Homeಮುಖಪುಟಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

- Advertisement -
- Advertisement -

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ. ಒಟ್ಟಾರೆ, ಈ ವರ್ಷಾಂತ್ಯದ ಮೊದಲು ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಬಹುದು ಎಂದು ವರದಿಗಳು ಹೇಳಿವೆ.

ಬುಧವಾರ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ (ಸಿಇಒ) ಸುದೀರ್ಘ ಸಭೆ ನಡೆದಿದೆ. ಈ ಸಭೆಯಲ್ಲಿ ಮುಂದಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆ, 2025ರ ಅಂತ್ಯದೊಳಗೆ ಎಸ್‌ಐಆರ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಸಭೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಅನರ್ಹರು ಪಟ್ಟಿಯಲ್ಲಿ ಸೇರದಂತೆ ಎಚ್ಚರಿಕೆ ವಹಿಸಲು ದಾಖಲೆಗಳ ಸೂಕ್ತ ಪರಿಶೀಲನೆಯ ಕುರಿತು ಸಿಇಒಗಳು ಪ್ರಸ್ತಾಪಿಸಿದ್ದಾರೆ. ಅರ್ಹ ಮತದಾರರಿಗೆ ಸಲ್ಲಿಸಲು ಸುಲಭವಾಗುವಂತೆ ಚುನಾವಣಾ ಹೇಗೆ ಮತ್ತು ಯಾವೆಲ್ಲ ದಾಖಲೆಗಳನ್ನು ಕೇಳಬಹುದು ಎಂದು ಚರ್ಚಿಸಿದ್ದಾರೆ ಎನ್ನಲಾಗಿದೆ.

ಬಿಹಾರದಲ್ಲಿ 11 ದಾಖಲೆಗಳನ್ನು ಮತದಾರರ ಗುರುತಿನ ಪುರಾವೆಯಾಗಿ ಚುನಾವಣಾ ಆಯೋಗ ಪರಿಗಣಿಸಿತ್ತು. ಮತದಾರರು ಕಾನೂನು ಸಮರ ನಡೆಸಿದ ಬಳಿಕ, ಆಧಾರ್ ಕಾರ್ಡ್‌ನ್ನೂ ದಾಖಲೆಯಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂತೆ 12ನೇ ದಾಖಲೆಯಾಗಿ ಆಧಾರ್ ಕಾರ್ಡ್‌ ಅನ್ನು ಚುನಾವಣಾ ಆಯೋಗ ಪರಿಗಣಿಸಿದೆ. ಈ ಬೆಳವಣಿಗೆಯೂ ಮುಂದೆ ದೇಶದಾದ್ಯಂತ ಎಸ್‌ಐಆರ್ ನಡೆಸುವಾಗ ದಾಖಲೆಗಳನ್ನು ಸಲ್ಲಿಸುವ ವಿಚಾರದಲ್ಲಿ ಮಹತ್ವದ್ದಾಗಿದೆ.

ಕಳೆದ ಮತದಾರರ ಪಟ್ಟಿಯ ಪರಿಷ್ಕರಣೆಯ ನಂತರ ಪ್ರಕಟವಾದ ತಮ್ಮ ರಾಜ್ಯಗಳ ಮತದಾರರ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಲು ಸಿಇಒಗಳಿಗೆ ತಿಳಿಸಲಾಗಿದೆ. ಕೆಲವು ರಾಜ್ಯಗಳ ಇಸಿಒಗಳು ಈಗಾಗಲೇ ಕೊನೆಯ ಎಸ್‌ಐಆರ್ ನಂತರ ಪ್ರಕಟವಾದ ಮತದಾರರ ಪಟ್ಟಿಯನ್ನು ತಮ್ಮ ವೆಬ್‌ಸೈಟ್‌ಗಳಲ್ಲಿ ಹಾಕಿದ್ದಾರೆ.

ಬಿಹಾರದ ನಂತರ, ಇಡೀ ದೇಶದಲ್ಲಿ ಎಸ್‌ಐಆರ್ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು.

