Homeಮುಖಪುಟಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

- Advertisement -
- Advertisement -

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ. ಒಟ್ಟಾರೆ, ಈ ವರ್ಷಾಂತ್ಯದ ಮೊದಲು ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಬಹುದು ಎಂದು ವರದಿಗಳು ಹೇಳಿವೆ.

ಬುಧವಾರ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ (ಸಿಇಒ) ಸುದೀರ್ಘ ಸಭೆ ನಡೆದಿದೆ. ಈ ಸಭೆಯಲ್ಲಿ ಮುಂದಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆ, 2025ರ ಅಂತ್ಯದೊಳಗೆ ಎಸ್‌ಐಆರ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಸಭೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಅನರ್ಹರು ಪಟ್ಟಿಯಲ್ಲಿ ಸೇರದಂತೆ ಎಚ್ಚರಿಕೆ ವಹಿಸಲು ದಾಖಲೆಗಳ ಸೂಕ್ತ ಪರಿಶೀಲನೆಯ ಕುರಿತು ಸಿಇಒಗಳು ಪ್ರಸ್ತಾಪಿಸಿದ್ದಾರೆ. ಅರ್ಹ ಮತದಾರರಿಗೆ ಸಲ್ಲಿಸಲು ಸುಲಭವಾಗುವಂತೆ ಚುನಾವಣಾ ಹೇಗೆ ಮತ್ತು ಯಾವೆಲ್ಲ ದಾಖಲೆಗಳನ್ನು ಕೇಳಬಹುದು ಎಂದು ಚರ್ಚಿಸಿದ್ದಾರೆ ಎನ್ನಲಾಗಿದೆ.

ಬಿಹಾರದಲ್ಲಿ 11 ದಾಖಲೆಗಳನ್ನು ಮತದಾರರ ಗುರುತಿನ ಪುರಾವೆಯಾಗಿ ಚುನಾವಣಾ ಆಯೋಗ ಪರಿಗಣಿಸಿತ್ತು. ಮತದಾರರು ಕಾನೂನು ಸಮರ ನಡೆಸಿದ ಬಳಿಕ, ಆಧಾರ್ ಕಾರ್ಡ್‌ನ್ನೂ ದಾಖಲೆಯಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂತೆ 12ನೇ ದಾಖಲೆಯಾಗಿ ಆಧಾರ್ ಕಾರ್ಡ್‌ ಅನ್ನು ಚುನಾವಣಾ ಆಯೋಗ ಪರಿಗಣಿಸಿದೆ. ಈ ಬೆಳವಣಿಗೆಯೂ ಮುಂದೆ ದೇಶದಾದ್ಯಂತ ಎಸ್‌ಐಆರ್ ನಡೆಸುವಾಗ ದಾಖಲೆಗಳನ್ನು ಸಲ್ಲಿಸುವ ವಿಚಾರದಲ್ಲಿ ಮಹತ್ವದ್ದಾಗಿದೆ.

ಕಳೆದ ಮತದಾರರ ಪಟ್ಟಿಯ ಪರಿಷ್ಕರಣೆಯ ನಂತರ ಪ್ರಕಟವಾದ ತಮ್ಮ ರಾಜ್ಯಗಳ ಮತದಾರರ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಲು ಸಿಇಒಗಳಿಗೆ ತಿಳಿಸಲಾಗಿದೆ. ಕೆಲವು ರಾಜ್ಯಗಳ ಇಸಿಒಗಳು ಈಗಾಗಲೇ ಕೊನೆಯ ಎಸ್‌ಐಆರ್ ನಂತರ ಪ್ರಕಟವಾದ ಮತದಾರರ ಪಟ್ಟಿಯನ್ನು ತಮ್ಮ ವೆಬ್‌ಸೈಟ್‌ಗಳಲ್ಲಿ ಹಾಕಿದ್ದಾರೆ.

ಬಿಹಾರದ ನಂತರ, ಇಡೀ ದೇಶದಲ್ಲಿ ಎಸ್‌ಐಆರ್ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು.

