Homeಮುಖಪುಟಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ಪಿಎಂ, ಲೋಕಸಭೆ ವಿಪಕ್ಷ ನಾಯಕ, ಸಿಜೆಐ ಇರಬೇಕು: ಸುಪ್ರೀಂ ಕೋರ್ಟ್

ಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ಪಿಎಂ, ಲೋಕಸಭೆ ವಿಪಕ್ಷ ನಾಯಕ, ಸಿಜೆಐ ಇರಬೇಕು: ಸುಪ್ರೀಂ ಕೋರ್ಟ್

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರುಗಳನ್ನು (ಇಸಿ) ನೇಮಿಸುವ ಸರ್ಕಾರದ ಅಧಿಕಾರವನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.

ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಯವರನ್ನು ಒಳಗೊಂಡ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕದ ಕುರಿತು ರಾಷ್ಟ್ರಪತಿಗಳಿಗೆ ಸಲಹೆ ನೀಡಲಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.

ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ನೇಮಕಗಳನ್ನು ಮಾಡಬೇಕಾಗುತ್ತದೆ ಎಂದು ಸೂಚಿಸಿದೆ.

ಆಯುಕ್ತರ ನೇಮಕಾತಿಗೆ ಸ್ವತಂತ್ರ ಕಾರ್ಯವಿಧಾನವನ್ನು ರೂಪಿಸಬೇಕೆಂದು ಕೋರಿದ ಅರ್ಜಿಗಳನ್ನು ಭಾಗಶಃ ಅನುಮತಿಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ನಿರ್ಧಾರ ಪ್ರಕಟಿಸಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಇಲ್ಲವಾದರೆ, ವಿರೋಧ ಪಕ್ಷಗಳಲ್ಲಿನ ಅತಿದೊಡ್ಡ ಪಕ್ಷದ ನಾಯಕರು ಸಮತಿಯಲ್ಲಿ ಇರಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಕಾಪಾಡಿಕೊಳ್ಳಬೇಕಾದರೆ ಎಲ್ಲಾ ಭಾಗಿದಾರರು ಅದರ ಮೇಲೆ ಕೆಲಸ ಮಾಡಿದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ” ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

ಸಂವಿಧಾನದ ಪರಿಚ್ಛೇದ 324(2) ಪ್ರಕಾರ ಮುಖ್ಯ ಚುನಾವಣಾ ಆಯುಕ್ತರು ಮತ್ತು ಆಯುಕ್ತರುಗಳನ್ನು ಮಂತ್ರಿ ಮಂಡಳಿಯ ನೆರವು ಮತ್ತು ಸಲಹೆಯೊಂದಿಗೆ ರಾಷ್ಟ್ರಪತಿಯವರು ನೇಮಕ ಮಾಡುತ್ತಾರೆ.

ಮಹತ್ವದ ತೀರ್ಪನ್ನು ನೀಡಿರುವ ಪೀಠದಲ್ಲಿ ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರಿದ್ದರು.

ನ್ಯಾಯಮೂರ್ತಿ ರಸ್ತೋಗಿ ಅವರು ನೀಡಿರುವ ಪ್ರತ್ಯೇಕ ಅಭಿಪ್ರಾಯದಲ್ಲಿ, “ಮುಖ್ಯ ಚುನಾವಣಾ ಆಯುಕ್ತರನ್ನು ತೆಗೆದುಹಾಕಲು ಲಭ್ಯವಿರುವ ರಕ್ಷಣೆ, ಇತರ ಚುನಾವಣಾ ಆಯುಕ್ತರುಗಳಿಗೂ ಅನ್ವಯಿಸಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...