Homeಮುಖಪುಟದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು 'ಜೆ.ಪಿ.ನಡ್ಡಾ'ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು, ಮೋದಿಗೆ ಅಲ್ಲ ಎನ್ನುವುದು ಬಯಲಾಗಿದೆ.

ವಾಸ್ತವವಾಗಿ, ನೋಟೀಸ್‌ನಲ್ಲಿ ಪ್ರಧಾನಿಯ ಹೆಸರನ್ನು ಉಲ್ಲೇಖಿಸಲಾಗಿಲ್ಲ. ನೋಟಿಸ್‌ಗೆ ಮೋದಿಯ ರಾಜಸ್ಥಾನದ ಬನ್ಸ್ವಾರಾದ ದುರುದ್ದೇಶಪೂರಿತ ಚುನಾವಣಾ ಭಾಷಣ ವಿರುದ್ಧದ ಕಾಂಗ್ರೆಸ್‌ನ ದೂರುಗಳು, ಜೊತೆಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೀಡಿರುವ ದೂರುಗಳ ಪ್ರತಿಯನ್ನು ಲಗತ್ತಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ  ದೂರುಗಳಿಗೆ ಸಂಬಂಧಿಸಿದಂತೆ ಇದೇ ರೀತಿಯ ನೋಟಿಸ್ ನೀಡಲಾಗಿದೆ.

ಪ್ರಧಾನ ಮಂತ್ರಿಯೊಬ್ಬರ ವಿರುದ್ಧದ ದೂರನ್ನು ಸಮಿತಿಯು ಪರಿಗಣನೆಗೆ ತೆಗೆದುಕೊಂಡಿರುವುದು ಇತ್ತೀಚಿನ ಇತಿಹಾಸದಲ್ಲಿ ಇದೇ ಮೊದಲು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ, ವಿರೋಧ ಪಕ್ಷಗಳು ನೀಡಿದ ದೂರಿಗೆ ಸಂಬಂಧಿಸಿ ಚುನಾವಣಾ ಆಯೋಗ ಮೋದಿಗೆ ಕ್ಲೀನ್ ಚಿಟ್ ನೀಡಿತ್ತು. ಅಂದಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು ಪ್ರಧಾನಿ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತೆಗೆದುಕೊಂಡ ಕೆಲವು ನಿರ್ಧಾರಗಳ ಬಗ್ಗೆ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಅಚ್ಚರಿಯೆಂದರೆ ಚುನಾವಣಾ ಆಯೋಗವು ಗುರುವಾರದ ನೋಟಿಸ್‌ಗಳನ್ನು ನೇರವಾಗಿ ಸಂಬಂಧಪಟ್ಟ ವ್ಯಕ್ತಿಗಳಿಗೆ ನೀಡುವ ಬದಲು ಆಯಾ ಪಕ್ಷದ ಅಧ್ಯಕ್ಷರಿಗೆ ನೀಡಿದೆ. ಈ ಚುನಾವಣಾ ಆರಂಭದಿಂದಲೂ, ಆಯೋಗವು, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ, ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ದಿಲೀಪ್ ಘೋಷ್, ಆಮ್ ಆದ್ಮಿ ಪಕ್ಷದ ನಾಯಕ ಅತಿಶಿ, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಆದರೆ ಈ ಎಲ್ಲಾ ಪ್ರಕರಣಗಳಲ್ಲಿ ನೊಟೀಸ್‌ನ್ನು ಆಪಾದಿತ ವ್ಯಕ್ತಿಗಳಿಗೆ ನೀಡಿತ್ತು.

ಚುನಾವಣಾ ಆಯೋಗವು ಬಿಜೆಪಿ ಅಧ್ಯಕ್ಷರಿಗೆ ನೀಡಿದ ನೋಟಿಸ್‌ನಲ್ಲಿ, ರಾಜಕೀಯ ಭಾಷಣದ ವೇಳೆ ಗುಣಮಟ್ಟ ಕಾಪಾಡಲು ಮತ್ತು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಅನುಸರಿಸಲು ಪಕ್ಷದ ಎಲ್ಲಾ ಸ್ಟಾರ್ ಪ್ರಚಾರಕರಿಗೆ ಸೂಚಿಸಲು ಹೇಳಿದೆ. ವೈಯಕ್ತಿಕ ಸ್ಟಾರ್ ಪ್ರಚಾರಕರು ಮಾಡಿದ ಭಾಷಣಗಳಿಗೆ ಅವರೇ ಜವಾಬ್ದಾರರಾಗಿ ಉಳಿಯುತ್ತಾರೆ, ಉನ್ನತ ಹುದ್ದೆಯಲ್ಲಿರುವವರು ಮಾಡಿದ ಪ್ರಚಾರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಬೀರುತ್ತವೆ ಎಂದು ಆಯೋಗವು ಹೇಳಿದೆ.

ಮೋದಿ ದ್ವೇಷ ಭಾಷಣದ ಬಗ್ಗೆ ಪ್ರಮುಖ ದೂರುದಾರರಾಗಿರುವ ಕಾಂಗ್ರೆಸ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಚುನಾವಣಾ ಆಯೋಗವು ನೋಟಿಸನ್ನು ಮೋದಿಗೆ ಕೊಡದೆ ನಡ್ಡಾ ಅವರಿಗೆ ಕಳುಹಿಸಿದೆ. ಚುನಾವಣಾ ಆಯೋಗ ಸೂಪರ್, ಪ್ರಧಾನ ಮಂತ್ರಿಯ ವಿಷಯಕ್ಕೆ ಬಂದಾಗ ಅವರು ತುಂಬಾ ಜಾಗರೂಕರಾಗಿದ್ದಾರೆ, ಗೃಹ ಸಚಿವರ ವಿಷಯಕ್ಕೆ ಬಂದಾಗ ಅವರು ತುಂಬಾ ಜಾಗರೂಕರಾಗಿದ್ದಾರೆ. ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯವಿರುವಾಗ ನೋಟಿಸ್‌ಗಳನ್ನು ನೀಡುತ್ತದೆ ಎಂದು ಕಾಂಗ್ರೆಸ್ ನಿರೀಕ್ಷಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಹಿಂದಿನ ಪ್ರಧಾನಿಗಳಾದ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ವಿರುದ್ಧ ಯಾವುದೇ ದೂರುಗಳು ಇರಲಿಲ್ಲ. ನಾವು ಪ್ರಧಾನಿ ಮೋದಿ ವಿರುದ್ಧ ಎರಡನೇ ಬಾರಿ ದೂರು ನೀಡಿದ್ದೇವೆ. ಈ ಹಿಂದೆ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಇದೇ ರೀತಿ ಖರ್ಗೆ ಅವರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ ಬಿಜೆಪಿ ಸಲ್ಲಿಸಿದ ದೂರುಗಳನ್ನುಚುನಾವಣಾ ಆಯೋಗ ಲಗತ್ತಿಸಿದೆ. ಅದರಲ್ಲಿ ರಾಹುಲ್‌ ಗಾಂಧಿ ಅವರು ಏಪ್ರಿಲ್ 18ರಂದು ಕೊಟ್ಟಾಯಂನಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...