Homeಮುಖಪುಟಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ.

- Advertisement -
- Advertisement -

ಫೆಬ್ರವರಿ 2020 ರಲ್ಲಿ ನಡೆದ ದೆಹಲಿ ಗಲಭೆಯ ನಂತರ, ಭಾರತದ ಚುನಾವಣಾ ಆಯೋಗ ಈಶಾನ್ಯ ದೆಹಲಿಯ ಎಲ್ಲಾ ನಿವಾಸಿಗಳ ಫೋಟೋಗಳು ಮತ್ತು ವಿಳಾಸಗಳನ್ನು ಪೊಲೀಸರೊಂದಿಗೆ ಕಾನೂನುಬಾಹಿರವಾಗಿ ಹಂಚಿಕೊಂಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಹಿರಂಗಗೊಳಿಸಿದ್ದಾರೆ.

ಚುನಾವಣಾ ಆಯೋಗದ ಪತ್ರವನ್ನು ಹಂಚಿಕೊಂಡ ಸಾಕೇತ್ ಗೋಖಲೆ, ಜನರ ಸಂಪೂರ್ಣ ಮತದಾರರ ಪಟ್ಟಿಯನ್ನು ದೆಹಲಿ ಪೊಲೀಸರಿಗೆ ಕಾನೂನುಬಾಹಿರವಾಗಿ ಹಸ್ತಾಂತರಿಸಲಾಗಿದೆ ಎಂದು ದೂರಿದ್ದಾರೆ.

“ಆದೇಶದ ಮೊದಲನೇ ಸಾಲು ಪೊಲೀಸರೊಂದಿಗೆ ಹಂಚಿಕೊಂಡ ಮತದಾರರ ಪಟ್ಟಿಗಳಲ್ಲಿ ಛಾಯಾಚಿತ್ರ ಇಲ್ಲ ಎಂದು ಹೇಳುತ್ತದೆ. ಆದರೂ ದೆಹಲಿ ಹತ್ಯಾಕಾಂಡದ ನಂತರ ಫೋಟೋಗಳೊಂದಿಗೆ ಈ ಪೂರ್ಣ ಮತದಾರರ ಪಟ್ಟಿಗಳನ್ನು ಪೊಲೀಸರಿಗೆ ಲಭ್ಯವಾಗುವಂತೆ ಮಾಡಿ, ಭಾರತದ ಚುನಾವಣಾ ಆಯೋಗ ತನ್ನದೇ ನಿಯಮಗಳನ್ನು ಮುರಿದಿದೆ. ಇದು ಯಾವುದೇ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ಗುರುತಿಸಲು ಇದು ಸುಲಭವಾದ ಮಾರ್ಗವಾಗಿದೆ” ಎಂದು ಗೋಖಲೆ ಆರೋಪಿಸಿದ್ದಾರೆ.

ಚುನಾವಣಾ ಆಯೋಗದ ವಕ್ತಾರ ಶೆಫಾಲಿ ಶರಣ್ ಅವರನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ರಾಷ್ಟ್ರೀಯ ಚುನಾವಣಾ ಸಂಸ್ಥೆ ತನ್ನದೇ ಆದ ನಿಯಮಗಳನ್ನು ಏಕೆ ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

“ಮುಗ್ಧ ಮುಸ್ಲಿಂ ಯುವಕನನ್ನು ಪೊಲೀಸರು ನಿರಂಕುಶವಾಗಿ ಎತ್ತಿಕೊಂಡರು. ಇತರ ಸ್ಥಳಗಳಲ್ಲಿಯೂ ಸಹ ಫೋಟೋಗಳನ್ನು ಹೊಂದಿರುವ ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆಯೇ? ಇದು ಗಂಭೀರವಾಗಿದೆ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚುನಾವಣಾ ಆಯೋಗವು ಈ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೋಖಲೆ ಹಂಚಿಕೊಂಡ ಚುನಾವಣಾ ಆಯೋಗದ ಉದ್ದೇಶಿತ ಪತ್ರದಲ್ಲಿ, ದೆಹಲಿ ಪೊಲೀಸರೊಂದಿಗೆ ‘ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳ ಜೊತೆಗೆ ಮತದಾರರ ಪಟ್ಟಿಯನ್ನು ಪ್ರದರ್ಶಿಸುವಂತೆ’ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು, ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

“ದೆಹಲಿ ಪೊಲೀಸರ ಮನವಿಯನ್ನು ಗಮನದಲ್ಲಿಟ್ಟುಕೊಂಡು ಆಯೋಗವು, ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ತನಿಖಾ ತಂಡದೊಂದಿಗೆ ಸಿ.ಸಿ.ಟಿ.ವಿ ಮತ್ತು ಇತರ ವಿಡಿಯೋ ತುಣುಕಿನ ಮೂಲಕ ಸೆರೆಹಿಡಿಯಲಾದ ಅಪರಾಧಿಗಳ ಛಾಯಾಚಿತ್ರಗಳು, ದೆಹಲಿಯ ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳೊಂದಿಗೆ ತನಿಖಾ ಅಧಿಕಾರಿಯ ಮುಂದೆ ಮತದಾರರ ಪಟ್ಟಿಯನ್ನು ಪ್ರದರ್ಶಿಸಲು ಸಲಹೆ ನೀಡುವಂತೆ ನಿರ್ದೇಶಿಸಿದೆ” ಎಂದು ಆಯೋಗದ ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ. ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಸಹ ಈ ಹತ್ಯಾಕಾಂಡಕ್ಕೆ ಕಾರಣವಾಗಿದ್ದವು ಎಂಬ ಆರೋಪವಿದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...