2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇತರ ಸಿಇಒಗಳು ತಮ್ಮ ಅನುಭವಗಳಿಂದ ಕಲಿಯಲು ಸಾಧ್ಯವಾಗುವಂತೆ ಬಿಹಾರದ ಸಿಇಒ ಅವರು ಅಳವಡಿಸಿಕೊಂಡ ತಂತ್ರಗಳು, ನಿರ್ಬಂಧಗಳು ಮತ್ತು ಉತ್ತಮ ಅಭ್ಯಾಸಗಳ ಕುರಿತು ಪ್ರಸ್ತುತಿಯನ್ನು ಮಾಡಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಕೊನೆಯ ಪೂರ್ಣಗೊಂಡ ಎಸ್‌ಐಆರ್ ಪ್ರಕಾರ ಮತದಾರರ ಸಂಖ್ಯೆ, ಕೊನೆಯ ಎಸ್‌ಐಆರ್‌ನ ಅರ್ಹತಾ ದಿನಾಂಕ ಮತ್ತು ತಮ್ಮ ರಾಜ್ಯದಲ್ಲಿನ ಮತದಾರರ ಪಟ್ಟಿಯ ಕುರಿತು ಸಿಇಒಗಳು ವಿವರವಾದ ಪ್ರಸ್ತುತಿಗಳನ್ನು ನೀಡಿದ್ದಾರೆ.

ಹಿಂದಿನ ಎಸ್‌ಐಆರ್ ನಂತರ ಡಿಜಿಟಲೀಕರಣ ಮತ್ತು ಮತದಾರರ ಪಟ್ಟಿಯನ್ನು ಅಪ್‌ಲೋಡ್ ಮಾಡುವ ಸ್ಥಿತಿಯನ್ನು ಸಿಇಒಗಳು ರಾಜ್ಯ ಸಿಇಒ ವೆಬ್‌ಸೈಟ್‌ನಲ್ಲಿ ಪ್ರಸ್ತುತಪಡಿಸಿದ್ದಾರೆ.

ತಮ್ಮ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿನ ಕೊನೆಯ ಎಸ್‌ಐಆರ್ ಪ್ರಕಾರ ಮತದಾರರೊಂದಿಗೆ ಪ್ರಸ್ತುತ ಮತದಾರರ ಮ್ಯಾಪಿಂಗ್ ಸ್ಥಿತಿಯನ್ನು ಸಹ ಅವರು ನೀಡಿದ್ದಾರೆ.

ಯಾವುದೇ ಮತಗಟ್ಟೆಯು 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಯೋಗದ ಉಪಕ್ರಮದ ಏಕರೂಪದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಮತದಾನ ಕೇಂದ್ರಗಳ ತರ್ಕಬದ್ಧಗೊಳಿಸುವಿಕೆಯ ಸ್ಥಿತಿಯನ್ನು ಸಹ ಪರಿಶೀಲಿಸಲಾಗಿದೆ ಎಂದು ಚುನಾವಣಾ ಆಯೋಗ  ಹೇಳಿದೆ.

ಮತದಾರರ ಪಟ್ಟಿಯ ತೀವ್ರವಾದ ಪರಿಷ್ಕರಣೆಯ ಪ್ರಾಥಮಿಕ ಉದ್ದೇಶವೆಂದರೆ ವಿದೇಶಿ ಅಕ್ರಮ ವಲಸಿಗರನ್ನು ಅವರ ಜನ್ಮಸ್ಥಳವನ್ನು ಪರಿಶೀಲಿಸುವ ಮೂಲಕ ಹೊರಹಾಕುವುದು.

ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಸೇರಿದಂತೆ ಅಕ್ರಮ ವಿದೇಶಿ ವಲಸಿಗರ ಮೇಲೆ ವಿವಿಧ ರಾಜ್ಯಗಳಲ್ಲಿ ಕಠಿಣ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮವು ಮಹತ್ವದ್ದಾಗಿದೆ.

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಲವು ಗೊಂದಲ, ಆರೋಪಗಳಿಗೆ ಕಾರಣವಾಗಿದೆ. ಚುನಾವಣಾ ಆಯೋಗ ಎಸ್‌ಐಆರ್ ಬಳಿಕ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದೆ. ಈ ಜನರು ಸಾವನ್ನಪ್ಪಿರಬಹುದು ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿರಬಹುದು, ಇಲ್ಲಾ ಅವರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ನೋಂದಾವಣೆಗೊಂಡಿರಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಆದರೆ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಲಕ್ಷಾಂತರ ಮತದಾರರನ್ನು ಸುಖಾ ಸುಮ್ಮನೆ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಆರೋಪಿಸಿದೆ. ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಚುನಾವಣಾ ಆಯೋಗ ಸತ್ತೋಗಿದ್ದಾರೆ ಎನ್ನಲಾದ ವ್ಯಕ್ತಿಗಳ ಜೊತೆ ರಾಹುಲ್ ಗಾಂಧಿ ಟೀಕುಡಿದು ಗಮನಸೆಳೆದಿದ್ದಾರೆ.

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...