Homeಮುಖಪುಟಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

- Advertisement -
- Advertisement -

ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯ ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ ಧಾರಣ ಅವಧಿಯನ್ನು 45 ದಿನಗಳಿಗೆ ಇಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 45 ದಿನಗಳ ಅವಧಿಯ ನಂತರ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಈ ಡೇಟಾವನ್ನು ಅಳಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ ಎಂದು ವರದಿ ತಿಳಿಸಿದೆ. ಮತದಾನದ ವೀಡಿಯೊ

ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ “ಇತ್ತೀಚಿನ ದುರುಪಯೋಗ”ವನ್ನು ಉಲ್ಲೇಖಿಸಿ, ಮೇ 30 ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ನೀಡಿದ ನೋಟಿಸ್‌ನಲ್ಲಿ, ಮತದಾನದ ವೀಡಿಯೊಗ್ರಫಿ ಮತ್ತು ಛಾಯಾಗ್ರಹಣವನ್ನು ಕಾನೂನಿನಿಂದ ಕಡ್ಡಾಯಗೊಳಿಸಲಾಗಿಲ್ಲ, ಆದರೆ ಅವುಗಳನ್ನು “ಆಂತರಿಕ ನಿರ್ವಹಣಾ ಸಾಧನ”ವಾಗಿ ಬಳಸಲಾಗಿದೆ ಎಂದು ಆಯೋಗ ಹೇಳಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಚುನಾವಣೆಯಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಪ್ರಶ್ನಿಸಿ 45 ದಿನಗಳ ಅವಧಿಯಲ್ಲಿ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಡೇಟಾವನ್ನು ಅಳಿಸಬಹುದು ಎಂದು ಆಯೋಗ ಹೇಳಿದೆ.

2024 ರಲ್ಲಿ, ಚುನಾವಣಾ ಪ್ರಕ್ರಿಯೆಯ ಹಂತಗಳ ವೀಡಿಯೊ ದೃಶ್ಯಾವಳಿಗಳನ್ನು ಸಂಗ್ರಹಿಸಲು ಚುನಾವಣಾ ಆಯೋಗವು ಮೂರು ತಿಂಗಳಿಂದ ಒಂದು ವರ್ಷದವರೆಗೆ ಸಮಯಾವಧಿಯನ್ನು ನಿಗದಿಪಡಿಸುವ ಸೂಚನೆಗಳನ್ನು ನೀಡಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ನಾಮನಿರ್ದೇಶನ ಪೂರ್ವ ಅವಧಿಯ ದೃಶ್ಯಾವಳಿಗಳನ್ನು ಮೂರು ತಿಂಗಳವರೆಗೆ ಉಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಗಳು ಆದೇಶಿಸಿವೆ. ನಾಮಪತ್ರ ಸಲ್ಲಿಕೆ ಹಂತ, ಪ್ರಚಾರದ ಅವಧಿ, ಮತದಾನ ಮತ್ತು ಎಣಿಕೆಯ ದಾಖಲೆಗಳನ್ನು ಆರು ತಿಂಗಳಿಂದ ಒಂದು ವರ್ಷದವರೆಗಿನ ಅವಧಿಯವರೆಗೆ ಸಂರಕ್ಷಿಸಬೇಕು ಎಂದು ಅದು ಹೇಳಿದೆ.

ಮೇ 30 ರ ತನ್ನ ಸೂಚನೆಯಲ್ಲಿ, “ಇತ್ತೀಚೆಗೆ ಸ್ಪರ್ಧಿಗಳಲ್ಲದವರು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಮತ್ತು ದುರುದ್ದೇಶಪೂರಿತ ನಿರೂಪಣೆಗಳನ್ನು ಹರಡಲು ಆಯ್ದ ಮತ್ತು ಸಂದರ್ಭಕ್ಕೆ ಹೊರತಾದ ವಿಷಯವನ್ನು ಬಳಸುವುದರಿಂದ ಯಾವುದೇ ಕಾನೂನು ಫರಿಹಾರ ಸಿಗುವುದಿಲ್ಲ. ಹಾಗಾಗಿ ಈ ಕಾನೂನನ್ನು ಪರಿಶೀಲನೆಗೆ ಒಳಪಡಿಸಿದ್ದೇವೆ” ಎಂದು ಚುನಾವಣಾ ಆಯೋಗ ಹೇಳಿದೆ.

“ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಚುನಾವಣಾ ಅರ್ಜಿ ಸಲ್ಲಿಕೆಯಾಗದಿದ್ದರೆ, ಹೇಳಲಾದ ಡೇಟಾವನ್ನು ನಾಶಪಡಿಸಬಹುದು” ಎಂದು ಅದು ಹೇಳಿದೆ. ಹೊಸ ಸೂಚನೆಗಳೊಂದಿಗೆ, ದೃಶ್ಯಗಳನ್ನು ಸಂಗ್ರಹಿಸುವ ಸಮಯವು ಚುನಾವಣಾ ಅರ್ಜಿಯನ್ನು ಸಲ್ಲಿಸಲು 45 ದಿನಗಳ ಅವಧಿಗೆ ಹೊಂದಿಕೆಯಾಗುತ್ತದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಕೇಂದ್ರ ಸರ್ಕಾರವು ಡಿಸೆಂಬರ್‌ನಲ್ಲಿ ಚುನಾವಣಾ ನಿಯಮಗಳ ನಿಯಮ 93(2)(ಎ) ಅನ್ನು ತಿದ್ದುಪಡಿ ಮಾಡಿತ್ತು. ಅದಕ್ಕೂ ಮುಂಚೆ, ಈ ನಿಯಮವು, “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು” ಎಂದು ಇತ್ತು. ಆದರೆ, ಅದನ್ನು “ಚುನಾವಣೆಗೆ ಸಂಬಂಧಿಸಿದ ಈ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರುತ್ತವೆ.” ಎಂದು ತಿದ್ದುಪಡಿ ಮಾಡಿ ಬದಲಾಯಿಸಲಾಯಿತು.

ಈ ಬದಲಾವಣೆಯೊಂದಿಗೆ ಎಲ್ಲಾ ಮತದಾನ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರು ಪರಿಶೀಲಿಸಲು ಸಾಧ್ಯವಿಲ್ಲ. ಚುನಾವಣಾ ನಡವಳಿಕೆ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಪರಿಶೀಲಿಸಬಹುದಾಗಿದೆ. ಈ ತಿದ್ದುಪಡಿಯಿಂದಾಗಿ ನ್ಯಾಯಾಲಯಗಳು ಕೂಡಾ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಸಾರ್ವಜನಿಕ ಪರಿಶೀಲನೆಗೆ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸಾಧ್ಯವಾಗುವುದಿಲ್ಲ. ಅದಾಗ್ಯೂ, ಈ ನಿಯಮಗಳ ಬದಲಾವಣೆಯನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಮತದಾನದ ವೀಡಿಯೊ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...