Homeಮುಖಪುಟಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವಿಶಿಷ್ಟ ‘ಆಲ್ಫಾನ್ಯೂಮರಿಕ್ ಕೋಡ್‌’ನೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಇಂದು (ಮಾ.21) ಅಪ್ಲೋಡ್‌ ಮಾಡಿದೆ.

ಬಾಂಡ್‌ ಸಂಖ್ಯೆಗಳು (ಆಲ್ಫಾನ್ಯೂಮರಿಕ್ ಕೋಡ್‌) ಸೇರಿದಂತೆ ಚುನಾವಣಾ ಬಾಂಡ್‌ ಸಂಬಂಧಿತ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿರುವುದಾಗಿ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ಆಯೋಗ ಬಾಂಡ್‌ಗಳ ಹೊಸ ಪಟ್ಟಿ ಪ್ರಕಟಿಸಿದೆ.

ಚುನಾವಣಾ ಆಯೋಗ ಹೊಸದಾಗಿ ಪ್ರಕಟಿಸಿದ ಚುನಾವಣಾ ಬಾಂಡ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ  

ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿಯು ಬಾಂಡ್‌ಗಳ ಎಲ್ಲಾ ಪ್ರಮುಖ ಸೀರಿಯಲ್ ನಂಬರ್‌ಗಳನ್ನು ಒಳಗೊಂಡಿದೆ. ಚುನಾವಣಾ ಬಾಂಡ್‌ಗಳ ‘ಆಲ್ಫಾನ್ಯೂಮರಿಕ್’ ಮತ್ತು ‘ಸೀರಿಯಲ್ ನಂಬರ್‌’ಗಳು ಯಾವ ಕಂಪನಿ ಮತ್ತು ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಸಹಕಾರಿಯಾಗಿದೆ.

ರಾಜಕೀಯ ಪಕ್ಷಗಳು ನಗದೀಕರಣ ಮಾಡಿಕೊಂಡ ವಿವರಗಳು ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್ ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆಯ ಕೋಡ್ ಮತ್ತು ಪೇ ಟೆಲ್ಲರ್ ಅನ್ನು ಒಳಗೊಂಡಿದೆ.

ವಿಶಿಷ್ಟವಾದ ಆಲ್ಫಾನ್ಯೂಮರಿಕ್ ಕೋಡ್ ಇಲ್ಲದೆ, ದೇಣಿಗೆ ನೀಡಿದವರು ಮತ್ತು ಪಡೆದವರ ಪಟ್ಟಿಗಳನ್ನು ಲಿಂಕ್ ಮಾಡಲು ಸಾಧ್ಯವಿರಲಿಲ್ಲ. ಈಗ ಅದನ್ನು ಎಸ್‌ಬಿಐ ಒದಗಿಸಿದೆ. ಆಲ್ಫಾನ್ಯೂಮರಿಕ್ ಕೋಡ್ ಅನ್ನು ನೇರಳಾತೀತ (UV)ಬೆಳಕನ್ನು ಬಳಸಿ ಮಾತ್ರ ನೋಡಬಹುದಾಗಿದೆ.

ಸೋಮವಾರ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 21ರೊಳಗೆ ಆಲ್ಫಾನ್ಯೂಮರಿಕ್ ಕೋಡ್‌ ಸೇರಿದಂತೆ ಚುನಾವಣಾ ಬಾಂಡ್ ಸಂಬಂಧಿತ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು. ಎಸ್‌ಬಿಐನಿಂದ ಪಡೆದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ಇಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಡ್‌ನಲ್ಲಿ ಪ್ರಿಫಿಕ್ಸ್‌ ಮತ್ತು ಬಾಂಡ್‌ ನಂಬರ್ ಆಲ್ಫಾನ್ಯೂಮರಿಕ್ ಎಂದು ತಿಳಿಸಿದ್ದಾರೆ.

ಎಸ್‌ಬಿಐ ಚುನಾವಣಾ ಆಯೋಗಕ್ಕೆ ಕೊನೆಯದಾಗಿ ನೀಡಿರುವ ಮಾಹಿತಿಯಲ್ಲ ಈ ಕೆಳಗಿನವುಗಳು ಒಳಗೊಂಡಿವೆ:

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು: ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ, ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ತಿಳಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...