Homeಅಂಕಣಗಳುಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು

- Advertisement -
- Advertisement -

 ಎಚ್.ಎಸ್ ದೊರೆಸ್ವಾಮಿ |
ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ನ್ಯಾ.ರಂಜನ್‍ಗೊಗಾಯ್ ಅವರು ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದು “ನೀವು ಚುನಾವಣಾ ಆಯೋಗ ಹಲ್ಲಿಲ್ಲದ ಅಧಿಕಾರವಿಲ್ಲದ ಸಂಸ್ಥೆ ಎಂದು ಒಪ್ಪಿಕೊಂಡಂತೆ ಆಯಿತು. ದ್ವೇಷದ ಭಾಷಣಗಳ ವಿರುದ್ಧ ಮೌನ ತಾಳಿದ್ದೀರಿ. ನೀವು ಕೊನೆಯ ಪಕ್ಷ ಆ ರೀತಿ ಮಾತನಾಡುವವರಿಗೆ ಒಂದು ನೋಟಿಸ್ ಕಳುಹಿಸಬಹುದಾಗಿತ್ತು. ಈ ನೋಟಿಸಿಗೆ ಉತ್ತರ ಬಂದರೆ ನೀವು ಅವರಿಗೆ ಸರಿಯಾಗಿ ನಡೆದುಕೊಳ್ಳುವಂತೆ ಸಲಹೆ ನೀಡಬಹುದಾಗಿತ್ತು. ಈ ರೀತಿ ತಿಳಿವಳಿಕೆ ನೀಡಿದ ಮೇಲೂ ಅವರು ಮಾಡಲ್ ಕೋಡ್ ಆಫ್ ಕಂಡಕ್ಟ್ ಮೀರಿ ನಡೆಯುವುದಾದರೆ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕಬಹುದಾಗಿತ್ತು. ಇದು ನಿಮಗಿರುವ ಅಧಿಕಾರ. ನೀವು ಈ ಅಧಿಕಾರವನ್ನು ಚಲಾಯಿಸಬೇಕಾದದ್ದು ನಿಮ್ಮ ಕರ್ತವ್ಯ. ಚುನಾವಣೆ ದಿನ ಹತ್ತಿರವಾಗುತ್ತಿದೆ. ಕೂಡಲೇ ನೀವು ಕಾರ್ಯೋನ್ಮುಖರಾಗಬೇಕು. ಈ ನಿಮ್ಮ ನಿಲುವು ಫಲಪ್ರದವೋ ಅಲ್ಲವೋ ಅದು ಬೇರೆ ಮಾತು. ನೀವು ಕೂಡಲೇ ಕಾರ್ಯತತ್ಪರರಾಗಬೇಕು.
ಚುನಾವಣಾ ಆಯೋಗಕ್ಕಿರುವ ಅಧಿಕಾರ ಮಾಡೆಲ್ ಕೋಡ್ ಆಫ್ ಕಂಡಕ್ಟ್ ಪ್ರಕಟಿಸುವುದು. ಅಭ್ಯರ್ಥಿಗಳು ಕೆಲವು ಮಾರ್ಗದರ್ಶಿ ಸೂಚನೆಗಳನ್ನು ಧಿಕ್ಕರಿಸಿ ನಡೆದುಕೊಂಡಿದ್ದಾರೆಂದು ಚುನಾವಣಾ ಆಯೋಗಕ್ಕೆ ಮನವರಿಕೆಯಾದರೆ ಚುನಾವಣೆ ಪ್ರಕ್ರಿಯೆ ಮುಗಿದ ಮೇಲೆ ಅಂತಹವರನ್ನು ಸದಸ್ಯರಾಗಿರುವುದಕ್ಕೆ ಅನರ್ಹರನ್ನಾಗಿ ಪರಿಗಣಿಸಿ ಎಂದು ಶಿಫಾರಸು ಮಾಡಬಹುದು.
ಶೇಷನ್ ಮಾಡಿದ್ದೇನು?
