Homeಮುಖಪುಟದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು 'ಜೆ.ಪಿ.ನಡ್ಡಾ'ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು, ಮೋದಿಗೆ ಅಲ್ಲ ಎನ್ನುವುದು ಬಯಲಾಗಿದೆ.

ವಾಸ್ತವವಾಗಿ, ನೋಟೀಸ್‌ನಲ್ಲಿ ಪ್ರಧಾನಿಯ ಹೆಸರನ್ನು ಉಲ್ಲೇಖಿಸಲಾಗಿಲ್ಲ. ನೋಟಿಸ್‌ಗೆ ಮೋದಿಯ ರಾಜಸ್ಥಾನದ ಬನ್ಸ್ವಾರಾದ ದುರುದ್ದೇಶಪೂರಿತ ಚುನಾವಣಾ ಭಾಷಣ ವಿರುದ್ಧದ ಕಾಂಗ್ರೆಸ್‌ನ ದೂರುಗಳು, ಜೊತೆಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೀಡಿರುವ ದೂರುಗಳ ಪ್ರತಿಯನ್ನು ಲಗತ್ತಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ  ದೂರುಗಳಿಗೆ ಸಂಬಂಧಿಸಿದಂತೆ ಇದೇ ರೀತಿಯ ನೋಟಿಸ್ ನೀಡಲಾಗಿದೆ.

ಪ್ರಧಾನ ಮಂತ್ರಿಯೊಬ್ಬರ ವಿರುದ್ಧದ ದೂರನ್ನು ಸಮಿತಿಯು ಪರಿಗಣನೆಗೆ ತೆಗೆದುಕೊಂಡಿರುವುದು ಇತ್ತೀಚಿನ ಇತಿಹಾಸದಲ್ಲಿ ಇದೇ ಮೊದಲು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ, ವಿರೋಧ ಪಕ್ಷಗಳು ನೀಡಿದ ದೂರಿಗೆ ಸಂಬಂಧಿಸಿ ಚುನಾವಣಾ ಆಯೋಗ ಮೋದಿಗೆ ಕ್ಲೀನ್ ಚಿಟ್ ನೀಡಿತ್ತು. ಅಂದಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು ಪ್ರಧಾನಿ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತೆಗೆದುಕೊಂಡ ಕೆಲವು ನಿರ್ಧಾರಗಳ ಬಗ್ಗೆ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಅಚ್ಚರಿಯೆಂದರೆ ಚುನಾವಣಾ ಆಯೋಗವು ಗುರುವಾರದ ನೋಟಿಸ್‌ಗಳನ್ನು ನೇರವಾಗಿ ಸಂಬಂಧಪಟ್ಟ ವ್ಯಕ್ತಿಗಳಿಗೆ ನೀಡುವ ಬದಲು ಆಯಾ ಪಕ್ಷದ ಅಧ್ಯಕ್ಷರಿಗೆ ನೀಡಿದೆ. ಈ ಚುನಾವಣಾ ಆರಂಭದಿಂದಲೂ, ಆಯೋಗವು, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ, ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ದಿಲೀಪ್ ಘೋಷ್, ಆಮ್ ಆದ್ಮಿ ಪಕ್ಷದ ನಾಯಕ ಅತಿಶಿ, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಆದರೆ ಈ ಎಲ್ಲಾ ಪ್ರಕರಣಗಳಲ್ಲಿ ನೊಟೀಸ್‌ನ್ನು ಆಪಾದಿತ ವ್ಯಕ್ತಿಗಳಿಗೆ ನೀಡಿತ್ತು.

ಚುನಾವಣಾ ಆಯೋಗವು ಬಿಜೆಪಿ ಅಧ್ಯಕ್ಷರಿಗೆ ನೀಡಿದ ನೋಟಿಸ್‌ನಲ್ಲಿ, ರಾಜಕೀಯ ಭಾಷಣದ ವೇಳೆ ಗುಣಮಟ್ಟ ಕಾಪಾಡಲು ಮತ್ತು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಅನುಸರಿಸಲು ಪಕ್ಷದ ಎಲ್ಲಾ ಸ್ಟಾರ್ ಪ್ರಚಾರಕರಿಗೆ ಸೂಚಿಸಲು ಹೇಳಿದೆ. ವೈಯಕ್ತಿಕ ಸ್ಟಾರ್ ಪ್ರಚಾರಕರು ಮಾಡಿದ ಭಾಷಣಗಳಿಗೆ ಅವರೇ ಜವಾಬ್ದಾರರಾಗಿ ಉಳಿಯುತ್ತಾರೆ, ಉನ್ನತ ಹುದ್ದೆಯಲ್ಲಿರುವವರು ಮಾಡಿದ ಪ್ರಚಾರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಬೀರುತ್ತವೆ ಎಂದು ಆಯೋಗವು ಹೇಳಿದೆ.

ಮೋದಿ ದ್ವೇಷ ಭಾಷಣದ ಬಗ್ಗೆ ಪ್ರಮುಖ ದೂರುದಾರರಾಗಿರುವ ಕಾಂಗ್ರೆಸ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಚುನಾವಣಾ ಆಯೋಗವು ನೋಟಿಸನ್ನು ಮೋದಿಗೆ ಕೊಡದೆ ನಡ್ಡಾ ಅವರಿಗೆ ಕಳುಹಿಸಿದೆ. ಚುನಾವಣಾ ಆಯೋಗ ಸೂಪರ್, ಪ್ರಧಾನ ಮಂತ್ರಿಯ ವಿಷಯಕ್ಕೆ ಬಂದಾಗ ಅವರು ತುಂಬಾ ಜಾಗರೂಕರಾಗಿದ್ದಾರೆ, ಗೃಹ ಸಚಿವರ ವಿಷಯಕ್ಕೆ ಬಂದಾಗ ಅವರು ತುಂಬಾ ಜಾಗರೂಕರಾಗಿದ್ದಾರೆ. ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯವಿರುವಾಗ ನೋಟಿಸ್‌ಗಳನ್ನು ನೀಡುತ್ತದೆ ಎಂದು ಕಾಂಗ್ರೆಸ್ ನಿರೀಕ್ಷಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಹಿಂದಿನ ಪ್ರಧಾನಿಗಳಾದ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ವಿರುದ್ಧ ಯಾವುದೇ ದೂರುಗಳು ಇರಲಿಲ್ಲ. ನಾವು ಪ್ರಧಾನಿ ಮೋದಿ ವಿರುದ್ಧ ಎರಡನೇ ಬಾರಿ ದೂರು ನೀಡಿದ್ದೇವೆ. ಈ ಹಿಂದೆ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಇದೇ ರೀತಿ ಖರ್ಗೆ ಅವರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ ಬಿಜೆಪಿ ಸಲ್ಲಿಸಿದ ದೂರುಗಳನ್ನುಚುನಾವಣಾ ಆಯೋಗ ಲಗತ್ತಿಸಿದೆ. ಅದರಲ್ಲಿ ರಾಹುಲ್‌ ಗಾಂಧಿ ಅವರು ಏಪ್ರಿಲ್ 18ರಂದು ಕೊಟ್ಟಾಯಂನಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...