Homeಮುಖಪುಟಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವಿಶಿಷ್ಟ ‘ಆಲ್ಫಾನ್ಯೂಮರಿಕ್ ಕೋಡ್‌’ನೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಇಂದು (ಮಾ.21) ಅಪ್ಲೋಡ್‌ ಮಾಡಿದೆ.

ಬಾಂಡ್‌ ಸಂಖ್ಯೆಗಳು (ಆಲ್ಫಾನ್ಯೂಮರಿಕ್ ಕೋಡ್‌) ಸೇರಿದಂತೆ ಚುನಾವಣಾ ಬಾಂಡ್‌ ಸಂಬಂಧಿತ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿರುವುದಾಗಿ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ಆಯೋಗ ಬಾಂಡ್‌ಗಳ ಹೊಸ ಪಟ್ಟಿ ಪ್ರಕಟಿಸಿದೆ.

ಚುನಾವಣಾ ಆಯೋಗ ಹೊಸದಾಗಿ ಪ್ರಕಟಿಸಿದ ಚುನಾವಣಾ ಬಾಂಡ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ  

ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿಯು ಬಾಂಡ್‌ಗಳ ಎಲ್ಲಾ ಪ್ರಮುಖ ಸೀರಿಯಲ್ ನಂಬರ್‌ಗಳನ್ನು ಒಳಗೊಂಡಿದೆ. ಚುನಾವಣಾ ಬಾಂಡ್‌ಗಳ ‘ಆಲ್ಫಾನ್ಯೂಮರಿಕ್’ ಮತ್ತು ‘ಸೀರಿಯಲ್ ನಂಬರ್‌’ಗಳು ಯಾವ ಕಂಪನಿ ಮತ್ತು ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಸಹಕಾರಿಯಾಗಿದೆ.

ರಾಜಕೀಯ ಪಕ್ಷಗಳು ನಗದೀಕರಣ ಮಾಡಿಕೊಂಡ ವಿವರಗಳು ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್ ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆಯ ಕೋಡ್ ಮತ್ತು ಪೇ ಟೆಲ್ಲರ್ ಅನ್ನು ಒಳಗೊಂಡಿದೆ.

ವಿಶಿಷ್ಟವಾದ ಆಲ್ಫಾನ್ಯೂಮರಿಕ್ ಕೋಡ್ ಇಲ್ಲದೆ, ದೇಣಿಗೆ ನೀಡಿದವರು ಮತ್ತು ಪಡೆದವರ ಪಟ್ಟಿಗಳನ್ನು ಲಿಂಕ್ ಮಾಡಲು ಸಾಧ್ಯವಿರಲಿಲ್ಲ. ಈಗ ಅದನ್ನು ಎಸ್‌ಬಿಐ ಒದಗಿಸಿದೆ. ಆಲ್ಫಾನ್ಯೂಮರಿಕ್ ಕೋಡ್ ಅನ್ನು ನೇರಳಾತೀತ (UV)ಬೆಳಕನ್ನು ಬಳಸಿ ಮಾತ್ರ ನೋಡಬಹುದಾಗಿದೆ.

ಸೋಮವಾರ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 21ರೊಳಗೆ ಆಲ್ಫಾನ್ಯೂಮರಿಕ್ ಕೋಡ್‌ ಸೇರಿದಂತೆ ಚುನಾವಣಾ ಬಾಂಡ್ ಸಂಬಂಧಿತ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು. ಎಸ್‌ಬಿಐನಿಂದ ಪಡೆದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ಇಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಡ್‌ನಲ್ಲಿ ಪ್ರಿಫಿಕ್ಸ್‌ ಮತ್ತು ಬಾಂಡ್‌ ನಂಬರ್ ಆಲ್ಫಾನ್ಯೂಮರಿಕ್ ಎಂದು ತಿಳಿಸಿದ್ದಾರೆ.

ಎಸ್‌ಬಿಐ ಚುನಾವಣಾ ಆಯೋಗಕ್ಕೆ ಕೊನೆಯದಾಗಿ ನೀಡಿರುವ ಮಾಹಿತಿಯಲ್ಲ ಈ ಕೆಳಗಿನವುಗಳು ಒಳಗೊಂಡಿವೆ:

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು: ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ, ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ತಿಳಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...