರವಾನಿಸಿ ಕೈ ತೊಳೆದುಕೊಂಡರು. ನ್ಯಾಯವಾಗಿ ಚುನಾವಣಾ ಆಯೋಗವು ರಾಷ್ಟ್ರಾಧ್ಯಕ್ಷರಿಗೆ ಕಲ್ಯಾಣ್‍ಸಿಂಗ್ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಬೇಕಾಗಿತ್ತು. ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...