Homeಮುಖಪುಟಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

ಬಾಂಡ್ ಸಂಖ್ಯೆಗಳೊಂದಿಗೆ ಚುನಾವಣಾ ಬಾಂಡ್ ಮಾಹಿತಿ ಪ್ರಕಟಿಸಿದ ಚು. ಆಯೋಗ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವಿಶಿಷ್ಟ ‘ಆಲ್ಫಾನ್ಯೂಮರಿಕ್ ಕೋಡ್‌’ನೊಂದಿಗೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಇಂದು (ಮಾ.21) ಅಪ್ಲೋಡ್‌ ಮಾಡಿದೆ.

ಬಾಂಡ್‌ ಸಂಖ್ಯೆಗಳು (ಆಲ್ಫಾನ್ಯೂಮರಿಕ್ ಕೋಡ್‌) ಸೇರಿದಂತೆ ಚುನಾವಣಾ ಬಾಂಡ್‌ ಸಂಬಂಧಿತ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿರುವುದಾಗಿ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಚುನಾವಣಾ ಆಯೋಗ ಬಾಂಡ್‌ಗಳ ಹೊಸ ಪಟ್ಟಿ ಪ್ರಕಟಿಸಿದೆ.

ಚುನಾವಣಾ ಆಯೋಗ ಹೊಸದಾಗಿ ಪ್ರಕಟಿಸಿದ ಚುನಾವಣಾ ಬಾಂಡ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ  

ಚುನಾವಣಾ ಆಯೋಗ ಪ್ರಕಟಿಸಿದ ಮಾಹಿತಿಯು ಬಾಂಡ್‌ಗಳ ಎಲ್ಲಾ ಪ್ರಮುಖ ಸೀರಿಯಲ್ ನಂಬರ್‌ಗಳನ್ನು ಒಳಗೊಂಡಿದೆ. ಚುನಾವಣಾ ಬಾಂಡ್‌ಗಳ ‘ಆಲ್ಫಾನ್ಯೂಮರಿಕ್’ ಮತ್ತು ‘ಸೀರಿಯಲ್ ನಂಬರ್‌’ಗಳು ಯಾವ ಕಂಪನಿ ಮತ್ತು ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಸಹಕಾರಿಯಾಗಿದೆ.

ರಾಜಕೀಯ ಪಕ್ಷಗಳು ನಗದೀಕರಣ ಮಾಡಿಕೊಂಡ ವಿವರಗಳು ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್ ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆಯ ಕೋಡ್ ಮತ್ತು ಪೇ ಟೆಲ್ಲರ್ ಅನ್ನು ಒಳಗೊಂಡಿದೆ.

ವಿಶಿಷ್ಟವಾದ ಆಲ್ಫಾನ್ಯೂಮರಿಕ್ ಕೋಡ್ ಇಲ್ಲದೆ, ದೇಣಿಗೆ ನೀಡಿದವರು ಮತ್ತು ಪಡೆದವರ ಪಟ್ಟಿಗಳನ್ನು ಲಿಂಕ್ ಮಾಡಲು ಸಾಧ್ಯವಿರಲಿಲ್ಲ. ಈಗ ಅದನ್ನು ಎಸ್‌ಬಿಐ ಒದಗಿಸಿದೆ. ಆಲ್ಫಾನ್ಯೂಮರಿಕ್ ಕೋಡ್ ಅನ್ನು ನೇರಳಾತೀತ (UV)ಬೆಳಕನ್ನು ಬಳಸಿ ಮಾತ್ರ ನೋಡಬಹುದಾಗಿದೆ.

ಸೋಮವಾರ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 21ರೊಳಗೆ ಆಲ್ಫಾನ್ಯೂಮರಿಕ್ ಕೋಡ್‌ ಸೇರಿದಂತೆ ಚುನಾವಣಾ ಬಾಂಡ್ ಸಂಬಂಧಿತ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು. ಎಸ್‌ಬಿಐನಿಂದ ಪಡೆದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ಇಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಡ್‌ನಲ್ಲಿ ಪ್ರಿಫಿಕ್ಸ್‌ ಮತ್ತು ಬಾಂಡ್‌ ನಂಬರ್ ಆಲ್ಫಾನ್ಯೂಮರಿಕ್ ಎಂದು ತಿಳಿಸಿದ್ದಾರೆ.

ಎಸ್‌ಬಿಐ ಚುನಾವಣಾ ಆಯೋಗಕ್ಕೆ ಕೊನೆಯದಾಗಿ ನೀಡಿರುವ ಮಾಹಿತಿಯಲ್ಲ ಈ ಕೆಳಗಿನವುಗಳು ಒಳಗೊಂಡಿವೆ:

ಬಾಂಡ್‌ ಖರೀದಿದಾರರ ವಿವರಗಳು : ಸೀರಿಯಲ್ ನಂಬರ್ ಯುಆರ್‌ಎನ್ ನಂಬರ್, ಜರ್ನಲ್ ದಿನಾಂಕ, ಖರೀದಿಯ ದಿನಾಂಕ, ಮುಕ್ತಾಯ ದಿನಾಂಕ, ಖರೀದಿದಾರರ ಹೆಸರು, ಪ್ರಿಫಿಕ್ಸ್, ಬಾಂಡ್ ಸಂಖ್ಯೆ, ಮುಖಬೆಲೆ, ಬಾಂಡ್ ನೀಡಿದ ಎಸ್‌ಬಿಐ ಶಾಖೆಯ ಕೋಡ್, ಬಾಂಡ್‌ನ ಟೆಲ್ಲರ್, ಸ್ಟೇಟಸ್.

ಬಾಂಡ್‌ ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳು: ಕ್ರಮಸಂಖ್ಯೆ, ನಗದೀಕರಣದ ದಿನಾಂಕ, ರಾಜಕೀಯ ಪಕ್ಷದ ಹೆಸರು, ಖಾತೆ ಸಂಖ್ಯೆಯ ಕೊನೆಯ ನಾಲ್ಕು ಅಂಕೆಗಳು, ಪ್ರಿಫಿಕ್ಸ್‌, ಬಾಂಡ್ ಸಂಖ್ಯೆ, ಮುಖಬೆಲೆ, ಪಾವತಿ ಶಾಖೆ, ಕೋಡ್ ಮತ್ತು ಪಾವತಿ ಟೆಲ್ಲರ್.

ರಾಜಕೀಯ ಪಕ್ಷಗಳ ಸಂಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ, ಇದು ಖಾತೆಯ ಭದ್ರತೆಗೆ ಸಮಸ್ಯೆ ಉಂಟು ಮಾಡಬಹುದು ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ಹೇಳಿದೆ. ಅದೇ ರೀತಿ, ಖರೀದಿದಾರರ ಕೆವೈಸಿ ವಿವರಗಳನ್ನು ಕೂಡ ಸಾರ್ವಜನಿಕಗೊಳಿಸುತ್ತಿಲ್ಲ. ದೇಣಿಗೆ ಪಡೆದ ರಾಜಕೀಯ ಪಕ್ಷಗಳನ್ನು ಗುರುತಿಸಲು ಅವುಗಳ ಅಗತ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ಎಸ್‌ಬಿಐ ತಿಳಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಚು. ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...