Homeಮುಖಪುಟಚುನಾವಣೆ ನಿಗದಿತ ಸಮಯಕ್ಕೆ ನಡೆಯಲಿ ಎಂಬುದು ಎಲ್ಲಾ ಪಕ್ಷಗಳ ಇಚ್ಛೆ: ಚುನಾವಣಾ ಆಯೋಗ

ಚುನಾವಣೆ ನಿಗದಿತ ಸಮಯಕ್ಕೆ ನಡೆಯಲಿ ಎಂಬುದು ಎಲ್ಲಾ ಪಕ್ಷಗಳ ಇಚ್ಛೆ: ಚುನಾವಣಾ ಆಯೋಗ

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಮತ್ತು ಓಮಿಕ್ರಾನ್ ಪ್ರಕರಣಗಳ ಮಧ್ಯೆ, ಚುನಾವಣಾ ಆಯೋಗವು ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಗಳು ಮುಂದೂಡುವುದಿಲ್ಲ ಎಂದು ಗುರುವಾರ ಹೇಳಿದೆ.

“ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನಮ್ಮನ್ನು ಭೇಟಿ ಮಾಡಿದ್ದರು. ಎಲ್ಲಾ ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಸಮಯಕ್ಕೆ ಚುನಾವಣೆಗಳನ್ನು ನಡೆಸಬೇಕು ಎಂದು ನಮಗೆ ಮನವಿ ಮಾಡಿದ್ದಾರೆ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

“ಎಲ್ಲಾ ಮತಗಟ್ಟೆಗಳಲ್ಲಿ VVPAT ಗಳನ್ನು ಅಳವಡಿಸಲಾಗುವುದು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 1 ಲಕ್ಷ ಮತಗಟ್ಟೆಗಳಲ್ಲಿ ಲೈವ್ ವೆಬ್‌ಕಾಸ್ಟಿಂಗ್ ಸೌಲಭ್ಯಗಳು ಲಭ್ಯವಿರುತ್ತವೆ” ಎಂದಿದ್ದಾರೆ.

“2017 ಯುಪಿ ವಿಧಾನಸಭೆ ಚುನಾವಣೆಯಲ್ಲಿ 61% ಮತದಾನವಾಗಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ 59% ಮತದಾನವಾಗಿತ್ತು. ಜನರಲ್ಲಿ ಹೆಚ್ಚಿನ ರಾಜಕೀಯ ಅರಿವು ಇರುವ ರಾಜ್ಯದಲ್ಲಿ ಮತದಾನದ ಶೇಕಡಾವಾರು ಏಕೆ ಕಡಿಮೆಯಾಗಿದೆ ಎಂಬುದು ಆತಂಕದ ವಿಷಯ” ಎಂದು ಯುಪಿ ಚುನಾವಣೆಗಳ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಸಾಧ್ಯತೆಯಿಲ್ಲ: ಮೂಲಗಳು

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ 24 ಗಂಟೆಗಳಲ್ಲಿ 180 ಹೊಸ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 961 ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಗರಿಷ್ಠ 263 ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ 252, ಗುಜರಾತ್ 97, ರಾಜಸ್ಥಾನ 69, ಕೇರಳ 65 ಮತ್ತು ತೆಲಂಗಾಣ 62 ಪ್ರಕರಣಗಳು ವರದಿಯಾಗಿವೆ.

———————

ಇದನ್ನೂ ಓದಿ: ಯುಪಿ ಚುನಾವಣೆ ಮೂಂದೂಡಿ, ರ್ಯಾಲಿಗಳನ್ನು ರದ್ದುಗೊಳಿಸಿ: ಚುನಾವಣಾ ಆಯೋಗ, ಪ್ರಧಾನಿಗೆ ಹೈಕೋರ್ಟ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...