Homeಮುಖಪುಟಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವಿಶಿಷ್ಟ ‘ಆಲ್ಫಾನ್ಯೂಮರಿಕ್ ಕೋಡ್‌’ನೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಇಂದು (ಮಾ.21) ಅಪ್ಲೋಡ್‌ ಮಾಡಿದೆ.

ಬಾಂಡ್‌ ಸಂಖ್ಯೆಗಳು (ಆಲ್ಫಾನ್ಯೂಮರಿಕ್ ಕೋಡ್‌) ಸೇರಿದಂತೆ ಚುನಾವಣಾ ಬಾಂಡ್‌ ಸಂಬಂಧಿತ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿರುವುದಾಗಿ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ಆಯೋಗ ಬಾಂಡ್‌ಗಳ ಹೊಸ ಪಟ್ಟಿ ಪ್ರಕಟಿಸಿದೆ.

ಚುನಾವಣಾ ಆಯೋಗ ಹೊಸದಾಗಿ ಪ್ರಕಟಿಸಿದ ಚುನಾವಣಾ ಬಾಂಡ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ  

ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿಯು ಬಾಂಡ್‌ಗಳ ಎಲ್ಲಾ ಪ್ರಮುಖ ಸೀರಿಯಲ್ ನಂಬರ್‌ಗಳನ್ನು ಒಳಗೊಂಡಿದೆ. ಚುನಾವಣಾ ಬಾಂಡ್‌ಗಳ ‘ಆಲ್ಫಾನ್ಯೂಮರಿಕ್’ ಮತ್ತು ‘ಸೀರಿಯಲ್ ನಂಬರ್‌’ಗಳು ಯಾವ ಕಂಪನಿ ಮತ್ತು ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಸಹಕಾರಿಯಾಗಿದೆ.

ರಾಜಕೀಯ ಪಕ್ಷಗಳು ನಗದೀಕರಣ ಮಾಡಿಕೊಂಡ ವಿವರಗಳು ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್ ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆಯ ಕೋಡ್ ಮತ್ತು ಪೇ ಟೆಲ್ಲರ್ ಅನ್ನು ಒಳಗೊಂಡಿದೆ.

ವಿಶಿಷ್ಟವಾದ ಆಲ್ಫಾನ್ಯೂಮರಿಕ್ ಕೋಡ್ ಇಲ್ಲದೆ, ದೇಣಿಗೆ ನೀಡಿದವರು ಮತ್ತು ಪಡೆದವರ ಪಟ್ಟಿಗಳನ್ನು ಲಿಂಕ್ ಮಾಡಲು ಸಾಧ್ಯವಿರಲಿಲ್ಲ. ಈಗ ಅದನ್ನು ಎಸ್‌ಬಿಐ ಒದಗಿಸಿದೆ. ಆಲ್ಫಾನ್ಯೂಮರಿಕ್ ಕೋಡ್ ಅನ್ನು ನೇರಳಾತೀತ (UV)ಬೆಳಕನ್ನು ಬಳಸಿ ಮಾತ್ರ ನೋಡಬಹುದಾಗಿದೆ.

ಸೋಮವಾರ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 21ರೊಳಗೆ ಆಲ್ಫಾನ್ಯೂಮರಿಕ್ ಕೋಡ್‌ ಸೇರಿದಂತೆ ಚುನಾವಣಾ ಬಾಂಡ್ ಸಂಬಂಧಿತ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು. ಎಸ್‌ಬಿಐನಿಂದ ಪಡೆದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ಇಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಡ್‌ನಲ್ಲಿ ಪ್ರಿಫಿಕ್ಸ್‌ ಮತ್ತು ಬಾಂಡ್‌ ನಂಬರ್ ಆಲ್ಫಾನ್ಯೂಮರಿಕ್ ಎಂದು ತಿಳಿಸಿದ್ದಾರೆ.

ಎಸ್‌ಬಿಐ ಚುನಾವಣಾ ಆಯೋಗಕ್ಕೆ ಕೊನೆಯದಾಗಿ ನೀಡಿರುವ ಮಾಹಿತಿಯಲ್ಲ ಈ ಕೆಳಗಿನವುಗಳು ಒಳಗೊಂಡಿವೆ:

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು: ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ, ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ತಿಳಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...