Homeಮುಖಪುಟಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ.

- Advertisement -
- Advertisement -

ಫೆಬ್ರವರಿ 2020 ರಲ್ಲಿ ನಡೆದ ದೆಹಲಿ ಗಲಭೆಯ ನಂತರ, ಭಾರತದ ಚುನಾವಣಾ ಆಯೋಗ ಈಶಾನ್ಯ ದೆಹಲಿಯ ಎಲ್ಲಾ ನಿವಾಸಿಗಳ ಫೋಟೋಗಳು ಮತ್ತು ವಿಳಾಸಗಳನ್ನು ಪೊಲೀಸರೊಂದಿಗೆ ಕಾನೂನುಬಾಹಿರವಾಗಿ ಹಂಚಿಕೊಂಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಹಿರಂಗಗೊಳಿಸಿದ್ದಾರೆ.

ಚುನಾವಣಾ ಆಯೋಗದ ಪತ್ರವನ್ನು ಹಂಚಿಕೊಂಡ ಸಾಕೇತ್ ಗೋಖಲೆ, ಜನರ ಸಂಪೂರ್ಣ ಮತದಾರರ ಪಟ್ಟಿಯನ್ನು ದೆಹಲಿ ಪೊಲೀಸರಿಗೆ ಕಾನೂನುಬಾಹಿರವಾಗಿ ಹಸ್ತಾಂತರಿಸಲಾಗಿದೆ ಎಂದು ದೂರಿದ್ದಾರೆ.

“ಆದೇಶದ ಮೊದಲನೇ ಸಾಲು ಪೊಲೀಸರೊಂದಿಗೆ ಹಂಚಿಕೊಂಡ ಮತದಾರರ ಪಟ್ಟಿಗಳಲ್ಲಿ ಛಾಯಾಚಿತ್ರ ಇಲ್ಲ ಎಂದು ಹೇಳುತ್ತದೆ. ಆದರೂ ದೆಹಲಿ ಹತ್ಯಾಕಾಂಡದ ನಂತರ ಫೋಟೋಗಳೊಂದಿಗೆ ಈ ಪೂರ್ಣ ಮತದಾರರ ಪಟ್ಟಿಗಳನ್ನು ಪೊಲೀಸರಿಗೆ ಲಭ್ಯವಾಗುವಂತೆ ಮಾಡಿ, ಭಾರತದ ಚುನಾವಣಾ ಆಯೋಗ ತನ್ನದೇ ನಿಯಮಗಳನ್ನು ಮುರಿದಿದೆ. ಇದು ಯಾವುದೇ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ಗುರುತಿಸಲು ಇದು ಸುಲಭವಾದ ಮಾರ್ಗವಾಗಿದೆ” ಎಂದು ಗೋಖಲೆ ಆರೋಪಿಸಿದ್ದಾರೆ.

ಚುನಾವಣಾ ಆಯೋಗದ ವಕ್ತಾರ ಶೆಫಾಲಿ ಶರಣ್ ಅವರನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ರಾಷ್ಟ್ರೀಯ ಚುನಾವಣಾ ಸಂಸ್ಥೆ ತನ್ನದೇ ಆದ ನಿಯಮಗಳನ್ನು ಏಕೆ ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

“ಮುಗ್ಧ ಮುಸ್ಲಿಂ ಯುವಕನನ್ನು ಪೊಲೀಸರು ನಿರಂಕುಶವಾಗಿ ಎತ್ತಿಕೊಂಡರು. ಇತರ ಸ್ಥಳಗಳಲ್ಲಿಯೂ ಸಹ ಫೋಟೋಗಳನ್ನು ಹೊಂದಿರುವ ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆಯೇ? ಇದು ಗಂಭೀರವಾಗಿದೆ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚುನಾವಣಾ ಆಯೋಗವು ಈ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೋಖಲೆ ಹಂಚಿಕೊಂಡ ಚುನಾವಣಾ ಆಯೋಗದ ಉದ್ದೇಶಿತ ಪತ್ರದಲ್ಲಿ, ದೆಹಲಿ ಪೊಲೀಸರೊಂದಿಗೆ ‘ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳ ಜೊತೆಗೆ ಮತದಾರರ ಪಟ್ಟಿಯನ್ನು ಪ್ರದರ್ಶಿಸುವಂತೆ’ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು, ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

“ದೆಹಲಿ ಪೊಲೀಸರ ಮನವಿಯನ್ನು ಗಮನದಲ್ಲಿಟ್ಟುಕೊಂಡು ಆಯೋಗವು, ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ತನಿಖಾ ತಂಡದೊಂದಿಗೆ ಸಿ.ಸಿ.ಟಿ.ವಿ ಮತ್ತು ಇತರ ವಿಡಿಯೋ ತುಣುಕಿನ ಮೂಲಕ ಸೆರೆಹಿಡಿಯಲಾದ ಅಪರಾಧಿಗಳ ಛಾಯಾಚಿತ್ರಗಳು, ದೆಹಲಿಯ ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳೊಂದಿಗೆ ತನಿಖಾ ಅಧಿಕಾರಿಯ ಮುಂದೆ ಮತದಾರರ ಪಟ್ಟಿಯನ್ನು ಪ್ರದರ್ಶಿಸಲು ಸಲಹೆ ನೀಡುವಂತೆ ನಿರ್ದೇಶಿಸಿದೆ” ಎಂದು ಆಯೋಗದ ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ. ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಸಹ ಈ ಹತ್ಯಾಕಾಂಡಕ್ಕೆ ಕಾರಣವಾಗಿದ್ದವು ಎಂಬ ಆರೋಪವಿದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...