Homeಮುಖಪುಟಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ.

- Advertisement -
- Advertisement -

ಫೆಬ್ರವರಿ 2020 ರಲ್ಲಿ ನಡೆದ ದೆಹಲಿ ಗಲಭೆಯ ನಂತರ, ಭಾರತದ ಚುನಾವಣಾ ಆಯೋಗ ಈಶಾನ್ಯ ದೆಹಲಿಯ ಎಲ್ಲಾ ನಿವಾಸಿಗಳ ಫೋಟೋಗಳು ಮತ್ತು ವಿಳಾಸಗಳನ್ನು ಪೊಲೀಸರೊಂದಿಗೆ ಕಾನೂನುಬಾಹಿರವಾಗಿ ಹಂಚಿಕೊಂಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಹಿರಂಗಗೊಳಿಸಿದ್ದಾರೆ.

ಚುನಾವಣಾ ಆಯೋಗದ ಪತ್ರವನ್ನು ಹಂಚಿಕೊಂಡ ಸಾಕೇತ್ ಗೋಖಲೆ, ಜನರ ಸಂಪೂರ್ಣ ಮತದಾರರ ಪಟ್ಟಿಯನ್ನು ದೆಹಲಿ ಪೊಲೀಸರಿಗೆ ಕಾನೂನುಬಾಹಿರವಾಗಿ ಹಸ್ತಾಂತರಿಸಲಾಗಿದೆ ಎಂದು ದೂರಿದ್ದಾರೆ.

“ಆದೇಶದ ಮೊದಲನೇ ಸಾಲು ಪೊಲೀಸರೊಂದಿಗೆ ಹಂಚಿಕೊಂಡ ಮತದಾರರ ಪಟ್ಟಿಗಳಲ್ಲಿ ಛಾಯಾಚಿತ್ರ ಇಲ್ಲ ಎಂದು ಹೇಳುತ್ತದೆ. ಆದರೂ ದೆಹಲಿ ಹತ್ಯಾಕಾಂಡದ ನಂತರ ಫೋಟೋಗಳೊಂದಿಗೆ ಈ ಪೂರ್ಣ ಮತದಾರರ ಪಟ್ಟಿಗಳನ್ನು ಪೊಲೀಸರಿಗೆ ಲಭ್ಯವಾಗುವಂತೆ ಮಾಡಿ, ಭಾರತದ ಚುನಾವಣಾ ಆಯೋಗ ತನ್ನದೇ ನಿಯಮಗಳನ್ನು ಮುರಿದಿದೆ. ಇದು ಯಾವುದೇ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ಗುರುತಿಸಲು ಇದು ಸುಲಭವಾದ ಮಾರ್ಗವಾಗಿದೆ” ಎಂದು ಗೋಖಲೆ ಆರೋಪಿಸಿದ್ದಾರೆ.

ಚುನಾವಣಾ ಆಯೋಗದ ವಕ್ತಾರ ಶೆಫಾಲಿ ಶರಣ್ ಅವರನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ರಾಷ್ಟ್ರೀಯ ಚುನಾವಣಾ ಸಂಸ್ಥೆ ತನ್ನದೇ ಆದ ನಿಯಮಗಳನ್ನು ಏಕೆ ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

“ಮುಗ್ಧ ಮುಸ್ಲಿಂ ಯುವಕನನ್ನು ಪೊಲೀಸರು ನಿರಂಕುಶವಾಗಿ ಎತ್ತಿಕೊಂಡರು. ಇತರ ಸ್ಥಳಗಳಲ್ಲಿಯೂ ಸಹ ಫೋಟೋಗಳನ್ನು ಹೊಂದಿರುವ ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆಯೇ? ಇದು ಗಂಭೀರವಾಗಿದೆ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚುನಾವಣಾ ಆಯೋಗವು ಈ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೋಖಲೆ ಹಂಚಿಕೊಂಡ ಚುನಾವಣಾ ಆಯೋಗದ ಉದ್ದೇಶಿತ ಪತ್ರದಲ್ಲಿ, ದೆಹಲಿ ಪೊಲೀಸರೊಂದಿಗೆ ‘ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳ ಜೊತೆಗೆ ಮತದಾರರ ಪಟ್ಟಿಯನ್ನು ಪ್ರದರ್ಶಿಸುವಂತೆ’ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು, ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

“ದೆಹಲಿ ಪೊಲೀಸರ ಮನವಿಯನ್ನು ಗಮನದಲ್ಲಿಟ್ಟುಕೊಂಡು ಆಯೋಗವು, ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ತನಿಖಾ ತಂಡದೊಂದಿಗೆ ಸಿ.ಸಿ.ಟಿ.ವಿ ಮತ್ತು ಇತರ ವಿಡಿಯೋ ತುಣುಕಿನ ಮೂಲಕ ಸೆರೆಹಿಡಿಯಲಾದ ಅಪರಾಧಿಗಳ ಛಾಯಾಚಿತ್ರಗಳು, ದೆಹಲಿಯ ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳೊಂದಿಗೆ ತನಿಖಾ ಅಧಿಕಾರಿಯ ಮುಂದೆ ಮತದಾರರ ಪಟ್ಟಿಯನ್ನು ಪ್ರದರ್ಶಿಸಲು ಸಲಹೆ ನೀಡುವಂತೆ ನಿರ್ದೇಶಿಸಿದೆ” ಎಂದು ಆಯೋಗದ ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ. ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಸಹ ಈ ಹತ್ಯಾಕಾಂಡಕ್ಕೆ ಕಾರಣವಾಗಿದ್ದವು ಎಂಬ ಆರೋಪವಿದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...