Homeಮುಖಪುಟಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವಿಶಿಷ್ಟ ‘ಆಲ್ಫಾನ್ಯೂಮರಿಕ್ ಕೋಡ್‌’ನೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಇಂದು (ಮಾ.21) ಅಪ್ಲೋಡ್‌ ಮಾಡಿದೆ.

ಬಾಂಡ್‌ ಸಂಖ್ಯೆಗಳು (ಆಲ್ಫಾನ್ಯೂಮರಿಕ್ ಕೋಡ್‌) ಸೇರಿದಂತೆ ಚುನಾವಣಾ ಬಾಂಡ್‌ ಸಂಬಂಧಿತ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿರುವುದಾಗಿ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ಆಯೋಗ ಬಾಂಡ್‌ಗಳ ಹೊಸ ಪಟ್ಟಿ ಪ್ರಕಟಿಸಿದೆ.

ಚುನಾವಣಾ ಆಯೋಗ ಹೊಸದಾಗಿ ಪ್ರಕಟಿಸಿದ ಚುನಾವಣಾ ಬಾಂಡ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ  

ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿಯು ಬಾಂಡ್‌ಗಳ ಎಲ್ಲಾ ಪ್ರಮುಖ ಸೀರಿಯಲ್ ನಂಬರ್‌ಗಳನ್ನು ಒಳಗೊಂಡಿದೆ. ಚುನಾವಣಾ ಬಾಂಡ್‌ಗಳ ‘ಆಲ್ಫಾನ್ಯೂಮರಿಕ್’ ಮತ್ತು ‘ಸೀರಿಯಲ್ ನಂಬರ್‌’ಗಳು ಯಾವ ಕಂಪನಿ ಮತ್ತು ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಸಹಕಾರಿಯಾಗಿದೆ.

ರಾಜಕೀಯ ಪಕ್ಷಗಳು ನಗದೀಕರಣ ಮಾಡಿಕೊಂಡ ವಿವರಗಳು ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್ ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆಯ ಕೋಡ್ ಮತ್ತು ಪೇ ಟೆಲ್ಲರ್ ಅನ್ನು ಒಳಗೊಂಡಿದೆ.

ವಿಶಿಷ್ಟವಾದ ಆಲ್ಫಾನ್ಯೂಮರಿಕ್ ಕೋಡ್ ಇಲ್ಲದೆ, ದೇಣಿಗೆ ನೀಡಿದವರು ಮತ್ತು ಪಡೆದವರ ಪಟ್ಟಿಗಳನ್ನು ಲಿಂಕ್ ಮಾಡಲು ಸಾಧ್ಯವಿರಲಿಲ್ಲ. ಈಗ ಅದನ್ನು ಎಸ್‌ಬಿಐ ಒದಗಿಸಿದೆ. ಆಲ್ಫಾನ್ಯೂಮರಿಕ್ ಕೋಡ್ ಅನ್ನು ನೇರಳಾತೀತ (UV)ಬೆಳಕನ್ನು ಬಳಸಿ ಮಾತ್ರ ನೋಡಬಹುದಾಗಿದೆ.

ಸೋಮವಾರ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 21ರೊಳಗೆ ಆಲ್ಫಾನ್ಯೂಮರಿಕ್ ಕೋಡ್‌ ಸೇರಿದಂತೆ ಚುನಾವಣಾ ಬಾಂಡ್ ಸಂಬಂಧಿತ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು. ಎಸ್‌ಬಿಐನಿಂದ ಪಡೆದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ಇಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಡ್‌ನಲ್ಲಿ ಪ್ರಿಫಿಕ್ಸ್‌ ಮತ್ತು ಬಾಂಡ್‌ ನಂಬರ್ ಆಲ್ಫಾನ್ಯೂಮರಿಕ್ ಎಂದು ತಿಳಿಸಿದ್ದಾರೆ.

ಎಸ್‌ಬಿಐ ಚುನಾವಣಾ ಆಯೋಗಕ್ಕೆ ಕೊನೆಯದಾಗಿ ನೀಡಿರುವ ಮಾಹಿತಿಯಲ್ಲ ಈ ಕೆಳಗಿನವುಗಳು ಒಳಗೊಂಡಿವೆ:

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು: ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ, ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ತಿಳಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...