ಟಿ.ಎನ್.ಶೇಷನ್ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿ 1990ರಲ್ಲಿ ಆಯ್ಕೆಯಾಗಿ ಅವರು 6 ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಭಾರತದ ರಾಜಕಾರಣಿಗಳು ಆಗ ಹೆದರುತ್ತಿದ್ದುದ್ದು ದೇವರು ಮತ್ತು ಶೇಷನ್‍ರವರಿಗೆ ಮಾತ್ರ. ಅವರು ಮುಲಾಜಿಲ್ಲದೇ ತಪ್ಪು ಮಾಡಿದ ಎಲ್ಲರನ್ನು ದಂಡಿಸುತ್ತಿದ್ದರು. ಆ ದಿನಗಳಲ್ಲಿ ಎಲ್ಲ ಪಕ್ಷಗಳವರೂ ಶೇಷನ್ ವಿರುದ್ಧ ದಾಳಿ ಮಾಡಿದರು. ಮಾಡಲ್ ಕೋಡ್ ಆಫ್ ಕಂಡಕ್ಟ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಏಕೈಕ ವ್ಯಕ್ತಿ ಟಿ.ಎನ್.ಶೇಷನ್ ಅವರು ನೀತಿಸಂಹಿತೆಯನ್ನು ಮೀರಿದ ಎಲ್ಲಾ ಅಭ್ಯರ್ಥಿಗಳ ಮೇಲೂ ಕೇಸುಗಳನ್ನು ಹಾಕಿದರು, ಬಂಧಿಸಲು ಸೂಚನೆ ನೀಡಿದರು. ಹಣಬಲ ಮತ್ತು ತೋಳ್ಬಲ ತೋರಿದವರಿಗೆ ಸಿಂಹಸ್ವಪ್ನವಾಗಿದ್ದರು. ಉಮೇದುವಾರರ ಪರ ವಹಿಸಿದ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟರು. ಶೇಷನ್ ಅಧಿಕಾರ ವಹಿಸಿಕೊಳ್ಳುವವರೆಗೂ ಚುನಾವಣಾ ಆಯೋಗದಲ್ಲಿ ಆಯೋಗದ ಮುಖ್ಯಸ್ಥರು ಮಾತ್ರ ಇದ್ದರು. ಶೇಷನ್‍ರವರು ಕಟ್ಟುನಿಟ್ಟಾಗಿ ನೀತಿಸಂಹಿತೆಯನ್ನು ಎತ್ತಿ ಹಿಡಿಯಲು ಹೋದರಾಗಿ ಅವರನ್ನು ಕಟ್ಟಿ ಹಾಕಲು ಇನ್ನಿಬ್ಬರನ್ನು ಆಯೋಗದ ಸದಸ್ಯರನ್ನಾಗಿ ಕೇಂದ್ರ ಸರ್ಕಾರ ನೇಮಿಸಿತು. ಶೇಷನ್ ನಿವೃತ್ತರಾಗಿ ದಶಕಗಳು ಕಳೆದವು. ಅವರ ನಂತರ ಬಂದ ಚುನಾವಣಾ ಕಮಿಷನರುಗಳು ಚುನಾವಣಾ ಆಯೋಗವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಾ ಹೋಗಿದ್ದಾರೆ. ಆಡಳಿತ ನಡೆಸುವವರ ಆಜ್ಞಾಪಾಲಕರಂತೆ ವರ್ತಿಸುತ್ತಾರೆ. ಚುನಾವಣಾ ಆಯೋಗದ ಬಗೆಗೆ ಜನತೆಗೆ ನಂಬಿಕೆ ಕಳೆದುಹೋಗುತ್ತಿದೆ. ಈ ಕಾರಣಕ್ಕಾಗಿಯೇ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು, ಇಂದಿನ ಚುನಾವಣಾ ಆಯೋಗಕ್ಕೆ ಅವರ ನಿಷ್ಕ್ರಿಯತೆ ಬಗೆಗೆ ಪತ್ರ ಬರೆದು ಎಚ್ಚರಿಸಿರುವುದು. ಪಾರ್ಲಿಮೆಂಟನ್ನು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಗೊಳಿಸಲು ರಚಿಸಿದ್ದರೆ, ಭಾರತದ ಚುನಾವಣಾ ಆಯೋಗವನ್ನು ರಾಜಕೀಯ ನೈತಿಕತೆಯನ್ನು ಎತ್ತಿ ಹಿಡಿಯಲು ರಚಿಸಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ನೆನಪು ಮಾಡಿಕೊಟ್ಟಿದ್ದಾರೆ.
