Homeಮುಖಪುಟಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

- Advertisement -
- Advertisement -

ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯ ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ ಧಾರಣ ಅವಧಿಯನ್ನು 45 ದಿನಗಳಿಗೆ ಇಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 45 ದಿನಗಳ ಅವಧಿಯ ನಂತರ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಈ ಡೇಟಾವನ್ನು ಅಳಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ ಎಂದು ವರದಿ ತಿಳಿಸಿದೆ. ಮತದಾನದ ವೀಡಿಯೊ

ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ “ಇತ್ತೀಚಿನ ದುರುಪಯೋಗ”ವನ್ನು ಉಲ್ಲೇಖಿಸಿ, ಮೇ 30 ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ನೀಡಿದ ನೋಟಿಸ್‌ನಲ್ಲಿ, ಮತದಾನದ ವೀಡಿಯೊಗ್ರಫಿ ಮತ್ತು ಛಾಯಾಗ್ರಹಣವನ್ನು ಕಾನೂನಿನಿಂದ ಕಡ್ಡಾಯಗೊಳಿಸಲಾಗಿಲ್ಲ, ಆದರೆ ಅವುಗಳನ್ನು “ಆಂತರಿಕ ನಿರ್ವಹಣಾ ಸಾಧನ”ವಾಗಿ ಬಳಸಲಾಗಿದೆ ಎಂದು ಆಯೋಗ ಹೇಳಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಚುನಾವಣೆಯಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಪ್ರಶ್ನಿಸಿ 45 ದಿನಗಳ ಅವಧಿಯಲ್ಲಿ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಡೇಟಾವನ್ನು ಅಳಿಸಬಹುದು ಎಂದು ಆಯೋಗ ಹೇಳಿದೆ.

2024 ರಲ್ಲಿ, ಚುನಾವಣಾ ಪ್ರಕ್ರಿಯೆಯ ಹಂತಗಳ ವೀಡಿಯೊ ದೃಶ್ಯಾವಳಿಗಳನ್ನು ಸಂಗ್ರಹಿಸಲು ಚುನಾವಣಾ ಆಯೋಗವು ಮೂರು ತಿಂಗಳಿಂದ ಒಂದು ವರ್ಷದವರೆಗೆ ಸಮಯಾವಧಿಯನ್ನು ನಿಗದಿಪಡಿಸುವ ಸೂಚನೆಗಳನ್ನು ನೀಡಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ನಾಮನಿರ್ದೇಶನ ಪೂರ್ವ ಅವಧಿಯ ದೃಶ್ಯಾವಳಿಗಳನ್ನು ಮೂರು ತಿಂಗಳವರೆಗೆ ಉಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಗಳು ಆದೇಶಿಸಿವೆ. ನಾಮಪತ್ರ ಸಲ್ಲಿಕೆ ಹಂತ, ಪ್ರಚಾರದ ಅವಧಿ, ಮತದಾನ ಮತ್ತು ಎಣಿಕೆಯ ದಾಖಲೆಗಳನ್ನು ಆರು ತಿಂಗಳಿಂದ ಒಂದು ವರ್ಷದವರೆಗಿನ ಅವಧಿಯವರೆಗೆ ಸಂರಕ್ಷಿಸಬೇಕು ಎಂದು ಅದು ಹೇಳಿದೆ.

ಮೇ 30 ರ ತನ್ನ ಸೂಚನೆಯಲ್ಲಿ, “ಇತ್ತೀಚೆಗೆ ಸ್ಪರ್ಧಿಗಳಲ್ಲದವರು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಮತ್ತು ದುರುದ್ದೇಶಪೂರಿತ ನಿರೂಪಣೆಗಳನ್ನು ಹರಡಲು ಆಯ್ದ ಮತ್ತು ಸಂದರ್ಭಕ್ಕೆ ಹೊರತಾದ ವಿಷಯವನ್ನು ಬಳಸುವುದರಿಂದ ಯಾವುದೇ ಕಾನೂನು ಫರಿಹಾರ ಸಿಗುವುದಿಲ್ಲ. ಹಾಗಾಗಿ ಈ ಕಾನೂನನ್ನು ಪರಿಶೀಲನೆಗೆ ಒಳಪಡಿಸಿದ್ದೇವೆ” ಎಂದು ಚುನಾವಣಾ ಆಯೋಗ ಹೇಳಿದೆ.

“ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಚುನಾವಣಾ ಅರ್ಜಿ ಸಲ್ಲಿಕೆಯಾಗದಿದ್ದರೆ, ಹೇಳಲಾದ ಡೇಟಾವನ್ನು ನಾಶಪಡಿಸಬಹುದು” ಎಂದು ಅದು ಹೇಳಿದೆ. ಹೊಸ ಸೂಚನೆಗಳೊಂದಿಗೆ, ದೃಶ್ಯಗಳನ್ನು ಸಂಗ್ರಹಿಸುವ ಸಮಯವು ಚುನಾವಣಾ ಅರ್ಜಿಯನ್ನು ಸಲ್ಲಿಸಲು 45 ದಿನಗಳ ಅವಧಿಗೆ ಹೊಂದಿಕೆಯಾಗುತ್ತದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಕೇಂದ್ರ ಸರ್ಕಾರವು ಡಿಸೆಂಬರ್‌ನಲ್ಲಿ ಚುನಾವಣಾ ನಿಯಮಗಳ ನಿಯಮ 93(2)(ಎ) ಅನ್ನು ತಿದ್ದುಪಡಿ ಮಾಡಿತ್ತು. ಅದಕ್ಕೂ ಮುಂಚೆ, ಈ ನಿಯಮವು, “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು” ಎಂದು ಇತ್ತು. ಆದರೆ, ಅದನ್ನು “ಚುನಾವಣೆಗೆ ಸಂಬಂಧಿಸಿದ ಈ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರುತ್ತವೆ.” ಎಂದು ತಿದ್ದುಪಡಿ ಮಾಡಿ ಬದಲಾಯಿಸಲಾಯಿತು.

ಈ ಬದಲಾವಣೆಯೊಂದಿಗೆ ಎಲ್ಲಾ ಮತದಾನ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರು ಪರಿಶೀಲಿಸಲು ಸಾಧ್ಯವಿಲ್ಲ. ಚುನಾವಣಾ ನಡವಳಿಕೆ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಪರಿಶೀಲಿಸಬಹುದಾಗಿದೆ. ಈ ತಿದ್ದುಪಡಿಯಿಂದಾಗಿ ನ್ಯಾಯಾಲಯಗಳು ಕೂಡಾ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಸಾರ್ವಜನಿಕ ಪರಿಶೀಲನೆಗೆ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸಾಧ್ಯವಾಗುವುದಿಲ್ಲ. ಅದಾಗ್ಯೂ, ಈ ನಿಯಮಗಳ ಬದಲಾವಣೆಯನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಮತದಾನದ ವೀಡಿಯೊ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...