Homeಮುಖಪುಟಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ.

- Advertisement -
- Advertisement -

ಫೆಬ್ರವರಿ 2020 ರಲ್ಲಿ ನಡೆದ ದೆಹಲಿ ಗಲಭೆಯ ನಂತರ, ಭಾರತದ ಚುನಾವಣಾ ಆಯೋಗ ಈಶಾನ್ಯ ದೆಹಲಿಯ ಎಲ್ಲಾ ನಿವಾಸಿಗಳ ಫೋಟೋಗಳು ಮತ್ತು ವಿಳಾಸಗಳನ್ನು ಪೊಲೀಸರೊಂದಿಗೆ ಕಾನೂನುಬಾಹಿರವಾಗಿ ಹಂಚಿಕೊಂಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಹಿರಂಗಗೊಳಿಸಿದ್ದಾರೆ.

ಚುನಾವಣಾ ಆಯೋಗದ ಪತ್ರವನ್ನು ಹಂಚಿಕೊಂಡ ಸಾಕೇತ್ ಗೋಖಲೆ, ಜನರ ಸಂಪೂರ್ಣ ಮತದಾರರ ಪಟ್ಟಿಯನ್ನು ದೆಹಲಿ ಪೊಲೀಸರಿಗೆ ಕಾನೂನುಬಾಹಿರವಾಗಿ ಹಸ್ತಾಂತರಿಸಲಾಗಿದೆ ಎಂದು ದೂರಿದ್ದಾರೆ.

“ಆದೇಶದ ಮೊದಲನೇ ಸಾಲು ಪೊಲೀಸರೊಂದಿಗೆ ಹಂಚಿಕೊಂಡ ಮತದಾರರ ಪಟ್ಟಿಗಳಲ್ಲಿ ಛಾಯಾಚಿತ್ರ ಇಲ್ಲ ಎಂದು ಹೇಳುತ್ತದೆ. ಆದರೂ ದೆಹಲಿ ಹತ್ಯಾಕಾಂಡದ ನಂತರ ಫೋಟೋಗಳೊಂದಿಗೆ ಈ ಪೂರ್ಣ ಮತದಾರರ ಪಟ್ಟಿಗಳನ್ನು ಪೊಲೀಸರಿಗೆ ಲಭ್ಯವಾಗುವಂತೆ ಮಾಡಿ, ಭಾರತದ ಚುನಾವಣಾ ಆಯೋಗ ತನ್ನದೇ ನಿಯಮಗಳನ್ನು ಮುರಿದಿದೆ. ಇದು ಯಾವುದೇ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ಗುರುತಿಸಲು ಇದು ಸುಲಭವಾದ ಮಾರ್ಗವಾಗಿದೆ” ಎಂದು ಗೋಖಲೆ ಆರೋಪಿಸಿದ್ದಾರೆ.

ಚುನಾವಣಾ ಆಯೋಗದ ವಕ್ತಾರ ಶೆಫಾಲಿ ಶರಣ್ ಅವರನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ರಾಷ್ಟ್ರೀಯ ಚುನಾವಣಾ ಸಂಸ್ಥೆ ತನ್ನದೇ ಆದ ನಿಯಮಗಳನ್ನು ಏಕೆ ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

“ಮುಗ್ಧ ಮುಸ್ಲಿಂ ಯುವಕನನ್ನು ಪೊಲೀಸರು ನಿರಂಕುಶವಾಗಿ ಎತ್ತಿಕೊಂಡರು. ಇತರ ಸ್ಥಳಗಳಲ್ಲಿಯೂ ಸಹ ಫೋಟೋಗಳನ್ನು ಹೊಂದಿರುವ ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆಯೇ? ಇದು ಗಂಭೀರವಾಗಿದೆ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚುನಾವಣಾ ಆಯೋಗವು ಈ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೋಖಲೆ ಹಂಚಿಕೊಂಡ ಚುನಾವಣಾ ಆಯೋಗದ ಉದ್ದೇಶಿತ ಪತ್ರದಲ್ಲಿ, ದೆಹಲಿ ಪೊಲೀಸರೊಂದಿಗೆ ‘ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳ ಜೊತೆಗೆ ಮತದಾರರ ಪಟ್ಟಿಯನ್ನು ಪ್ರದರ್ಶಿಸುವಂತೆ’ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು, ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

“ದೆಹಲಿ ಪೊಲೀಸರ ಮನವಿಯನ್ನು ಗಮನದಲ್ಲಿಟ್ಟುಕೊಂಡು ಆಯೋಗವು, ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ತನಿಖಾ ತಂಡದೊಂದಿಗೆ ಸಿ.ಸಿ.ಟಿ.ವಿ ಮತ್ತು ಇತರ ವಿಡಿಯೋ ತುಣುಕಿನ ಮೂಲಕ ಸೆರೆಹಿಡಿಯಲಾದ ಅಪರಾಧಿಗಳ ಛಾಯಾಚಿತ್ರಗಳು, ದೆಹಲಿಯ ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳೊಂದಿಗೆ ತನಿಖಾ ಅಧಿಕಾರಿಯ ಮುಂದೆ ಮತದಾರರ ಪಟ್ಟಿಯನ್ನು ಪ್ರದರ್ಶಿಸಲು ಸಲಹೆ ನೀಡುವಂತೆ ನಿರ್ದೇಶಿಸಿದೆ” ಎಂದು ಆಯೋಗದ ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ. ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಸಹ ಈ ಹತ್ಯಾಕಾಂಡಕ್ಕೆ ಕಾರಣವಾಗಿದ್ದವು ಎಂಬ ಆರೋಪವಿದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...