ಮೋದಿಯವರನ್ನು ಕುರಿತ ಒಂದು ಚಲನಚಿತ್ರವನ್ನು ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಪ್ರದರ್ಶಿಸುವ ಹುನ್ನಾರ ನಡೆಯಿತು. ನ್ಯಾ.ಗೊಗಾಯಿರವರ ಪತ್ರ ತಲುಪಿದ ಕಾರಣದಿಂದ ಚುನಾವಣಾ ಆಯೋಗ ಈ ಚಿತ್ರವನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಪ್ರದರ್ಶಿಸುವಂತಿಲ್ಲ ಎಂದು ಘೋಷಿಸಿತು. ಈ ಸಾರಿ ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಗೆ ಮಿತಿಯೂ ಇಲ್ಲ. ಈ ಪರಿಸ್ಥಿತಿ ಮುಂದುವರೆಯುವುದಾದರೆ ಇದನ್ನು ತಡೆಗಟ್ಟಲು ಇಚ್ಛಾಶಕ್ತಿ ಇಲ್ಲದ ಚುನಾವಣಾ ಆಯೋಗ ಏಕೆ ಬೇಕು ಎಂದು ಕೇಳಬೇಕಾದೀತು. ಮೋದಿ ಸರ್ಕಾರ ಕಪ್ಪು ಹಣದ ಹಾವಳಿಯನ್ನು ತಡೆಗಟ್ಟುವುದಾಗಿ ಘೋಷಣೆ ಮಾಡಿದೆ. ಚುನಾವಣೆ ಸಮಯದಲ್ಲಿ ಕಪ್ಪುಹಣ ಹೇಗೆ ಬಳಸಲಾಗುತ್ತಿದೆ ಎಂಬುದು ಸರ್ವರಿಗೂ ತಿಳಿದಿರುವ ವಿಚಾರ. ಭಾರತದಲ್ಲಿ ಚುನಾವಣೆ ನಡೆಯುತ್ತಿರುವ ಈ ವೇಳೆಯಲ್ಲಿ ಒಂದು ಬಿಲಿಯನ್‍ಗೂ ಮೀರಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. 2014ರ ಪಾರ್ಲಿಮೆಂಟ್ ಚುನಾವಣೆಯ ವೇಳೆಯಲ್ಲಿ ವಶಪಡಿಸಿಕೊಳ್ಳಲಾದ ಹಣಕ್ಕೆ ಎರಡರಷ್ಟು 2019ರ ಈ ಚುನಾವಣೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ.
ದೊಡ್ಡದಾಗಿ ವ್ಯಾಪಾರ ದಂಧೆ ಮಾಡುವವರು ಎಲ್ಲ ರಾಜಕೀಯ ಪಕ್ಷಗಳನ್ನೂ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹಾತೊರೆಯುತ್ತಾರೆ. ಆದರೆ ಆಡಳಿತ ಪಕ್ಷಕ್ಕೆ ಮಿಕ್ಕೆಲ್ಲದ್ದಕ್ಕಿಂತ ಹೆಚ್ಚಿಗೆ ವಂತಿಗೆ ನೀಡುವುದು ಗೋಪ್ಯವಾದ ವಿಷಯವೇನಲ್ಲ. ಆದರೆ ಮೋದಿ ಸರ್ಕಾರ ಜಾರಿಗೆ ತಂದ ಎಲೆಕ್ಷನ್ ಬಾಂಡ್ ಒಂದು ರಹಸ್ಯವನ್ನು ಒಳಗೊಂಡಿದೆ. ಅದರ ಗುಟ್ಟು ಸರ್ಕಾರ ನಡೆಸುವವರಿಗೆ ಮಾತ್ರ ಗೊತ್ತು. ಈ ಬಾಂಡ್ ಕೊಂಡವರು ಯಾವ ಪಾರ್ಟಿಗೆ ಕೊಟ್ಟಿದ್ದಾರೆ ಎಂಬುದು ಬ್ಯಾಂಕ್‍ಗಳಿಗೆ ಮಾತ್ರ ಗೊತ್ತು. ಯಾವ ದೊಡ್ಡ ಉದ್ಯಮಿಯೂ ಅದನ್ನು ಬೇರೆ ಪಕ್ಷಗಳಿಗೆ ಕೊಡುವಷ್ಟು ದಡ್ಡನಲ್ಲ.
