Homeಮುಖಪುಟಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

- Advertisement -
- Advertisement -

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ. ಒಟ್ಟಾರೆ, ಈ ವರ್ಷಾಂತ್ಯದ ಮೊದಲು ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಬಹುದು ಎಂದು ವರದಿಗಳು ಹೇಳಿವೆ.

ಬುಧವಾರ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ (ಸಿಇಒ) ಸುದೀರ್ಘ ಸಭೆ ನಡೆದಿದೆ. ಈ ಸಭೆಯಲ್ಲಿ ಮುಂದಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆ, 2025ರ ಅಂತ್ಯದೊಳಗೆ ಎಸ್‌ಐಆರ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಸಭೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಅನರ್ಹರು ಪಟ್ಟಿಯಲ್ಲಿ ಸೇರದಂತೆ ಎಚ್ಚರಿಕೆ ವಹಿಸಲು ದಾಖಲೆಗಳ ಸೂಕ್ತ ಪರಿಶೀಲನೆಯ ಕುರಿತು ಸಿಇಒಗಳು ಪ್ರಸ್ತಾಪಿಸಿದ್ದಾರೆ. ಅರ್ಹ ಮತದಾರರಿಗೆ ಸಲ್ಲಿಸಲು ಸುಲಭವಾಗುವಂತೆ ಚುನಾವಣಾ ಹೇಗೆ ಮತ್ತು ಯಾವೆಲ್ಲ ದಾಖಲೆಗಳನ್ನು ಕೇಳಬಹುದು ಎಂದು ಚರ್ಚಿಸಿದ್ದಾರೆ ಎನ್ನಲಾಗಿದೆ.

ಬಿಹಾರದಲ್ಲಿ 11 ದಾಖಲೆಗಳನ್ನು ಮತದಾರರ ಗುರುತಿನ ಪುರಾವೆಯಾಗಿ ಚುನಾವಣಾ ಆಯೋಗ ಪರಿಗಣಿಸಿತ್ತು. ಮತದಾರರು ಕಾನೂನು ಸಮರ ನಡೆಸಿದ ಬಳಿಕ, ಆಧಾರ್ ಕಾರ್ಡ್‌ನ್ನೂ ದಾಖಲೆಯಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂತೆ 12ನೇ ದಾಖಲೆಯಾಗಿ ಆಧಾರ್ ಕಾರ್ಡ್‌ ಅನ್ನು ಚುನಾವಣಾ ಆಯೋಗ ಪರಿಗಣಿಸಿದೆ. ಈ ಬೆಳವಣಿಗೆಯೂ ಮುಂದೆ ದೇಶದಾದ್ಯಂತ ಎಸ್‌ಐಆರ್ ನಡೆಸುವಾಗ ದಾಖಲೆಗಳನ್ನು ಸಲ್ಲಿಸುವ ವಿಚಾರದಲ್ಲಿ ಮಹತ್ವದ್ದಾಗಿದೆ.

ಕಳೆದ ಮತದಾರರ ಪಟ್ಟಿಯ ಪರಿಷ್ಕರಣೆಯ ನಂತರ ಪ್ರಕಟವಾದ ತಮ್ಮ ರಾಜ್ಯಗಳ ಮತದಾರರ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಲು ಸಿಇಒಗಳಿಗೆ ತಿಳಿಸಲಾಗಿದೆ. ಕೆಲವು ರಾಜ್ಯಗಳ ಇಸಿಒಗಳು ಈಗಾಗಲೇ ಕೊನೆಯ ಎಸ್‌ಐಆರ್ ನಂತರ ಪ್ರಕಟವಾದ ಮತದಾರರ ಪಟ್ಟಿಯನ್ನು ತಮ್ಮ ವೆಬ್‌ಸೈಟ್‌ಗಳಲ್ಲಿ ಹಾಕಿದ್ದಾರೆ.

ಬಿಹಾರದ ನಂತರ, ಇಡೀ ದೇಶದಲ್ಲಿ ಎಸ್‌ಐಆರ್ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು.

