Homeಮುಖಪುಟಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

- Advertisement -
- Advertisement -

ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯ ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ ಧಾರಣ ಅವಧಿಯನ್ನು 45 ದಿನಗಳಿಗೆ ಇಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 45 ದಿನಗಳ ಅವಧಿಯ ನಂತರ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಈ ಡೇಟಾವನ್ನು ಅಳಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ ಎಂದು ವರದಿ ತಿಳಿಸಿದೆ. ಮತದಾನದ ವೀಡಿಯೊ

ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ “ಇತ್ತೀಚಿನ ದುರುಪಯೋಗ”ವನ್ನು ಉಲ್ಲೇಖಿಸಿ, ಮೇ 30 ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ನೀಡಿದ ನೋಟಿಸ್‌ನಲ್ಲಿ, ಮತದಾನದ ವೀಡಿಯೊಗ್ರಫಿ ಮತ್ತು ಛಾಯಾಗ್ರಹಣವನ್ನು ಕಾನೂನಿನಿಂದ ಕಡ್ಡಾಯಗೊಳಿಸಲಾಗಿಲ್ಲ, ಆದರೆ ಅವುಗಳನ್ನು “ಆಂತರಿಕ ನಿರ್ವಹಣಾ ಸಾಧನ”ವಾಗಿ ಬಳಸಲಾಗಿದೆ ಎಂದು ಆಯೋಗ ಹೇಳಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಚುನಾವಣೆಯಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಪ್ರಶ್ನಿಸಿ 45 ದಿನಗಳ ಅವಧಿಯಲ್ಲಿ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಡೇಟಾವನ್ನು ಅಳಿಸಬಹುದು ಎಂದು ಆಯೋಗ ಹೇಳಿದೆ.

2024 ರಲ್ಲಿ, ಚುನಾವಣಾ ಪ್ರಕ್ರಿಯೆಯ ಹಂತಗಳ ವೀಡಿಯೊ ದೃಶ್ಯಾವಳಿಗಳನ್ನು ಸಂಗ್ರಹಿಸಲು ಚುನಾವಣಾ ಆಯೋಗವು ಮೂರು ತಿಂಗಳಿಂದ ಒಂದು ವರ್ಷದವರೆಗೆ ಸಮಯಾವಧಿಯನ್ನು ನಿಗದಿಪಡಿಸುವ ಸೂಚನೆಗಳನ್ನು ನೀಡಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ನಾಮನಿರ್ದೇಶನ ಪೂರ್ವ ಅವಧಿಯ ದೃಶ್ಯಾವಳಿಗಳನ್ನು ಮೂರು ತಿಂಗಳವರೆಗೆ ಉಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಗಳು ಆದೇಶಿಸಿವೆ. ನಾಮಪತ್ರ ಸಲ್ಲಿಕೆ ಹಂತ, ಪ್ರಚಾರದ ಅವಧಿ, ಮತದಾನ ಮತ್ತು ಎಣಿಕೆಯ ದಾಖಲೆಗಳನ್ನು ಆರು ತಿಂಗಳಿಂದ ಒಂದು ವರ್ಷದವರೆಗಿನ ಅವಧಿಯವರೆಗೆ ಸಂರಕ್ಷಿಸಬೇಕು ಎಂದು ಅದು ಹೇಳಿದೆ.

ಮೇ 30 ರ ತನ್ನ ಸೂಚನೆಯಲ್ಲಿ, “ಇತ್ತೀಚೆಗೆ ಸ್ಪರ್ಧಿಗಳಲ್ಲದವರು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಮತ್ತು ದುರುದ್ದೇಶಪೂರಿತ ನಿರೂಪಣೆಗಳನ್ನು ಹರಡಲು ಆಯ್ದ ಮತ್ತು ಸಂದರ್ಭಕ್ಕೆ ಹೊರತಾದ ವಿಷಯವನ್ನು ಬಳಸುವುದರಿಂದ ಯಾವುದೇ ಕಾನೂನು ಫರಿಹಾರ ಸಿಗುವುದಿಲ್ಲ. ಹಾಗಾಗಿ ಈ ಕಾನೂನನ್ನು ಪರಿಶೀಲನೆಗೆ ಒಳಪಡಿಸಿದ್ದೇವೆ” ಎಂದು ಚುನಾವಣಾ ಆಯೋಗ ಹೇಳಿದೆ.

“ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಚುನಾವಣಾ ಅರ್ಜಿ ಸಲ್ಲಿಕೆಯಾಗದಿದ್ದರೆ, ಹೇಳಲಾದ ಡೇಟಾವನ್ನು ನಾಶಪಡಿಸಬಹುದು” ಎಂದು ಅದು ಹೇಳಿದೆ. ಹೊಸ ಸೂಚನೆಗಳೊಂದಿಗೆ, ದೃಶ್ಯಗಳನ್ನು ಸಂಗ್ರಹಿಸುವ ಸಮಯವು ಚುನಾವಣಾ ಅರ್ಜಿಯನ್ನು ಸಲ್ಲಿಸಲು 45 ದಿನಗಳ ಅವಧಿಗೆ ಹೊಂದಿಕೆಯಾಗುತ್ತದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಕೇಂದ್ರ ಸರ್ಕಾರವು ಡಿಸೆಂಬರ್‌ನಲ್ಲಿ ಚುನಾವಣಾ ನಿಯಮಗಳ ನಿಯಮ 93(2)(ಎ) ಅನ್ನು ತಿದ್ದುಪಡಿ ಮಾಡಿತ್ತು. ಅದಕ್ಕೂ ಮುಂಚೆ, ಈ ನಿಯಮವು, “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು” ಎಂದು ಇತ್ತು. ಆದರೆ, ಅದನ್ನು “ಚುನಾವಣೆಗೆ ಸಂಬಂಧಿಸಿದ ಈ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರುತ್ತವೆ.” ಎಂದು ತಿದ್ದುಪಡಿ ಮಾಡಿ ಬದಲಾಯಿಸಲಾಯಿತು.

ಈ ಬದಲಾವಣೆಯೊಂದಿಗೆ ಎಲ್ಲಾ ಮತದಾನ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರು ಪರಿಶೀಲಿಸಲು ಸಾಧ್ಯವಿಲ್ಲ. ಚುನಾವಣಾ ನಡವಳಿಕೆ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಪರಿಶೀಲಿಸಬಹುದಾಗಿದೆ. ಈ ತಿದ್ದುಪಡಿಯಿಂದಾಗಿ ನ್ಯಾಯಾಲಯಗಳು ಕೂಡಾ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಸಾರ್ವಜನಿಕ ಪರಿಶೀಲನೆಗೆ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸಾಧ್ಯವಾಗುವುದಿಲ್ಲ. ಅದಾಗ್ಯೂ, ಈ ನಿಯಮಗಳ ಬದಲಾವಣೆಯನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಮತದಾನದ ವೀಡಿಯೊ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...