ಚುನಾವಣಾ ಆಯೋಗ ಕೇಂದ್ರದ ಅಧೀನ ಸಂಸ್ಥೆ ಅಲ್ಲ. ಅದು ರಾಜ್ಯಾಂಗದ ಆಶಯಗಳಿಗೆ ಅನುಗುಣವಾಗಿ ರಚಿತವಾದ ಸ್ವಾಯತ್ತ ಸಂಸ್ಥೆ. ಅದು ಕಲ್ಯಾಣ್‍ಸಿಂಗ್ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಗಿತ್ತು. ಈ ಕಂಪನಿಗಳಿಂದ ಹಣ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳೂ ತಮಗೆ ದೇಣಿಗೆ ನೀಡಿದವರ ಪಟ್ಟಿಯನ್ನು, ದೇಣಿಗೆ ಮೊತ್ತವನ್ನು ಒಂದು ಸೀಲಾದ ಕವರಿನಲ್ಲಿಟ್ಟು ಚುನಾವಣಾ ಆಯೋಗಕ್ಕೆ ನೀಡಬೇಕೆಂದು ಹೇಳಿದೆ. ಈ ವಿಚಾರದಲ್ಲಿ ಅನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿಯೂ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಆದರೆ ಆಗಬಾರದ ಅನಾಹುತ ಆಗಿಹೋಗಿದೆ.
ಅದರಂತೆಯೇ, ಮಾದರಿ ಚುನಾವಣಾ ನೀತಿಯನ್ನು ಎಲ್ಲ ಪಕ್ಷಗಳವರೂ ಒಂದಲ್ಲ, ಹತ್ತು ಸಾರಿ ಗಾಳಿಗೆ ತೂರಿದ್ದಾರೆ. ಕಲ್ಯಾಣಸಿಂಗ್ ಹಿಂದೆ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದವರು. ನರಸಿಂಹರಾವ್ ಸರ್ಕಾರ, ಪೊಲೀಸ್ ಮತ್ತು ಮಿಲಿಟರಿಯನ್ನು ಮುಖ್ಯಮಂತ್ರಿಗಳ ಆಜ್ಞೆ ಪಾಲಿಸಲು ಹೇಳಿ ಬಾಬ್ರಿ ಮಸೀದಿ ಒಡೆಯುವುದನ್ನು ತಡೆಗಟ್ಟಲು ಕಳಿಸಿಕೊಟ್ಟಿದ್ದರು. ಕಲ್ಯಾಣಸಿಂಗ್ ಅದನ್ನು ಬಳಸಿಕೊಳ್ಳದೇ ತಟಸ್ಥರಾಗಿದ್ದು, ಬಾಬ್ರಿ ಮಸೀದಿ ಒಡೆಯಲು ಸಹಕಾರ ನೀಡಿದರು. ಅವರೀಗ ರಾಜಸ್ತಾನ ರಾಜ್ಯಪಾಲರಾಗಿದ್ದಾರೆ. ಇತ್ತೀಚೆಗೆ ರಾಜಸ್ತಾನ ವಿಧಾನಸಭೆ ಚುನಾವಣೆ ನಡೆದಾಗ ಗೌರ್ನರ್ ಕಲ್ಯಾಣಸಿಂಗ್ ಬಿಜೆಪಿಗೆ ಮತ ನೀಡುವಂತೆ ಹೇಳಿಕೆ ನೀಡಿದ್ದರು. ಮೋದಿ ಸರ್ಕಾರವಾಗಲೀ, ಚುನಾವಣಾ ಆಯೋಗವಾಗಲೀ ಶಿಸ್ತಿನ ಕ್ರಮ ಕೈಗೊಳ್ಳಲಿಲ್ಲ. ರಾಷ್ಟ್ರಾಧ್ಯಕ್ಷರಿಗೆ ಈ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದಾಗ ರಾಷ್ಟ್ರಾಧ್ಯಕ್ಷರು ಆ ಅರ್ಜಿಯನ್ನು ಪ್ರಧಾನಿ ಮೋದಿ ಅವರಿಗೆ ರವಾನಿಸಿ ಕೈ ತೊಳೆದುಕೊಂಡರು. ನ್ಯಾಯವಾಗಿ ಚುನಾವಣಾ ಆಯೋಗವು ರಾಷ್ಟ್ರಾಧ್ಯಕ್ಷರಿಗೆ ಕಲ್ಯಾಣ್‍ಸಿಂಗ್ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಬೇಕಾಗಿತ್ತು. ಚುನಾವಣಾ ಆಯೋಗವು ಬೊಗಳುವುದನ್ನು ನಿಲ್ಲಿಸಿ ಕಚ್ಚುವುದನ್ನು ಅಭ್ಯಾಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...