2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇತರ ಸಿಇಒಗಳು ತಮ್ಮ ಅನುಭವಗಳಿಂದ ಕಲಿಯಲು ಸಾಧ್ಯವಾಗುವಂತೆ ಬಿಹಾರದ ಸಿಇಒ ಅವರು ಅಳವಡಿಸಿಕೊಂಡ ತಂತ್ರಗಳು, ನಿರ್ಬಂಧಗಳು ಮತ್ತು ಉತ್ತಮ ಅಭ್ಯಾಸಗಳ ಕುರಿತು ಪ್ರಸ್ತುತಿಯನ್ನು ಮಾಡಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಕೊನೆಯ ಪೂರ್ಣಗೊಂಡ ಎಸ್‌ಐಆರ್ ಪ್ರಕಾರ ಮತದಾರರ ಸಂಖ್ಯೆ, ಕೊನೆಯ ಎಸ್‌ಐಆರ್‌ನ ಅರ್ಹತಾ ದಿನಾಂಕ ಮತ್ತು ತಮ್ಮ ರಾಜ್ಯದಲ್ಲಿನ ಮತದಾರರ ಪಟ್ಟಿಯ ಕುರಿತು ಸಿಇಒಗಳು ವಿವರವಾದ ಪ್ರಸ್ತುತಿಗಳನ್ನು ನೀಡಿದ್ದಾರೆ.

ಹಿಂದಿನ ಎಸ್‌ಐಆರ್ ನಂತರ ಡಿಜಿಟಲೀಕರಣ ಮತ್ತು ಮತದಾರರ ಪಟ್ಟಿಯನ್ನು ಅಪ್‌ಲೋಡ್ ಮಾಡುವ ಸ್ಥಿತಿಯನ್ನು ಸಿಇಒಗಳು ರಾಜ್ಯ ಸಿಇಒ ವೆಬ್‌ಸೈಟ್‌ನಲ್ಲಿ ಪ್ರಸ್ತುತಪಡಿಸಿದ್ದಾರೆ.

ತಮ್ಮ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿನ ಕೊನೆಯ ಎಸ್‌ಐಆರ್ ಪ್ರಕಾರ ಮತದಾರರೊಂದಿಗೆ ಪ್ರಸ್ತುತ ಮತದಾರರ ಮ್ಯಾಪಿಂಗ್ ಸ್ಥಿತಿಯನ್ನು ಸಹ ಅವರು ನೀಡಿದ್ದಾರೆ.

ಯಾವುದೇ ಮತಗಟ್ಟೆಯು 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಯೋಗದ ಉಪಕ್ರಮದ ಏಕರೂಪದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಮತದಾನ ಕೇಂದ್ರಗಳ ತರ್ಕಬದ್ಧಗೊಳಿಸುವಿಕೆಯ ಸ್ಥಿತಿಯನ್ನು ಸಹ ಪರಿಶೀಲಿಸಲಾಗಿದೆ ಎಂದು ಚುನಾವಣಾ ಆಯೋಗ  ಹೇಳಿದೆ.

ಮತದಾರರ ಪಟ್ಟಿಯ ತೀವ್ರವಾದ ಪರಿಷ್ಕರಣೆಯ ಪ್ರಾಥಮಿಕ ಉದ್ದೇಶವೆಂದರೆ ವಿದೇಶಿ ಅಕ್ರಮ ವಲಸಿಗರನ್ನು ಅವರ ಜನ್ಮಸ್ಥಳವನ್ನು ಪರಿಶೀಲಿಸುವ ಮೂಲಕ ಹೊರಹಾಕುವುದು.

ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಸೇರಿದಂತೆ ಅಕ್ರಮ ವಿದೇಶಿ ವಲಸಿಗರ ಮೇಲೆ ವಿವಿಧ ರಾಜ್ಯಗಳಲ್ಲಿ ಕಠಿಣ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮವು ಮಹತ್ವದ್ದಾಗಿದೆ.

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಲವು ಗೊಂದಲ, ಆರೋಪಗಳಿಗೆ ಕಾರಣವಾಗಿದೆ. ಚುನಾವಣಾ ಆಯೋಗ ಎಸ್‌ಐಆರ್ ಬಳಿಕ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದೆ. ಈ ಜನರು ಸಾವನ್ನಪ್ಪಿರಬಹುದು ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿರಬಹುದು, ಇಲ್ಲಾ ಅವರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ನೋಂದಾವಣೆಗೊಂಡಿರಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಆದರೆ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಲಕ್ಷಾಂತರ ಮತದಾರರನ್ನು ಸುಖಾ ಸುಮ್ಮನೆ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಆರೋಪಿಸಿದೆ. ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಚುನಾವಣಾ ಆಯೋಗ ಸತ್ತೋಗಿದ್ದಾರೆ ಎನ್ನಲಾದ ವ್ಯಕ್ತಿಗಳ ಜೊತೆ ರಾಹುಲ್ ಗಾಂಧಿ ಟೀಕುಡಿದು ಗಮನಸೆಳೆದಿದ್ದಾರೆ.

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....