2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇತರ ಸಿಇಒಗಳು ತಮ್ಮ ಅನುಭವಗಳಿಂದ ಕಲಿಯಲು ಸಾಧ್ಯವಾಗುವಂತೆ ಬಿಹಾರದ ಸಿಇಒ ಅವರು ಅಳವಡಿಸಿಕೊಂಡ ತಂತ್ರಗಳು, ನಿರ್ಬಂಧಗಳು ಮತ್ತು ಉತ್ತಮ ಅಭ್ಯಾಸಗಳ ಕುರಿತು ಪ್ರಸ್ತುತಿಯನ್ನು ಮಾಡಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಕೊನೆಯ ಪೂರ್ಣಗೊಂಡ ಎಸ್‌ಐಆರ್ ಪ್ರಕಾರ ಮತದಾರರ ಸಂಖ್ಯೆ, ಕೊನೆಯ ಎಸ್‌ಐಆರ್‌ನ ಅರ್ಹತಾ ದಿನಾಂಕ ಮತ್ತು ತಮ್ಮ ರಾಜ್ಯದಲ್ಲಿನ ಮತದಾರರ ಪಟ್ಟಿಯ ಕುರಿತು ಸಿಇಒಗಳು ವಿವರವಾದ ಪ್ರಸ್ತುತಿಗಳನ್ನು ನೀಡಿದ್ದಾರೆ.

ಹಿಂದಿನ ಎಸ್‌ಐಆರ್ ನಂತರ ಡಿಜಿಟಲೀಕರಣ ಮತ್ತು ಮತದಾರರ ಪಟ್ಟಿಯನ್ನು ಅಪ್‌ಲೋಡ್ ಮಾಡುವ ಸ್ಥಿತಿಯನ್ನು ಸಿಇಒಗಳು ರಾಜ್ಯ ಸಿಇಒ ವೆಬ್‌ಸೈಟ್‌ನಲ್ಲಿ ಪ್ರಸ್ತುತಪಡಿಸಿದ್ದಾರೆ.

ತಮ್ಮ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿನ ಕೊನೆಯ ಎಸ್‌ಐಆರ್ ಪ್ರಕಾರ ಮತದಾರರೊಂದಿಗೆ ಪ್ರಸ್ತುತ ಮತದಾರರ ಮ್ಯಾಪಿಂಗ್ ಸ್ಥಿತಿಯನ್ನು ಸಹ ಅವರು ನೀಡಿದ್ದಾರೆ.

ಯಾವುದೇ ಮತಗಟ್ಟೆಯು 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಯೋಗದ ಉಪಕ್ರಮದ ಏಕರೂಪದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಮತದಾನ ಕೇಂದ್ರಗಳ ತರ್ಕಬದ್ಧಗೊಳಿಸುವಿಕೆಯ ಸ್ಥಿತಿಯನ್ನು ಸಹ ಪರಿಶೀಲಿಸಲಾಗಿದೆ ಎಂದು ಚುನಾವಣಾ ಆಯೋಗ  ಹೇಳಿದೆ.

ಮತದಾರರ ಪಟ್ಟಿಯ ತೀವ್ರವಾದ ಪರಿಷ್ಕರಣೆಯ ಪ್ರಾಥಮಿಕ ಉದ್ದೇಶವೆಂದರೆ ವಿದೇಶಿ ಅಕ್ರಮ ವಲಸಿಗರನ್ನು ಅವರ ಜನ್ಮಸ್ಥಳವನ್ನು ಪರಿಶೀಲಿಸುವ ಮೂಲಕ ಹೊರಹಾಕುವುದು.

ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಸೇರಿದಂತೆ ಅಕ್ರಮ ವಿದೇಶಿ ವಲಸಿಗರ ಮೇಲೆ ವಿವಿಧ ರಾಜ್ಯಗಳಲ್ಲಿ ಕಠಿಣ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮವು ಮಹತ್ವದ್ದಾಗಿದೆ.

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಲವು ಗೊಂದಲ, ಆರೋಪಗಳಿಗೆ ಕಾರಣವಾಗಿದೆ. ಚುನಾವಣಾ ಆಯೋಗ ಎಸ್‌ಐಆರ್ ಬಳಿಕ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದೆ. ಈ ಜನರು ಸಾವನ್ನಪ್ಪಿರಬಹುದು ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿರಬಹುದು, ಇಲ್ಲಾ ಅವರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ನೋಂದಾವಣೆಗೊಂಡಿರಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಆದರೆ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಲಕ್ಷಾಂತರ ಮತದಾರರನ್ನು ಸುಖಾ ಸುಮ್ಮನೆ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಆರೋಪಿಸಿದೆ. ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಚುನಾವಣಾ ಆಯೋಗ ಸತ್ತೋಗಿದ್ದಾರೆ ಎನ್ನಲಾದ ವ್ಯಕ್ತಿಗಳ ಜೊತೆ ರಾಹುಲ್ ಗಾಂಧಿ ಟೀಕುಡಿದು ಗಮನಸೆಳೆದಿದ್ದಾರೆ.

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...