Homeಮುಖಪುಟಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಚುನಾವಣಾ ಆಯೋಗವೇ ಕಾರಣ. ಕೊರೊನಾ ಸಂದರ್ಭದಲ್ಲಿ 5 ರಾಜ್ಯಗಳ ಚುನಾವಣೆಯಲ್ಲಿ ಬೃಹತ್ ರ್‍ಯಾಲಿ ನಡೆಸಲು ಅನುಮತಿ ನೀಡುವ ಮೂಲಕ ಚುನಾವಣಾ ಆಯೋಗ ಸ್ವತಃ ಕೊರೊನಾ ಹರಡಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ವಿರುದ್ಧ ಏಕೆ ಕೊಲೆ ಪ್ರಕರಣ ದಾಖಲಿಸಬಾರದು?” ಎಂದು ಮದ್ರಾಸ್ ಹೈಕೋರ್ಟ್ ಹರಿಹಾಯ್ದಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಸಾವಿರಾರು ಜನರು ಸೋಂಕಿನಿಂದ ಸಾವನ್ನಪ್ಪುತ್ತಿದ್ಧಾರೆ. ಈ ನಡುವೆ ಭಾರತೀಯ ಚುನಾವಣಾ ಆಯೋಗದ ರಾಜಕೀಯ ಪಕ್ಷಗಳ ಪರ ಕೆಲಸ ಮಾಡುತ್ತಿದೆ ಎಂದು ಮದ್ರಾಸ್​ ಹೈಕೋರ್ಟ್​ ಛೀಮಾರಿ ಹಾಕಿದೆ.

ಜೊತೆಗೆ ಚುನಾವಣಾ ಆಯೋಗಕ್ಕೆ ಏಪ್ರಿಲ್ 06 ರಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣಾ ಮತ ಎಣಿಕೆಗೂ ತಡೆ ಒಡ್ಡುವ ಎಚ್ಚರಿಕೆ ನೀಡಿದೆ.

’ಕೊರೊನಾ ಎರಡನೇ ಅಲೆ ವ್ಯಾಪಕವಾಗಲು ಚುನಾವಣಾ ಆಯೋಗ ಏಕೈಕ ಕಾರಣವಾಗಿದೆ. ನಿಮ್ಮ ಅಧಿಕಾರಿಗಳ ಮೇಲೆ ಏಕೆ ಕೊಲೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಬಾರದು?. ನ್ಯಾಯಾಲಯದ ಆದೇಶದ ಹೊರತಾಗಿಯೂ ಪ್ರಚಾರದ ಸಮಯದಲ್ಲಿ ಮಾಸ್ಕ್, ಸ್ಯಾನಿಟೈಸರ್​ಗಳ ಬಳಕೆ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೊನಾ ಸುರಕ್ಷತಾ ನಿಯಮಗಳನ್ನು ಜಾರಿಗೆ ತರವಲ್ಲಿ ಚುನಾವಣಾ ಸಂಸ್ಥೆ ವಿಫಲವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಮೇ.2 ರಂದು ತಮಿಳುನಾಡಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಆದರೆ, ಶುಕ್ರವಾರದೊಳಗೆ ಕೊರೊನಾ ನಿಯಮಗಳನ್ನು ಜಾರಿಗೊಳಿಸುವ ಯೋಜನೆಯ ಬಗ್ಗೆ ಚುನಾವಣಾ ಆಯೋಗವನ್ನು ಮದ್ರಾಸ್ ಹೈಕೋರ್ಟ್ ಕೇಳಿದೆ. ಒಂದು ವೇಳೆ ಚುನಾವಣಾ ಆಯೋಗ ಈ ನೀಲನಕ್ಷೆಯನ್ನು ನೀಡದಿದ್ದರೆ ಮತ ಎಣಿಕೆಯನ್ನೇ ನಿಲ್ಲಿಸುವುದಾಗಿಯೂ ಎಚ್ಚರಿಸಿದೆ.

“ಸಾರ್ವಜನಿಕ ಆರೋಗ್ಯ ಅತ್ಯುನ್ನತವಾದುದು. ಸಾಂವಿಧಾನಿಕ ಅಧಿಕಾರಗಳನ್ನು ನೆನಪಿಸಬೇಕಾಗಿರುವುದು ದುಃಖಕರವಾಗಿದೆ. ದೇಶದ ನಾಗರಿಕರು ಬದುಕುಳಿದಾಗ ಮಾತ್ರ ಅವರು ಪ್ರಜಾಪ್ರಭುತ್ವ ಹಕ್ಕುಗಳನ್ನು ಆನಂದಿಸಲು ಸಾಧ್ಯವಾಗುತ್ತದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಚುನಾವಣಾ ರ್‍ಯಾಲಿಗಳು ನಡೆದಾಗ ನೀವು ಇನ್ನೊಂದು ಗ್ರಹದಲ್ಲಿ ಇದ್ದಿರೇ?” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಪ್ರಶ್ನಿಸಿದ್ದಾರೆ.

ತಮಿಳುನಾಡು ಸಾರಿಗೆ ಸಚಿವ ಎಂ.ಆರ್.ವಿಜಯಬಾಸ್ಕರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ನಂತರ ದೇಶದಲ್ಲಿ ಕೊರೊನಾ ಪ್ರಕರಣಗಳು ಸ್ಫೋಟಗೊಂಡಿವೆ. ಪ್ರಸ್ತುತ ಭಾರತದಲ್ಲಿ ದಿನವೊಂದಕ್ಕೆ 3.52 ಲಕ್ಷಕ್ಕೂ ಪ್ರಕರಣಗಳು ಮತ್ತು 2,812 ಸಾವುಗಳು ವರದಿಯಾಗುತ್ತಿವೆ.


ಇದನ್ನೂ ಓದಿ: ಜನರ ಸಂಕಷ್ಟ ಮರೆತು ಬಿಜೆಪಿಯ ಪಿಆರ್ ಕೆಲಸ ಮಾಡುತ್ತಿರುವ ಟೈಮ್ಸ್ ನೌ: ಸಂಪಾದಕರಿಗೆ ಚಾನೆಲ್ ವರದಿಗಾರರ ’ದಿಟ್ಟ ಪತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...