Homeಮುಖಪುಟಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

- Advertisement -
- Advertisement -

ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯ ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ ಧಾರಣ ಅವಧಿಯನ್ನು 45 ದಿನಗಳಿಗೆ ಇಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 45 ದಿನಗಳ ಅವಧಿಯ ನಂತರ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಈ ಡೇಟಾವನ್ನು ಅಳಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ ಎಂದು ವರದಿ ತಿಳಿಸಿದೆ. ಮತದಾನದ ವೀಡಿಯೊ

ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ “ಇತ್ತೀಚಿನ ದುರುಪಯೋಗ”ವನ್ನು ಉಲ್ಲೇಖಿಸಿ, ಮೇ 30 ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ನೀಡಿದ ನೋಟಿಸ್‌ನಲ್ಲಿ, ಮತದಾನದ ವೀಡಿಯೊಗ್ರಫಿ ಮತ್ತು ಛಾಯಾಗ್ರಹಣವನ್ನು ಕಾನೂನಿನಿಂದ ಕಡ್ಡಾಯಗೊಳಿಸಲಾಗಿಲ್ಲ, ಆದರೆ ಅವುಗಳನ್ನು “ಆಂತರಿಕ ನಿರ್ವಹಣಾ ಸಾಧನ”ವಾಗಿ ಬಳಸಲಾಗಿದೆ ಎಂದು ಆಯೋಗ ಹೇಳಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಚುನಾವಣೆಯಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಪ್ರಶ್ನಿಸಿ 45 ದಿನಗಳ ಅವಧಿಯಲ್ಲಿ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಡೇಟಾವನ್ನು ಅಳಿಸಬಹುದು ಎಂದು ಆಯೋಗ ಹೇಳಿದೆ.

2024 ರಲ್ಲಿ, ಚುನಾವಣಾ ಪ್ರಕ್ರಿಯೆಯ ಹಂತಗಳ ವೀಡಿಯೊ ದೃಶ್ಯಾವಳಿಗಳನ್ನು ಸಂಗ್ರಹಿಸಲು ಚುನಾವಣಾ ಆಯೋಗವು ಮೂರು ತಿಂಗಳಿಂದ ಒಂದು ವರ್ಷದವರೆಗೆ ಸಮಯಾವಧಿಯನ್ನು ನಿಗದಿಪಡಿಸುವ ಸೂಚನೆಗಳನ್ನು ನೀಡಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ನಾಮನಿರ್ದೇಶನ ಪೂರ್ವ ಅವಧಿಯ ದೃಶ್ಯಾವಳಿಗಳನ್ನು ಮೂರು ತಿಂಗಳವರೆಗೆ ಉಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಗಳು ಆದೇಶಿಸಿವೆ. ನಾಮಪತ್ರ ಸಲ್ಲಿಕೆ ಹಂತ, ಪ್ರಚಾರದ ಅವಧಿ, ಮತದಾನ ಮತ್ತು ಎಣಿಕೆಯ ದಾಖಲೆಗಳನ್ನು ಆರು ತಿಂಗಳಿಂದ ಒಂದು ವರ್ಷದವರೆಗಿನ ಅವಧಿಯವರೆಗೆ ಸಂರಕ್ಷಿಸಬೇಕು ಎಂದು ಅದು ಹೇಳಿದೆ.

ಮೇ 30 ರ ತನ್ನ ಸೂಚನೆಯಲ್ಲಿ, “ಇತ್ತೀಚೆಗೆ ಸ್ಪರ್ಧಿಗಳಲ್ಲದವರು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಮತ್ತು ದುರುದ್ದೇಶಪೂರಿತ ನಿರೂಪಣೆಗಳನ್ನು ಹರಡಲು ಆಯ್ದ ಮತ್ತು ಸಂದರ್ಭಕ್ಕೆ ಹೊರತಾದ ವಿಷಯವನ್ನು ಬಳಸುವುದರಿಂದ ಯಾವುದೇ ಕಾನೂನು ಫರಿಹಾರ ಸಿಗುವುದಿಲ್ಲ. ಹಾಗಾಗಿ ಈ ಕಾನೂನನ್ನು ಪರಿಶೀಲನೆಗೆ ಒಳಪಡಿಸಿದ್ದೇವೆ” ಎಂದು ಚುನಾವಣಾ ಆಯೋಗ ಹೇಳಿದೆ.

“ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಚುನಾವಣಾ ಅರ್ಜಿ ಸಲ್ಲಿಕೆಯಾಗದಿದ್ದರೆ, ಹೇಳಲಾದ ಡೇಟಾವನ್ನು ನಾಶಪಡಿಸಬಹುದು” ಎಂದು ಅದು ಹೇಳಿದೆ. ಹೊಸ ಸೂಚನೆಗಳೊಂದಿಗೆ, ದೃಶ್ಯಗಳನ್ನು ಸಂಗ್ರಹಿಸುವ ಸಮಯವು ಚುನಾವಣಾ ಅರ್ಜಿಯನ್ನು ಸಲ್ಲಿಸಲು 45 ದಿನಗಳ ಅವಧಿಗೆ ಹೊಂದಿಕೆಯಾಗುತ್ತದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಕೇಂದ್ರ ಸರ್ಕಾರವು ಡಿಸೆಂಬರ್‌ನಲ್ಲಿ ಚುನಾವಣಾ ನಿಯಮಗಳ ನಿಯಮ 93(2)(ಎ) ಅನ್ನು ತಿದ್ದುಪಡಿ ಮಾಡಿತ್ತು. ಅದಕ್ಕೂ ಮುಂಚೆ, ಈ ನಿಯಮವು, “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರಬೇಕು” ಎಂದು ಇತ್ತು. ಆದರೆ, ಅದನ್ನು “ಚುನಾವಣೆಗೆ ಸಂಬಂಧಿಸಿದ ಈ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ಪರಿಶೀಲನೆಗೆ ಮುಕ್ತವಾಗಿರುತ್ತವೆ.” ಎಂದು ತಿದ್ದುಪಡಿ ಮಾಡಿ ಬದಲಾಯಿಸಲಾಯಿತು.

ಈ ಬದಲಾವಣೆಯೊಂದಿಗೆ ಎಲ್ಲಾ ಮತದಾನ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರು ಪರಿಶೀಲಿಸಲು ಸಾಧ್ಯವಿಲ್ಲ. ಚುನಾವಣಾ ನಡವಳಿಕೆ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಪರಿಶೀಲಿಸಬಹುದಾಗಿದೆ. ಈ ತಿದ್ದುಪಡಿಯಿಂದಾಗಿ ನ್ಯಾಯಾಲಯಗಳು ಕೂಡಾ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಸಾರ್ವಜನಿಕ ಪರಿಶೀಲನೆಗೆ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸಾಧ್ಯವಾಗುವುದಿಲ್ಲ. ಅದಾಗ್ಯೂ, ಈ ನಿಯಮಗಳ ಬದಲಾವಣೆಯನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಮತದಾನದ ವೀಡಿಯೊ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...